Homeಮುಖಪುಟನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ನ.26, 2023ರಂದು ಸಂವಿಧಾನ ದಿನಾಚರಣೆಯಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು.ಭಾರತದ ಸಂವಿಧಾನದ ಶಿಲ್ಪಿಗೆ ಗೌರವಾರ್ಥವಾಗಿ ಪ್ರತಿಮೆಯನ್ನು ಸುಪ್ರೀಂಕೋರ್ಟ್‌ ಆವರಣದಲ್ಲಿ ಸ್ಥಾಪಿಸಲು 75 ವರ್ಷಗಳ ಕಾಯಬೇಕಾಗಿ ಬಂದಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಮನುವಿನ ಸಿದ್ದಾಂತಗಳು, ಬೋಧನೆಗಳು ಸಂವಿಧಾನದ ಮೂಲ ರಚನೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿವೆ. ಆದರೆ ಮನುವಿನ 11ಅಡಿ ಎತ್ತರದ ಪ್ರತಿಮೆಯನ್ನು 1989ರಲ್ಲೇ ರಾಜಸ್ಥಾನ ಹೈಕೋರ್ಟ್‌ನ ಜೈಪುರ ಪೀಠದ ಆವರಣದಲ್ಲಿ ಅನಾವರಣಗೊಳಿಸಲಾಗಿತ್ತು.

1970ರ ದಶಕದಲ್ಲಿ ಹಿರಿಯ ಅಂಬೇಡ್ಕರ್‌ವಾದಿ ನಾಯಕ ದಾದಾಸಾಹೇಬ್ ಗಾಯಕ್ವಾಡ್ ಅವರು ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದರು. 56 ವರ್ಷಗಳ ನಂತರ ಈ ಬಗ್ಗೆ ಗಮನಹರಿಸಲಾಗಿದೆ. ಆದರೆ ಮೇಲ್ಜಾತಿಗಳಲ್ಲಿನ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಯಾವುದೇ ಬೀದಿ ಹೋರಾಟಗಳಿಲ್ಲದೆ ಮೀಸಲಾತಿಯ ಅನುಷ್ಠಾನ ಕೊಟ್ಟಂತೆಯೇ ರಾಜಸ್ಥಾನದ ಉಚ್ಚ ನ್ಯಾಯಾಲಯದಲ್ಲಿ ಮನುವಿನ ಪ್ರತಿಮೆಯನ್ನು 23 ದಿನಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಮನುವಿನ ಪ್ರತಿಮೆಯ ತ್ವರಿತ ಪ್ರತಿಷ್ಠಾಪನೆ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ತೆಗೆದುಕೊಂಡ ಸಮಯ ಸ್ವತಂತ್ರೋತ್ತರ ಭಾರತದಲ್ಲಿ ವಿಪರ್ಯಾಸವಾಗಿ ಕಾಣಬಹುದು. ಮನುವಿನ ಸಿದ್ದಾಂತವು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಅದರಲ್ಲಿ ಬ್ರಾಹ್ಮಣ ಮೌಲ್ಯಗಳ ವೈಭವೀಕರಣವನ್ನು ಕಾಣಬಹುದಾಗಿದೆ.

1989ರ ಫೆ.10ರಂದು ರಾಜಸ್ಥಾನ ಹೈಕೋರ್ಟ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪದಮ್ ಕುಮಾರ್ ಜೈನ್ ಅವರು ನ್ಯಾಯಾಲಯದ ಆವರಣದಲ್ಲಿ ಮನುವಿನ ಪ್ರತಿಮೆಯನ್ನು ಸ್ಥಾಪಿಸಲು ಪ್ರಸ್ತಾಪಿಸಿದರು. ಈ ಪ್ರಸ್ತಾಪದ ಕೇವಲ 23 ದಿನಗಳ ನಂತರ ಮಾ.3 1989 ರಂದು ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಆ ಸಮಯದಲ್ಲಿ ಕಾಂಗ್ರೆಸ್ಸಿನ ಶಿವಚರಣ್ ಮಾಥುರ್ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದರು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದರು ಮತ್ತು ನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಮನುವಿನ ಪ್ರತಿಮೆಯ ಸ್ಥಾಪನೆಯನ್ನು ವಿರೋಧಿಸಿ ಎಚ್ಚರಗೊಂಡ ದಲಿತ ಸಮುದಾಯವು ಪ್ರತಿಭಟಿಸಲು ಪ್ರಾರಂಭಿಸಿತ್ತು. ಆದ್ದರಿಂದ ಜು.28 1989ರಂದು ರಾಜಸ್ಥಾನ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯದ ಅಧಿವೇಶನವು ಪ್ರತಿಮೆಯನ್ನು ತೆಗೆದುಹಾಕಲು ಸರ್ವಾನುಮತದಿಂದ ನಿರ್ಧರಿಸಿತು.

ತಕ್ಷಣ ವಿಶ್ವ ಹಿಂದೂ ಪರಿಷತ್ ನಾಯಕ ಆಚಾರ್ಯ ಧರ್ಮೇಂದ್ರ ಇದರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದರು. ಉಚ್ಚ ನ್ಯಾಯಾಲಯವು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಆ.1989 ರಲ್ಲಿ ಸಮ್ಮತಿಸಿತು. ಈ ಪ್ರಕರಣದ ಯಾವುದೇ ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಜರಾತಿಯಲ್ಲಿ ವಿಭಾಗೀಯ ಪೀಠ ಮಾತ್ರ ನಡೆಸಬೇಕು ಎಂದು ಸೂಚನೆ ನೀಡಿತ್ತು.

ಅಂದಿನಿಂದ ತಡೆಯಾಜ್ಞೆ ಮತ್ತು ಮನುವಿನ ಪ್ರತಿಮೆ ಹೈಕೋರ್ಟ್ ಆವರಣದಲ್ಲಿಯೇ ಉಳಿದಿದೆ. ಮತ್ತು ಈ ಪ್ರಕರಣವು ರಾಜಸ್ಥಾನ ಹೈಕೋರ್ಟ್‌ನ ಇತಿಹಾಸದಲ್ಲಿ ಸುದೀರ್ಘ ಬಾಕಿ ಉಳಿದಿರುವ PIL ಎಂಬ ಕುಖ್ಯಾತಿಯನ್ನು ಪಡೆದುಕೊಂಡಿದೆ.

ಈ ಪ್ರಕರಣದ ತೀರಾ ಇತ್ತೀಚಿನ ವಿಚಾರಣೆಯು 2015ರಲ್ಲಿ ನಡೆಯಿತು. 300ಕ್ಕೂ ಹೆಚ್ಚು ಬ್ರಾಹ್ಮಣ ಮತ್ತು ಸವರ್ಣಿಯ ವಕೀಲರು ವಿಚಾರಣೆಗೆ ಹಾಜರಾಗಲು ವಿವಿಧ ನ್ಯಾಯಾಲಯಗಳಿಂದ ಧಾವಿಸಿದ್ದರು.  ದಲಿತ ಸಂಘಟನೆಗಳ ಪರ ವಕೀಲ ಜೈನ್ ಅವರು ಕೋರ್ಟ್‌ಗೆ ಹಾಜರಾಗಿದ್ದು, ಮನುಸ್ಮೃತಿಯಲ್ಲಿನ ದಲಿತ, ಶೂದ್ರ ಮತ್ತು ಮಹಿಳೆಯರ ಬಗೆಗಿನ ಶ್ಲೋಕಗಳ ಬಗ್ಗೆ ನ್ಯಾಯಾಧೀಶರ ಗಮನ ಸೆಳೆಯಲು ಪ್ರಯತ್ನಿಸಿದ್ದರು. ಈ ವೇಳೆ ಮೇಲ್ಜಾತಿ ವಕೀಲರು ನ್ಯಾಯಾಲಯದ ಆವರಣದಲ್ಲಿ ಗದ್ದಲವನ್ನು ಪ್ರಾರಂಭಿಸಿದರು, ಇದು ವಿಚಾರಣೆಯನ್ನು ಮುಂದೂಡಲು ಕಾರಣವಾಯಿತು.

ಈ ನಡುವೆ ಹಲವು ದಲಿತ ಸಂಘಟನೆಗಳು ಮತ್ತು ಬಹುಜನ ಸಮಾಜ ಪಕ್ಷದ ಮುಖಂಡರು ಮನುವಿನ ಪ್ರತಿಮೆಯನ್ನು ತೆರವಿಗೆ ಒತ್ತಾಯಿಸುತ್ತಿದ್ದಾರೆ. ಅ.8, 2018ರಂದು ಮಹಾರಾಷ್ಟ್ರದ ಔರಂಗಾಬಾದ್‌ನ ಇಬ್ಬರು ಅಂಬೇಡ್ಕರ್ ವಾದಿ ಮಹಿಳಾ ಕಾರ್ಯಕರ್ತರು  ಶೀಲಾಬಾಯಿ ಪವಾರ್ ಮತ್ತು ಕಾಂತಾ ರಮೇಶ್ ಅಹಿರೆ – ಮನುವಿನ ಪ್ರತಿಮೆಗೆ ಕಪ್ಪು ಬಣ್ಣವನ್ನು ಎಸೆದಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿದ್ದರು. ಆದರೆ ಮನುವಿನ ಪ್ರತಿಮೆಯನ್ನು ತೆಗೆಯಲು ಸಾಧ್ಯವಾಗಲಿಲ್ಲ.

ರಾಜಸ್ಥಾನದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರ್ಯಾವಾಗಿ ಸರಕಾರ ನಡೆಸುತ್ತಾ ಬಂದಿದೆ.  ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಲುವು ಹೆಚ್ಚಾಗಿ ಜಾತಿ ವ್ಯವಸ್ಥೆಯನ್ನು ಸಮರ್ಥಿಸುತ್ತದೆ. ಆದರೆ ಸಂವಿಧಾನದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮನುವಿನ ಪ್ರತಿಮೆಯನ್ನು ತೆಗೆಯಲು ಹೂಡಿರುವ ವ್ಯಾಜ್ಯದ ಹಿಂದೆ ತನ್ನ ನಿಗಾವನ್ನು ವಹಿಸಲಿಲ್ಲ ಏಕೆ ಎನ್ನುವುದು ಪ್ರಶ್ನಾರ್ಹವಾಗಿದೆ. ವಿಪರ್ಯಾಸವೆಂದರೆ ಕಾಂಗ್ರೆಸ್ ನಾಯಕನೋರ್ವನ ಹೇಳಿಕೆಯು ಮನುವಿನ ಪ್ರತಿಮೆ ತೆರವಿನ ವಿರುದ್ಧ ಅರ್ಜಿ ಸಲ್ಲಿಸಿದ್ದ ವಿಎಚ್‌ಪಿಯ ಆಚಾರ್ಯ ಧರ್ಮೇಂದ್ರ ಅವರ ಹೇಳಿಕೆಯೊಂದಿಗೆ ಹೋಲುತ್ತದೆ.  ಹೈಕೋರ್ಟ್‌ನಲ್ಲಿ ಮನು ಪ್ರತಿಮೆಯನ್ನು ಹೊಂದುವುದು ಉತ್ತಮ ಆಲೋಚನೆಯಾಗಿದೆ ಏಕೆಂದರೆ ಅವರು ಕಾನೂನು ರಚಿಸಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ. ಅವನನ್ನು ವಿರೋಧಿಸುವವರು ಮನುವಿನ ತತ್ವದ ಅರಿವಿಲ್ಲದವರು ಎಂದು ಹೇಳಿದ್ದರು.

ರಾಜಸ್ಥಾನ ಹೈಕೋರ್ಟ್ ಆವರಣದಲ್ಲಿರುವ ಮನುವಿನ ಪ್ರತಿಮೆಯನ್ನು ತೆರವು ಮಾಡುವಂತೆ ಒತ್ತಾಯಿಸಿ ಪ್ರಕರಣವನ್ನು ಉದ್ದೇಶಪೂರ್ವಕವಾಗಿ 25 ವರ್ಷಗಳಿಗೂ ಹೆಚ್ಚು ಕಾಲ ವಿಳಂಬಗೊಳಿಸಿದಾಗ, ಹಲವಾರು ದಲಿತ ಕಾರ್ಯಕರ್ತರು ಮತ್ತು ಸಂಘಟನೆಗಳು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಆದರೆ ಫೆ.24, 2023ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸುಂದರೇಶ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರವು ಮನುವಿನ ಪ್ರತಿಮೆ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಮನು ಮತ್ತು ಮನುಸ್ಮೃತಿಯು ಸಾಮಾಜಿಕ ಅಸಮಾನತೆ, ಜಾತಿ ಶ್ರೇಣಿ ಮತ್ತು ಪಿತೃಪ್ರಭುತ್ವವನ್ನು ಪ್ರತಿನಿಧಿಸುತ್ತದೆ. ಅಂಬೇಡ್ಕರ್ ಮತ್ತು ಸಂವಿಧಾನವು ಸಮಾನತೆ, ಸಹಾನುಭೂತಿ, ಸಾಮಾಜಿಕ-ಆರ್ಥಿಕ ನ್ಯಾಯ ಮತ್ತು ಭ್ರಾತೃತ್ವಕ್ಕಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗಿದೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...