Homeಮುಖಪುಟಹರಿಯಾಣದಲ್ಲಿಯೂ ಬಿಜೆಪಿ ಮೈತ್ರಿಗೆ ಆತಂಕ: ಜೆಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಗೌತಮ್‌ ರಾಜೀನಾಮೆ

ಹರಿಯಾಣದಲ್ಲಿಯೂ ಬಿಜೆಪಿ ಮೈತ್ರಿಗೆ ಆತಂಕ: ಜೆಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಗೌತಮ್‌ ರಾಜೀನಾಮೆ

ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರೊಬ್ಬರೇ 11 ಸಚಿವಾಲಯಗಳನ್ನು ಇಟ್ಟುಕೊಂಡಿದ್ದರೆ, ಕೇವಲ ಒಂದನ್ನು ಮಾತ್ರ ಪಕ್ಷದ ಶಾಸಕರೊಬ್ಬರಿಗೆ ನೀಡದ್ದಾರೆ

- Advertisement -
- Advertisement -

ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯ ಮಿತ್ರಪಕ್ಷ ಜೆಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜನನಾಯಕ್ ಜನತಾ ಪಕ್ಷದ (ಜೆಜೆಪಿ) ಉಪಾಧ್ಯಕ್ಷ ಮತ್ತು ಹಿರಿಯ ಮುಖಂಡ ರಾಮ್ ಕುಮಾರ್ ಗೌತಮ್ ತಮ್ಮ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಜೆಜೆಪಿಯ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರಿಗೆ ತೊಂದರೆಯಾಗುವ ಲಕ್ಷಣಗಳು ಕಾಣಿಸಿಕೊಂಡಿವೆ.

“ದುಶ್ಯಂತ್ ಚೌತಲಾ ಅವರು ತಮ್ಮ ಪಕ್ಷದ ಶಾಸಕರ ಬೆಂಬಲದೊಂದಿಗೆ ಉಪಮುಖ್ಯಮಂತ್ರಿಯಾದರು ಎಂಬುದನ್ನು ಮರೆಯಬಾರದು” ಎಂದು 73ವರ್ಷದ ರಾಮ್ ಕುಮಾರ್ ಗೌತಮ್ ಜೆಜೆಪಿ ಮುಖ್ಯಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಶ್ಯಂತ್ ಚೌತಲಾ ಅವರು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದರು. ಆನಂತರ ಫಲಿತಾಂಶ ಬಂದ ಕೂಡಲೇ ಅವರ ಜೊತೆ ಕೈಜೋಡಿಸಿದ್ದರು. ಅವರು ಮೊದಲು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟೀಕಿಸಿದ ಹಲವು ವಿಡಿಯೋಗಳೂ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಇಂತಹ ದುಶ್ಯಂತ್ ಚೌತಲಾ ಜೆಜೆಪಿ ಪಕ್ಷದ ಶಾಸಕರಿಗೆ ತಿಳಿಸದೇ ಜೆಜೆಪಿ-ಬಿಜೆಪಿ ಮೈತ್ರಿಕೂಟವನ್ನು ರಚಿಸಿದ್ದಾರೆ ಎಂದು ಗೌತಮ್ ಹೇಳಿದ್ದಾರೆ. “ಅವರು ಆಂಬಿಯನ್ಸ್ ಮಾಲ್‌ನಲ್ಲಿ ಮೈತ್ರಿ ಮಾತುಕತೆ ಮಾಡಿದ್ದಾರೆ ಎಂದು ತಿಳಿದಾಗ ನಾನು ಅಸಮಾಧಾನಗೊಂಡಿದ್ದೇನೆ ಮತ್ತು ನಮಗೆ ತುಂಬಾ ನೋವುಂಟಾಗಿದೆ. ಅಷ್ಟೇ ಅಲ್ಲದೇ ಪಕ್ಷದ ಜನರು ಮತ್ತು ಎಲ್ಲಾ ಶಾಸಕರು ತುಂಬಾ ಅಸಮಾಧಾನಗೊಂಡಿದ್ದಾರೆ. ದುಶ್ಯಂತ್ ಎಲ್ಲಾ ಮುಖ್ಯ ಹುದ್ದೆಗಳನ್ನು ತೆಗೆದುಕೊಂಡರು. ಉಳಿದ ಶಾಸಕರ ಬಗ್ಗೆ ಏನು? ಅವರು ಜನರಿಂದ ಆಯ್ಕೆಯಾದವರಲ್ಲವೇ? ಇದು ದೊಡ್ಡ ಹೊಡೆತ “ಎಂದು ಗೌತಮ್ ಸುದ್ದಿಗಾರರಿಗೆ ತಿಳಿಸಿದರು.

ದುಶ್ಯಂತ್ ಚೌತಲಾ

“ಅವರು ಮೂರು ತಿಂಗಳಲ್ಲಿ ನಮ್ಮನ್ನು ಪರೀಕ್ಷಿಸುತ್ತೇನೆ ಎಂದು ಹೇಳಿದ್ದಾರೆ. ನಮ್ಮನ್ನು ಪರೀಕ್ಷಿಸಲು ಅವರು ಯಾರು?” ಎಂದು ಗೌತಮ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರೊಬ್ಬರೇ 11 ಸಚಿವಾಲಯಗಳನ್ನು ಇಟ್ಟುಕೊಂಡಿದ್ದರೆ, ಕೇವಲ ಒಂದನ್ನು ಮಾತ್ರ ಪಕ್ಷದ ಶಾಸಕರೊಬ್ಬರಿಗೆ ನೀಡದ್ದಾರೆ ಎಂದು ಆರೋಪಿಸಿದ್ದಾರೆ.

ಗೌತಮ್ ಅವರ ರಾಜೀನಾಮೆಯನ್ನು ಮಾಧ್ಯಮಗಳಿಂದ ಮಾತ್ರ ತಿಳಿದುಕೊಂಡಿದ್ದೇನೆ ಎಂದು ದುಶ್ಯಂತ್ ಚೌತಲಾ ಹೇಳಿದ್ದಾರೆ. “ನಾನು ನಿಮ್ಮಿಂದ ತಿಳಿದುಕೊಂಡೆ ಮತ್ತು ನಾನು ಅವನೊಂದಿಗೆ (ಗೌತಮ್) ಮಾತನಾಡುತ್ತೇನೆ” ಎಂದು ಅವರು ಹೇಳಿದರು.

ಜೆಜೆಪಿ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಗೌತಮ್ ಅವರು ಸಚಿವಸ್ಥಾನದ ಅಭ್ಯರ್ಥಿಯಾಗಿ ಕಾಣಿಸಿಕೊಂಡರು, ಆದರೆ ಅದು ಆಗಲಿಲ್ಲ. “ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯೂ ಇರಲಿಲ್ಲ. ಆದರೆ ದುಶ್ಯಂತ್ ಮತ್ತು ಅವರ ತಂದೆ ಅಜಯ್ ಚೌತಲಾ ನಾನು ಸ್ಪರ್ಧಿಸಬೇಕೆಂದು ಒತ್ತಾಯಿಸಿದರು. ಏಕೆಂದರೆ ಬಿಜೆಪಿ ಶಾಸಕ ಕ್ಯಾಪ್ಟನ್ ಅಭಿಮನ್ಯು ಅವರನ್ನು ಸೋಲಿಸುವವರು ನಾನು ಒಬ್ಬನೇ ಎಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

ಆದಾಗ್ಯೂ ಅವರು ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ಜನರು ನನ್ನನ್ನು ಆಯ್ಕೆ ಮಾಡಿದ್ದಾರೆ, ಅವರ ಬಗ್ಗೆ ನನಗೆ ಜವಾಬ್ದಾರಿ ಇದೆ. ನಾನು ನನ್ನ ಪಕ್ಷಕ್ಕೆ ರಾಜೀನಾಮೆ ನೀಡಿದರೆ ಜನರಿಗೆ ಒಳ್ಳೆಯದು ಮಾಡಲಾಗುವುದಿಲ್ಲ. ಅಲ್ಲದೆ, ನನ್ನ ಬೆವರು ಮತ್ತು ರಕ್ತದಿಂದ ಪಕ್ಷವನ್ನು ಪೋಷಿಸಿದ್ದೇನೆ” ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...