Homeಮುಖಪುಟನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ನ.26, 2023ರಂದು ಸಂವಿಧಾನ ದಿನಾಚರಣೆಯಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು.ಭಾರತದ ಸಂವಿಧಾನದ ಶಿಲ್ಪಿಗೆ ಗೌರವಾರ್ಥವಾಗಿ ಪ್ರತಿಮೆಯನ್ನು ಸುಪ್ರೀಂಕೋರ್ಟ್‌ ಆವರಣದಲ್ಲಿ ಸ್ಥಾಪಿಸಲು 75 ವರ್ಷಗಳ ಕಾಯಬೇಕಾಗಿ ಬಂದಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಮನುವಿನ ಸಿದ್ದಾಂತಗಳು, ಬೋಧನೆಗಳು ಸಂವಿಧಾನದ ಮೂಲ ರಚನೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿವೆ. ಆದರೆ ಮನುವಿನ 11ಅಡಿ ಎತ್ತರದ ಪ್ರತಿಮೆಯನ್ನು 1989ರಲ್ಲೇ ರಾಜಸ್ಥಾನ ಹೈಕೋರ್ಟ್‌ನ ಜೈಪುರ ಪೀಠದ ಆವರಣದಲ್ಲಿ ಅನಾವರಣಗೊಳಿಸಲಾಗಿತ್ತು.

1970ರ ದಶಕದಲ್ಲಿ ಹಿರಿಯ ಅಂಬೇಡ್ಕರ್‌ವಾದಿ ನಾಯಕ ದಾದಾಸಾಹೇಬ್ ಗಾಯಕ್ವಾಡ್ ಅವರು ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದರು. 56 ವರ್ಷಗಳ ನಂತರ ಈ ಬಗ್ಗೆ ಗಮನಹರಿಸಲಾಗಿದೆ. ಆದರೆ ಮೇಲ್ಜಾತಿಗಳಲ್ಲಿನ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಯಾವುದೇ ಬೀದಿ ಹೋರಾಟಗಳಿಲ್ಲದೆ ಮೀಸಲಾತಿಯ ಅನುಷ್ಠಾನ ಕೊಟ್ಟಂತೆಯೇ ರಾಜಸ್ಥಾನದ ಉಚ್ಚ ನ್ಯಾಯಾಲಯದಲ್ಲಿ ಮನುವಿನ ಪ್ರತಿಮೆಯನ್ನು 23 ದಿನಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಮನುವಿನ ಪ್ರತಿಮೆಯ ತ್ವರಿತ ಪ್ರತಿಷ್ಠಾಪನೆ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ತೆಗೆದುಕೊಂಡ ಸಮಯ ಸ್ವತಂತ್ರೋತ್ತರ ಭಾರತದಲ್ಲಿ ವಿಪರ್ಯಾಸವಾಗಿ ಕಾಣಬಹುದು. ಮನುವಿನ ಸಿದ್ದಾಂತವು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಅದರಲ್ಲಿ ಬ್ರಾಹ್ಮಣ ಮೌಲ್ಯಗಳ ವೈಭವೀಕರಣವನ್ನು ಕಾಣಬಹುದಾಗಿದೆ.

1989ರ ಫೆ.10ರಂದು ರಾಜಸ್ಥಾನ ಹೈಕೋರ್ಟ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪದಮ್ ಕುಮಾರ್ ಜೈನ್ ಅವರು ನ್ಯಾಯಾಲಯದ ಆವರಣದಲ್ಲಿ ಮನುವಿನ ಪ್ರತಿಮೆಯನ್ನು ಸ್ಥಾಪಿಸಲು ಪ್ರಸ್ತಾಪಿಸಿದರು. ಈ ಪ್ರಸ್ತಾಪದ ಕೇವಲ 23 ದಿನಗಳ ನಂತರ ಮಾ.3 1989 ರಂದು ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಆ ಸಮಯದಲ್ಲಿ ಕಾಂಗ್ರೆಸ್ಸಿನ ಶಿವಚರಣ್ ಮಾಥುರ್ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದರು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದರು ಮತ್ತು ನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಮನುವಿನ ಪ್ರತಿಮೆಯ ಸ್ಥಾಪನೆಯನ್ನು ವಿರೋಧಿಸಿ ಎಚ್ಚರಗೊಂಡ ದಲಿತ ಸಮುದಾಯವು ಪ್ರತಿಭಟಿಸಲು ಪ್ರಾರಂಭಿಸಿತ್ತು. ಆದ್ದರಿಂದ ಜು.28 1989ರಂದು ರಾಜಸ್ಥಾನ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯದ ಅಧಿವೇಶನವು ಪ್ರತಿಮೆಯನ್ನು ತೆಗೆದುಹಾಕಲು ಸರ್ವಾನುಮತದಿಂದ ನಿರ್ಧರಿಸಿತು.

ತಕ್ಷಣ ವಿಶ್ವ ಹಿಂದೂ ಪರಿಷತ್ ನಾಯಕ ಆಚಾರ್ಯ ಧರ್ಮೇಂದ್ರ ಇದರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದರು. ಉಚ್ಚ ನ್ಯಾಯಾಲಯವು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಆ.1989 ರಲ್ಲಿ ಸಮ್ಮತಿಸಿತು. ಈ ಪ್ರಕರಣದ ಯಾವುದೇ ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಜರಾತಿಯಲ್ಲಿ ವಿಭಾಗೀಯ ಪೀಠ ಮಾತ್ರ ನಡೆಸಬೇಕು ಎಂದು ಸೂಚನೆ ನೀಡಿತ್ತು.

ಅಂದಿನಿಂದ ತಡೆಯಾಜ್ಞೆ ಮತ್ತು ಮನುವಿನ ಪ್ರತಿಮೆ ಹೈಕೋರ್ಟ್ ಆವರಣದಲ್ಲಿಯೇ ಉಳಿದಿದೆ. ಮತ್ತು ಈ ಪ್ರಕರಣವು ರಾಜಸ್ಥಾನ ಹೈಕೋರ್ಟ್‌ನ ಇತಿಹಾಸದಲ್ಲಿ ಸುದೀರ್ಘ ಬಾಕಿ ಉಳಿದಿರುವ PIL ಎಂಬ ಕುಖ್ಯಾತಿಯನ್ನು ಪಡೆದುಕೊಂಡಿದೆ.

ಈ ಪ್ರಕರಣದ ತೀರಾ ಇತ್ತೀಚಿನ ವಿಚಾರಣೆಯು 2015ರಲ್ಲಿ ನಡೆಯಿತು. 300ಕ್ಕೂ ಹೆಚ್ಚು ಬ್ರಾಹ್ಮಣ ಮತ್ತು ಸವರ್ಣಿಯ ವಕೀಲರು ವಿಚಾರಣೆಗೆ ಹಾಜರಾಗಲು ವಿವಿಧ ನ್ಯಾಯಾಲಯಗಳಿಂದ ಧಾವಿಸಿದ್ದರು.  ದಲಿತ ಸಂಘಟನೆಗಳ ಪರ ವಕೀಲ ಜೈನ್ ಅವರು ಕೋರ್ಟ್‌ಗೆ ಹಾಜರಾಗಿದ್ದು, ಮನುಸ್ಮೃತಿಯಲ್ಲಿನ ದಲಿತ, ಶೂದ್ರ ಮತ್ತು ಮಹಿಳೆಯರ ಬಗೆಗಿನ ಶ್ಲೋಕಗಳ ಬಗ್ಗೆ ನ್ಯಾಯಾಧೀಶರ ಗಮನ ಸೆಳೆಯಲು ಪ್ರಯತ್ನಿಸಿದ್ದರು. ಈ ವೇಳೆ ಮೇಲ್ಜಾತಿ ವಕೀಲರು ನ್ಯಾಯಾಲಯದ ಆವರಣದಲ್ಲಿ ಗದ್ದಲವನ್ನು ಪ್ರಾರಂಭಿಸಿದರು, ಇದು ವಿಚಾರಣೆಯನ್ನು ಮುಂದೂಡಲು ಕಾರಣವಾಯಿತು.

ಈ ನಡುವೆ ಹಲವು ದಲಿತ ಸಂಘಟನೆಗಳು ಮತ್ತು ಬಹುಜನ ಸಮಾಜ ಪಕ್ಷದ ಮುಖಂಡರು ಮನುವಿನ ಪ್ರತಿಮೆಯನ್ನು ತೆರವಿಗೆ ಒತ್ತಾಯಿಸುತ್ತಿದ್ದಾರೆ. ಅ.8, 2018ರಂದು ಮಹಾರಾಷ್ಟ್ರದ ಔರಂಗಾಬಾದ್‌ನ ಇಬ್ಬರು ಅಂಬೇಡ್ಕರ್ ವಾದಿ ಮಹಿಳಾ ಕಾರ್ಯಕರ್ತರು  ಶೀಲಾಬಾಯಿ ಪವಾರ್ ಮತ್ತು ಕಾಂತಾ ರಮೇಶ್ ಅಹಿರೆ – ಮನುವಿನ ಪ್ರತಿಮೆಗೆ ಕಪ್ಪು ಬಣ್ಣವನ್ನು ಎಸೆದಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿದ್ದರು. ಆದರೆ ಮನುವಿನ ಪ್ರತಿಮೆಯನ್ನು ತೆಗೆಯಲು ಸಾಧ್ಯವಾಗಲಿಲ್ಲ.

ರಾಜಸ್ಥಾನದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರ್ಯಾವಾಗಿ ಸರಕಾರ ನಡೆಸುತ್ತಾ ಬಂದಿದೆ.  ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಲುವು ಹೆಚ್ಚಾಗಿ ಜಾತಿ ವ್ಯವಸ್ಥೆಯನ್ನು ಸಮರ್ಥಿಸುತ್ತದೆ. ಆದರೆ ಸಂವಿಧಾನದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮನುವಿನ ಪ್ರತಿಮೆಯನ್ನು ತೆಗೆಯಲು ಹೂಡಿರುವ ವ್ಯಾಜ್ಯದ ಹಿಂದೆ ತನ್ನ ನಿಗಾವನ್ನು ವಹಿಸಲಿಲ್ಲ ಏಕೆ ಎನ್ನುವುದು ಪ್ರಶ್ನಾರ್ಹವಾಗಿದೆ. ವಿಪರ್ಯಾಸವೆಂದರೆ ಕಾಂಗ್ರೆಸ್ ನಾಯಕನೋರ್ವನ ಹೇಳಿಕೆಯು ಮನುವಿನ ಪ್ರತಿಮೆ ತೆರವಿನ ವಿರುದ್ಧ ಅರ್ಜಿ ಸಲ್ಲಿಸಿದ್ದ ವಿಎಚ್‌ಪಿಯ ಆಚಾರ್ಯ ಧರ್ಮೇಂದ್ರ ಅವರ ಹೇಳಿಕೆಯೊಂದಿಗೆ ಹೋಲುತ್ತದೆ.  ಹೈಕೋರ್ಟ್‌ನಲ್ಲಿ ಮನು ಪ್ರತಿಮೆಯನ್ನು ಹೊಂದುವುದು ಉತ್ತಮ ಆಲೋಚನೆಯಾಗಿದೆ ಏಕೆಂದರೆ ಅವರು ಕಾನೂನು ರಚಿಸಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ. ಅವನನ್ನು ವಿರೋಧಿಸುವವರು ಮನುವಿನ ತತ್ವದ ಅರಿವಿಲ್ಲದವರು ಎಂದು ಹೇಳಿದ್ದರು.

ರಾಜಸ್ಥಾನ ಹೈಕೋರ್ಟ್ ಆವರಣದಲ್ಲಿರುವ ಮನುವಿನ ಪ್ರತಿಮೆಯನ್ನು ತೆರವು ಮಾಡುವಂತೆ ಒತ್ತಾಯಿಸಿ ಪ್ರಕರಣವನ್ನು ಉದ್ದೇಶಪೂರ್ವಕವಾಗಿ 25 ವರ್ಷಗಳಿಗೂ ಹೆಚ್ಚು ಕಾಲ ವಿಳಂಬಗೊಳಿಸಿದಾಗ, ಹಲವಾರು ದಲಿತ ಕಾರ್ಯಕರ್ತರು ಮತ್ತು ಸಂಘಟನೆಗಳು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಆದರೆ ಫೆ.24, 2023ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸುಂದರೇಶ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರವು ಮನುವಿನ ಪ್ರತಿಮೆ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಮನು ಮತ್ತು ಮನುಸ್ಮೃತಿಯು ಸಾಮಾಜಿಕ ಅಸಮಾನತೆ, ಜಾತಿ ಶ್ರೇಣಿ ಮತ್ತು ಪಿತೃಪ್ರಭುತ್ವವನ್ನು ಪ್ರತಿನಿಧಿಸುತ್ತದೆ. ಅಂಬೇಡ್ಕರ್ ಮತ್ತು ಸಂವಿಧಾನವು ಸಮಾನತೆ, ಸಹಾನುಭೂತಿ, ಸಾಮಾಜಿಕ-ಆರ್ಥಿಕ ನ್ಯಾಯ ಮತ್ತು ಭ್ರಾತೃತ್ವಕ್ಕಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗಿದೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...