Homeಮುಖಪುಟಅಕ್ಬರ್ 'ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ': ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

ಅಕ್ಬರ್ ‘ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ’: ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅದರ ರಾಜಕೀಯ ಅಂಗವಾದ ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ಸಂಘಟನೆಗಳು ಮುಸ್ಲಿಂ ರಾಜರುಗಳ ಬಗ್ಗೆ ಅವಕಾಶ ಸಿಕ್ಕಾಗಲೆಲ್ಲಾ ದ್ವೇಷ ಕಾರುತ್ತಾರೆ. ಆದರೆ ಇದೀಗ ನರೇಂದ್ರ ಮೋದಿ ಸರ್ಕಾರವು ತಮ್ಮ ನಿಲುವಿಗೆ ವ್ಯತಿರಿಕ್ತವಾಗಿ, ಮೊಘಲ್ ಚಕ್ರವರ್ತಿ ಅಕ್ಬರ್‌ನನ್ನು ಹೊಗಳಿದೆ.

ಸೆಪ್ಟೆಂಬರ್ 09 ಮತ್ತು 10, 2023 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಬಿಡುಗಡೆಯಾದ ನಿಯತಕಾಲಿಕದಲ್ಲಿ ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹೊಗಳಿತು.

ಆನ್‌ಲೈನ್‌ನಲ್ಲಿ ಲಭ್ಯವಿರುವ PDF ರೂಪದ 52 ಪುಟಗಳ G20 ಮ್ಯಾಗಜೀನ್‌ನಲ್ಲಿ, ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು “ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ” ಎಂದು ಕರೆದಿದೆ, ಅವರ ”ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯ ಮತ್ತು ಅದರ ಮುಂದಾಲೋಚನೆಯಿಂದ ಕೂಡಿದೆ” ಎಂದು ಹೇಳಿದೆ.

ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು, ಭಾರತದಲ್ಲಿ ಇಂದು ನಡೆಯುವ ತಪ್ಪುಗಳಿಗೆ ಮೊಘಲ್ ರಾಜರೇ ಕಾರಣ ಎಂದು ಆಗಾಗ್ಗೆ ನಿಂದಿಸುವುದು ಮತ್ತು ಅವರನ್ನು “ವಿದೇಶಿ ದಾಳಿಕೋರರು” ಎಂದು ಕರೆಯುತ್ತಿದ್ದರು. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು “1,200 ವರ್ಷಗಳ ಗುಲಾಮ ಮನಸ್ಥಿತಿ” ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ಸರ್ಕಾರವೇ ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು ಜಿ20 ಮ್ಯಾಗಜೀನ್‌ನಲ್ಲಿ “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ”ದ ಉದಾಹರಣೆಯನ್ನು ವಿವರಿಸಿದೆ.

”ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ದೊರೆ, ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು. ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು, ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಆಚರಿಸಿದರು” ಎಂದು ಅಕ್ಬರ್‌ ಬಗ್ಗೆ ವಿವರಿಸಲಾಗಿದೆ.

”ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ಉಪಸ್ಥಿತಿಯಲ್ಲಿ ಸೇರಿ, ಚರ್ಚೆ ನಡೆಸುತ್ತಿದ್ದರು. ಅಕ್ಬರ್ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುತ್ತಿದ್ದ. ಅಕ್ಬರನ ಪ್ರಜಾಸತ್ತಾತ್ಮಕ ಸಿದ್ಧಾಂತವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು” ಎಂದು ಅಕ್ಬರ್‌ ಬಗ್ಗೆ ಸಂಕ್ಷಿಪ್ತ ವಿವರವನ್ನು ಒದಗಿಸಲಾಗಿದೆ.

ನಿಯತಕಾಲಿಕೆಯಲ್ಲಿ ಶಿವಾಜಿ ಹಾಗೂ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ವಿವರಿಸಲಾಗಿದೆ.

ಆದರೆ, ಮುಸ್ಲಿಂ ದೊರೆಗಳ ಇತಿಹಾಸವನ್ನು ತಿರುಚಿ ಅದರಲ್ಲೂ ಮೊಘಲ್‌ ಅರಸರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಲೇ ಬಂದಿರುವ ಬಿಜೆಪಿ ಹಾಗೂ ಬಲಪಂಥೀಯ ರಾಜಕೀಯದ ಹೊರತಾಗಿಯೂ ಜಾಗತಿಕ ಸಮಾವೇಶದಲ್ಲಿ ಅಕ್ಬರನ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಂಡಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಜಿ20 ಶೃಂಗಸಭೆಗೆ ಬಂದ ವಿಶ್ವ ನಾಯಕರೊಂದಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಾಮೂಹಿಕ ನಮನ ಸಲ್ಲಿಸಿದ ಬಗ್ಗೆಯೂ ಇಂಟರ್‌ನೆಟ್‌ ಬಳಕೆದಾರರು ಚರ್ಚೆ ನಡೆಸಿದ್ದರು.

ಬಲಪಂಥೀಯ ರಾಜಕಾರಣ ದೇಶೀಯ ಮಟ್ಟದಲ್ಲಿ ಎಷ್ಟೇ ವಿರೋಧಿಸಿದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಹಾನ್‌ ವ್ಯಕ್ತಿತ್ವಗಳೇ ದೇಶವನ್ನು ಗುರುತಿಸುವಂತೆ ಮಾಡುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...