Homeಅಂಕಣಗಳುಇನ್ಮುಂದೆ ಖಾಯಂ ಕೆಲಸ ಎಂಬುದು ಕನಸು ಮಾತ್ರ: ಗುತ್ತಿಗೆ ನೌಕರರು ಏನು ಮಾಡಬೇಕು?

ಇನ್ಮುಂದೆ ಖಾಯಂ ಕೆಲಸ ಎಂಬುದು ಕನಸು ಮಾತ್ರ: ಗುತ್ತಿಗೆ ನೌಕರರು ಏನು ಮಾಡಬೇಕು?

ಕೊರೊನಾದಿಂದ ಈ ಸ್ಥಿತಿ ಬಂದೇತಿ ಅಂತ ಬಂಡವಾಳಶಾಹಿಗಳು ಹೇಳತಾರ. ಆದರ ಅವರ ಮನಸ್ಥಿತಿ ನೋಡಿದರ ಅವರು ಇದನ್ನ ಮಾಡಲಿಕ್ಕೆ ಕಾಯುತ್ತಾ ಇದ್ದರು, ಅಷ್ಟರಾಗ ಕೊರೊನಾ ಮಾಮ ಬಂದು ಅವರ ಕೆಲಸ ಹಗುರ ಮಾಡಿದ ಅಂತ ಅನ್ನಸತೇತಿ.

- Advertisement -
- Advertisement -

ಗಿಗ್ಗು ಅರ್ಥವ್ಯವಸ್ಥೆ ಅರ್ಥಾತ್ ಗಿಗ್ಗಾವಸ್ತೆ- ಡೇಟಾಮ್ಯಾಟಿಕ್ಸ್

ಹಳೇ ಕನ್ನಡ ಸಿನಿಮಾದಾಗ ಹೊಸ ಹೀರೋಗಳ ಕಡೆ ಹೊಡತ ತಿನ್ನಲಿಕ್ಕೆ ಒಬ್ಬ ಸಣ್ಣ ರೌಡಿ ಇರ್ತಾ ಇದ್ದ. ಅವನ ಹೆಸರು ಗುಗ್ಗು.

ಅವನು ಒಮ್ಮೊಮ್ಮೆ ಕಾಮೇಡಿ ಮಾಡ್ತಾ ಇದ್ದ. ಇನ್ನೊಮ್ಮೆ ರೌಡಿಗಿರಿ ಮಾಡ್ತಾ ಇದ್ದ. ಅವನ ಪಾತ್ರ ಸಣ್ಣದು. ಅವ ಹೀರೋ ಆಗಿ ಯಾವ ಪಿಚ್ಚರೂ ಮಾಡಲಿಲ್ಲ. ಮೂರು ತಾಸೀನ ಪಿಚ್ಚರಿನಾಗ ಒಂದು ಹತ್ತು ನಿಮಿಷ ಬಂದು ಹೋಗತಿದ್ದ. ಬಹಳ ಮಂದಿಗೆ ಅವ ಇದ್ದದ್ದೂ ಗೊತ್ತಾಗಲಿಲ್ಲ, ಹೋದದ್ದೂ ಗೊತ್ತಾಗಲಿಲ್ಲ.

ಈಗ ನಮ್ಮ ಜಾಗತಿಕ ಅರ್ಥವ್ಯವಸ್ಥೆ ಅನ್ನೋದು ಕೊರೊನಾದಿಂದಾಗಿ ಕೆಟ್ಟು ಕೆರ ಹಿಡದು ಹೋಗೇದ. ಇಂಥದ್ದರಾಗ ನಮ್ಮನ್ನು ಆಳುವ ಗುಗ್ಗುಗಳು ಗಿಗ್ಗು ಅರ್ಥವ್ಯವಸ್ಥೆ ಅಥವಾ ಗಿಗ್ಗಾವಸ್ತೆಯನ್ನ ಜಾರಿಗೆ ತರೋ ತಯಾರಿ ಮಾಡಾಕ ಹತ್ಯಾರ.

ಇದು ಏನಪಾ ಗಿಗ್ಗಾವಸ್ತೆ? ಹಂಗಅಂದ್ರ ಖಾತ್ರಿಯಲ್ಲದ ಕೆಲಸ. ಪಂಚಾಯಿತಿಯಿಂದ ಹಿಡದು ಯೂನನಿವರ್ಸಿಟಿವರೆಗೂ ಎಲ್ಲ ಭಾರತೀಯರಿಗೂ ಉದ್ಯೋಗ ಖಾತ್ರಿ ಅಭ್ಯಾಸ ಆಗಿ ಹೋಗೇದ. ಹಿಂಗಾಗಿ ಅಂತವರಿಗೆ ಇದು ಅಪಥ್ಯ. ಕೋಟ್ಯಾಂತರ ಮಂದಿಗೆ – ಕೂಲಿಕಾರರಿಗೆ, ಮನೆ ಕೆಲಸದವರಿಗೆ, ಅರೆಕಾಲಿಕ ಸಿಬ್ಬಂದಿಗಳಿಗೆ, ಅತಿಥಿ ಉಪನ್ಯಾಸಕರಿಗೆ ಇದು ದಿನ ನಿತ್ಯದ ಗೋಳು. ಅವರಿಗೆ ಏನೂ ಆಶ್ಚರ್ಯ ಆಗೋದಿಲ್ಲ.

ಈ ಗಿಗ್ಗು ಯಾಕ ಬಂತು ಅಂತ ತಿಳಕೋಬೇಕು ಅಂದ್ರ ಅದಕ್ಕ ಒಂದು ಸ್ವಲ್ಪ ಹಿನ್ನೆಲೆ ಬೇಕಾಗತದ. ಸರಳ ಭಾಷೆಯೊಳಗ ಹೇಳಬೇಕು ಅಂದ್ರ ಈ ಸಮಕಾಲೀನ ಜಾಗತಿಕ ಸಂದರ್ಭದಲ್ಲಿ ನವ್ಯೋತ್ತರ ವಸಾಹತುಶಾಹಿಯ ಪ್ರಭಾವದಿಂದ ಏನು ನಮ್ಮ ಅರ್ಥವ್ಯವಸ್ಥೆ ನಡದದ ಅಲ್ಲಾ. ಅದಕ್ಕ ಸಾಂಪ್ರದಾಯಿಕ ಅರ್ಥವ್ಯವಸ್ಥೆ ಅಥವಾ ಮಾರುಕಟ್ಟೆ ಹಿನ್ನೆಲೆಯ ಅರ್ಥವ್ಯವಸ್ಥೆ ಅಂತ ಅಂತಾರ.

ಇದರಾಗ ಎರಡು ಮಾರುಕಟ್ಟೆ ಮುಖ್ಯ ಆಗತಾವು. ಒಂದು ಸರಕು ಮತ್ತು ಸೇವೆ ಹಾಗೂ ಇನ್ನೊಂದು ಕಾರ್ಮಿಕ ಮಾರುಕಟ್ಟೆ. ಕಾರ್ಮಿಕ ವಿಭಾಗದೊಳ ಎರಡು ಉಪ ವಿಭಾಗ ಅದಾವು – ಕೌಶಲ್ಯ ರಹಿತ ಮತ್ತು ಕೌಶಲ್ಯ ಸಹಿತ.

ಇದು ಬೇಡಿಕೆ ಮತ್ತು ಪೂರೈಕೆಯ ಆಧಾರದ ಮೇಲೆ ನಡೀತೇತಿ. ಬೇಡಿಕೆ ಹೆಚ್ಚು ಇದ್ದರ ಸರಕಿನ ಬೆಲೆ ಹೆಚ್ಚಾಗಿ, ಸಂಬಳ ಹೆಚ್ಚಾಗಿ ಇರ್ತದ. ಪೂರೈಕೆ ಹೆಚ್ಚು ಆದರ ಬೆಲೆ ಮತ್ತು ಸಂಬಳ ಕಮ್ಮಿ. ಇದು ರಸ್ತೆ ಪಕ್ಕದಾಗ ಶೇಂಗಾ ಮಾರೋ ಮುದುಕಿಯಿಂದ ಹಿಡದು ಗೌತಮ್ ಅಡಾಣಿ ಅವರವರೆಗೆ ಎಲ್ಲರಿಗೂ ಗೊತ್ತಿರತದ.

ಕೌಶಲ್ಯ ಅನ್ನೋದು ಹೆಚ್ಚು ಆದಷ್ಟು ಸಂಬಳ ಹೆಚ್ಚು. ಕಮ್ಮಿ ಆದರ ಕಮ್ಮಿ. ಆಷ್ಟ.

ಆದರ ಇನ್ನೂ ಮುಂದು ಬರೋ ಗಿಗ್ಗಾವಸ್ತೆಯೊಳಗ ಇದು ಎಲ್ಲಾ ಉಲ್ಟಾ ಪಲ್ಟ ಆಗತದ.

ಯಾವ ಕೆಲಸಗಾರ ಎಷ್ಟು ಕೌಶಲ್ಯಾದಿಂದ ಕೆಲಸ ಮಾಡತಾನ, ಅವನಿಗೆ ಎಷ್ಟು ಅನುಭವ ಐತಿ, ಇದು ಯಾವುದೂ ಲೆಕ್ಕಕ್ಕೆ ಬರೋದಿಲ್ಲ.

ಎಂಥ ಕೆಲಸಗಾರನ ಇರಲಿ ಯಾರೂ ಕಾಯಂ ಅಲ್ಲ. ಎಲ್ಲರೂ ಅರೆಕಾಲಿಕ. ಉದಾಹರಣೆಗೆ ಪೊಲೀಸು, ಡಾಕ್ಟರು, ಸೇನಾ ಪಡೆ, ಶಿಕ್ಷಕರು, ನರ್ಸು, ಕಾರ್ಖಾನೆ ಕಾರ್ಮಿಕರು, ಬ್ಯಾಂಕು ಸಿಬ್ಬಂದಿ, ಎಲ್ಲರೂ ಗುತ್ತಿಗೆ ಮೇಲೆ ಕೆಲಸ ಮಾಡೋದು.

ಕೆಲವರು ಅದರ ಒಳ್ಳೆ ಗುಣಗಳನ್ನು ಪಟ್ಟಿ ಮಾಡಿದಾರು. ಅವು ಯಾವಪ ಅಂದ್ರ – ಜಲ್ದಿ ಕೆಲಸ ಸಿಗೋದು, ಬರೇ ಫೈಲು ಓಡಾಟ ಇಲ್ಲ, ಕೆಂಪು ಪಟ್ಟಿಗೆ ಕತ್ತರಿ, ಮನೆಯಲ್ಲಿಯೇ ಕುಳಿತು ಕೆಲಸ ಮಾಡೋದು, ತಮ್ಮ ಅನುಕೂಲಕ್ಕೆ ತಕ್ಕಂತೆ ಕೆಲಸ, ಕಚೇರಿ ಕೆಲಸ ಇಲ್ಲ, ಹಾಜರಿ ಹಾಕೋದು ಇಲ್ಲ, ಒಬ್ಬ ವ್ಯಕ್ತಿ ನೂರಾರು ತರಹ ಕೆಲಸ ಮಾಡೋದರಿಂದ ಅವನಿಗೆ ಬೇರೆ ಬೇರೆ ಕ್ಷೇತ್ರದ ಅನುಭವ ಜಾಸ್ತಿ, ನಿವೃತ್ತರಿಗೂ ಕೆಲಸ, ಇತ್ಯಾದಿ.

ಇನ್ನ ಗಿಗ್ಗು ವ್ಯವಸ್ಥೆಯ ಅವಗುಣಗಳನ್ನ ನೋಡೋಣ. ಅವು ಕಣ್ಣಿಗೆ ಕಾಣೋವಂತಾವು.

ಒಂದು ದೇಶದೊಳಗ ಹೆಚ್ಚಾನು ಹೆಚ್ಚು ಅರೆಕಾಲಿಕ, ಗುತ್ತಿಗೆ ಕೆಲ್ಸನ ಇರತಾವು. ಎಲ್ಲರಿಗೂ ಸರಕಾರಿ ಕೆಲಸ ಎಲ್ಲಿ ಸಿಗತದ? ನಮ್ಮ ದೇಶದಾಗ ಸರ್ಕಾರಿ ನೌಕರರು ಕೇವಲ ಮೂರು ಶೇಕಡಾ ಅದಾರು. ಉಳಿದ 97 ಶೇಕಡಾ ಕೆಲಸಗಾರರು ಖಾಸಗಿ ಕ್ಷೇತ್ರದಾಗ ಅದಾರು.

ಇವರಿಗೆ ಯಾರಿಗೂ ಸಿಬ್ಬಂದಿ ಕಲ್ಯಾಣದ ಯೋಜನೆಗಳು ಲಾಗೂ ಆಗೋದಿಲ್ಲ. ಇವರಿಗೆ ಪಿಂಚಣಿ ಇಲ್ಲ, ಆರೋಗ್ಯ – ಅಪಘಾತ ವಿಮೆ ಇಲ್ಲ, ಉದ್ಯೋಗಿ ವಿಮಾ ಯೋಜನೆಯ ಆಸ್ಪತ್ರೆ – ಮುಂತಾದ ಸೌಲಭ್ಯ ಇಲ್ಲ.

ಮೊದಲಿಗೆ ನಮ್ಮ ಬೆಂಗಳೂರಿನೊಳಗ ಎಚ್‌ಎಂಟಿ, ಬಿಇಎಲ್ ಅಂಥ ಸಾರ್ವಜನಿಕ ಕಂಪನಿಗಳು ಇದ್ದವು. ಅದರಾಗ ದೊಡ್ಡ ಹುದ್ದೆ ಒಳಗ ಇದ್ದವರು ಹಾಗೂ ಅವರ ಗಾಡಿ ಚಾಲಕರು ಎಲ್ಲರೂ ಕಾಯಂ ಕೆಲಸದಾಗ ಇದ್ದರು. ಅವರು ಇಬ್ಬರೂ ತಮ್ಮ ಮಕ್ಕಳನ್ನ ಒಳ್ಳೆ ಸಾಲಿಗೆ ಕಳಿಸಿ, ಒಳ್ಳೆ ಕೆಲಸ ಕೊಡಿಸಿ, ಪಿಂಚಣಿ ಪಡೆದು, ಮೊಮ್ಮಕ್ಕಳನ್ನ ನೋಡಲಿಕ್ಕೆ ಅಮೇರಿಕಾಗೆ ಹೋಗಿ, ನಯಾಗರ ಜಲಪಾತದ ಮುಂದ ನಿಂತು ಫೋಟೋ ಹೊಡಿಸಿಕಂಡರು. ಎಲ್ಲ ಜಾತಿ, ಜನಾಂಗದವರು ಈ ಸೌಲಭ್ಯಗಳನ್ನ ಪಡೆದರು.

ಖಾಸಗಿ ಕಂಪನಿಗಳು ಇಷ್ಟು ಅನುಕೂಲ ಮಾಡಿಕೊಡಲಾರದೇ ಇದ್ದರೂ ಕೂಡ, ಸ್ವಲ್ಪ ಅನುಕೂಲ ಮಾಡಿ ಕೊಡಬೇಕು ಅಂತ ನಮ್ಮಲ್ಲೇ ಕಾರ್ಮಿಕ ಕಲ್ಯಾಣ ಕಾಯಿದೆಗಳು ಬಂದವು. ಅವನ್ನು ಮುಖಾ ಮೂತಿ ನೋಡದೇ ಕೊರೊನಾ ನೆವ ಹೇಳಿ ಬಂದು ಮಾಡಲಾಯಿತು.

ಗಿಗ್ಗುದಾಗ ಈ ಕಾಯಿದೆಗಳ ಸುಳಿವೆ ಇರಂಗಿಲ್ಲ. ಉಳ್ಳವರು – ಮತ್ತು ಇಲ್ಲದವರು ಅಂತ ವ್ಯತ್ಯಾಸ ಖಾತ್ರಿ. ಇವರಿಗೆ ಸಿಕ್ಕಿದ್ದು ಅವರಿಗೆ ಸಿಗಬೇಕು ಅಂತ ಇಲ್ಲ.

ಕೊರೊನಾದಿಂದ ಈ ಸ್ಥಿತಿ ಬಂದೇತಿ ಅಂತ ಬಂಡವಾಳಶಾಹಿಗಳು ಹೇಳತಾರ. ಆದರ ಅವರ ಮನಸ್ಥಿತಿ ನೋಡಿದರ ಅವರು ಇದನ್ನ ಮಾಡಲಿಕ್ಕೆ ಕಾಯುತ್ತಾ ಇದ್ದರು, ಅಷ್ಟರಾಗ ಕೊರೊನಾ ಮಾಮ ಬಂದು ಅವರ ಕೆಲಸ ಹಗುರ ಮಾಡಿದ ಅಂತ ಅನ್ನಸತೇತಿ.

ಗಿಗ್ಗು ಅಂದ್ರ ಇಂಗ್ಲೀಷ್‌ದಾಗ ಸಂಗೀತ ಕಚೇರಿ ಅಂತ. ಅಂದ್ರ ಊರೂರಿಗೆ ಹಾಡಿಕೋತ ಹೋಗೋರು ಯಾವ ಊರಾಗೂ ನಿಲ್ಲೋದಿಲ್ಲಾ. ಅವರಿಗೆ ಯಾವ ಊರು ಆದರೇನು? ಸಂಗೀತ ಮುಖ್ಯ ಅಂತ ಅಲ್ಲಿಯ ಅರ್ಥ.

ನಮ್ಮಲ್ಲೆ ಹಂಗ ಇಲ್ಲಲ್ಲ. ಊರಾಗ ಒಂದು ಕಾರಖಾನೆ ಹಾಕಿಕೋತ ಹೋಗೋರಿಗೆ ಕೆಲಸಗಾರರ ಹಂಗು ಯಾಕ? ಅವರಿಗೆ ಬರೇ ರೊಕ್ಕದ ಚಿಂತೆ. ಯಾವ ಪಕ್ಷ ಅಧಿಕಾರಕ್ಕ ಬರ್ತೇತೋ ಆ ಪಕ್ಷದ ಬೆನ್ನು ಬಡಿಯೋರು ಅವರು. ಕೆಲಸಗಾರರು ಮಾತ್ರ ಊರು ಬಿಟ್ಟು, ದುಡಿಯಲಿಕ್ಕೆ ಹೋಗಿ ಲಾಕಡೌನ್ ಆದಾಗ ಸಾವಿರಾರು ಕಿಲೋ ಮೀಟರು ನಡಕೋತ ಬಂದು ರಸ್ತೆದಾಗ ಸಾಯೋರು. ಮಾಲೀಕರಿಗೆ ಕಾನೂನಿಗೆ ಕಿಮ್ಮತ್ತು ಇಲ್ಲ, ಕೆಲಸಗಾರರಿಗೆ ಕಾನೂನು ಗೊತ್ತಿಲ್ಲ. ಸರಕಾರ ಮಾಲೀಕರ ಮಾತು ಕೇಳತದ, ಕೆಲಸಗಾರರ ಮಾತು ಕೇಳೋದಿಲ್ಲ.

ಈ ಗಿಗ್ಗು ಬದಲಾಯಿಸುವುದು ಯಾರ ಕೈಯಾಗ ಐತಿ?


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...