Homeಮುಖಪುಟ5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

“ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

- Advertisement -
- Advertisement -

ಪೊಲೀಸರು ನಡೆಸಿದ ಗುಂಡಿನ ಕಾಳಗದಲ್ಲಿ ಕಳೆದ ಐದು ವರ್ಷಗಳಲ್ಲಿ 166 ಕ್ರಿಮಿನಲ್‌ಗಳು ಸಾವನ್ನಪ್ಪಿದ್ದಾರೆ ಮತ್ತು 4,453 ಮಂದಿ ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಅಪರಾಧಗಳನ್ನು ಒಂದಿಷ್ಟೂ ಸಹಿಸುವುದಿಲ್ಲ, ಅಪರಾಧಿಗಳು ಸ್ವತಂತ್ರವಾಗಿರಲು ಬಿಡುವುದಿಲ್ಲ. ಅವರು ಜೈಲಿನಲ್ಲಿರುತ್ತಾರೆ ಅಥವಾ ಕೊಲ್ಲಲ್ಪಡುತ್ತಾರೆ ಎಂಬ ಸರ್ಕಾರದ ನೀತಿಯ ಪರಿಣಾಮ ಇದು ಸಾಧ್ಯವಾಗಿದೆ” ಎಂದು ಯೋಗಿ ಹೇಳಿಕೊಂಡಿದ್ದಾರೆ.

ಲಕ್ನೋದಲ್ಲಿ ಪೊಲೀಸ್ ಸ್ಮಾರಕ ದಿನದ ಪರೇಡ್ ಅನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ಕಳೆದ ಐದು ವರ್ಷಗಳಲ್ಲಿ 13 ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ಇದು ಮುಂದುವರಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ” ಎಂದಿದ್ದಾರೆ.

2017ರಿಂದ ಇಲ್ಲಿಯವರೆಗೆ ಉತ್ತರ ಪ್ರದೇಶ ಪೊಲೀಸರು ಆರೋಪಿತ ಅಪರಾಧಿಗಳೊಂದಿಗೆ ನೂರಾರು ಗುಂಡಿನ ಚಕಮಕಿಗಳಲ್ಲಿ ಭಾಗಿಯಾಗಿದ್ದಾರೆ.

ಆತ್ಮರಕ್ಷಣೆಗಾಗಿ ಅಥವಾ ಬಂಧಿಸಬೇಕಾದ ಅನಿವಾರ್ಯತೆ ಇದ್ದಾಗ ಮಾತ್ರವೇ ಗುಂಡು ಹಾರಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರಗಳು ಅಥವಾ ಸಮರ್ಥನೆಗಳು ಟೀಕೆಗೂ ಒಳಗಾಗಿವೆ.

ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸ್ ಕೇಸ್ ಡೈರಿಗಳ ಪ್ರಕಾರ, “ಅಪರಾಧಿಗಳು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ಕೊಲ್ಲುವ ಉದ್ದೇಶದಿಂದಲೇ ಗುಂಡು ಹಾರಿಸಿರುವುದು” ತಿಳಿದುಬರುತ್ತದೆ.

ಜುಲೈ 2021ರಲ್ಲಿ 87 ಮಾಜಿ ಅಧಿಕಾರಗಳ ಗುಂಪು ಪತ್ರ ಬರೆದಿತ್ತು. ಭಾರತೀಯ ಜನತಾ ಪಕ್ಷದ ನೇತೃತ್ವದ ಉತ್ತರ ಪ್ರದೇಶ ಆಡಳಿತವನ್ನು ಟೀಕಿಸಿದ್ದ ಅಧಿಕಾರಿಗಳು “ಕಾನೂನಿನ ನಿಯಮದ ಸ್ಪಷ್ಟ ಉಲ್ಲಂಘನೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

“ಆದಿತ್ಯನಾಥ್ ನೇತೃತ್ವದ ಎನ್‌ಕೌಂಟರ್ ಅಭಿಯಾನವು ಹೊಸ ಗೆರೆಗಳನ್ನು ದಾಟಿದೆ. ಏಕೆಂದರೆ ಈ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಸಣ್ಣ ಅಪರಾಧಿಗಳು ಅಥವಾ ಮುಗ್ಧರು ಎಂದು ಅಂಕಿಅಂಶಗಳು ತೋರಿಸುತ್ತಿವೆ. ಅವರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ” ಎಂದು ಅಧಿಕಾರಿಗಳು ಬಹಿರಂಗ ಪತ್ರದಲ್ಲಿ ತಿಳಿಸಿದ್ದರು. “ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

2017 ಮತ್ತು 2020ರ ನಡುವೆ, ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಸುಮಾರು 37% ಮುಸ್ಲಿಮರಿದ್ದಾರೆ. ಈ ಸಮುದಾಯವು ಉತ್ತರ ಪ್ರದೇಶದ ಜನಸಂಖ್ಯೆಯಲ್ಲಿ 20% ಕ್ಕಿಂತ ಕಡಿಮೆ ಇದೆ.

ಶುಕ್ರವಾರ ಮಾಡಿದ ಭಾಷಣದಲ್ಲಿ ಆದಿತ್ಯನಾಥ್ ಅವರು, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 244 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ ಮತ್ತು 133 ಪೊಲೀಸ್ ಔಟ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮತ್ತೆ ಇಷ್ಟು ಸುವ್ಯಸ್ಥೆ ಮಾಡಿದ್ದರು ,ಹೆಣ್ಣು ಮಕ್ಕಳು ಅದರಲ್ಲಿಯೂ ದಲಿತರು, ಹಿಂದುಳಿದವರು,ಮುಸಲ್ಮಾನರ ಮೇಲೆ ಅತ್ಯಾಚಾರ,ಅನಾಚಾರ ಇನ್ನು ಜಾಸ್ತಿಯಾಗುತ್ತಿದೆ, ಇಡೀ ಪ್ರಪಂಚದಲ್ಲೇ ಕೇಳರಿಯದಂತೆ ,ಅತ್ಯಾಚಾರಕ್ಕೊಳಗಾಗಿ ಮೃತಳಾದ ದಲಿತ ಹೆಣ್ಣು ಮಗಳನ್ನ ರಾತ್ರೋ ರಾತ್ರಿ ಸುಟ್ಟು ಹಾಕಿದಿರಲ್ಲಾ ಇದಾ ನಿನ್ನ ಕಾರ್ಯಕ್ಷಮತೆ? ನೋಡೋದಕ್ಕೆ ನೀನೇ ಒಳ್ಳೆ ಪೋಕರಿ ಇದ್ದ ಹಾಗೆ ಇದ್ದೀಯಾ ,ಇದನ್ನೆಲ್ಕಾ ಸಾಧನೆ ಎಂದು ಹೇಳಿಕೊಳ್ಳೋಕೆ ನಾಚಿಕೆಯಾಗೋದಿಲ್ವಾ?

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...