Homeಮುಖಪುಟನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ನ.26, 2023ರಂದು ಸಂವಿಧಾನ ದಿನಾಚರಣೆಯಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು.ಭಾರತದ ಸಂವಿಧಾನದ ಶಿಲ್ಪಿಗೆ ಗೌರವಾರ್ಥವಾಗಿ ಪ್ರತಿಮೆಯನ್ನು ಸುಪ್ರೀಂಕೋರ್ಟ್‌ ಆವರಣದಲ್ಲಿ ಸ್ಥಾಪಿಸಲು 75 ವರ್ಷಗಳ ಕಾಯಬೇಕಾಗಿ ಬಂದಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಮನುವಿನ ಸಿದ್ದಾಂತಗಳು, ಬೋಧನೆಗಳು ಸಂವಿಧಾನದ ಮೂಲ ರಚನೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿವೆ. ಆದರೆ ಮನುವಿನ 11ಅಡಿ ಎತ್ತರದ ಪ್ರತಿಮೆಯನ್ನು 1989ರಲ್ಲೇ ರಾಜಸ್ಥಾನ ಹೈಕೋರ್ಟ್‌ನ ಜೈಪುರ ಪೀಠದ ಆವರಣದಲ್ಲಿ ಅನಾವರಣಗೊಳಿಸಲಾಗಿತ್ತು.

1970ರ ದಶಕದಲ್ಲಿ ಹಿರಿಯ ಅಂಬೇಡ್ಕರ್‌ವಾದಿ ನಾಯಕ ದಾದಾಸಾಹೇಬ್ ಗಾಯಕ್ವಾಡ್ ಅವರು ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದರು. 56 ವರ್ಷಗಳ ನಂತರ ಈ ಬಗ್ಗೆ ಗಮನಹರಿಸಲಾಗಿದೆ. ಆದರೆ ಮೇಲ್ಜಾತಿಗಳಲ್ಲಿನ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಯಾವುದೇ ಬೀದಿ ಹೋರಾಟಗಳಿಲ್ಲದೆ ಮೀಸಲಾತಿಯ ಅನುಷ್ಠಾನ ಕೊಟ್ಟಂತೆಯೇ ರಾಜಸ್ಥಾನದ ಉಚ್ಚ ನ್ಯಾಯಾಲಯದಲ್ಲಿ ಮನುವಿನ ಪ್ರತಿಮೆಯನ್ನು 23 ದಿನಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಮನುವಿನ ಪ್ರತಿಮೆಯ ತ್ವರಿತ ಪ್ರತಿಷ್ಠಾಪನೆ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ತೆಗೆದುಕೊಂಡ ಸಮಯ ಸ್ವತಂತ್ರೋತ್ತರ ಭಾರತದಲ್ಲಿ ವಿಪರ್ಯಾಸವಾಗಿ ಕಾಣಬಹುದು. ಮನುವಿನ ಸಿದ್ದಾಂತವು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಅದರಲ್ಲಿ ಬ್ರಾಹ್ಮಣ ಮೌಲ್ಯಗಳ ವೈಭವೀಕರಣವನ್ನು ಕಾಣಬಹುದಾಗಿದೆ.

1989ರ ಫೆ.10ರಂದು ರಾಜಸ್ಥಾನ ಹೈಕೋರ್ಟ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪದಮ್ ಕುಮಾರ್ ಜೈನ್ ಅವರು ನ್ಯಾಯಾಲಯದ ಆವರಣದಲ್ಲಿ ಮನುವಿನ ಪ್ರತಿಮೆಯನ್ನು ಸ್ಥಾಪಿಸಲು ಪ್ರಸ್ತಾಪಿಸಿದರು. ಈ ಪ್ರಸ್ತಾಪದ ಕೇವಲ 23 ದಿನಗಳ ನಂತರ ಮಾ.3 1989 ರಂದು ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಆ ಸಮಯದಲ್ಲಿ ಕಾಂಗ್ರೆಸ್ಸಿನ ಶಿವಚರಣ್ ಮಾಥುರ್ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದರು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದರು ಮತ್ತು ನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಮನುವಿನ ಪ್ರತಿಮೆಯ ಸ್ಥಾಪನೆಯನ್ನು ವಿರೋಧಿಸಿ ಎಚ್ಚರಗೊಂಡ ದಲಿತ ಸಮುದಾಯವು ಪ್ರತಿಭಟಿಸಲು ಪ್ರಾರಂಭಿಸಿತ್ತು. ಆದ್ದರಿಂದ ಜು.28 1989ರಂದು ರಾಜಸ್ಥಾನ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯದ ಅಧಿವೇಶನವು ಪ್ರತಿಮೆಯನ್ನು ತೆಗೆದುಹಾಕಲು ಸರ್ವಾನುಮತದಿಂದ ನಿರ್ಧರಿಸಿತು.

ತಕ್ಷಣ ವಿಶ್ವ ಹಿಂದೂ ಪರಿಷತ್ ನಾಯಕ ಆಚಾರ್ಯ ಧರ್ಮೇಂದ್ರ ಇದರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದರು. ಉಚ್ಚ ನ್ಯಾಯಾಲಯವು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಆ.1989 ರಲ್ಲಿ ಸಮ್ಮತಿಸಿತು. ಈ ಪ್ರಕರಣದ ಯಾವುದೇ ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಜರಾತಿಯಲ್ಲಿ ವಿಭಾಗೀಯ ಪೀಠ ಮಾತ್ರ ನಡೆಸಬೇಕು ಎಂದು ಸೂಚನೆ ನೀಡಿತ್ತು.

ಅಂದಿನಿಂದ ತಡೆಯಾಜ್ಞೆ ಮತ್ತು ಮನುವಿನ ಪ್ರತಿಮೆ ಹೈಕೋರ್ಟ್ ಆವರಣದಲ್ಲಿಯೇ ಉಳಿದಿದೆ. ಮತ್ತು ಈ ಪ್ರಕರಣವು ರಾಜಸ್ಥಾನ ಹೈಕೋರ್ಟ್‌ನ ಇತಿಹಾಸದಲ್ಲಿ ಸುದೀರ್ಘ ಬಾಕಿ ಉಳಿದಿರುವ PIL ಎಂಬ ಕುಖ್ಯಾತಿಯನ್ನು ಪಡೆದುಕೊಂಡಿದೆ.

ಈ ಪ್ರಕರಣದ ತೀರಾ ಇತ್ತೀಚಿನ ವಿಚಾರಣೆಯು 2015ರಲ್ಲಿ ನಡೆಯಿತು. 300ಕ್ಕೂ ಹೆಚ್ಚು ಬ್ರಾಹ್ಮಣ ಮತ್ತು ಸವರ್ಣಿಯ ವಕೀಲರು ವಿಚಾರಣೆಗೆ ಹಾಜರಾಗಲು ವಿವಿಧ ನ್ಯಾಯಾಲಯಗಳಿಂದ ಧಾವಿಸಿದ್ದರು.  ದಲಿತ ಸಂಘಟನೆಗಳ ಪರ ವಕೀಲ ಜೈನ್ ಅವರು ಕೋರ್ಟ್‌ಗೆ ಹಾಜರಾಗಿದ್ದು, ಮನುಸ್ಮೃತಿಯಲ್ಲಿನ ದಲಿತ, ಶೂದ್ರ ಮತ್ತು ಮಹಿಳೆಯರ ಬಗೆಗಿನ ಶ್ಲೋಕಗಳ ಬಗ್ಗೆ ನ್ಯಾಯಾಧೀಶರ ಗಮನ ಸೆಳೆಯಲು ಪ್ರಯತ್ನಿಸಿದ್ದರು. ಈ ವೇಳೆ ಮೇಲ್ಜಾತಿ ವಕೀಲರು ನ್ಯಾಯಾಲಯದ ಆವರಣದಲ್ಲಿ ಗದ್ದಲವನ್ನು ಪ್ರಾರಂಭಿಸಿದರು, ಇದು ವಿಚಾರಣೆಯನ್ನು ಮುಂದೂಡಲು ಕಾರಣವಾಯಿತು.

ಈ ನಡುವೆ ಹಲವು ದಲಿತ ಸಂಘಟನೆಗಳು ಮತ್ತು ಬಹುಜನ ಸಮಾಜ ಪಕ್ಷದ ಮುಖಂಡರು ಮನುವಿನ ಪ್ರತಿಮೆಯನ್ನು ತೆರವಿಗೆ ಒತ್ತಾಯಿಸುತ್ತಿದ್ದಾರೆ. ಅ.8, 2018ರಂದು ಮಹಾರಾಷ್ಟ್ರದ ಔರಂಗಾಬಾದ್‌ನ ಇಬ್ಬರು ಅಂಬೇಡ್ಕರ್ ವಾದಿ ಮಹಿಳಾ ಕಾರ್ಯಕರ್ತರು  ಶೀಲಾಬಾಯಿ ಪವಾರ್ ಮತ್ತು ಕಾಂತಾ ರಮೇಶ್ ಅಹಿರೆ – ಮನುವಿನ ಪ್ರತಿಮೆಗೆ ಕಪ್ಪು ಬಣ್ಣವನ್ನು ಎಸೆದಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿದ್ದರು. ಆದರೆ ಮನುವಿನ ಪ್ರತಿಮೆಯನ್ನು ತೆಗೆಯಲು ಸಾಧ್ಯವಾಗಲಿಲ್ಲ.

ರಾಜಸ್ಥಾನದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರ್ಯಾವಾಗಿ ಸರಕಾರ ನಡೆಸುತ್ತಾ ಬಂದಿದೆ.  ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಲುವು ಹೆಚ್ಚಾಗಿ ಜಾತಿ ವ್ಯವಸ್ಥೆಯನ್ನು ಸಮರ್ಥಿಸುತ್ತದೆ. ಆದರೆ ಸಂವಿಧಾನದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮನುವಿನ ಪ್ರತಿಮೆಯನ್ನು ತೆಗೆಯಲು ಹೂಡಿರುವ ವ್ಯಾಜ್ಯದ ಹಿಂದೆ ತನ್ನ ನಿಗಾವನ್ನು ವಹಿಸಲಿಲ್ಲ ಏಕೆ ಎನ್ನುವುದು ಪ್ರಶ್ನಾರ್ಹವಾಗಿದೆ. ವಿಪರ್ಯಾಸವೆಂದರೆ ಕಾಂಗ್ರೆಸ್ ನಾಯಕನೋರ್ವನ ಹೇಳಿಕೆಯು ಮನುವಿನ ಪ್ರತಿಮೆ ತೆರವಿನ ವಿರುದ್ಧ ಅರ್ಜಿ ಸಲ್ಲಿಸಿದ್ದ ವಿಎಚ್‌ಪಿಯ ಆಚಾರ್ಯ ಧರ್ಮೇಂದ್ರ ಅವರ ಹೇಳಿಕೆಯೊಂದಿಗೆ ಹೋಲುತ್ತದೆ.  ಹೈಕೋರ್ಟ್‌ನಲ್ಲಿ ಮನು ಪ್ರತಿಮೆಯನ್ನು ಹೊಂದುವುದು ಉತ್ತಮ ಆಲೋಚನೆಯಾಗಿದೆ ಏಕೆಂದರೆ ಅವರು ಕಾನೂನು ರಚಿಸಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ. ಅವನನ್ನು ವಿರೋಧಿಸುವವರು ಮನುವಿನ ತತ್ವದ ಅರಿವಿಲ್ಲದವರು ಎಂದು ಹೇಳಿದ್ದರು.

ರಾಜಸ್ಥಾನ ಹೈಕೋರ್ಟ್ ಆವರಣದಲ್ಲಿರುವ ಮನುವಿನ ಪ್ರತಿಮೆಯನ್ನು ತೆರವು ಮಾಡುವಂತೆ ಒತ್ತಾಯಿಸಿ ಪ್ರಕರಣವನ್ನು ಉದ್ದೇಶಪೂರ್ವಕವಾಗಿ 25 ವರ್ಷಗಳಿಗೂ ಹೆಚ್ಚು ಕಾಲ ವಿಳಂಬಗೊಳಿಸಿದಾಗ, ಹಲವಾರು ದಲಿತ ಕಾರ್ಯಕರ್ತರು ಮತ್ತು ಸಂಘಟನೆಗಳು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಆದರೆ ಫೆ.24, 2023ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸುಂದರೇಶ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರವು ಮನುವಿನ ಪ್ರತಿಮೆ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಮನು ಮತ್ತು ಮನುಸ್ಮೃತಿಯು ಸಾಮಾಜಿಕ ಅಸಮಾನತೆ, ಜಾತಿ ಶ್ರೇಣಿ ಮತ್ತು ಪಿತೃಪ್ರಭುತ್ವವನ್ನು ಪ್ರತಿನಿಧಿಸುತ್ತದೆ. ಅಂಬೇಡ್ಕರ್ ಮತ್ತು ಸಂವಿಧಾನವು ಸಮಾನತೆ, ಸಹಾನುಭೂತಿ, ಸಾಮಾಜಿಕ-ಆರ್ಥಿಕ ನ್ಯಾಯ ಮತ್ತು ಭ್ರಾತೃತ್ವಕ್ಕಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗಿದೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...