Homeಮುಖಪುಟಅಕ್ಬರ್ 'ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ': ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

ಅಕ್ಬರ್ ‘ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ’: ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅದರ ರಾಜಕೀಯ ಅಂಗವಾದ ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ಸಂಘಟನೆಗಳು ಮುಸ್ಲಿಂ ರಾಜರುಗಳ ಬಗ್ಗೆ ಅವಕಾಶ ಸಿಕ್ಕಾಗಲೆಲ್ಲಾ ದ್ವೇಷ ಕಾರುತ್ತಾರೆ. ಆದರೆ ಇದೀಗ ನರೇಂದ್ರ ಮೋದಿ ಸರ್ಕಾರವು ತಮ್ಮ ನಿಲುವಿಗೆ ವ್ಯತಿರಿಕ್ತವಾಗಿ, ಮೊಘಲ್ ಚಕ್ರವರ್ತಿ ಅಕ್ಬರ್‌ನನ್ನು ಹೊಗಳಿದೆ.

ಸೆಪ್ಟೆಂಬರ್ 09 ಮತ್ತು 10, 2023 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಬಿಡುಗಡೆಯಾದ ನಿಯತಕಾಲಿಕದಲ್ಲಿ ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹೊಗಳಿತು.

ಆನ್‌ಲೈನ್‌ನಲ್ಲಿ ಲಭ್ಯವಿರುವ PDF ರೂಪದ 52 ಪುಟಗಳ G20 ಮ್ಯಾಗಜೀನ್‌ನಲ್ಲಿ, ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು “ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ” ಎಂದು ಕರೆದಿದೆ, ಅವರ ”ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯ ಮತ್ತು ಅದರ ಮುಂದಾಲೋಚನೆಯಿಂದ ಕೂಡಿದೆ” ಎಂದು ಹೇಳಿದೆ.

ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು, ಭಾರತದಲ್ಲಿ ಇಂದು ನಡೆಯುವ ತಪ್ಪುಗಳಿಗೆ ಮೊಘಲ್ ರಾಜರೇ ಕಾರಣ ಎಂದು ಆಗಾಗ್ಗೆ ನಿಂದಿಸುವುದು ಮತ್ತು ಅವರನ್ನು “ವಿದೇಶಿ ದಾಳಿಕೋರರು” ಎಂದು ಕರೆಯುತ್ತಿದ್ದರು. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು “1,200 ವರ್ಷಗಳ ಗುಲಾಮ ಮನಸ್ಥಿತಿ” ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ಸರ್ಕಾರವೇ ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು ಜಿ20 ಮ್ಯಾಗಜೀನ್‌ನಲ್ಲಿ “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ”ದ ಉದಾಹರಣೆಯನ್ನು ವಿವರಿಸಿದೆ.

”ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ದೊರೆ, ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು. ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು, ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಆಚರಿಸಿದರು” ಎಂದು ಅಕ್ಬರ್‌ ಬಗ್ಗೆ ವಿವರಿಸಲಾಗಿದೆ.

”ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ಉಪಸ್ಥಿತಿಯಲ್ಲಿ ಸೇರಿ, ಚರ್ಚೆ ನಡೆಸುತ್ತಿದ್ದರು. ಅಕ್ಬರ್ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುತ್ತಿದ್ದ. ಅಕ್ಬರನ ಪ್ರಜಾಸತ್ತಾತ್ಮಕ ಸಿದ್ಧಾಂತವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು” ಎಂದು ಅಕ್ಬರ್‌ ಬಗ್ಗೆ ಸಂಕ್ಷಿಪ್ತ ವಿವರವನ್ನು ಒದಗಿಸಲಾಗಿದೆ.

ನಿಯತಕಾಲಿಕೆಯಲ್ಲಿ ಶಿವಾಜಿ ಹಾಗೂ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ವಿವರಿಸಲಾಗಿದೆ.

ಆದರೆ, ಮುಸ್ಲಿಂ ದೊರೆಗಳ ಇತಿಹಾಸವನ್ನು ತಿರುಚಿ ಅದರಲ್ಲೂ ಮೊಘಲ್‌ ಅರಸರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಲೇ ಬಂದಿರುವ ಬಿಜೆಪಿ ಹಾಗೂ ಬಲಪಂಥೀಯ ರಾಜಕೀಯದ ಹೊರತಾಗಿಯೂ ಜಾಗತಿಕ ಸಮಾವೇಶದಲ್ಲಿ ಅಕ್ಬರನ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಂಡಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಜಿ20 ಶೃಂಗಸಭೆಗೆ ಬಂದ ವಿಶ್ವ ನಾಯಕರೊಂದಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಾಮೂಹಿಕ ನಮನ ಸಲ್ಲಿಸಿದ ಬಗ್ಗೆಯೂ ಇಂಟರ್‌ನೆಟ್‌ ಬಳಕೆದಾರರು ಚರ್ಚೆ ನಡೆಸಿದ್ದರು.

ಬಲಪಂಥೀಯ ರಾಜಕಾರಣ ದೇಶೀಯ ಮಟ್ಟದಲ್ಲಿ ಎಷ್ಟೇ ವಿರೋಧಿಸಿದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಹಾನ್‌ ವ್ಯಕ್ತಿತ್ವಗಳೇ ದೇಶವನ್ನು ಗುರುತಿಸುವಂತೆ ಮಾಡುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...