Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

- Advertisement -
- Advertisement -

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯಿಂದ ಜ್ಞಾನವಾಪಿ ಮಸೀದಿ ಸಂಕೀರ್ಣದ ಹೆಚ್ಚುವರಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಹಿಂದೂ ಅರ್ಜಿದಾರರ ಮನವಿಯನ್ನು ವಾರಣಾಸಿಯ ತ್ವರಿತ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವಕೀಲ ವಿಜಯ್ ಶಂಕರ್ ರಸ್ತೋಗಿ ಸಲ್ಲಿಸಿರುವ ಅರ್ಜಿಯಲ್ಲಿ ಮಸೀದಿಯ ಕೇಂದ್ರ ಗುಮ್ಮಟದ ಅಡಿಯಲ್ಲಿ ಪ್ರಾಚೀನ ಹಿಂದೂ ದೇವಾಲಯದ ಅವಶೇಷಗಳನ್ನು ಪಡೆಯಲು ಆಕ್ರಮಣಕಾರಿ ಉತ್ಖನನ ವಿಧಾನಗಳನ್ನು ಬಳಸಲು ಪುರಾತತ್ವ ಸಂಸ್ಥೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 31 ರಂದು, ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳಿಗೆ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣೆಯ ವರದಿಯು ಈ ಸ್ಥಳದಲ್ಲಿ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯವನ್ನು 17 ನೇ ಶತಮಾನದಲ್ಲಿ ನಾಶಪಡಿಸಲಾಯಿತು ಎಂದು ಹೇಳಿತ್ತು.

2022ರ ಮೇ ತಿಂಗಳಲ್ಲಿ ಮಸೀದಿ ಆವರಣದಲ್ಲಿ ಇದ್ದ ಅಂಡಾಕಾರದ ವಸ್ತುವು ಶಿವಲಿಂಗವಾಗಿದೆ ಎಂದು ಹಿಂದೂ ಅರ್ಜಿದಾರರು ಪ್ರತಿಪಾದಿಸಿ ಪ್ರಕರಣ ದಾಖಲಿಸಿದ್ದರು. ಈ ವಸ್ತು ಶಿವಲಿಂಗವಾಗಿದೆ ಎಂದು ಅವರು ಪ್ರತಿಪಾದಿಸಿದ್ದರು. ಆದರೆ ಮಸೀದಿಯ ಉಸ್ತುವಾರಿ ಸಮಿತಿ ಈ ವಸ್ತು ಮಸೀದಿಗೆ ಆಗಮಿಸುವವರು ವುಜು ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ನಿಷ್ಕ್ರಿಯವಾದ ಕಾರಂಜಿ ಎಂದು ಹೇಳಿತ್ತು.

ರಸ್ತೋಗಿ ಅವರ ಮನವಿಯ ಭಾಗವಾಗಿ, ಶುಕ್ರವಾರದ ತ್ವರಿತ ನ್ಯಾಯಾಲಯವು ಪುರಾತತ್ತ್ವ ಶಾಸ್ತ್ರದ ಸಂಸ್ಥೆಯು ವುಜು ನಿರ್ವಸುವ ನೀರಿನ ತೊಟ್ಟಿಯಲ್ಲಿ ಇರುವ ಕಾರಂಜಿಯ “ವಯಸ್ಸು, ಗಾತ್ರ, ಸ್ಮಾರಕ ಮತ್ತು ಪುರಾತತ್ವ ವಿನ್ಯಾಸ ಅಥವಾ ಶೈಲಿಯನ್ನು… ಮತ್ತು ಅದರ ನಿರ್ಮಾಣಕ್ಕೆ ಯಾವ ವಸ್ತುಗಳನ್ನು ಬಳಸಲಾಗಿದೆ ಎಂಬುದನ್ನು ನಿರ್ಧರಿಸಲು ತನಿಖೆ ನಡೆಸುವಂತೆ ಕೇಳಿದ್ದ ಕೋರಿಕೆಯನ್ನು ಪರಿಗಣಿಸಿದೆ.

ಆದಾಗ್ಯೂ, ಈ ಸ್ಥಳದಲ್ಲಿ ಯಾವುದೇ ಉತ್ಖನನವನ್ನು ತಡೆಯುವ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶಗಳನ್ನು ನ್ಯಾಯಾಲಯ ಉಲ್ಲೇಖಿಸಿ, “ಸುಪ್ರೀಂ ಕೋರ್ಟ್ ಮತ್ತು ಅಲಹಾಬಾದ್ ಹೈಕೋರ್ಟ್ ಸಹ ಆಕ್ರಮಣಶೀಲವಲ್ಲದ ವಿಧಾನವನ್ನು ಬಳಸಿಕೊಂಡು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ತನಿಖೆ ನಡೆಸುವಾಗ ಉತ್ಖನನ ತಂತ್ರವನ್ನು ಬಳಸಬೇಡಿ ಮತ್ತು ಯಾವುದೇ ಆಸ್ತಿಯನ್ನು ನಾಶಪಡಿಸಬೇಡಿ” ಎಂದು ಸಿವಿಲ್ ನ್ಯಾಯಾಧೀಶ ಯುಗಲ್ ಶರ್ಮಾ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ವರದಿಯನ್ನು ಇನ್ನೂ ಕಾನೂನುಬದ್ಧವಾಗಿ ಪರಿಶೀಲಿಸಬೇಕಾಗಿದೆ. ಸುಪ್ರೀಂ ಕೋರ್ಟ್‌ನ ಆದೇಶದ ಕಾರಣಕ್ಕೆ ಮಸೀದಿಯ ವುಜೂ ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ಕಾರಂಜಿಯನ್ನು ರಕ್ಷಿಸಲಾಗಿದೆ ಎಂದು ಶರ್ಮಾ ಸೂಚಿಸಿದ್ದಾರೆ.

ಮಸೀದಿ ಸಂಕೀರ್ಣದ ಮುಚ್ಚಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಹಿಂದೂಗಳು ದಕ್ಷಿಣದಿಂದ ಮಸೀದಿ ಸಂಕೀರ್ಣವನ್ನು ಪ್ರವೇಶಿಸಬೇಕು ಮತ್ತು ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಮತ್ತು ಮುಸ್ಲಿಮರು ಉತ್ತರ ಭಾಗದಲ್ಲಿ ಪ್ರಾರ್ಥಿಸಬೇಕು ಎಂದು ನಿರ್ದೇಶಿಸಿದೆ. ಪ್ರಕರಣದ ತೀರ್ಪು ಬರುವವರೆಗೆ ಈ ವ್ಯವಸ್ಥೆ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...