Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

- Advertisement -
- Advertisement -

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯಿಂದ ಜ್ಞಾನವಾಪಿ ಮಸೀದಿ ಸಂಕೀರ್ಣದ ಹೆಚ್ಚುವರಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಹಿಂದೂ ಅರ್ಜಿದಾರರ ಮನವಿಯನ್ನು ವಾರಣಾಸಿಯ ತ್ವರಿತ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವಕೀಲ ವಿಜಯ್ ಶಂಕರ್ ರಸ್ತೋಗಿ ಸಲ್ಲಿಸಿರುವ ಅರ್ಜಿಯಲ್ಲಿ ಮಸೀದಿಯ ಕೇಂದ್ರ ಗುಮ್ಮಟದ ಅಡಿಯಲ್ಲಿ ಪ್ರಾಚೀನ ಹಿಂದೂ ದೇವಾಲಯದ ಅವಶೇಷಗಳನ್ನು ಪಡೆಯಲು ಆಕ್ರಮಣಕಾರಿ ಉತ್ಖನನ ವಿಧಾನಗಳನ್ನು ಬಳಸಲು ಪುರಾತತ್ವ ಸಂಸ್ಥೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 31 ರಂದು, ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳಿಗೆ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣೆಯ ವರದಿಯು ಈ ಸ್ಥಳದಲ್ಲಿ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯವನ್ನು 17 ನೇ ಶತಮಾನದಲ್ಲಿ ನಾಶಪಡಿಸಲಾಯಿತು ಎಂದು ಹೇಳಿತ್ತು.

2022ರ ಮೇ ತಿಂಗಳಲ್ಲಿ ಮಸೀದಿ ಆವರಣದಲ್ಲಿ ಇದ್ದ ಅಂಡಾಕಾರದ ವಸ್ತುವು ಶಿವಲಿಂಗವಾಗಿದೆ ಎಂದು ಹಿಂದೂ ಅರ್ಜಿದಾರರು ಪ್ರತಿಪಾದಿಸಿ ಪ್ರಕರಣ ದಾಖಲಿಸಿದ್ದರು. ಈ ವಸ್ತು ಶಿವಲಿಂಗವಾಗಿದೆ ಎಂದು ಅವರು ಪ್ರತಿಪಾದಿಸಿದ್ದರು. ಆದರೆ ಮಸೀದಿಯ ಉಸ್ತುವಾರಿ ಸಮಿತಿ ಈ ವಸ್ತು ಮಸೀದಿಗೆ ಆಗಮಿಸುವವರು ವುಜು ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ನಿಷ್ಕ್ರಿಯವಾದ ಕಾರಂಜಿ ಎಂದು ಹೇಳಿತ್ತು.

ರಸ್ತೋಗಿ ಅವರ ಮನವಿಯ ಭಾಗವಾಗಿ, ಶುಕ್ರವಾರದ ತ್ವರಿತ ನ್ಯಾಯಾಲಯವು ಪುರಾತತ್ತ್ವ ಶಾಸ್ತ್ರದ ಸಂಸ್ಥೆಯು ವುಜು ನಿರ್ವಸುವ ನೀರಿನ ತೊಟ್ಟಿಯಲ್ಲಿ ಇರುವ ಕಾರಂಜಿಯ “ವಯಸ್ಸು, ಗಾತ್ರ, ಸ್ಮಾರಕ ಮತ್ತು ಪುರಾತತ್ವ ವಿನ್ಯಾಸ ಅಥವಾ ಶೈಲಿಯನ್ನು… ಮತ್ತು ಅದರ ನಿರ್ಮಾಣಕ್ಕೆ ಯಾವ ವಸ್ತುಗಳನ್ನು ಬಳಸಲಾಗಿದೆ ಎಂಬುದನ್ನು ನಿರ್ಧರಿಸಲು ತನಿಖೆ ನಡೆಸುವಂತೆ ಕೇಳಿದ್ದ ಕೋರಿಕೆಯನ್ನು ಪರಿಗಣಿಸಿದೆ.

ಆದಾಗ್ಯೂ, ಈ ಸ್ಥಳದಲ್ಲಿ ಯಾವುದೇ ಉತ್ಖನನವನ್ನು ತಡೆಯುವ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶಗಳನ್ನು ನ್ಯಾಯಾಲಯ ಉಲ್ಲೇಖಿಸಿ, “ಸುಪ್ರೀಂ ಕೋರ್ಟ್ ಮತ್ತು ಅಲಹಾಬಾದ್ ಹೈಕೋರ್ಟ್ ಸಹ ಆಕ್ರಮಣಶೀಲವಲ್ಲದ ವಿಧಾನವನ್ನು ಬಳಸಿಕೊಂಡು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ತನಿಖೆ ನಡೆಸುವಾಗ ಉತ್ಖನನ ತಂತ್ರವನ್ನು ಬಳಸಬೇಡಿ ಮತ್ತು ಯಾವುದೇ ಆಸ್ತಿಯನ್ನು ನಾಶಪಡಿಸಬೇಡಿ” ಎಂದು ಸಿವಿಲ್ ನ್ಯಾಯಾಧೀಶ ಯುಗಲ್ ಶರ್ಮಾ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ವರದಿಯನ್ನು ಇನ್ನೂ ಕಾನೂನುಬದ್ಧವಾಗಿ ಪರಿಶೀಲಿಸಬೇಕಾಗಿದೆ. ಸುಪ್ರೀಂ ಕೋರ್ಟ್‌ನ ಆದೇಶದ ಕಾರಣಕ್ಕೆ ಮಸೀದಿಯ ವುಜೂ ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ಕಾರಂಜಿಯನ್ನು ರಕ್ಷಿಸಲಾಗಿದೆ ಎಂದು ಶರ್ಮಾ ಸೂಚಿಸಿದ್ದಾರೆ.

ಮಸೀದಿ ಸಂಕೀರ್ಣದ ಮುಚ್ಚಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಹಿಂದೂಗಳು ದಕ್ಷಿಣದಿಂದ ಮಸೀದಿ ಸಂಕೀರ್ಣವನ್ನು ಪ್ರವೇಶಿಸಬೇಕು ಮತ್ತು ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಮತ್ತು ಮುಸ್ಲಿಮರು ಉತ್ತರ ಭಾಗದಲ್ಲಿ ಪ್ರಾರ್ಥಿಸಬೇಕು ಎಂದು ನಿರ್ದೇಶಿಸಿದೆ. ಪ್ರಕರಣದ ತೀರ್ಪು ಬರುವವರೆಗೆ ಈ ವ್ಯವಸ್ಥೆ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...