Homeಮುಖಪುಟಪ್ರಸಕ್ತ ಸನ್ನಿವೇಶದ ಬಗ್ಗೆ ಮೋದಿಗೆ ಪತ್ರ ಬರೆದ ವಿದ್ಯಾರ್ಥಿಗಳ ಉಚ್ಛಾಟನೆ..!

ಪ್ರಸಕ್ತ ಸನ್ನಿವೇಶದ ಬಗ್ಗೆ ಮೋದಿಗೆ ಪತ್ರ ಬರೆದ ವಿದ್ಯಾರ್ಥಿಗಳ ಉಚ್ಛಾಟನೆ..!

- Advertisement -
- Advertisement -

ದೇಶದ ಪ್ರಸಕ್ತ ಸನ್ನಿವೇಶದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ದಲಿತ ಮತ್ತು ಹಿಂದುಳಿದ ವರ್ಗದ ಆರು ಮಂದಿ ವಿದ್ಯಾರ್ಥಿಗಳನ್ನು ಉಚ್ಛಾಟಿಸಿರುವ ಘಟನೆ ಗುಜರಾತ್ ರಾಜ್ಯದ ವಾದ್ರಾದ ಮಹಾತ್ಮಗಾಂಧೀ ಅಂತಾರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ದೇಶದಲ್ಲಿ ಗುಂಪು ಹತ್ಯೆ, ಸಾರ್ವಜನಿಕ ಉದ್ದಿಮೆಗಳ ಮಾರಾಟ, ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು, ಕಾಶ್ಮೀರದಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿರುವುದು, ಅತ್ಯಾಚಾರ ಪ್ರಕರಣಗಳ ಬಗ್ಗೆ ವಿದ್ಯಾರ್ಥಿಗಳು ಪತ್ರ ಬರೆದಿದಿದ್ದರು. ಪತ್ರ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಮತ್ತು ಆಡಳಿತ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶದ ಕಾರಣ ನೀಡಿ ವಿವಿಯ ರಿಜಿಸ್ಟ್ರರ್ ವಿದ್ಯಾರ್ಥಿಗಳನ್ನು ಉಚ್ಛಾಟಿಸಿದ್ದಾರೆ.

ಆದರೆ ಉಚ್ಛಾಟಿತ ವಿದ್ಯಾರ್ಥಿಗಳು ರಿಜಿಸ್ಟ್ರರ್ ಆರೋಪವನ್ನು ನಿರಾಕರಿಸಿದೆ. ಮಹಾತ್ಮಗಾಂಧೀ ಹೆಸರಿನಲ್ಲಿ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸಲಾಗುತ್ತಿದೆ. ಭಿನ್ನ ದನಿಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಆರ್ ಎಸ್ಎಸ್ ಕಾರ್ಯಕರ್ತರಿಗೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗುತ್ತಿದೆ. ಆರ್ ಎಸ್ಎಸ್ ಶಾಖೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ ಬಿಎಸ್ ಪಿ ಸಂಸ್ಪಾಪಕ ಕಾನ್ಶಿರಾಮ್ ಅವರ ಮಹಾ ಪರಿನಿರ್ವಾಣ ದಿವಸ್ ಆಚರಿಸಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ವಿದ್ಯಾರ್ಥಿ ಮುಖಂಡ ಚಂದನ್ ಸರೋಜ ಪತ್ರಿಕಾ ಹೇಳಿಕೆ ನೀಡಿದ್ದು, ಇತ್ತೀಚೆಗೆ 50 ಮಂದಿ ಗಣ್ಯರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿದ್ದನ್ನು ಪ್ರತಿಭಟಿಸಿ ವಿದ್ಯಾರ್ಥಿಗಳೆಲ್ಲರೂ ಸೇರಿ ಪ್ರಧಾನಿಗೆ ಬಹಿರಂಗ ಪತ್ರ ಬರೆದಿದ್ದೇವೆ. ಪ್ರತಿಭಟನೆ ನಡೆಸಲು ಮುಂದಾಗಿದ್ದೆವು. ಆದರೆ ವಿಶ್ವವಿದ್ಯಾಲಯ ಹೆಚ್ಚು ಮಂದಿ ಪೊಲೀಸರನ್ನು ನಿಯೋಜಿಸಿ ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.

ಗಾಂಧಿ ಹಾಲ್ ಗೆ ಹೋಗಲು ಪ್ರಯತ್ನಿಸಿದೆವು. ಪೊಲೀಸರು ವಿದ್ಯಾರ್ಥಿಗಳನ್ನು ತಡೆದರು. ಹಾಗಾಗಿ ಗಾಂಧಿ ಹಾಲ್ ಗೇಟ್ ಬಳಿಯೇ ಧರಣಿ ಕುಳಿತು ಘೋಷಣೆ ಕೂಗಿದೆವು ಎಂದು ಹೇಳಿದ್ದಾರೆ.

ವಿವಿ ಬಿಡುಗಡೆ ಮಾಡಿರುವ ಉಚ್ಛಾಟಿತ ಪತ್ರದಲ್ಲಿ ಈ ಘಟನೆಯ ಕುರಿತು ಯಾವುದೇ ಮಾಹಿತಿ ಇಲ್ಲ. ವಿದ್ಯಾರ್ಥಿಗಳ ದನಿ ಅಡಗಿಸಲು ಉಚ್ಛಾಟನೆ ಮಾಡಲಾಗಿದೆ ಎಂದು ಎಐಎಸ್ಎ ವಿದ್ಯಾರ್ಥಿ ಸಂಘಟನೆ ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಧ್ಯಕ್ಕೆ ಆ ಉಚ್ಛಾಟಿತ ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಕೇಸು ಜಡಿದು, ಜೈಲಿಗೆ ತಳ್ಳಿಲ್ಲವಲ್ಲ! ಜೈ ಭಾರತಾಂಬೆ ಎಂದು ಹೇಳಿ ನಾವೆಲ್ಲರೂ ಖುಷಿ ಪಡೋಣವೇ?

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...