Homeಮುಖಪುಟಅಕ್ಬರ್ 'ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ': ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

ಅಕ್ಬರ್ ‘ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ’: ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅದರ ರಾಜಕೀಯ ಅಂಗವಾದ ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ಸಂಘಟನೆಗಳು ಮುಸ್ಲಿಂ ರಾಜರುಗಳ ಬಗ್ಗೆ ಅವಕಾಶ ಸಿಕ್ಕಾಗಲೆಲ್ಲಾ ದ್ವೇಷ ಕಾರುತ್ತಾರೆ. ಆದರೆ ಇದೀಗ ನರೇಂದ್ರ ಮೋದಿ ಸರ್ಕಾರವು ತಮ್ಮ ನಿಲುವಿಗೆ ವ್ಯತಿರಿಕ್ತವಾಗಿ, ಮೊಘಲ್ ಚಕ್ರವರ್ತಿ ಅಕ್ಬರ್‌ನನ್ನು ಹೊಗಳಿದೆ.

ಸೆಪ್ಟೆಂಬರ್ 09 ಮತ್ತು 10, 2023 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಬಿಡುಗಡೆಯಾದ ನಿಯತಕಾಲಿಕದಲ್ಲಿ ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹೊಗಳಿತು.

ಆನ್‌ಲೈನ್‌ನಲ್ಲಿ ಲಭ್ಯವಿರುವ PDF ರೂಪದ 52 ಪುಟಗಳ G20 ಮ್ಯಾಗಜೀನ್‌ನಲ್ಲಿ, ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು “ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ” ಎಂದು ಕರೆದಿದೆ, ಅವರ ”ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯ ಮತ್ತು ಅದರ ಮುಂದಾಲೋಚನೆಯಿಂದ ಕೂಡಿದೆ” ಎಂದು ಹೇಳಿದೆ.

ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು, ಭಾರತದಲ್ಲಿ ಇಂದು ನಡೆಯುವ ತಪ್ಪುಗಳಿಗೆ ಮೊಘಲ್ ರಾಜರೇ ಕಾರಣ ಎಂದು ಆಗಾಗ್ಗೆ ನಿಂದಿಸುವುದು ಮತ್ತು ಅವರನ್ನು “ವಿದೇಶಿ ದಾಳಿಕೋರರು” ಎಂದು ಕರೆಯುತ್ತಿದ್ದರು. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು “1,200 ವರ್ಷಗಳ ಗುಲಾಮ ಮನಸ್ಥಿತಿ” ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ಸರ್ಕಾರವೇ ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು ಜಿ20 ಮ್ಯಾಗಜೀನ್‌ನಲ್ಲಿ “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ”ದ ಉದಾಹರಣೆಯನ್ನು ವಿವರಿಸಿದೆ.

”ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ದೊರೆ, ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು. ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು, ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಆಚರಿಸಿದರು” ಎಂದು ಅಕ್ಬರ್‌ ಬಗ್ಗೆ ವಿವರಿಸಲಾಗಿದೆ.

”ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ಉಪಸ್ಥಿತಿಯಲ್ಲಿ ಸೇರಿ, ಚರ್ಚೆ ನಡೆಸುತ್ತಿದ್ದರು. ಅಕ್ಬರ್ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುತ್ತಿದ್ದ. ಅಕ್ಬರನ ಪ್ರಜಾಸತ್ತಾತ್ಮಕ ಸಿದ್ಧಾಂತವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು” ಎಂದು ಅಕ್ಬರ್‌ ಬಗ್ಗೆ ಸಂಕ್ಷಿಪ್ತ ವಿವರವನ್ನು ಒದಗಿಸಲಾಗಿದೆ.

ನಿಯತಕಾಲಿಕೆಯಲ್ಲಿ ಶಿವಾಜಿ ಹಾಗೂ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ವಿವರಿಸಲಾಗಿದೆ.

ಆದರೆ, ಮುಸ್ಲಿಂ ದೊರೆಗಳ ಇತಿಹಾಸವನ್ನು ತಿರುಚಿ ಅದರಲ್ಲೂ ಮೊಘಲ್‌ ಅರಸರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಲೇ ಬಂದಿರುವ ಬಿಜೆಪಿ ಹಾಗೂ ಬಲಪಂಥೀಯ ರಾಜಕೀಯದ ಹೊರತಾಗಿಯೂ ಜಾಗತಿಕ ಸಮಾವೇಶದಲ್ಲಿ ಅಕ್ಬರನ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಂಡಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಜಿ20 ಶೃಂಗಸಭೆಗೆ ಬಂದ ವಿಶ್ವ ನಾಯಕರೊಂದಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಾಮೂಹಿಕ ನಮನ ಸಲ್ಲಿಸಿದ ಬಗ್ಗೆಯೂ ಇಂಟರ್‌ನೆಟ್‌ ಬಳಕೆದಾರರು ಚರ್ಚೆ ನಡೆಸಿದ್ದರು.

ಬಲಪಂಥೀಯ ರಾಜಕಾರಣ ದೇಶೀಯ ಮಟ್ಟದಲ್ಲಿ ಎಷ್ಟೇ ವಿರೋಧಿಸಿದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಹಾನ್‌ ವ್ಯಕ್ತಿತ್ವಗಳೇ ದೇಶವನ್ನು ಗುರುತಿಸುವಂತೆ ಮಾಡುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...