Homeಮುಖಪುಟ5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

“ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

- Advertisement -
- Advertisement -

ಪೊಲೀಸರು ನಡೆಸಿದ ಗುಂಡಿನ ಕಾಳಗದಲ್ಲಿ ಕಳೆದ ಐದು ವರ್ಷಗಳಲ್ಲಿ 166 ಕ್ರಿಮಿನಲ್‌ಗಳು ಸಾವನ್ನಪ್ಪಿದ್ದಾರೆ ಮತ್ತು 4,453 ಮಂದಿ ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಅಪರಾಧಗಳನ್ನು ಒಂದಿಷ್ಟೂ ಸಹಿಸುವುದಿಲ್ಲ, ಅಪರಾಧಿಗಳು ಸ್ವತಂತ್ರವಾಗಿರಲು ಬಿಡುವುದಿಲ್ಲ. ಅವರು ಜೈಲಿನಲ್ಲಿರುತ್ತಾರೆ ಅಥವಾ ಕೊಲ್ಲಲ್ಪಡುತ್ತಾರೆ ಎಂಬ ಸರ್ಕಾರದ ನೀತಿಯ ಪರಿಣಾಮ ಇದು ಸಾಧ್ಯವಾಗಿದೆ” ಎಂದು ಯೋಗಿ ಹೇಳಿಕೊಂಡಿದ್ದಾರೆ.

ಲಕ್ನೋದಲ್ಲಿ ಪೊಲೀಸ್ ಸ್ಮಾರಕ ದಿನದ ಪರೇಡ್ ಅನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ಕಳೆದ ಐದು ವರ್ಷಗಳಲ್ಲಿ 13 ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ಇದು ಮುಂದುವರಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ” ಎಂದಿದ್ದಾರೆ.

2017ರಿಂದ ಇಲ್ಲಿಯವರೆಗೆ ಉತ್ತರ ಪ್ರದೇಶ ಪೊಲೀಸರು ಆರೋಪಿತ ಅಪರಾಧಿಗಳೊಂದಿಗೆ ನೂರಾರು ಗುಂಡಿನ ಚಕಮಕಿಗಳಲ್ಲಿ ಭಾಗಿಯಾಗಿದ್ದಾರೆ.

ಆತ್ಮರಕ್ಷಣೆಗಾಗಿ ಅಥವಾ ಬಂಧಿಸಬೇಕಾದ ಅನಿವಾರ್ಯತೆ ಇದ್ದಾಗ ಮಾತ್ರವೇ ಗುಂಡು ಹಾರಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರಗಳು ಅಥವಾ ಸಮರ್ಥನೆಗಳು ಟೀಕೆಗೂ ಒಳಗಾಗಿವೆ.

ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸ್ ಕೇಸ್ ಡೈರಿಗಳ ಪ್ರಕಾರ, “ಅಪರಾಧಿಗಳು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ಕೊಲ್ಲುವ ಉದ್ದೇಶದಿಂದಲೇ ಗುಂಡು ಹಾರಿಸಿರುವುದು” ತಿಳಿದುಬರುತ್ತದೆ.

ಜುಲೈ 2021ರಲ್ಲಿ 87 ಮಾಜಿ ಅಧಿಕಾರಗಳ ಗುಂಪು ಪತ್ರ ಬರೆದಿತ್ತು. ಭಾರತೀಯ ಜನತಾ ಪಕ್ಷದ ನೇತೃತ್ವದ ಉತ್ತರ ಪ್ರದೇಶ ಆಡಳಿತವನ್ನು ಟೀಕಿಸಿದ್ದ ಅಧಿಕಾರಿಗಳು “ಕಾನೂನಿನ ನಿಯಮದ ಸ್ಪಷ್ಟ ಉಲ್ಲಂಘನೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

“ಆದಿತ್ಯನಾಥ್ ನೇತೃತ್ವದ ಎನ್‌ಕೌಂಟರ್ ಅಭಿಯಾನವು ಹೊಸ ಗೆರೆಗಳನ್ನು ದಾಟಿದೆ. ಏಕೆಂದರೆ ಈ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಸಣ್ಣ ಅಪರಾಧಿಗಳು ಅಥವಾ ಮುಗ್ಧರು ಎಂದು ಅಂಕಿಅಂಶಗಳು ತೋರಿಸುತ್ತಿವೆ. ಅವರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ” ಎಂದು ಅಧಿಕಾರಿಗಳು ಬಹಿರಂಗ ಪತ್ರದಲ್ಲಿ ತಿಳಿಸಿದ್ದರು. “ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

2017 ಮತ್ತು 2020ರ ನಡುವೆ, ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಸುಮಾರು 37% ಮುಸ್ಲಿಮರಿದ್ದಾರೆ. ಈ ಸಮುದಾಯವು ಉತ್ತರ ಪ್ರದೇಶದ ಜನಸಂಖ್ಯೆಯಲ್ಲಿ 20% ಕ್ಕಿಂತ ಕಡಿಮೆ ಇದೆ.

ಶುಕ್ರವಾರ ಮಾಡಿದ ಭಾಷಣದಲ್ಲಿ ಆದಿತ್ಯನಾಥ್ ಅವರು, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 244 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ ಮತ್ತು 133 ಪೊಲೀಸ್ ಔಟ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮತ್ತೆ ಇಷ್ಟು ಸುವ್ಯಸ್ಥೆ ಮಾಡಿದ್ದರು ,ಹೆಣ್ಣು ಮಕ್ಕಳು ಅದರಲ್ಲಿಯೂ ದಲಿತರು, ಹಿಂದುಳಿದವರು,ಮುಸಲ್ಮಾನರ ಮೇಲೆ ಅತ್ಯಾಚಾರ,ಅನಾಚಾರ ಇನ್ನು ಜಾಸ್ತಿಯಾಗುತ್ತಿದೆ, ಇಡೀ ಪ್ರಪಂಚದಲ್ಲೇ ಕೇಳರಿಯದಂತೆ ,ಅತ್ಯಾಚಾರಕ್ಕೊಳಗಾಗಿ ಮೃತಳಾದ ದಲಿತ ಹೆಣ್ಣು ಮಗಳನ್ನ ರಾತ್ರೋ ರಾತ್ರಿ ಸುಟ್ಟು ಹಾಕಿದಿರಲ್ಲಾ ಇದಾ ನಿನ್ನ ಕಾರ್ಯಕ್ಷಮತೆ? ನೋಡೋದಕ್ಕೆ ನೀನೇ ಒಳ್ಳೆ ಪೋಕರಿ ಇದ್ದ ಹಾಗೆ ಇದ್ದೀಯಾ ,ಇದನ್ನೆಲ್ಕಾ ಸಾಧನೆ ಎಂದು ಹೇಳಿಕೊಳ್ಳೋಕೆ ನಾಚಿಕೆಯಾಗೋದಿಲ್ವಾ?

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...