Homeಮುಖಪುಟಪ್ರಸಕ್ತ ಸನ್ನಿವೇಶದ ಬಗ್ಗೆ ಮೋದಿಗೆ ಪತ್ರ ಬರೆದ ವಿದ್ಯಾರ್ಥಿಗಳ ಉಚ್ಛಾಟನೆ..!

ಪ್ರಸಕ್ತ ಸನ್ನಿವೇಶದ ಬಗ್ಗೆ ಮೋದಿಗೆ ಪತ್ರ ಬರೆದ ವಿದ್ಯಾರ್ಥಿಗಳ ಉಚ್ಛಾಟನೆ..!

- Advertisement -
- Advertisement -

ದೇಶದ ಪ್ರಸಕ್ತ ಸನ್ನಿವೇಶದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ದಲಿತ ಮತ್ತು ಹಿಂದುಳಿದ ವರ್ಗದ ಆರು ಮಂದಿ ವಿದ್ಯಾರ್ಥಿಗಳನ್ನು ಉಚ್ಛಾಟಿಸಿರುವ ಘಟನೆ ಗುಜರಾತ್ ರಾಜ್ಯದ ವಾದ್ರಾದ ಮಹಾತ್ಮಗಾಂಧೀ ಅಂತಾರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ದೇಶದಲ್ಲಿ ಗುಂಪು ಹತ್ಯೆ, ಸಾರ್ವಜನಿಕ ಉದ್ದಿಮೆಗಳ ಮಾರಾಟ, ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು, ಕಾಶ್ಮೀರದಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿರುವುದು, ಅತ್ಯಾಚಾರ ಪ್ರಕರಣಗಳ ಬಗ್ಗೆ ವಿದ್ಯಾರ್ಥಿಗಳು ಪತ್ರ ಬರೆದಿದಿದ್ದರು. ಪತ್ರ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಮತ್ತು ಆಡಳಿತ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶದ ಕಾರಣ ನೀಡಿ ವಿವಿಯ ರಿಜಿಸ್ಟ್ರರ್ ವಿದ್ಯಾರ್ಥಿಗಳನ್ನು ಉಚ್ಛಾಟಿಸಿದ್ದಾರೆ.

ಆದರೆ ಉಚ್ಛಾಟಿತ ವಿದ್ಯಾರ್ಥಿಗಳು ರಿಜಿಸ್ಟ್ರರ್ ಆರೋಪವನ್ನು ನಿರಾಕರಿಸಿದೆ. ಮಹಾತ್ಮಗಾಂಧೀ ಹೆಸರಿನಲ್ಲಿ ವಿಶ್ವವಿದ್ಯಾಲಯವನ್ನು ಕೇಸರೀಕರಣಗೊಳಿಸಲಾಗುತ್ತಿದೆ. ಭಿನ್ನ ದನಿಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಆರ್ ಎಸ್ಎಸ್ ಕಾರ್ಯಕರ್ತರಿಗೆ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗುತ್ತಿದೆ. ಆರ್ ಎಸ್ಎಸ್ ಶಾಖೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ ಬಿಎಸ್ ಪಿ ಸಂಸ್ಪಾಪಕ ಕಾನ್ಶಿರಾಮ್ ಅವರ ಮಹಾ ಪರಿನಿರ್ವಾಣ ದಿವಸ್ ಆಚರಿಸಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ವಿದ್ಯಾರ್ಥಿ ಮುಖಂಡ ಚಂದನ್ ಸರೋಜ ಪತ್ರಿಕಾ ಹೇಳಿಕೆ ನೀಡಿದ್ದು, ಇತ್ತೀಚೆಗೆ 50 ಮಂದಿ ಗಣ್ಯರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿದ್ದನ್ನು ಪ್ರತಿಭಟಿಸಿ ವಿದ್ಯಾರ್ಥಿಗಳೆಲ್ಲರೂ ಸೇರಿ ಪ್ರಧಾನಿಗೆ ಬಹಿರಂಗ ಪತ್ರ ಬರೆದಿದ್ದೇವೆ. ಪ್ರತಿಭಟನೆ ನಡೆಸಲು ಮುಂದಾಗಿದ್ದೆವು. ಆದರೆ ವಿಶ್ವವಿದ್ಯಾಲಯ ಹೆಚ್ಚು ಮಂದಿ ಪೊಲೀಸರನ್ನು ನಿಯೋಜಿಸಿ ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.

ಗಾಂಧಿ ಹಾಲ್ ಗೆ ಹೋಗಲು ಪ್ರಯತ್ನಿಸಿದೆವು. ಪೊಲೀಸರು ವಿದ್ಯಾರ್ಥಿಗಳನ್ನು ತಡೆದರು. ಹಾಗಾಗಿ ಗಾಂಧಿ ಹಾಲ್ ಗೇಟ್ ಬಳಿಯೇ ಧರಣಿ ಕುಳಿತು ಘೋಷಣೆ ಕೂಗಿದೆವು ಎಂದು ಹೇಳಿದ್ದಾರೆ.

ವಿವಿ ಬಿಡುಗಡೆ ಮಾಡಿರುವ ಉಚ್ಛಾಟಿತ ಪತ್ರದಲ್ಲಿ ಈ ಘಟನೆಯ ಕುರಿತು ಯಾವುದೇ ಮಾಹಿತಿ ಇಲ್ಲ. ವಿದ್ಯಾರ್ಥಿಗಳ ದನಿ ಅಡಗಿಸಲು ಉಚ್ಛಾಟನೆ ಮಾಡಲಾಗಿದೆ ಎಂದು ಎಐಎಸ್ಎ ವಿದ್ಯಾರ್ಥಿ ಸಂಘಟನೆ ಟೀಕಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಧ್ಯಕ್ಕೆ ಆ ಉಚ್ಛಾಟಿತ ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಕೇಸು ಜಡಿದು, ಜೈಲಿಗೆ ತಳ್ಳಿಲ್ಲವಲ್ಲ! ಜೈ ಭಾರತಾಂಬೆ ಎಂದು ಹೇಳಿ ನಾವೆಲ್ಲರೂ ಖುಷಿ ಪಡೋಣವೇ?

LEAVE A REPLY

Please enter your comment!
Please enter your name here

- Advertisment -

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...