Homeಮುಖಪುಟಅಕ್ಬರ್ 'ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ': ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

ಅಕ್ಬರ್ ‘ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ’: ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅದರ ರಾಜಕೀಯ ಅಂಗವಾದ ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ಸಂಘಟನೆಗಳು ಮುಸ್ಲಿಂ ರಾಜರುಗಳ ಬಗ್ಗೆ ಅವಕಾಶ ಸಿಕ್ಕಾಗಲೆಲ್ಲಾ ದ್ವೇಷ ಕಾರುತ್ತಾರೆ. ಆದರೆ ಇದೀಗ ನರೇಂದ್ರ ಮೋದಿ ಸರ್ಕಾರವು ತಮ್ಮ ನಿಲುವಿಗೆ ವ್ಯತಿರಿಕ್ತವಾಗಿ, ಮೊಘಲ್ ಚಕ್ರವರ್ತಿ ಅಕ್ಬರ್‌ನನ್ನು ಹೊಗಳಿದೆ.

ಸೆಪ್ಟೆಂಬರ್ 09 ಮತ್ತು 10, 2023 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಬಿಡುಗಡೆಯಾದ ನಿಯತಕಾಲಿಕದಲ್ಲಿ ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹೊಗಳಿತು.

ಆನ್‌ಲೈನ್‌ನಲ್ಲಿ ಲಭ್ಯವಿರುವ PDF ರೂಪದ 52 ಪುಟಗಳ G20 ಮ್ಯಾಗಜೀನ್‌ನಲ್ಲಿ, ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು “ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ” ಎಂದು ಕರೆದಿದೆ, ಅವರ ”ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯ ಮತ್ತು ಅದರ ಮುಂದಾಲೋಚನೆಯಿಂದ ಕೂಡಿದೆ” ಎಂದು ಹೇಳಿದೆ.

ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು, ಭಾರತದಲ್ಲಿ ಇಂದು ನಡೆಯುವ ತಪ್ಪುಗಳಿಗೆ ಮೊಘಲ್ ರಾಜರೇ ಕಾರಣ ಎಂದು ಆಗಾಗ್ಗೆ ನಿಂದಿಸುವುದು ಮತ್ತು ಅವರನ್ನು “ವಿದೇಶಿ ದಾಳಿಕೋರರು” ಎಂದು ಕರೆಯುತ್ತಿದ್ದರು. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು “1,200 ವರ್ಷಗಳ ಗುಲಾಮ ಮನಸ್ಥಿತಿ” ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ಸರ್ಕಾರವೇ ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು ಜಿ20 ಮ್ಯಾಗಜೀನ್‌ನಲ್ಲಿ “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ”ದ ಉದಾಹರಣೆಯನ್ನು ವಿವರಿಸಿದೆ.

”ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ದೊರೆ, ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು. ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು, ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಆಚರಿಸಿದರು” ಎಂದು ಅಕ್ಬರ್‌ ಬಗ್ಗೆ ವಿವರಿಸಲಾಗಿದೆ.

”ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ಉಪಸ್ಥಿತಿಯಲ್ಲಿ ಸೇರಿ, ಚರ್ಚೆ ನಡೆಸುತ್ತಿದ್ದರು. ಅಕ್ಬರ್ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುತ್ತಿದ್ದ. ಅಕ್ಬರನ ಪ್ರಜಾಸತ್ತಾತ್ಮಕ ಸಿದ್ಧಾಂತವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು” ಎಂದು ಅಕ್ಬರ್‌ ಬಗ್ಗೆ ಸಂಕ್ಷಿಪ್ತ ವಿವರವನ್ನು ಒದಗಿಸಲಾಗಿದೆ.

ನಿಯತಕಾಲಿಕೆಯಲ್ಲಿ ಶಿವಾಜಿ ಹಾಗೂ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ವಿವರಿಸಲಾಗಿದೆ.

ಆದರೆ, ಮುಸ್ಲಿಂ ದೊರೆಗಳ ಇತಿಹಾಸವನ್ನು ತಿರುಚಿ ಅದರಲ್ಲೂ ಮೊಘಲ್‌ ಅರಸರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಲೇ ಬಂದಿರುವ ಬಿಜೆಪಿ ಹಾಗೂ ಬಲಪಂಥೀಯ ರಾಜಕೀಯದ ಹೊರತಾಗಿಯೂ ಜಾಗತಿಕ ಸಮಾವೇಶದಲ್ಲಿ ಅಕ್ಬರನ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಂಡಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಜಿ20 ಶೃಂಗಸಭೆಗೆ ಬಂದ ವಿಶ್ವ ನಾಯಕರೊಂದಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಾಮೂಹಿಕ ನಮನ ಸಲ್ಲಿಸಿದ ಬಗ್ಗೆಯೂ ಇಂಟರ್‌ನೆಟ್‌ ಬಳಕೆದಾರರು ಚರ್ಚೆ ನಡೆಸಿದ್ದರು.

ಬಲಪಂಥೀಯ ರಾಜಕಾರಣ ದೇಶೀಯ ಮಟ್ಟದಲ್ಲಿ ಎಷ್ಟೇ ವಿರೋಧಿಸಿದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಹಾನ್‌ ವ್ಯಕ್ತಿತ್ವಗಳೇ ದೇಶವನ್ನು ಗುರುತಿಸುವಂತೆ ಮಾಡುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...