Homeಮುಖಪುಟಹರಿಯಾಣದಲ್ಲಿಯೂ ಬಿಜೆಪಿ ಮೈತ್ರಿಗೆ ಆತಂಕ: ಜೆಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಗೌತಮ್‌ ರಾಜೀನಾಮೆ

ಹರಿಯಾಣದಲ್ಲಿಯೂ ಬಿಜೆಪಿ ಮೈತ್ರಿಗೆ ಆತಂಕ: ಜೆಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಗೌತಮ್‌ ರಾಜೀನಾಮೆ

ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರೊಬ್ಬರೇ 11 ಸಚಿವಾಲಯಗಳನ್ನು ಇಟ್ಟುಕೊಂಡಿದ್ದರೆ, ಕೇವಲ ಒಂದನ್ನು ಮಾತ್ರ ಪಕ್ಷದ ಶಾಸಕರೊಬ್ಬರಿಗೆ ನೀಡದ್ದಾರೆ

- Advertisement -
- Advertisement -

ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯ ಮಿತ್ರಪಕ್ಷ ಜೆಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜನನಾಯಕ್ ಜನತಾ ಪಕ್ಷದ (ಜೆಜೆಪಿ) ಉಪಾಧ್ಯಕ್ಷ ಮತ್ತು ಹಿರಿಯ ಮುಖಂಡ ರಾಮ್ ಕುಮಾರ್ ಗೌತಮ್ ತಮ್ಮ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಜೆಜೆಪಿಯ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರಿಗೆ ತೊಂದರೆಯಾಗುವ ಲಕ್ಷಣಗಳು ಕಾಣಿಸಿಕೊಂಡಿವೆ.

“ದುಶ್ಯಂತ್ ಚೌತಲಾ ಅವರು ತಮ್ಮ ಪಕ್ಷದ ಶಾಸಕರ ಬೆಂಬಲದೊಂದಿಗೆ ಉಪಮುಖ್ಯಮಂತ್ರಿಯಾದರು ಎಂಬುದನ್ನು ಮರೆಯಬಾರದು” ಎಂದು 73ವರ್ಷದ ರಾಮ್ ಕುಮಾರ್ ಗೌತಮ್ ಜೆಜೆಪಿ ಮುಖ್ಯಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಶ್ಯಂತ್ ಚೌತಲಾ ಅವರು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದರು. ಆನಂತರ ಫಲಿತಾಂಶ ಬಂದ ಕೂಡಲೇ ಅವರ ಜೊತೆ ಕೈಜೋಡಿಸಿದ್ದರು. ಅವರು ಮೊದಲು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟೀಕಿಸಿದ ಹಲವು ವಿಡಿಯೋಗಳೂ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಇಂತಹ ದುಶ್ಯಂತ್ ಚೌತಲಾ ಜೆಜೆಪಿ ಪಕ್ಷದ ಶಾಸಕರಿಗೆ ತಿಳಿಸದೇ ಜೆಜೆಪಿ-ಬಿಜೆಪಿ ಮೈತ್ರಿಕೂಟವನ್ನು ರಚಿಸಿದ್ದಾರೆ ಎಂದು ಗೌತಮ್ ಹೇಳಿದ್ದಾರೆ. “ಅವರು ಆಂಬಿಯನ್ಸ್ ಮಾಲ್‌ನಲ್ಲಿ ಮೈತ್ರಿ ಮಾತುಕತೆ ಮಾಡಿದ್ದಾರೆ ಎಂದು ತಿಳಿದಾಗ ನಾನು ಅಸಮಾಧಾನಗೊಂಡಿದ್ದೇನೆ ಮತ್ತು ನಮಗೆ ತುಂಬಾ ನೋವುಂಟಾಗಿದೆ. ಅಷ್ಟೇ ಅಲ್ಲದೇ ಪಕ್ಷದ ಜನರು ಮತ್ತು ಎಲ್ಲಾ ಶಾಸಕರು ತುಂಬಾ ಅಸಮಾಧಾನಗೊಂಡಿದ್ದಾರೆ. ದುಶ್ಯಂತ್ ಎಲ್ಲಾ ಮುಖ್ಯ ಹುದ್ದೆಗಳನ್ನು ತೆಗೆದುಕೊಂಡರು. ಉಳಿದ ಶಾಸಕರ ಬಗ್ಗೆ ಏನು? ಅವರು ಜನರಿಂದ ಆಯ್ಕೆಯಾದವರಲ್ಲವೇ? ಇದು ದೊಡ್ಡ ಹೊಡೆತ “ಎಂದು ಗೌತಮ್ ಸುದ್ದಿಗಾರರಿಗೆ ತಿಳಿಸಿದರು.

ದುಶ್ಯಂತ್ ಚೌತಲಾ

“ಅವರು ಮೂರು ತಿಂಗಳಲ್ಲಿ ನಮ್ಮನ್ನು ಪರೀಕ್ಷಿಸುತ್ತೇನೆ ಎಂದು ಹೇಳಿದ್ದಾರೆ. ನಮ್ಮನ್ನು ಪರೀಕ್ಷಿಸಲು ಅವರು ಯಾರು?” ಎಂದು ಗೌತಮ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರೊಬ್ಬರೇ 11 ಸಚಿವಾಲಯಗಳನ್ನು ಇಟ್ಟುಕೊಂಡಿದ್ದರೆ, ಕೇವಲ ಒಂದನ್ನು ಮಾತ್ರ ಪಕ್ಷದ ಶಾಸಕರೊಬ್ಬರಿಗೆ ನೀಡದ್ದಾರೆ ಎಂದು ಆರೋಪಿಸಿದ್ದಾರೆ.

ಗೌತಮ್ ಅವರ ರಾಜೀನಾಮೆಯನ್ನು ಮಾಧ್ಯಮಗಳಿಂದ ಮಾತ್ರ ತಿಳಿದುಕೊಂಡಿದ್ದೇನೆ ಎಂದು ದುಶ್ಯಂತ್ ಚೌತಲಾ ಹೇಳಿದ್ದಾರೆ. “ನಾನು ನಿಮ್ಮಿಂದ ತಿಳಿದುಕೊಂಡೆ ಮತ್ತು ನಾನು ಅವನೊಂದಿಗೆ (ಗೌತಮ್) ಮಾತನಾಡುತ್ತೇನೆ” ಎಂದು ಅವರು ಹೇಳಿದರು.

ಜೆಜೆಪಿ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಗೌತಮ್ ಅವರು ಸಚಿವಸ್ಥಾನದ ಅಭ್ಯರ್ಥಿಯಾಗಿ ಕಾಣಿಸಿಕೊಂಡರು, ಆದರೆ ಅದು ಆಗಲಿಲ್ಲ. “ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯೂ ಇರಲಿಲ್ಲ. ಆದರೆ ದುಶ್ಯಂತ್ ಮತ್ತು ಅವರ ತಂದೆ ಅಜಯ್ ಚೌತಲಾ ನಾನು ಸ್ಪರ್ಧಿಸಬೇಕೆಂದು ಒತ್ತಾಯಿಸಿದರು. ಏಕೆಂದರೆ ಬಿಜೆಪಿ ಶಾಸಕ ಕ್ಯಾಪ್ಟನ್ ಅಭಿಮನ್ಯು ಅವರನ್ನು ಸೋಲಿಸುವವರು ನಾನು ಒಬ್ಬನೇ ಎಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

ಆದಾಗ್ಯೂ ಅವರು ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ಜನರು ನನ್ನನ್ನು ಆಯ್ಕೆ ಮಾಡಿದ್ದಾರೆ, ಅವರ ಬಗ್ಗೆ ನನಗೆ ಜವಾಬ್ದಾರಿ ಇದೆ. ನಾನು ನನ್ನ ಪಕ್ಷಕ್ಕೆ ರಾಜೀನಾಮೆ ನೀಡಿದರೆ ಜನರಿಗೆ ಒಳ್ಳೆಯದು ಮಾಡಲಾಗುವುದಿಲ್ಲ. ಅಲ್ಲದೆ, ನನ್ನ ಬೆವರು ಮತ್ತು ರಕ್ತದಿಂದ ಪಕ್ಷವನ್ನು ಪೋಷಿಸಿದ್ದೇನೆ” ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...