Homeಅಂಕಣಗಳುಇನ್ಮುಂದೆ ಖಾಯಂ ಕೆಲಸ ಎಂಬುದು ಕನಸು ಮಾತ್ರ: ಗುತ್ತಿಗೆ ನೌಕರರು ಏನು ಮಾಡಬೇಕು?

ಇನ್ಮುಂದೆ ಖಾಯಂ ಕೆಲಸ ಎಂಬುದು ಕನಸು ಮಾತ್ರ: ಗುತ್ತಿಗೆ ನೌಕರರು ಏನು ಮಾಡಬೇಕು?

ಕೊರೊನಾದಿಂದ ಈ ಸ್ಥಿತಿ ಬಂದೇತಿ ಅಂತ ಬಂಡವಾಳಶಾಹಿಗಳು ಹೇಳತಾರ. ಆದರ ಅವರ ಮನಸ್ಥಿತಿ ನೋಡಿದರ ಅವರು ಇದನ್ನ ಮಾಡಲಿಕ್ಕೆ ಕಾಯುತ್ತಾ ಇದ್ದರು, ಅಷ್ಟರಾಗ ಕೊರೊನಾ ಮಾಮ ಬಂದು ಅವರ ಕೆಲಸ ಹಗುರ ಮಾಡಿದ ಅಂತ ಅನ್ನಸತೇತಿ.

- Advertisement -
- Advertisement -

ಗಿಗ್ಗು ಅರ್ಥವ್ಯವಸ್ಥೆ ಅರ್ಥಾತ್ ಗಿಗ್ಗಾವಸ್ತೆ- ಡೇಟಾಮ್ಯಾಟಿಕ್ಸ್

ಹಳೇ ಕನ್ನಡ ಸಿನಿಮಾದಾಗ ಹೊಸ ಹೀರೋಗಳ ಕಡೆ ಹೊಡತ ತಿನ್ನಲಿಕ್ಕೆ ಒಬ್ಬ ಸಣ್ಣ ರೌಡಿ ಇರ್ತಾ ಇದ್ದ. ಅವನ ಹೆಸರು ಗುಗ್ಗು.

ಅವನು ಒಮ್ಮೊಮ್ಮೆ ಕಾಮೇಡಿ ಮಾಡ್ತಾ ಇದ್ದ. ಇನ್ನೊಮ್ಮೆ ರೌಡಿಗಿರಿ ಮಾಡ್ತಾ ಇದ್ದ. ಅವನ ಪಾತ್ರ ಸಣ್ಣದು. ಅವ ಹೀರೋ ಆಗಿ ಯಾವ ಪಿಚ್ಚರೂ ಮಾಡಲಿಲ್ಲ. ಮೂರು ತಾಸೀನ ಪಿಚ್ಚರಿನಾಗ ಒಂದು ಹತ್ತು ನಿಮಿಷ ಬಂದು ಹೋಗತಿದ್ದ. ಬಹಳ ಮಂದಿಗೆ ಅವ ಇದ್ದದ್ದೂ ಗೊತ್ತಾಗಲಿಲ್ಲ, ಹೋದದ್ದೂ ಗೊತ್ತಾಗಲಿಲ್ಲ.

ಈಗ ನಮ್ಮ ಜಾಗತಿಕ ಅರ್ಥವ್ಯವಸ್ಥೆ ಅನ್ನೋದು ಕೊರೊನಾದಿಂದಾಗಿ ಕೆಟ್ಟು ಕೆರ ಹಿಡದು ಹೋಗೇದ. ಇಂಥದ್ದರಾಗ ನಮ್ಮನ್ನು ಆಳುವ ಗುಗ್ಗುಗಳು ಗಿಗ್ಗು ಅರ್ಥವ್ಯವಸ್ಥೆ ಅಥವಾ ಗಿಗ್ಗಾವಸ್ತೆಯನ್ನ ಜಾರಿಗೆ ತರೋ ತಯಾರಿ ಮಾಡಾಕ ಹತ್ಯಾರ.

ಇದು ಏನಪಾ ಗಿಗ್ಗಾವಸ್ತೆ? ಹಂಗಅಂದ್ರ ಖಾತ್ರಿಯಲ್ಲದ ಕೆಲಸ. ಪಂಚಾಯಿತಿಯಿಂದ ಹಿಡದು ಯೂನನಿವರ್ಸಿಟಿವರೆಗೂ ಎಲ್ಲ ಭಾರತೀಯರಿಗೂ ಉದ್ಯೋಗ ಖಾತ್ರಿ ಅಭ್ಯಾಸ ಆಗಿ ಹೋಗೇದ. ಹಿಂಗಾಗಿ ಅಂತವರಿಗೆ ಇದು ಅಪಥ್ಯ. ಕೋಟ್ಯಾಂತರ ಮಂದಿಗೆ – ಕೂಲಿಕಾರರಿಗೆ, ಮನೆ ಕೆಲಸದವರಿಗೆ, ಅರೆಕಾಲಿಕ ಸಿಬ್ಬಂದಿಗಳಿಗೆ, ಅತಿಥಿ ಉಪನ್ಯಾಸಕರಿಗೆ ಇದು ದಿನ ನಿತ್ಯದ ಗೋಳು. ಅವರಿಗೆ ಏನೂ ಆಶ್ಚರ್ಯ ಆಗೋದಿಲ್ಲ.

ಈ ಗಿಗ್ಗು ಯಾಕ ಬಂತು ಅಂತ ತಿಳಕೋಬೇಕು ಅಂದ್ರ ಅದಕ್ಕ ಒಂದು ಸ್ವಲ್ಪ ಹಿನ್ನೆಲೆ ಬೇಕಾಗತದ. ಸರಳ ಭಾಷೆಯೊಳಗ ಹೇಳಬೇಕು ಅಂದ್ರ ಈ ಸಮಕಾಲೀನ ಜಾಗತಿಕ ಸಂದರ್ಭದಲ್ಲಿ ನವ್ಯೋತ್ತರ ವಸಾಹತುಶಾಹಿಯ ಪ್ರಭಾವದಿಂದ ಏನು ನಮ್ಮ ಅರ್ಥವ್ಯವಸ್ಥೆ ನಡದದ ಅಲ್ಲಾ. ಅದಕ್ಕ ಸಾಂಪ್ರದಾಯಿಕ ಅರ್ಥವ್ಯವಸ್ಥೆ ಅಥವಾ ಮಾರುಕಟ್ಟೆ ಹಿನ್ನೆಲೆಯ ಅರ್ಥವ್ಯವಸ್ಥೆ ಅಂತ ಅಂತಾರ.

ಇದರಾಗ ಎರಡು ಮಾರುಕಟ್ಟೆ ಮುಖ್ಯ ಆಗತಾವು. ಒಂದು ಸರಕು ಮತ್ತು ಸೇವೆ ಹಾಗೂ ಇನ್ನೊಂದು ಕಾರ್ಮಿಕ ಮಾರುಕಟ್ಟೆ. ಕಾರ್ಮಿಕ ವಿಭಾಗದೊಳ ಎರಡು ಉಪ ವಿಭಾಗ ಅದಾವು – ಕೌಶಲ್ಯ ರಹಿತ ಮತ್ತು ಕೌಶಲ್ಯ ಸಹಿತ.

ಇದು ಬೇಡಿಕೆ ಮತ್ತು ಪೂರೈಕೆಯ ಆಧಾರದ ಮೇಲೆ ನಡೀತೇತಿ. ಬೇಡಿಕೆ ಹೆಚ್ಚು ಇದ್ದರ ಸರಕಿನ ಬೆಲೆ ಹೆಚ್ಚಾಗಿ, ಸಂಬಳ ಹೆಚ್ಚಾಗಿ ಇರ್ತದ. ಪೂರೈಕೆ ಹೆಚ್ಚು ಆದರ ಬೆಲೆ ಮತ್ತು ಸಂಬಳ ಕಮ್ಮಿ. ಇದು ರಸ್ತೆ ಪಕ್ಕದಾಗ ಶೇಂಗಾ ಮಾರೋ ಮುದುಕಿಯಿಂದ ಹಿಡದು ಗೌತಮ್ ಅಡಾಣಿ ಅವರವರೆಗೆ ಎಲ್ಲರಿಗೂ ಗೊತ್ತಿರತದ.

ಕೌಶಲ್ಯ ಅನ್ನೋದು ಹೆಚ್ಚು ಆದಷ್ಟು ಸಂಬಳ ಹೆಚ್ಚು. ಕಮ್ಮಿ ಆದರ ಕಮ್ಮಿ. ಆಷ್ಟ.

ಆದರ ಇನ್ನೂ ಮುಂದು ಬರೋ ಗಿಗ್ಗಾವಸ್ತೆಯೊಳಗ ಇದು ಎಲ್ಲಾ ಉಲ್ಟಾ ಪಲ್ಟ ಆಗತದ.

ಯಾವ ಕೆಲಸಗಾರ ಎಷ್ಟು ಕೌಶಲ್ಯಾದಿಂದ ಕೆಲಸ ಮಾಡತಾನ, ಅವನಿಗೆ ಎಷ್ಟು ಅನುಭವ ಐತಿ, ಇದು ಯಾವುದೂ ಲೆಕ್ಕಕ್ಕೆ ಬರೋದಿಲ್ಲ.

ಎಂಥ ಕೆಲಸಗಾರನ ಇರಲಿ ಯಾರೂ ಕಾಯಂ ಅಲ್ಲ. ಎಲ್ಲರೂ ಅರೆಕಾಲಿಕ. ಉದಾಹರಣೆಗೆ ಪೊಲೀಸು, ಡಾಕ್ಟರು, ಸೇನಾ ಪಡೆ, ಶಿಕ್ಷಕರು, ನರ್ಸು, ಕಾರ್ಖಾನೆ ಕಾರ್ಮಿಕರು, ಬ್ಯಾಂಕು ಸಿಬ್ಬಂದಿ, ಎಲ್ಲರೂ ಗುತ್ತಿಗೆ ಮೇಲೆ ಕೆಲಸ ಮಾಡೋದು.

ಕೆಲವರು ಅದರ ಒಳ್ಳೆ ಗುಣಗಳನ್ನು ಪಟ್ಟಿ ಮಾಡಿದಾರು. ಅವು ಯಾವಪ ಅಂದ್ರ – ಜಲ್ದಿ ಕೆಲಸ ಸಿಗೋದು, ಬರೇ ಫೈಲು ಓಡಾಟ ಇಲ್ಲ, ಕೆಂಪು ಪಟ್ಟಿಗೆ ಕತ್ತರಿ, ಮನೆಯಲ್ಲಿಯೇ ಕುಳಿತು ಕೆಲಸ ಮಾಡೋದು, ತಮ್ಮ ಅನುಕೂಲಕ್ಕೆ ತಕ್ಕಂತೆ ಕೆಲಸ, ಕಚೇರಿ ಕೆಲಸ ಇಲ್ಲ, ಹಾಜರಿ ಹಾಕೋದು ಇಲ್ಲ, ಒಬ್ಬ ವ್ಯಕ್ತಿ ನೂರಾರು ತರಹ ಕೆಲಸ ಮಾಡೋದರಿಂದ ಅವನಿಗೆ ಬೇರೆ ಬೇರೆ ಕ್ಷೇತ್ರದ ಅನುಭವ ಜಾಸ್ತಿ, ನಿವೃತ್ತರಿಗೂ ಕೆಲಸ, ಇತ್ಯಾದಿ.

ಇನ್ನ ಗಿಗ್ಗು ವ್ಯವಸ್ಥೆಯ ಅವಗುಣಗಳನ್ನ ನೋಡೋಣ. ಅವು ಕಣ್ಣಿಗೆ ಕಾಣೋವಂತಾವು.

ಒಂದು ದೇಶದೊಳಗ ಹೆಚ್ಚಾನು ಹೆಚ್ಚು ಅರೆಕಾಲಿಕ, ಗುತ್ತಿಗೆ ಕೆಲ್ಸನ ಇರತಾವು. ಎಲ್ಲರಿಗೂ ಸರಕಾರಿ ಕೆಲಸ ಎಲ್ಲಿ ಸಿಗತದ? ನಮ್ಮ ದೇಶದಾಗ ಸರ್ಕಾರಿ ನೌಕರರು ಕೇವಲ ಮೂರು ಶೇಕಡಾ ಅದಾರು. ಉಳಿದ 97 ಶೇಕಡಾ ಕೆಲಸಗಾರರು ಖಾಸಗಿ ಕ್ಷೇತ್ರದಾಗ ಅದಾರು.

ಇವರಿಗೆ ಯಾರಿಗೂ ಸಿಬ್ಬಂದಿ ಕಲ್ಯಾಣದ ಯೋಜನೆಗಳು ಲಾಗೂ ಆಗೋದಿಲ್ಲ. ಇವರಿಗೆ ಪಿಂಚಣಿ ಇಲ್ಲ, ಆರೋಗ್ಯ – ಅಪಘಾತ ವಿಮೆ ಇಲ್ಲ, ಉದ್ಯೋಗಿ ವಿಮಾ ಯೋಜನೆಯ ಆಸ್ಪತ್ರೆ – ಮುಂತಾದ ಸೌಲಭ್ಯ ಇಲ್ಲ.

ಮೊದಲಿಗೆ ನಮ್ಮ ಬೆಂಗಳೂರಿನೊಳಗ ಎಚ್‌ಎಂಟಿ, ಬಿಇಎಲ್ ಅಂಥ ಸಾರ್ವಜನಿಕ ಕಂಪನಿಗಳು ಇದ್ದವು. ಅದರಾಗ ದೊಡ್ಡ ಹುದ್ದೆ ಒಳಗ ಇದ್ದವರು ಹಾಗೂ ಅವರ ಗಾಡಿ ಚಾಲಕರು ಎಲ್ಲರೂ ಕಾಯಂ ಕೆಲಸದಾಗ ಇದ್ದರು. ಅವರು ಇಬ್ಬರೂ ತಮ್ಮ ಮಕ್ಕಳನ್ನ ಒಳ್ಳೆ ಸಾಲಿಗೆ ಕಳಿಸಿ, ಒಳ್ಳೆ ಕೆಲಸ ಕೊಡಿಸಿ, ಪಿಂಚಣಿ ಪಡೆದು, ಮೊಮ್ಮಕ್ಕಳನ್ನ ನೋಡಲಿಕ್ಕೆ ಅಮೇರಿಕಾಗೆ ಹೋಗಿ, ನಯಾಗರ ಜಲಪಾತದ ಮುಂದ ನಿಂತು ಫೋಟೋ ಹೊಡಿಸಿಕಂಡರು. ಎಲ್ಲ ಜಾತಿ, ಜನಾಂಗದವರು ಈ ಸೌಲಭ್ಯಗಳನ್ನ ಪಡೆದರು.

ಖಾಸಗಿ ಕಂಪನಿಗಳು ಇಷ್ಟು ಅನುಕೂಲ ಮಾಡಿಕೊಡಲಾರದೇ ಇದ್ದರೂ ಕೂಡ, ಸ್ವಲ್ಪ ಅನುಕೂಲ ಮಾಡಿ ಕೊಡಬೇಕು ಅಂತ ನಮ್ಮಲ್ಲೇ ಕಾರ್ಮಿಕ ಕಲ್ಯಾಣ ಕಾಯಿದೆಗಳು ಬಂದವು. ಅವನ್ನು ಮುಖಾ ಮೂತಿ ನೋಡದೇ ಕೊರೊನಾ ನೆವ ಹೇಳಿ ಬಂದು ಮಾಡಲಾಯಿತು.

ಗಿಗ್ಗುದಾಗ ಈ ಕಾಯಿದೆಗಳ ಸುಳಿವೆ ಇರಂಗಿಲ್ಲ. ಉಳ್ಳವರು – ಮತ್ತು ಇಲ್ಲದವರು ಅಂತ ವ್ಯತ್ಯಾಸ ಖಾತ್ರಿ. ಇವರಿಗೆ ಸಿಕ್ಕಿದ್ದು ಅವರಿಗೆ ಸಿಗಬೇಕು ಅಂತ ಇಲ್ಲ.

ಕೊರೊನಾದಿಂದ ಈ ಸ್ಥಿತಿ ಬಂದೇತಿ ಅಂತ ಬಂಡವಾಳಶಾಹಿಗಳು ಹೇಳತಾರ. ಆದರ ಅವರ ಮನಸ್ಥಿತಿ ನೋಡಿದರ ಅವರು ಇದನ್ನ ಮಾಡಲಿಕ್ಕೆ ಕಾಯುತ್ತಾ ಇದ್ದರು, ಅಷ್ಟರಾಗ ಕೊರೊನಾ ಮಾಮ ಬಂದು ಅವರ ಕೆಲಸ ಹಗುರ ಮಾಡಿದ ಅಂತ ಅನ್ನಸತೇತಿ.

ಗಿಗ್ಗು ಅಂದ್ರ ಇಂಗ್ಲೀಷ್‌ದಾಗ ಸಂಗೀತ ಕಚೇರಿ ಅಂತ. ಅಂದ್ರ ಊರೂರಿಗೆ ಹಾಡಿಕೋತ ಹೋಗೋರು ಯಾವ ಊರಾಗೂ ನಿಲ್ಲೋದಿಲ್ಲಾ. ಅವರಿಗೆ ಯಾವ ಊರು ಆದರೇನು? ಸಂಗೀತ ಮುಖ್ಯ ಅಂತ ಅಲ್ಲಿಯ ಅರ್ಥ.

ನಮ್ಮಲ್ಲೆ ಹಂಗ ಇಲ್ಲಲ್ಲ. ಊರಾಗ ಒಂದು ಕಾರಖಾನೆ ಹಾಕಿಕೋತ ಹೋಗೋರಿಗೆ ಕೆಲಸಗಾರರ ಹಂಗು ಯಾಕ? ಅವರಿಗೆ ಬರೇ ರೊಕ್ಕದ ಚಿಂತೆ. ಯಾವ ಪಕ್ಷ ಅಧಿಕಾರಕ್ಕ ಬರ್ತೇತೋ ಆ ಪಕ್ಷದ ಬೆನ್ನು ಬಡಿಯೋರು ಅವರು. ಕೆಲಸಗಾರರು ಮಾತ್ರ ಊರು ಬಿಟ್ಟು, ದುಡಿಯಲಿಕ್ಕೆ ಹೋಗಿ ಲಾಕಡೌನ್ ಆದಾಗ ಸಾವಿರಾರು ಕಿಲೋ ಮೀಟರು ನಡಕೋತ ಬಂದು ರಸ್ತೆದಾಗ ಸಾಯೋರು. ಮಾಲೀಕರಿಗೆ ಕಾನೂನಿಗೆ ಕಿಮ್ಮತ್ತು ಇಲ್ಲ, ಕೆಲಸಗಾರರಿಗೆ ಕಾನೂನು ಗೊತ್ತಿಲ್ಲ. ಸರಕಾರ ಮಾಲೀಕರ ಮಾತು ಕೇಳತದ, ಕೆಲಸಗಾರರ ಮಾತು ಕೇಳೋದಿಲ್ಲ.

ಈ ಗಿಗ್ಗು ಬದಲಾಯಿಸುವುದು ಯಾರ ಕೈಯಾಗ ಐತಿ?


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...