Homeಮುಖಪುಟಅಕ್ಬರ್ 'ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ': ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

ಅಕ್ಬರ್ ‘ಶಾಂತಿ, ಪ್ರಜಾಪ್ರಭುತ್ವದ ಪ್ರತಿಪಾದಕ’: ಜಿ20 ನಿಯತಕಾಲಿಕೆಯಲ್ಲಿ ಮೊಘಲ್‌ ದೊರೆಯನ್ನು ಹೊಗಳಿದ ಮೋದಿ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಅದರ ರಾಜಕೀಯ ಅಂಗವಾದ ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ಸಂಘಟನೆಗಳು ಮುಸ್ಲಿಂ ರಾಜರುಗಳ ಬಗ್ಗೆ ಅವಕಾಶ ಸಿಕ್ಕಾಗಲೆಲ್ಲಾ ದ್ವೇಷ ಕಾರುತ್ತಾರೆ. ಆದರೆ ಇದೀಗ ನರೇಂದ್ರ ಮೋದಿ ಸರ್ಕಾರವು ತಮ್ಮ ನಿಲುವಿಗೆ ವ್ಯತಿರಿಕ್ತವಾಗಿ, ಮೊಘಲ್ ಚಕ್ರವರ್ತಿ ಅಕ್ಬರ್‌ನನ್ನು ಹೊಗಳಿದೆ.

ಸೆಪ್ಟೆಂಬರ್ 09 ಮತ್ತು 10, 2023 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ G20 ಶೃಂಗಸಭೆ 2023 ರ ಸಂದರ್ಭದಲ್ಲಿ ಬಿಡುಗಡೆಯಾದ ನಿಯತಕಾಲಿಕದಲ್ಲಿ ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು ಹೊಗಳಿತು.

ಆನ್‌ಲೈನ್‌ನಲ್ಲಿ ಲಭ್ಯವಿರುವ PDF ರೂಪದ 52 ಪುಟಗಳ G20 ಮ್ಯಾಗಜೀನ್‌ನಲ್ಲಿ, ಮೋದಿ ಸರ್ಕಾರವು ಮೊಘಲ್ ಚಕ್ರವರ್ತಿ ಅಕ್ಬರ್ ಅವರನ್ನು “ಶಾಂತಿ ಮತ್ತು ಪ್ರಜಾಪ್ರಭುತ್ವದ ಪ್ರತಿಪಾದಕ” ಎಂದು ಕರೆದಿದೆ, ಅವರ ”ಪ್ರಜಾಪ್ರಭುತ್ವದ ಚಿಂತನೆಯು ಅಸಾಮಾನ್ಯ ಮತ್ತು ಅದರ ಮುಂದಾಲೋಚನೆಯಿಂದ ಕೂಡಿದೆ” ಎಂದು ಹೇಳಿದೆ.

ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಇತರ ಬಲಪಂಥೀಯ ಹಿಂದೂ ನಾಯಕರು, ಭಾರತದಲ್ಲಿ ಇಂದು ನಡೆಯುವ ತಪ್ಪುಗಳಿಗೆ ಮೊಘಲ್ ರಾಜರೇ ಕಾರಣ ಎಂದು ಆಗಾಗ್ಗೆ ನಿಂದಿಸುವುದು ಮತ್ತು ಅವರನ್ನು “ವಿದೇಶಿ ದಾಳಿಕೋರರು” ಎಂದು ಕರೆಯುತ್ತಿದ್ದರು. 2014 ರ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಮೋದಿಯವರು “1,200 ವರ್ಷಗಳ ಗುಲಾಮ ಮನಸ್ಥಿತಿ” ಬಗ್ಗೆ ಮಾತನಾಡಿದ್ದಾರೆ. ಆದರೆ ಅವರ ಸರ್ಕಾರವೇ ಚಕ್ರವರ್ತಿ ಅಕ್ಬರನ ಮೊಘಲ್ ಯುಗವನ್ನು ಜಿ20 ಮ್ಯಾಗಜೀನ್‌ನಲ್ಲಿ “ಧರ್ಮವನ್ನು ಲೆಕ್ಕಿಸದೆ ಪ್ರತಿಯೊಬ್ಬರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಉತ್ತಮ ಆಡಳಿತ”ದ ಉದಾಹರಣೆಯನ್ನು ವಿವರಿಸಿದೆ.

”ಯಾವುದೇ ಧಾರ್ಮಿಕ ಪಕ್ಷಪಾತವಿಲ್ಲದೆ ಪ್ರತಿಯೊಬ್ಬರ ಹಿತಾಸಕ್ತಿಯು ನಿರತವಾಗಿರುವುದು ಉತ್ತಮ ಆಡಳಿತವಾಗಿದೆ. ಮೂರನೇ ಮೊಘಲ್ ದೊರೆ, ಅಕ್ಬರ್ ಕೂಡ ಇದೇ ರೀತಿಯ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದರು. ಧರ್ಮದ ಆಧಾರದ ಮೇಲೆ ತಾರತಮ್ಯದ ವಿರುದ್ಧ ಕ್ರಮಗಳನ್ನು ಕೈಗೊಂಡ ಅವರು ಸುಲ್-ಎ-ಕುಲ್ ಅಂದರೆ ವಿಶ್ವ ಶಾಂತಿಯ ತತ್ವವನ್ನು ಪರಿಚಯಿಸಿದರು. ಸಾಮರಸ್ಯ ಮತ್ತು ಸಹಿಷ್ಣು ಸಮಾಜವನ್ನು ರಚಿಸಲು, ಅವರು ದೀನ್-ಇ-ಇಲಾಹಿ ಧರ್ಮವನ್ನು ಪ್ರತಿಪಾದಿಸಿದರು ಮತ್ತು ಆಚರಿಸಿದರು” ಎಂದು ಅಕ್ಬರ್‌ ಬಗ್ಗೆ ವಿವರಿಸಲಾಗಿದೆ.

”ಅಕ್ಬರ್‌ ಸ್ಥಾಪಿಸಿದ ಪ್ರಾರ್ಥನಾ ಮಂದಿರದಲ್ಲಿ ವಿವಿಧ ಪಂಗಡಗಳ ಬುದ್ಧಿಜೀವಿಗಳು ಮತ್ತು ಧಾರ್ಮಿಕ ಮುಖಂಡರು ಅಕ್ಬರ್‌ ಉಪಸ್ಥಿತಿಯಲ್ಲಿ ಸೇರಿ, ಚರ್ಚೆ ನಡೆಸುತ್ತಿದ್ದರು. ಅಕ್ಬರ್ ನವರತ್ನ ಎಂಬ ತನ್ನ ಪರಿಷತ್ತಿನ ಒಂಬತ್ತು ವಿದ್ವಾಂಸರೊಂದಿಗೆ ಸಮಾಲೋಚಿಸಿ ತನ್ನ ಸಾರ್ವಜನಿಕ ಕಲ್ಯಾಣ ನೀತಿಗಳನ್ನು ಜಾರಿಗೆ ತರುತ್ತಿದ್ದ. ಅಕ್ಬರನ ಪ್ರಜಾಸತ್ತಾತ್ಮಕ ಸಿದ್ಧಾಂತವು ಅಸಾಮಾನ್ಯವಾಗಿತ್ತು ಮತ್ತು ಆತನ ಕಾಲಮಾನಕ್ಕಿಂತ ಬಹಳ ಮುಂದಿತ್ತು” ಎಂದು ಅಕ್ಬರ್‌ ಬಗ್ಗೆ ಸಂಕ್ಷಿಪ್ತ ವಿವರವನ್ನು ಒದಗಿಸಲಾಗಿದೆ.

ನಿಯತಕಾಲಿಕೆಯಲ್ಲಿ ಶಿವಾಜಿ ಹಾಗೂ ವಿಜಯನಗರ ಸಾಮ್ರಾಜ್ಯದ ಬಗ್ಗೆಯೂ ವಿವರಿಸಲಾಗಿದೆ.

ಆದರೆ, ಮುಸ್ಲಿಂ ದೊರೆಗಳ ಇತಿಹಾಸವನ್ನು ತಿರುಚಿ ಅದರಲ್ಲೂ ಮೊಘಲ್‌ ಅರಸರ ಬಗ್ಗೆ ಅಪಪ್ರಚಾರಗಳನ್ನು ನಡೆಸುತ್ತಲೇ ಬಂದಿರುವ ಬಿಜೆಪಿ ಹಾಗೂ ಬಲಪಂಥೀಯ ರಾಜಕೀಯದ ಹೊರತಾಗಿಯೂ ಜಾಗತಿಕ ಸಮಾವೇಶದಲ್ಲಿ ಅಕ್ಬರನ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೊಂಡಾಡಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಜಿ20 ಶೃಂಗಸಭೆಗೆ ಬಂದ ವಿಶ್ವ ನಾಯಕರೊಂದಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ ಸಾಮೂಹಿಕ ನಮನ ಸಲ್ಲಿಸಿದ ಬಗ್ಗೆಯೂ ಇಂಟರ್‌ನೆಟ್‌ ಬಳಕೆದಾರರು ಚರ್ಚೆ ನಡೆಸಿದ್ದರು.

ಬಲಪಂಥೀಯ ರಾಜಕಾರಣ ದೇಶೀಯ ಮಟ್ಟದಲ್ಲಿ ಎಷ್ಟೇ ವಿರೋಧಿಸಿದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಹಾನ್‌ ವ್ಯಕ್ತಿತ್ವಗಳೇ ದೇಶವನ್ನು ಗುರುತಿಸುವಂತೆ ಮಾಡುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...