Homeಅಂಕಣಗಳುಇನ್ಮುಂದೆ ಖಾಯಂ ಕೆಲಸ ಎಂಬುದು ಕನಸು ಮಾತ್ರ: ಗುತ್ತಿಗೆ ನೌಕರರು ಏನು ಮಾಡಬೇಕು?

ಇನ್ಮುಂದೆ ಖಾಯಂ ಕೆಲಸ ಎಂಬುದು ಕನಸು ಮಾತ್ರ: ಗುತ್ತಿಗೆ ನೌಕರರು ಏನು ಮಾಡಬೇಕು?

ಕೊರೊನಾದಿಂದ ಈ ಸ್ಥಿತಿ ಬಂದೇತಿ ಅಂತ ಬಂಡವಾಳಶಾಹಿಗಳು ಹೇಳತಾರ. ಆದರ ಅವರ ಮನಸ್ಥಿತಿ ನೋಡಿದರ ಅವರು ಇದನ್ನ ಮಾಡಲಿಕ್ಕೆ ಕಾಯುತ್ತಾ ಇದ್ದರು, ಅಷ್ಟರಾಗ ಕೊರೊನಾ ಮಾಮ ಬಂದು ಅವರ ಕೆಲಸ ಹಗುರ ಮಾಡಿದ ಅಂತ ಅನ್ನಸತೇತಿ.

- Advertisement -
- Advertisement -

ಗಿಗ್ಗು ಅರ್ಥವ್ಯವಸ್ಥೆ ಅರ್ಥಾತ್ ಗಿಗ್ಗಾವಸ್ತೆ- ಡೇಟಾಮ್ಯಾಟಿಕ್ಸ್

ಹಳೇ ಕನ್ನಡ ಸಿನಿಮಾದಾಗ ಹೊಸ ಹೀರೋಗಳ ಕಡೆ ಹೊಡತ ತಿನ್ನಲಿಕ್ಕೆ ಒಬ್ಬ ಸಣ್ಣ ರೌಡಿ ಇರ್ತಾ ಇದ್ದ. ಅವನ ಹೆಸರು ಗುಗ್ಗು.

ಅವನು ಒಮ್ಮೊಮ್ಮೆ ಕಾಮೇಡಿ ಮಾಡ್ತಾ ಇದ್ದ. ಇನ್ನೊಮ್ಮೆ ರೌಡಿಗಿರಿ ಮಾಡ್ತಾ ಇದ್ದ. ಅವನ ಪಾತ್ರ ಸಣ್ಣದು. ಅವ ಹೀರೋ ಆಗಿ ಯಾವ ಪಿಚ್ಚರೂ ಮಾಡಲಿಲ್ಲ. ಮೂರು ತಾಸೀನ ಪಿಚ್ಚರಿನಾಗ ಒಂದು ಹತ್ತು ನಿಮಿಷ ಬಂದು ಹೋಗತಿದ್ದ. ಬಹಳ ಮಂದಿಗೆ ಅವ ಇದ್ದದ್ದೂ ಗೊತ್ತಾಗಲಿಲ್ಲ, ಹೋದದ್ದೂ ಗೊತ್ತಾಗಲಿಲ್ಲ.

ಈಗ ನಮ್ಮ ಜಾಗತಿಕ ಅರ್ಥವ್ಯವಸ್ಥೆ ಅನ್ನೋದು ಕೊರೊನಾದಿಂದಾಗಿ ಕೆಟ್ಟು ಕೆರ ಹಿಡದು ಹೋಗೇದ. ಇಂಥದ್ದರಾಗ ನಮ್ಮನ್ನು ಆಳುವ ಗುಗ್ಗುಗಳು ಗಿಗ್ಗು ಅರ್ಥವ್ಯವಸ್ಥೆ ಅಥವಾ ಗಿಗ್ಗಾವಸ್ತೆಯನ್ನ ಜಾರಿಗೆ ತರೋ ತಯಾರಿ ಮಾಡಾಕ ಹತ್ಯಾರ.

ಇದು ಏನಪಾ ಗಿಗ್ಗಾವಸ್ತೆ? ಹಂಗಅಂದ್ರ ಖಾತ್ರಿಯಲ್ಲದ ಕೆಲಸ. ಪಂಚಾಯಿತಿಯಿಂದ ಹಿಡದು ಯೂನನಿವರ್ಸಿಟಿವರೆಗೂ ಎಲ್ಲ ಭಾರತೀಯರಿಗೂ ಉದ್ಯೋಗ ಖಾತ್ರಿ ಅಭ್ಯಾಸ ಆಗಿ ಹೋಗೇದ. ಹಿಂಗಾಗಿ ಅಂತವರಿಗೆ ಇದು ಅಪಥ್ಯ. ಕೋಟ್ಯಾಂತರ ಮಂದಿಗೆ – ಕೂಲಿಕಾರರಿಗೆ, ಮನೆ ಕೆಲಸದವರಿಗೆ, ಅರೆಕಾಲಿಕ ಸಿಬ್ಬಂದಿಗಳಿಗೆ, ಅತಿಥಿ ಉಪನ್ಯಾಸಕರಿಗೆ ಇದು ದಿನ ನಿತ್ಯದ ಗೋಳು. ಅವರಿಗೆ ಏನೂ ಆಶ್ಚರ್ಯ ಆಗೋದಿಲ್ಲ.

ಈ ಗಿಗ್ಗು ಯಾಕ ಬಂತು ಅಂತ ತಿಳಕೋಬೇಕು ಅಂದ್ರ ಅದಕ್ಕ ಒಂದು ಸ್ವಲ್ಪ ಹಿನ್ನೆಲೆ ಬೇಕಾಗತದ. ಸರಳ ಭಾಷೆಯೊಳಗ ಹೇಳಬೇಕು ಅಂದ್ರ ಈ ಸಮಕಾಲೀನ ಜಾಗತಿಕ ಸಂದರ್ಭದಲ್ಲಿ ನವ್ಯೋತ್ತರ ವಸಾಹತುಶಾಹಿಯ ಪ್ರಭಾವದಿಂದ ಏನು ನಮ್ಮ ಅರ್ಥವ್ಯವಸ್ಥೆ ನಡದದ ಅಲ್ಲಾ. ಅದಕ್ಕ ಸಾಂಪ್ರದಾಯಿಕ ಅರ್ಥವ್ಯವಸ್ಥೆ ಅಥವಾ ಮಾರುಕಟ್ಟೆ ಹಿನ್ನೆಲೆಯ ಅರ್ಥವ್ಯವಸ್ಥೆ ಅಂತ ಅಂತಾರ.

ಇದರಾಗ ಎರಡು ಮಾರುಕಟ್ಟೆ ಮುಖ್ಯ ಆಗತಾವು. ಒಂದು ಸರಕು ಮತ್ತು ಸೇವೆ ಹಾಗೂ ಇನ್ನೊಂದು ಕಾರ್ಮಿಕ ಮಾರುಕಟ್ಟೆ. ಕಾರ್ಮಿಕ ವಿಭಾಗದೊಳ ಎರಡು ಉಪ ವಿಭಾಗ ಅದಾವು – ಕೌಶಲ್ಯ ರಹಿತ ಮತ್ತು ಕೌಶಲ್ಯ ಸಹಿತ.

ಇದು ಬೇಡಿಕೆ ಮತ್ತು ಪೂರೈಕೆಯ ಆಧಾರದ ಮೇಲೆ ನಡೀತೇತಿ. ಬೇಡಿಕೆ ಹೆಚ್ಚು ಇದ್ದರ ಸರಕಿನ ಬೆಲೆ ಹೆಚ್ಚಾಗಿ, ಸಂಬಳ ಹೆಚ್ಚಾಗಿ ಇರ್ತದ. ಪೂರೈಕೆ ಹೆಚ್ಚು ಆದರ ಬೆಲೆ ಮತ್ತು ಸಂಬಳ ಕಮ್ಮಿ. ಇದು ರಸ್ತೆ ಪಕ್ಕದಾಗ ಶೇಂಗಾ ಮಾರೋ ಮುದುಕಿಯಿಂದ ಹಿಡದು ಗೌತಮ್ ಅಡಾಣಿ ಅವರವರೆಗೆ ಎಲ್ಲರಿಗೂ ಗೊತ್ತಿರತದ.

ಕೌಶಲ್ಯ ಅನ್ನೋದು ಹೆಚ್ಚು ಆದಷ್ಟು ಸಂಬಳ ಹೆಚ್ಚು. ಕಮ್ಮಿ ಆದರ ಕಮ್ಮಿ. ಆಷ್ಟ.

ಆದರ ಇನ್ನೂ ಮುಂದು ಬರೋ ಗಿಗ್ಗಾವಸ್ತೆಯೊಳಗ ಇದು ಎಲ್ಲಾ ಉಲ್ಟಾ ಪಲ್ಟ ಆಗತದ.

ಯಾವ ಕೆಲಸಗಾರ ಎಷ್ಟು ಕೌಶಲ್ಯಾದಿಂದ ಕೆಲಸ ಮಾಡತಾನ, ಅವನಿಗೆ ಎಷ್ಟು ಅನುಭವ ಐತಿ, ಇದು ಯಾವುದೂ ಲೆಕ್ಕಕ್ಕೆ ಬರೋದಿಲ್ಲ.

ಎಂಥ ಕೆಲಸಗಾರನ ಇರಲಿ ಯಾರೂ ಕಾಯಂ ಅಲ್ಲ. ಎಲ್ಲರೂ ಅರೆಕಾಲಿಕ. ಉದಾಹರಣೆಗೆ ಪೊಲೀಸು, ಡಾಕ್ಟರು, ಸೇನಾ ಪಡೆ, ಶಿಕ್ಷಕರು, ನರ್ಸು, ಕಾರ್ಖಾನೆ ಕಾರ್ಮಿಕರು, ಬ್ಯಾಂಕು ಸಿಬ್ಬಂದಿ, ಎಲ್ಲರೂ ಗುತ್ತಿಗೆ ಮೇಲೆ ಕೆಲಸ ಮಾಡೋದು.

ಕೆಲವರು ಅದರ ಒಳ್ಳೆ ಗುಣಗಳನ್ನು ಪಟ್ಟಿ ಮಾಡಿದಾರು. ಅವು ಯಾವಪ ಅಂದ್ರ – ಜಲ್ದಿ ಕೆಲಸ ಸಿಗೋದು, ಬರೇ ಫೈಲು ಓಡಾಟ ಇಲ್ಲ, ಕೆಂಪು ಪಟ್ಟಿಗೆ ಕತ್ತರಿ, ಮನೆಯಲ್ಲಿಯೇ ಕುಳಿತು ಕೆಲಸ ಮಾಡೋದು, ತಮ್ಮ ಅನುಕೂಲಕ್ಕೆ ತಕ್ಕಂತೆ ಕೆಲಸ, ಕಚೇರಿ ಕೆಲಸ ಇಲ್ಲ, ಹಾಜರಿ ಹಾಕೋದು ಇಲ್ಲ, ಒಬ್ಬ ವ್ಯಕ್ತಿ ನೂರಾರು ತರಹ ಕೆಲಸ ಮಾಡೋದರಿಂದ ಅವನಿಗೆ ಬೇರೆ ಬೇರೆ ಕ್ಷೇತ್ರದ ಅನುಭವ ಜಾಸ್ತಿ, ನಿವೃತ್ತರಿಗೂ ಕೆಲಸ, ಇತ್ಯಾದಿ.

ಇನ್ನ ಗಿಗ್ಗು ವ್ಯವಸ್ಥೆಯ ಅವಗುಣಗಳನ್ನ ನೋಡೋಣ. ಅವು ಕಣ್ಣಿಗೆ ಕಾಣೋವಂತಾವು.

ಒಂದು ದೇಶದೊಳಗ ಹೆಚ್ಚಾನು ಹೆಚ್ಚು ಅರೆಕಾಲಿಕ, ಗುತ್ತಿಗೆ ಕೆಲ್ಸನ ಇರತಾವು. ಎಲ್ಲರಿಗೂ ಸರಕಾರಿ ಕೆಲಸ ಎಲ್ಲಿ ಸಿಗತದ? ನಮ್ಮ ದೇಶದಾಗ ಸರ್ಕಾರಿ ನೌಕರರು ಕೇವಲ ಮೂರು ಶೇಕಡಾ ಅದಾರು. ಉಳಿದ 97 ಶೇಕಡಾ ಕೆಲಸಗಾರರು ಖಾಸಗಿ ಕ್ಷೇತ್ರದಾಗ ಅದಾರು.

ಇವರಿಗೆ ಯಾರಿಗೂ ಸಿಬ್ಬಂದಿ ಕಲ್ಯಾಣದ ಯೋಜನೆಗಳು ಲಾಗೂ ಆಗೋದಿಲ್ಲ. ಇವರಿಗೆ ಪಿಂಚಣಿ ಇಲ್ಲ, ಆರೋಗ್ಯ – ಅಪಘಾತ ವಿಮೆ ಇಲ್ಲ, ಉದ್ಯೋಗಿ ವಿಮಾ ಯೋಜನೆಯ ಆಸ್ಪತ್ರೆ – ಮುಂತಾದ ಸೌಲಭ್ಯ ಇಲ್ಲ.

ಮೊದಲಿಗೆ ನಮ್ಮ ಬೆಂಗಳೂರಿನೊಳಗ ಎಚ್‌ಎಂಟಿ, ಬಿಇಎಲ್ ಅಂಥ ಸಾರ್ವಜನಿಕ ಕಂಪನಿಗಳು ಇದ್ದವು. ಅದರಾಗ ದೊಡ್ಡ ಹುದ್ದೆ ಒಳಗ ಇದ್ದವರು ಹಾಗೂ ಅವರ ಗಾಡಿ ಚಾಲಕರು ಎಲ್ಲರೂ ಕಾಯಂ ಕೆಲಸದಾಗ ಇದ್ದರು. ಅವರು ಇಬ್ಬರೂ ತಮ್ಮ ಮಕ್ಕಳನ್ನ ಒಳ್ಳೆ ಸಾಲಿಗೆ ಕಳಿಸಿ, ಒಳ್ಳೆ ಕೆಲಸ ಕೊಡಿಸಿ, ಪಿಂಚಣಿ ಪಡೆದು, ಮೊಮ್ಮಕ್ಕಳನ್ನ ನೋಡಲಿಕ್ಕೆ ಅಮೇರಿಕಾಗೆ ಹೋಗಿ, ನಯಾಗರ ಜಲಪಾತದ ಮುಂದ ನಿಂತು ಫೋಟೋ ಹೊಡಿಸಿಕಂಡರು. ಎಲ್ಲ ಜಾತಿ, ಜನಾಂಗದವರು ಈ ಸೌಲಭ್ಯಗಳನ್ನ ಪಡೆದರು.

ಖಾಸಗಿ ಕಂಪನಿಗಳು ಇಷ್ಟು ಅನುಕೂಲ ಮಾಡಿಕೊಡಲಾರದೇ ಇದ್ದರೂ ಕೂಡ, ಸ್ವಲ್ಪ ಅನುಕೂಲ ಮಾಡಿ ಕೊಡಬೇಕು ಅಂತ ನಮ್ಮಲ್ಲೇ ಕಾರ್ಮಿಕ ಕಲ್ಯಾಣ ಕಾಯಿದೆಗಳು ಬಂದವು. ಅವನ್ನು ಮುಖಾ ಮೂತಿ ನೋಡದೇ ಕೊರೊನಾ ನೆವ ಹೇಳಿ ಬಂದು ಮಾಡಲಾಯಿತು.

ಗಿಗ್ಗುದಾಗ ಈ ಕಾಯಿದೆಗಳ ಸುಳಿವೆ ಇರಂಗಿಲ್ಲ. ಉಳ್ಳವರು – ಮತ್ತು ಇಲ್ಲದವರು ಅಂತ ವ್ಯತ್ಯಾಸ ಖಾತ್ರಿ. ಇವರಿಗೆ ಸಿಕ್ಕಿದ್ದು ಅವರಿಗೆ ಸಿಗಬೇಕು ಅಂತ ಇಲ್ಲ.

ಕೊರೊನಾದಿಂದ ಈ ಸ್ಥಿತಿ ಬಂದೇತಿ ಅಂತ ಬಂಡವಾಳಶಾಹಿಗಳು ಹೇಳತಾರ. ಆದರ ಅವರ ಮನಸ್ಥಿತಿ ನೋಡಿದರ ಅವರು ಇದನ್ನ ಮಾಡಲಿಕ್ಕೆ ಕಾಯುತ್ತಾ ಇದ್ದರು, ಅಷ್ಟರಾಗ ಕೊರೊನಾ ಮಾಮ ಬಂದು ಅವರ ಕೆಲಸ ಹಗುರ ಮಾಡಿದ ಅಂತ ಅನ್ನಸತೇತಿ.

ಗಿಗ್ಗು ಅಂದ್ರ ಇಂಗ್ಲೀಷ್‌ದಾಗ ಸಂಗೀತ ಕಚೇರಿ ಅಂತ. ಅಂದ್ರ ಊರೂರಿಗೆ ಹಾಡಿಕೋತ ಹೋಗೋರು ಯಾವ ಊರಾಗೂ ನಿಲ್ಲೋದಿಲ್ಲಾ. ಅವರಿಗೆ ಯಾವ ಊರು ಆದರೇನು? ಸಂಗೀತ ಮುಖ್ಯ ಅಂತ ಅಲ್ಲಿಯ ಅರ್ಥ.

ನಮ್ಮಲ್ಲೆ ಹಂಗ ಇಲ್ಲಲ್ಲ. ಊರಾಗ ಒಂದು ಕಾರಖಾನೆ ಹಾಕಿಕೋತ ಹೋಗೋರಿಗೆ ಕೆಲಸಗಾರರ ಹಂಗು ಯಾಕ? ಅವರಿಗೆ ಬರೇ ರೊಕ್ಕದ ಚಿಂತೆ. ಯಾವ ಪಕ್ಷ ಅಧಿಕಾರಕ್ಕ ಬರ್ತೇತೋ ಆ ಪಕ್ಷದ ಬೆನ್ನು ಬಡಿಯೋರು ಅವರು. ಕೆಲಸಗಾರರು ಮಾತ್ರ ಊರು ಬಿಟ್ಟು, ದುಡಿಯಲಿಕ್ಕೆ ಹೋಗಿ ಲಾಕಡೌನ್ ಆದಾಗ ಸಾವಿರಾರು ಕಿಲೋ ಮೀಟರು ನಡಕೋತ ಬಂದು ರಸ್ತೆದಾಗ ಸಾಯೋರು. ಮಾಲೀಕರಿಗೆ ಕಾನೂನಿಗೆ ಕಿಮ್ಮತ್ತು ಇಲ್ಲ, ಕೆಲಸಗಾರರಿಗೆ ಕಾನೂನು ಗೊತ್ತಿಲ್ಲ. ಸರಕಾರ ಮಾಲೀಕರ ಮಾತು ಕೇಳತದ, ಕೆಲಸಗಾರರ ಮಾತು ಕೇಳೋದಿಲ್ಲ.

ಈ ಗಿಗ್ಗು ಬದಲಾಯಿಸುವುದು ಯಾರ ಕೈಯಾಗ ಐತಿ?


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...