Homeಮುಖಪುಟ5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

5 ವರ್ಷಗಳಲ್ಲಿ 166 ಅಪರಾಧಿಗಳು ಪೊಲೀಸ್‌ ಗುಂಡೇಟಿಗೆ ಹತರಾಗಿದ್ದಾರೆ: ಯೋಗಿ ಆದಿತ್ಯನಾಥ್‌

“ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

- Advertisement -
- Advertisement -

ಪೊಲೀಸರು ನಡೆಸಿದ ಗುಂಡಿನ ಕಾಳಗದಲ್ಲಿ ಕಳೆದ ಐದು ವರ್ಷಗಳಲ್ಲಿ 166 ಕ್ರಿಮಿನಲ್‌ಗಳು ಸಾವನ್ನಪ್ಪಿದ್ದಾರೆ ಮತ್ತು 4,453 ಮಂದಿ ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಅಪರಾಧಗಳನ್ನು ಒಂದಿಷ್ಟೂ ಸಹಿಸುವುದಿಲ್ಲ, ಅಪರಾಧಿಗಳು ಸ್ವತಂತ್ರವಾಗಿರಲು ಬಿಡುವುದಿಲ್ಲ. ಅವರು ಜೈಲಿನಲ್ಲಿರುತ್ತಾರೆ ಅಥವಾ ಕೊಲ್ಲಲ್ಪಡುತ್ತಾರೆ ಎಂಬ ಸರ್ಕಾರದ ನೀತಿಯ ಪರಿಣಾಮ ಇದು ಸಾಧ್ಯವಾಗಿದೆ” ಎಂದು ಯೋಗಿ ಹೇಳಿಕೊಂಡಿದ್ದಾರೆ.

ಲಕ್ನೋದಲ್ಲಿ ಪೊಲೀಸ್ ಸ್ಮಾರಕ ದಿನದ ಪರೇಡ್ ಅನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, “ಕಳೆದ ಐದು ವರ್ಷಗಳಲ್ಲಿ 13 ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ. ಇದು ಮುಂದುವರಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ” ಎಂದಿದ್ದಾರೆ.

2017ರಿಂದ ಇಲ್ಲಿಯವರೆಗೆ ಉತ್ತರ ಪ್ರದೇಶ ಪೊಲೀಸರು ಆರೋಪಿತ ಅಪರಾಧಿಗಳೊಂದಿಗೆ ನೂರಾರು ಗುಂಡಿನ ಚಕಮಕಿಗಳಲ್ಲಿ ಭಾಗಿಯಾಗಿದ್ದಾರೆ.

ಆತ್ಮರಕ್ಷಣೆಗಾಗಿ ಅಥವಾ ಬಂಧಿಸಬೇಕಾದ ಅನಿವಾರ್ಯತೆ ಇದ್ದಾಗ ಮಾತ್ರವೇ ಗುಂಡು ಹಾರಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರಗಳು ಅಥವಾ ಸಮರ್ಥನೆಗಳು ಟೀಕೆಗೂ ಒಳಗಾಗಿವೆ.

ಹೆಚ್ಚಿನ ಸಂದರ್ಭಗಳಲ್ಲಿ ಪೊಲೀಸ್ ಕೇಸ್ ಡೈರಿಗಳ ಪ್ರಕಾರ, “ಅಪರಾಧಿಗಳು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದಾಗ ಕೊಲ್ಲುವ ಉದ್ದೇಶದಿಂದಲೇ ಗುಂಡು ಹಾರಿಸಿರುವುದು” ತಿಳಿದುಬರುತ್ತದೆ.

ಜುಲೈ 2021ರಲ್ಲಿ 87 ಮಾಜಿ ಅಧಿಕಾರಗಳ ಗುಂಪು ಪತ್ರ ಬರೆದಿತ್ತು. ಭಾರತೀಯ ಜನತಾ ಪಕ್ಷದ ನೇತೃತ್ವದ ಉತ್ತರ ಪ್ರದೇಶ ಆಡಳಿತವನ್ನು ಟೀಕಿಸಿದ್ದ ಅಧಿಕಾರಿಗಳು “ಕಾನೂನಿನ ನಿಯಮದ ಸ್ಪಷ್ಟ ಉಲ್ಲಂಘನೆ” ಎಂದು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ: ದುಷ್ಕರ್ಮಿಗಳನ್ನು ಕೊಲೆಯತ್ನ ಪ್ರಕರಣದಡಿ ಬಂಧಿಸಲು DYFI ಒತ್ತಾಯ

“ಆದಿತ್ಯನಾಥ್ ನೇತೃತ್ವದ ಎನ್‌ಕೌಂಟರ್ ಅಭಿಯಾನವು ಹೊಸ ಗೆರೆಗಳನ್ನು ದಾಟಿದೆ. ಏಕೆಂದರೆ ಈ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಸಣ್ಣ ಅಪರಾಧಿಗಳು ಅಥವಾ ಮುಗ್ಧರು ಎಂದು ಅಂಕಿಅಂಶಗಳು ತೋರಿಸುತ್ತಿವೆ. ಅವರ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ” ಎಂದು ಅಧಿಕಾರಿಗಳು ಬಹಿರಂಗ ಪತ್ರದಲ್ಲಿ ತಿಳಿಸಿದ್ದರು. “ಕೊಲ್ಲಲ್ಪಟ್ಟವರು ಮುಖ್ಯವಾಗಿ ಮುಸ್ಲಿಮರು, ದಲಿತರು ಮತ್ತು ಇತರ ಹಿಂದುಳಿದ ಜಾತಿಯವರಾಗಿದ್ದಾರೆ.”

2017 ಮತ್ತು 2020ರ ನಡುವೆ, ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ಕೊಲ್ಲಲ್ಪಟ್ಟವರಲ್ಲಿ ಸುಮಾರು 37% ಮುಸ್ಲಿಮರಿದ್ದಾರೆ. ಈ ಸಮುದಾಯವು ಉತ್ತರ ಪ್ರದೇಶದ ಜನಸಂಖ್ಯೆಯಲ್ಲಿ 20% ಕ್ಕಿಂತ ಕಡಿಮೆ ಇದೆ.

ಶುಕ್ರವಾರ ಮಾಡಿದ ಭಾಷಣದಲ್ಲಿ ಆದಿತ್ಯನಾಥ್ ಅವರು, ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ 244 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ ಮತ್ತು 133 ಪೊಲೀಸ್ ಔಟ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮತ್ತೆ ಇಷ್ಟು ಸುವ್ಯಸ್ಥೆ ಮಾಡಿದ್ದರು ,ಹೆಣ್ಣು ಮಕ್ಕಳು ಅದರಲ್ಲಿಯೂ ದಲಿತರು, ಹಿಂದುಳಿದವರು,ಮುಸಲ್ಮಾನರ ಮೇಲೆ ಅತ್ಯಾಚಾರ,ಅನಾಚಾರ ಇನ್ನು ಜಾಸ್ತಿಯಾಗುತ್ತಿದೆ, ಇಡೀ ಪ್ರಪಂಚದಲ್ಲೇ ಕೇಳರಿಯದಂತೆ ,ಅತ್ಯಾಚಾರಕ್ಕೊಳಗಾಗಿ ಮೃತಳಾದ ದಲಿತ ಹೆಣ್ಣು ಮಗಳನ್ನ ರಾತ್ರೋ ರಾತ್ರಿ ಸುಟ್ಟು ಹಾಕಿದಿರಲ್ಲಾ ಇದಾ ನಿನ್ನ ಕಾರ್ಯಕ್ಷಮತೆ? ನೋಡೋದಕ್ಕೆ ನೀನೇ ಒಳ್ಳೆ ಪೋಕರಿ ಇದ್ದ ಹಾಗೆ ಇದ್ದೀಯಾ ,ಇದನ್ನೆಲ್ಕಾ ಸಾಧನೆ ಎಂದು ಹೇಳಿಕೊಳ್ಳೋಕೆ ನಾಚಿಕೆಯಾಗೋದಿಲ್ವಾ?

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...