Homeಮುಖಪುಟ5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

“ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

- Advertisement -
- Advertisement -

ಪೊಲೀಸರು ನಡೆಸಿದ ಗುಂಡಿನ ಕಾಳಗದಲ್ಲಿ ಕಳೆದ ಐದು ವರ್ಷಗಳಲ್ಲಿ 166 ಕ್ರಿಮಿನಲ್‌ಗಳು ಸಾವನ್ನಪ್ಪಿದ್ದಾರೆ ಮತ್ತು 4,453 ಮಂದಿ ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಅಪರಾಧಗಳನ್ನು ಒಂದಿಷ್ಟೂ ಸಹಿಸುವುದಿಲ್ಲ, ಅಪರಾಧಿಗಳು ಸ್ವತಂತ್ರವಾಗಿರಲು ಬಿಡುವುದಿಲ್ಲ. ಅವರು ಜೈಲಿನಲ್ಲಿರುತ್ತಾರೆ ಅಥವಾ ಕೊಲ್ಲಲ್ಪಡುತ್ತಾರೆ ಎಂಬ ಸರ್ಕಾರದ ನೀತಿಯ ಪರಿಣಾಮ ಇದು ಸಾಧ್ಯವಾಗಿದೆ” ಎಂದು ಯೋಗಿ ಹೇಳಿಕೊಂಡಿದ್ದಾರೆ.

ಲಕ್ನೋದಲ್ಲಿ ಪೊಲೀಸ್ ಸ್ಮಾರಕ ದಿನದ ಪರೇಡ್ ಅನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ಕಳೆದ ಐದು ವರ್ಷಗಳಲ್ಲಿ 13 ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ಇದು ಮುಂದುವರಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ” ಎಂದಿದ್ದಾರೆ.

2017ರಿಂದ ಇಲ್ಲಿಯವರೆಗೆ ಉತ್ತರ ಪ್ರದೇಶ ಪೊಲೀಸರು ಆರೋಪಿತ ಅಪರಾಧಿಗಳೊಂದಿಗೆ ನೂರಾರು ಗುಂಡಿನ ಚಕಮಕಿಗಳಲ್ಲಿ ಭಾಗಿಯಾಗಿದ್ದಾರೆ.

ಆತ್ಮರಕ್ಷಣೆಗಾಗಿ ಅಥವಾ ಬಂಧಿಸಬೇಕಾದ ಅನಿವಾರ್ಯತೆ ಇದ್ದಾಗ ಮಾತ್ರವೇ ಗುಂಡು ಹಾರಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರಗಳು ಅಥವಾ ಸಮರ್ಥನೆಗಳು ಟೀಕೆಗೂ ಒಳಗಾಗಿವೆ.

ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸ್ ಕೇಸ್ ಡೈರಿಗಳ ಪ್ರಕಾರ, “ಅಪರಾಧಿಗಳು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ಕೊಲ್ಲುವ ಉದ್ದೇಶದಿಂದಲೇ ಗುಂಡು ಹಾರಿಸಿರುವುದು” ತಿಳಿದುಬರುತ್ತದೆ.

ಜುಲೈ 2021ರಲ್ಲಿ 87 ಮಾಜಿ ಅಧಿಕಾರಗಳ ಗುಂಪು ಪತ್ರ ಬರೆದಿತ್ತು. ಭಾರತೀಯ ಜನತಾ ಪಕ್ಷದ ನೇತೃತ್ವದ ಉತ್ತರ ಪ್ರದೇಶ ಆಡಳಿತವನ್ನು ಟೀಕಿಸಿದ್ದ ಅಧಿಕಾರಿಗಳು “ಕಾನೂನಿನ ನಿಯಮದ ಸ್ಪಷ್ಟ ಉಲ್ಲಂಘನೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

“ಆದಿತ್ಯನಾಥ್ ನೇತೃತ್ವದ ಎನ್‌ಕೌಂಟರ್ ಅಭಿಯಾನವು ಹೊಸ ಗೆರೆಗಳನ್ನು ದಾಟಿದೆ. ಏಕೆಂದರೆ ಈ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಸಣ್ಣ ಅಪರಾಧಿಗಳು ಅಥವಾ ಮುಗ್ಧರು ಎಂದು ಅಂಕಿಅಂಶಗಳು ತೋರಿಸುತ್ತಿವೆ. ಅವರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ” ಎಂದು ಅಧಿಕಾರಿಗಳು ಬಹಿರಂಗ ಪತ್ರದಲ್ಲಿ ತಿಳಿಸಿದ್ದರು. “ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

2017 ಮತ್ತು 2020ರ ನಡುವೆ, ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಸುಮಾರು 37% ಮುಸ್ಲಿಮರಿದ್ದಾರೆ. ಈ ಸಮುದಾಯವು ಉತ್ತರ ಪ್ರದೇಶದ ಜನಸಂಖ್ಯೆಯಲ್ಲಿ 20% ಕ್ಕಿಂತ ಕಡಿಮೆ ಇದೆ.

ಶುಕ್ರವಾರ ಮಾಡಿದ ಭಾಷಣದಲ್ಲಿ ಆದಿತ್ಯನಾಥ್ ಅವರು, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 244 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ ಮತ್ತು 133 ಪೊಲೀಸ್ ಔಟ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮತ್ತೆ ಇಷ್ಟು ಸುವ್ಯಸ್ಥೆ ಮಾಡಿದ್ದರು ,ಹೆಣ್ಣು ಮಕ್ಕಳು ಅದರಲ್ಲಿಯೂ ದಲಿತರು, ಹಿಂದುಳಿದವರು,ಮುಸಲ್ಮಾನರ ಮೇಲೆ ಅತ್ಯಾಚಾರ,ಅನಾಚಾರ ಇನ್ನು ಜಾಸ್ತಿಯಾಗುತ್ತಿದೆ, ಇಡೀ ಪ್ರಪಂಚದಲ್ಲೇ ಕೇಳರಿಯದಂತೆ ,ಅತ್ಯಾಚಾರಕ್ಕೊಳಗಾಗಿ ಮೃತಳಾದ ದಲಿತ ಹೆಣ್ಣು ಮಗಳನ್ನ ರಾತ್ರೋ ರಾತ್ರಿ ಸುಟ್ಟು ಹಾಕಿದಿರಲ್ಲಾ ಇದಾ ನಿನ್ನ ಕಾರ್ಯಕ್ಷಮತೆ? ನೋಡೋದಕ್ಕೆ ನೀನೇ ಒಳ್ಳೆ ಪೋಕರಿ ಇದ್ದ ಹಾಗೆ ಇದ್ದೀಯಾ ,ಇದನ್ನೆಲ್ಕಾ ಸಾಧನೆ ಎಂದು ಹೇಳಿಕೊಳ್ಳೋಕೆ ನಾಚಿಕೆಯಾಗೋದಿಲ್ವಾ?

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...