Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

- Advertisement -
- Advertisement -

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯಿಂದ ಜ್ಞಾನವಾಪಿ ಮಸೀದಿ ಸಂಕೀರ್ಣದ ಹೆಚ್ಚುವರಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಹಿಂದೂ ಅರ್ಜಿದಾರರ ಮನವಿಯನ್ನು ವಾರಣಾಸಿಯ ತ್ವರಿತ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವಕೀಲ ವಿಜಯ್ ಶಂಕರ್ ರಸ್ತೋಗಿ ಸಲ್ಲಿಸಿರುವ ಅರ್ಜಿಯಲ್ಲಿ ಮಸೀದಿಯ ಕೇಂದ್ರ ಗುಮ್ಮಟದ ಅಡಿಯಲ್ಲಿ ಪ್ರಾಚೀನ ಹಿಂದೂ ದೇವಾಲಯದ ಅವಶೇಷಗಳನ್ನು ಪಡೆಯಲು ಆಕ್ರಮಣಕಾರಿ ಉತ್ಖನನ ವಿಧಾನಗಳನ್ನು ಬಳಸಲು ಪುರಾತತ್ವ ಸಂಸ್ಥೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 31 ರಂದು, ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳಿಗೆ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣೆಯ ವರದಿಯು ಈ ಸ್ಥಳದಲ್ಲಿ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯವನ್ನು 17 ನೇ ಶತಮಾನದಲ್ಲಿ ನಾಶಪಡಿಸಲಾಯಿತು ಎಂದು ಹೇಳಿತ್ತು.

2022ರ ಮೇ ತಿಂಗಳಲ್ಲಿ ಮಸೀದಿ ಆವರಣದಲ್ಲಿ ಇದ್ದ ಅಂಡಾಕಾರದ ವಸ್ತುವು ಶಿವಲಿಂಗವಾಗಿದೆ ಎಂದು ಹಿಂದೂ ಅರ್ಜಿದಾರರು ಪ್ರತಿಪಾದಿಸಿ ಪ್ರಕರಣ ದಾಖಲಿಸಿದ್ದರು. ಈ ವಸ್ತು ಶಿವಲಿಂಗವಾಗಿದೆ ಎಂದು ಅವರು ಪ್ರತಿಪಾದಿಸಿದ್ದರು. ಆದರೆ ಮಸೀದಿಯ ಉಸ್ತುವಾರಿ ಸಮಿತಿ ಈ ವಸ್ತು ಮಸೀದಿಗೆ ಆಗಮಿಸುವವರು ವುಜು ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ನಿಷ್ಕ್ರಿಯವಾದ ಕಾರಂಜಿ ಎಂದು ಹೇಳಿತ್ತು.

ರಸ್ತೋಗಿ ಅವರ ಮನವಿಯ ಭಾಗವಾಗಿ, ಶುಕ್ರವಾರದ ತ್ವರಿತ ನ್ಯಾಯಾಲಯವು ಪುರಾತತ್ತ್ವ ಶಾಸ್ತ್ರದ ಸಂಸ್ಥೆಯು ವುಜು ನಿರ್ವಸುವ ನೀರಿನ ತೊಟ್ಟಿಯಲ್ಲಿ ಇರುವ ಕಾರಂಜಿಯ “ವಯಸ್ಸು, ಗಾತ್ರ, ಸ್ಮಾರಕ ಮತ್ತು ಪುರಾತತ್ವ ವಿನ್ಯಾಸ ಅಥವಾ ಶೈಲಿಯನ್ನು… ಮತ್ತು ಅದರ ನಿರ್ಮಾಣಕ್ಕೆ ಯಾವ ವಸ್ತುಗಳನ್ನು ಬಳಸಲಾಗಿದೆ ಎಂಬುದನ್ನು ನಿರ್ಧರಿಸಲು ತನಿಖೆ ನಡೆಸುವಂತೆ ಕೇಳಿದ್ದ ಕೋರಿಕೆಯನ್ನು ಪರಿಗಣಿಸಿದೆ.

ಆದಾಗ್ಯೂ, ಈ ಸ್ಥಳದಲ್ಲಿ ಯಾವುದೇ ಉತ್ಖನನವನ್ನು ತಡೆಯುವ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶಗಳನ್ನು ನ್ಯಾಯಾಲಯ ಉಲ್ಲೇಖಿಸಿ, “ಸುಪ್ರೀಂ ಕೋರ್ಟ್ ಮತ್ತು ಅಲಹಾಬಾದ್ ಹೈಕೋರ್ಟ್ ಸಹ ಆಕ್ರಮಣಶೀಲವಲ್ಲದ ವಿಧಾನವನ್ನು ಬಳಸಿಕೊಂಡು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ತನಿಖೆ ನಡೆಸುವಾಗ ಉತ್ಖನನ ತಂತ್ರವನ್ನು ಬಳಸಬೇಡಿ ಮತ್ತು ಯಾವುದೇ ಆಸ್ತಿಯನ್ನು ನಾಶಪಡಿಸಬೇಡಿ” ಎಂದು ಸಿವಿಲ್ ನ್ಯಾಯಾಧೀಶ ಯುಗಲ್ ಶರ್ಮಾ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ವರದಿಯನ್ನು ಇನ್ನೂ ಕಾನೂನುಬದ್ಧವಾಗಿ ಪರಿಶೀಲಿಸಬೇಕಾಗಿದೆ. ಸುಪ್ರೀಂ ಕೋರ್ಟ್‌ನ ಆದೇಶದ ಕಾರಣಕ್ಕೆ ಮಸೀದಿಯ ವುಜೂ ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ಕಾರಂಜಿಯನ್ನು ರಕ್ಷಿಸಲಾಗಿದೆ ಎಂದು ಶರ್ಮಾ ಸೂಚಿಸಿದ್ದಾರೆ.

ಮಸೀದಿ ಸಂಕೀರ್ಣದ ಮುಚ್ಚಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಹಿಂದೂಗಳು ದಕ್ಷಿಣದಿಂದ ಮಸೀದಿ ಸಂಕೀರ್ಣವನ್ನು ಪ್ರವೇಶಿಸಬೇಕು ಮತ್ತು ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಮತ್ತು ಮುಸ್ಲಿಮರು ಉತ್ತರ ಭಾಗದಲ್ಲಿ ಪ್ರಾರ್ಥಿಸಬೇಕು ಎಂದು ನಿರ್ದೇಶಿಸಿದೆ. ಪ್ರಕರಣದ ತೀರ್ಪು ಬರುವವರೆಗೆ ಈ ವ್ಯವಸ್ಥೆ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...