Homeಕರ್ನಾಟಕಪೊಲೀಸರ ಮುಂದೆಯೆ ವ್ಯಾಪಾರಿಯ ಮೇಲೆ ದಾಳಿಗೆ ಯತ್ನ - ಬಿಜೆಪಿಯ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್

ಪೊಲೀಸರ ಮುಂದೆಯೆ ವ್ಯಾಪಾರಿಯ ಮೇಲೆ ದಾಳಿಗೆ ಯತ್ನ – ಬಿಜೆಪಿಯ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್

- Advertisement -
- Advertisement -

ಪೊಲೀಸರ ಮುಂದೆಯೆ ಬಿಜೆಪಿ ದುಷ್ಕರ್ಮಿಗಳು ಅಂಗಡಿ ಬಂದ್‌ ಮಾಡುವಂತೆ ವ್ಯಾಪಾರಿಯೊಬ್ಬರಿಗೆ ಬಲವಂತವಾಗಿ ಒತ್ತಾಯಿಸಿ, ಅವರಿಗೆ ನಿಂದಿಸಿ ದಾಳಿಗೆ ಯತ್ನಿಸಿದ ಘಟನೆ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ಶನಿವಾರ ನಾನುಗೌರಿ.ಕಾಮ್‌ಗೆ ತಿಳಿಸಿದ್ದಾರೆ.

ಸಚಿವರಾದ ಲಕ್ಷ್ಮಿ ಹಬ್ಬಾಳ್ಕರ್ ಅವರನ್ನು ಸದನದಲ್ಲೆ ಅಶ್ಲೀಲವಾಗಿ ನಿಂದಿಸಿದ ಕಾರಣಕ್ಕೆ ಪೊಲೀಸರು ರವಿ ಅವರನ್ನು ಬಂಧಿಸಿದ್ದರು. ಇದನ್ನು ವಿರೋಧಿಸಿ ನಗರದಲ್ಲಿ ಗುಂಪುಕಟ್ಟಿಕೊಂಡು ಬಿಜೆಪಿ ಕಾರ್ಯಕರ್ತರು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದ್ದರು. ಈ ವೇಳೆ ವ್ಯಾಪಾರಿಯೊಬ್ಬರು ಅದನ್ನು ನಿರಾಕರಿಸಿ, ಅಂಗಡಿ ಬಂದ್‌ ಮಾಡುವುದಿಲ್ಲ, ವರ್ಷದಲ್ಲಿ ಎರಡು ತಿಂಗಳು ಬರಿ ಅಂಗಡಿ ಬಂದ್ ಮಾಡುವುದೆ ಆಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು,”ಅಂಗಡಿ ಬಂದ್‌ ಮಾಡುವುದಿಲ್ಲ, ವರ್ಷದಲ್ಲಿ ಎರಡು ತಿಂಗಳು ಬರಿ ಅಂಗಡಿ ಬಂದ್ ಮಾಡುವುದೆ ಆಗುತ್ತದೆ. ನನಗೆ ದಿನಕ್ಕೆ 10-15 ಸಾವಿರ ವರೆಗೆ ಖರ್ಚಿದೆ. ಆ ಖರ್ಚನ್ನು ನೀವು ಕೊಡಿ, ಆಗ ನಾನು ಅಂಗಡಿ ಬಂದ್ ಮಾಡುತ್ತೇನೆ.” ಎಂದು ವ್ಯಾಪಾರಿ ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ. ಜೊತೆಗೆ ಈ ಹಿಂದೆ ಬಿಜೆಪಿ ಸರ್ಕಾರದ ಸಮಯದಲ್ಲಿ ಕಳಪೆ ಕಾಮಗಾರಿಯಿಂದ ಅಂಗಡಿಗೆ ನೀರು ತುಂಬಿ 30 ಲಕ್ಷ ನಷ್ಟವಾಗಿದ್ದ ವಿಚಾರವನ್ನು ಅವರು ಹೇಳಿದ್ದು, ಈ ನಷ್ಟವನ್ನು ಕೊಡಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ವೇಳೆ ಬಿಜೆಪಿ ಕಾರ್ಯಕರ್ತರು, ಮಧ್ಯಾಹ್ನ ತನಕ ಬಂದ್ ಮಾಡಿ, ನಂತರ ಓಪನ್ ಮಾಡಿ ಎಂದು ಕೇಳಿಕೊಂಡಿದ್ದರು. ಅದಕ್ಕೂ ವ್ಯಾಪಾರಿ ನಿರಾಕರಿಸಿ, ನಾನು ಅಂಗಡಿ ಬಂದ್ ಮಾಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು. ಈ ವೇಳೆ, ಬಿಜೆಪಿ ಕಾರ್ಯಕರ್ತನೊಬ್ಬ, ”ನೀವು ಹಿಂದೂ ದೇಶದಲ್ಲಿ ಇಲ್ಲ, ನೀವು ಹಿಂದೂ ಅಲ್ಲ” ಎಂದು ಹೇಳಿದ್ದಾರೆ.

ಈ ವೇಳೆ ವ್ಯಾಪಾರಿ, ”ನಾನು ದೇವಸ್ಥಾನ ಕಟ್ಟಿಸಿದ್ದೇನೆ, ಬನ್ನಿ ನಾನು ತೋರಿಸುತ್ತೇನೆ. ದೇವರಮ್ಮ ಬೆಟ್ಟದಲ್ಲಿ ದೇವಸ್ಥಾನ ಕಟ್ಟಿಸಿದ ನನ್ನನ್ನು ಹಿಂದೂ ಅಲ್ಲ ಎಂದು ಹೇಳಲು ನೀವು ಯಾರು?” ಎಂದು ಹೇಳಿದ್ದಾರೆ. ಈ ವೇಳೆ ಇತರ ಬಿಜೆಪಿ ಕಾರ್ಯಕರ್ತರು ಪೊಲೀಸರ ಮುಂದೆಯೆ ಅವರ ಮೇಲೆ ದಾಳಿಗೆ ಮುಂದಾಗಿದ್ದು, ಪೊಲೀಸರು ಅವರನ್ಜು ಅಲ್ಲಿಂದ ತೆರಳುವಂತೆ ವಿನಂತಿಸುವುದು ವಿಡಿಯೊದಲ್ಲಿ ದಾಖಲಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಮ್‌ ಜೊತೆಗೆ ಮಾತನಾಡಿದ ಚಿಕ್ಕಮಗಳೂರು ಡಿವೈಎಸ್‌ಪಿ, ಅರೋಪಿಗಳ ವಿರುದ್ಧ ಬಲವಂತವಾಗಿ ಬಂದ್ ಮಾಡಿಸುತ್ತಿದ್ದಾರೆ ಎಂದು ಎಫ್‌ಐಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯ ಪಿಎಸ್‌ಐ ಶಂಭುಲಿಂಗೇಗೌಡ ಮಾತನಾಡಿ,”ಘಟನೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ಆಗಿದೆ. ತನಿಖೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದರು. ಈ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ವ್ಯಾಪಾಕ ಆಕ್ರೋಶ ವ್ಯಕ್ತವಾಗಿದ್ದು, ಸಚಿವರ ಅಭಿಮಾನಿಗಳು ಸುವರ್ಣಸೌಧದ ಮೊಗಸಾಲೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದರು.

ಬಿಜೆಪಿಯ ಸಿ.ಟಿ. ರವಿ ಅವರ ಮಾತು ಕೇಳಿ ಲಕ್ಷ್ಮಿ ಹೆಬ್ಬಾಳ್ಕರ್ ಕೆಂಡಾಮಂಡಲವಾಗಿದ್ದು, ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ ಎಂದು ವರದಿಯಾಗಿತ್ತು. ಹೆಬ್ಬಾಳ್ಕರ್ ಮಾತಿಗೆ ಕಾಂಗ್ರೆಸ್ ಸದಸ್ಯರು ಧ್ವನಿ ಗೂಡಿಸಿದ್ದು, ಹತ್ತು ಬಾರಿ ಅಸಂವಿಧಾನಿಕ ಪದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ. ಈ ನಡುವೆ ಸಿಟಿ ರವಿ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ಅವರನ್ನು ಬಂಧಿಸಿದ್ದರು.

ಇದನ್ನೂ ಓದಿ: ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ಸಚಿವೆ ಲಕ್ಷ್ಮಿ ವಿರುದ್ಧ ಅಶ್ಲೀಲ ನಿಂದನೆ ಪ್ರಕರಣ – ಬಿಜೆಪಿಯ ಸಿ.ಟಿ. ರವಿಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...