Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

ಜ್ಞಾನವಾಪಿ ಮಸೀದಿಯಲ್ಲಿ ಉತ್ಖನನ ಕೋರಿ ಸಲ್ಲಿಸಿದ ಮನವಿ ತಿರಸ್ಕೃತ

- Advertisement -
- Advertisement -

ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯಿಂದ ಜ್ಞಾನವಾಪಿ ಮಸೀದಿ ಸಂಕೀರ್ಣದ ಹೆಚ್ಚುವರಿ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಹಿಂದೂ ಅರ್ಜಿದಾರರ ಮನವಿಯನ್ನು ವಾರಣಾಸಿಯ ತ್ವರಿತ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವಕೀಲ ವಿಜಯ್ ಶಂಕರ್ ರಸ್ತೋಗಿ ಸಲ್ಲಿಸಿರುವ ಅರ್ಜಿಯಲ್ಲಿ ಮಸೀದಿಯ ಕೇಂದ್ರ ಗುಮ್ಮಟದ ಅಡಿಯಲ್ಲಿ ಪ್ರಾಚೀನ ಹಿಂದೂ ದೇವಾಲಯದ ಅವಶೇಷಗಳನ್ನು ಪಡೆಯಲು ಆಕ್ರಮಣಕಾರಿ ಉತ್ಖನನ ವಿಧಾನಗಳನ್ನು ಬಳಸಲು ಪುರಾತತ್ವ ಸಂಸ್ಥೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 31 ರಂದು, ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳಿಗೆ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣೆಯ ವರದಿಯು ಈ ಸ್ಥಳದಲ್ಲಿ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯವನ್ನು 17 ನೇ ಶತಮಾನದಲ್ಲಿ ನಾಶಪಡಿಸಲಾಯಿತು ಎಂದು ಹೇಳಿತ್ತು.

2022ರ ಮೇ ತಿಂಗಳಲ್ಲಿ ಮಸೀದಿ ಆವರಣದಲ್ಲಿ ಇದ್ದ ಅಂಡಾಕಾರದ ವಸ್ತುವು ಶಿವಲಿಂಗವಾಗಿದೆ ಎಂದು ಹಿಂದೂ ಅರ್ಜಿದಾರರು ಪ್ರತಿಪಾದಿಸಿ ಪ್ರಕರಣ ದಾಖಲಿಸಿದ್ದರು. ಈ ವಸ್ತು ಶಿವಲಿಂಗವಾಗಿದೆ ಎಂದು ಅವರು ಪ್ರತಿಪಾದಿಸಿದ್ದರು. ಆದರೆ ಮಸೀದಿಯ ಉಸ್ತುವಾರಿ ಸಮಿತಿ ಈ ವಸ್ತು ಮಸೀದಿಗೆ ಆಗಮಿಸುವವರು ವುಜು ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ನಿಷ್ಕ್ರಿಯವಾದ ಕಾರಂಜಿ ಎಂದು ಹೇಳಿತ್ತು.

ರಸ್ತೋಗಿ ಅವರ ಮನವಿಯ ಭಾಗವಾಗಿ, ಶುಕ್ರವಾರದ ತ್ವರಿತ ನ್ಯಾಯಾಲಯವು ಪುರಾತತ್ತ್ವ ಶಾಸ್ತ್ರದ ಸಂಸ್ಥೆಯು ವುಜು ನಿರ್ವಸುವ ನೀರಿನ ತೊಟ್ಟಿಯಲ್ಲಿ ಇರುವ ಕಾರಂಜಿಯ “ವಯಸ್ಸು, ಗಾತ್ರ, ಸ್ಮಾರಕ ಮತ್ತು ಪುರಾತತ್ವ ವಿನ್ಯಾಸ ಅಥವಾ ಶೈಲಿಯನ್ನು… ಮತ್ತು ಅದರ ನಿರ್ಮಾಣಕ್ಕೆ ಯಾವ ವಸ್ತುಗಳನ್ನು ಬಳಸಲಾಗಿದೆ ಎಂಬುದನ್ನು ನಿರ್ಧರಿಸಲು ತನಿಖೆ ನಡೆಸುವಂತೆ ಕೇಳಿದ್ದ ಕೋರಿಕೆಯನ್ನು ಪರಿಗಣಿಸಿದೆ.

ಆದಾಗ್ಯೂ, ಈ ಸ್ಥಳದಲ್ಲಿ ಯಾವುದೇ ಉತ್ಖನನವನ್ನು ತಡೆಯುವ ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶಗಳನ್ನು ನ್ಯಾಯಾಲಯ ಉಲ್ಲೇಖಿಸಿ, “ಸುಪ್ರೀಂ ಕೋರ್ಟ್ ಮತ್ತು ಅಲಹಾಬಾದ್ ಹೈಕೋರ್ಟ್ ಸಹ ಆಕ್ರಮಣಶೀಲವಲ್ಲದ ವಿಧಾನವನ್ನು ಬಳಸಿಕೊಂಡು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ತನಿಖೆ ನಡೆಸುವಾಗ ಉತ್ಖನನ ತಂತ್ರವನ್ನು ಬಳಸಬೇಡಿ ಮತ್ತು ಯಾವುದೇ ಆಸ್ತಿಯನ್ನು ನಾಶಪಡಿಸಬೇಡಿ” ಎಂದು ಸಿವಿಲ್ ನ್ಯಾಯಾಧೀಶ ಯುಗಲ್ ಶರ್ಮಾ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ವರದಿಯನ್ನು ಇನ್ನೂ ಕಾನೂನುಬದ್ಧವಾಗಿ ಪರಿಶೀಲಿಸಬೇಕಾಗಿದೆ. ಸುಪ್ರೀಂ ಕೋರ್ಟ್‌ನ ಆದೇಶದ ಕಾರಣಕ್ಕೆ ಮಸೀದಿಯ ವುಜೂ ನಿರ್ವಹಿಸುವ ನೀರಿನ ತೊಟ್ಟಿಯಲ್ಲಿರುವ ಕಾರಂಜಿಯನ್ನು ರಕ್ಷಿಸಲಾಗಿದೆ ಎಂದು ಶರ್ಮಾ ಸೂಚಿಸಿದ್ದಾರೆ.

ಮಸೀದಿ ಸಂಕೀರ್ಣದ ಮುಚ್ಚಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಹಿಂದೂಗಳು ದಕ್ಷಿಣದಿಂದ ಮಸೀದಿ ಸಂಕೀರ್ಣವನ್ನು ಪ್ರವೇಶಿಸಬೇಕು ಮತ್ತು ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಮತ್ತು ಮುಸ್ಲಿಮರು ಉತ್ತರ ಭಾಗದಲ್ಲಿ ಪ್ರಾರ್ಥಿಸಬೇಕು ಎಂದು ನಿರ್ದೇಶಿಸಿದೆ. ಪ್ರಕರಣದ ತೀರ್ಪು ಬರುವವರೆಗೆ ಈ ವ್ಯವಸ್ಥೆ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಮಿತ್ ಶಾ ವಿದೇಶ ಪ್ರಯಾಣದ ಸೂಕ್ಷ್ಮ ಮಾಹಿತಿಗೆ $1 ಮಿಲಿಯನ್ ಬಹುಮಾನ – ನಿಷೇಧಿತ ‘ಸಿಖ್ಸ್ ಫಾರ್ ಜಸ್ಟಿಸ್’ ಸಂಘಟನೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...