Homeಮುಖಪುಟಹರಿಯಾಣದಲ್ಲಿಯೂ ಬಿಜೆಪಿ ಮೈತ್ರಿಗೆ ಆತಂಕ: ಜೆಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಗೌತಮ್‌ ರಾಜೀನಾಮೆ

ಹರಿಯಾಣದಲ್ಲಿಯೂ ಬಿಜೆಪಿ ಮೈತ್ರಿಗೆ ಆತಂಕ: ಜೆಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಗೌತಮ್‌ ರಾಜೀನಾಮೆ

ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರೊಬ್ಬರೇ 11 ಸಚಿವಾಲಯಗಳನ್ನು ಇಟ್ಟುಕೊಂಡಿದ್ದರೆ, ಕೇವಲ ಒಂದನ್ನು ಮಾತ್ರ ಪಕ್ಷದ ಶಾಸಕರೊಬ್ಬರಿಗೆ ನೀಡದ್ದಾರೆ

- Advertisement -
- Advertisement -

ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಯ ಮಿತ್ರಪಕ್ಷ ಜೆಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜನನಾಯಕ್ ಜನತಾ ಪಕ್ಷದ (ಜೆಜೆಪಿ) ಉಪಾಧ್ಯಕ್ಷ ಮತ್ತು ಹಿರಿಯ ಮುಖಂಡ ರಾಮ್ ಕುಮಾರ್ ಗೌತಮ್ ತಮ್ಮ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಜೆಜೆಪಿಯ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರಿಗೆ ತೊಂದರೆಯಾಗುವ ಲಕ್ಷಣಗಳು ಕಾಣಿಸಿಕೊಂಡಿವೆ.

“ದುಶ್ಯಂತ್ ಚೌತಲಾ ಅವರು ತಮ್ಮ ಪಕ್ಷದ ಶಾಸಕರ ಬೆಂಬಲದೊಂದಿಗೆ ಉಪಮುಖ್ಯಮಂತ್ರಿಯಾದರು ಎಂಬುದನ್ನು ಮರೆಯಬಾರದು” ಎಂದು 73ವರ್ಷದ ರಾಮ್ ಕುಮಾರ್ ಗೌತಮ್ ಜೆಜೆಪಿ ಮುಖ್ಯಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಶ್ಯಂತ್ ಚೌತಲಾ ಅವರು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಆಕ್ರಮಣಕಾರಿಯಾಗಿ ಪ್ರಚಾರ ಮಾಡಿದರು. ಆನಂತರ ಫಲಿತಾಂಶ ಬಂದ ಕೂಡಲೇ ಅವರ ಜೊತೆ ಕೈಜೋಡಿಸಿದ್ದರು. ಅವರು ಮೊದಲು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟೀಕಿಸಿದ ಹಲವು ವಿಡಿಯೋಗಳೂ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದವು.

ಇಂತಹ ದುಶ್ಯಂತ್ ಚೌತಲಾ ಜೆಜೆಪಿ ಪಕ್ಷದ ಶಾಸಕರಿಗೆ ತಿಳಿಸದೇ ಜೆಜೆಪಿ-ಬಿಜೆಪಿ ಮೈತ್ರಿಕೂಟವನ್ನು ರಚಿಸಿದ್ದಾರೆ ಎಂದು ಗೌತಮ್ ಹೇಳಿದ್ದಾರೆ. “ಅವರು ಆಂಬಿಯನ್ಸ್ ಮಾಲ್‌ನಲ್ಲಿ ಮೈತ್ರಿ ಮಾತುಕತೆ ಮಾಡಿದ್ದಾರೆ ಎಂದು ತಿಳಿದಾಗ ನಾನು ಅಸಮಾಧಾನಗೊಂಡಿದ್ದೇನೆ ಮತ್ತು ನಮಗೆ ತುಂಬಾ ನೋವುಂಟಾಗಿದೆ. ಅಷ್ಟೇ ಅಲ್ಲದೇ ಪಕ್ಷದ ಜನರು ಮತ್ತು ಎಲ್ಲಾ ಶಾಸಕರು ತುಂಬಾ ಅಸಮಾಧಾನಗೊಂಡಿದ್ದಾರೆ. ದುಶ್ಯಂತ್ ಎಲ್ಲಾ ಮುಖ್ಯ ಹುದ್ದೆಗಳನ್ನು ತೆಗೆದುಕೊಂಡರು. ಉಳಿದ ಶಾಸಕರ ಬಗ್ಗೆ ಏನು? ಅವರು ಜನರಿಂದ ಆಯ್ಕೆಯಾದವರಲ್ಲವೇ? ಇದು ದೊಡ್ಡ ಹೊಡೆತ “ಎಂದು ಗೌತಮ್ ಸುದ್ದಿಗಾರರಿಗೆ ತಿಳಿಸಿದರು.

ದುಶ್ಯಂತ್ ಚೌತಲಾ

“ಅವರು ಮೂರು ತಿಂಗಳಲ್ಲಿ ನಮ್ಮನ್ನು ಪರೀಕ್ಷಿಸುತ್ತೇನೆ ಎಂದು ಹೇಳಿದ್ದಾರೆ. ನಮ್ಮನ್ನು ಪರೀಕ್ಷಿಸಲು ಅವರು ಯಾರು?” ಎಂದು ಗೌತಮ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಅವರೊಬ್ಬರೇ 11 ಸಚಿವಾಲಯಗಳನ್ನು ಇಟ್ಟುಕೊಂಡಿದ್ದರೆ, ಕೇವಲ ಒಂದನ್ನು ಮಾತ್ರ ಪಕ್ಷದ ಶಾಸಕರೊಬ್ಬರಿಗೆ ನೀಡದ್ದಾರೆ ಎಂದು ಆರೋಪಿಸಿದ್ದಾರೆ.

ಗೌತಮ್ ಅವರ ರಾಜೀನಾಮೆಯನ್ನು ಮಾಧ್ಯಮಗಳಿಂದ ಮಾತ್ರ ತಿಳಿದುಕೊಂಡಿದ್ದೇನೆ ಎಂದು ದುಶ್ಯಂತ್ ಚೌತಲಾ ಹೇಳಿದ್ದಾರೆ. “ನಾನು ನಿಮ್ಮಿಂದ ತಿಳಿದುಕೊಂಡೆ ಮತ್ತು ನಾನು ಅವನೊಂದಿಗೆ (ಗೌತಮ್) ಮಾತನಾಡುತ್ತೇನೆ” ಎಂದು ಅವರು ಹೇಳಿದರು.

ಜೆಜೆಪಿ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಗೌತಮ್ ಅವರು ಸಚಿವಸ್ಥಾನದ ಅಭ್ಯರ್ಥಿಯಾಗಿ ಕಾಣಿಸಿಕೊಂಡರು, ಆದರೆ ಅದು ಆಗಲಿಲ್ಲ. “ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯೂ ಇರಲಿಲ್ಲ. ಆದರೆ ದುಶ್ಯಂತ್ ಮತ್ತು ಅವರ ತಂದೆ ಅಜಯ್ ಚೌತಲಾ ನಾನು ಸ್ಪರ್ಧಿಸಬೇಕೆಂದು ಒತ್ತಾಯಿಸಿದರು. ಏಕೆಂದರೆ ಬಿಜೆಪಿ ಶಾಸಕ ಕ್ಯಾಪ್ಟನ್ ಅಭಿಮನ್ಯು ಅವರನ್ನು ಸೋಲಿಸುವವರು ನಾನು ಒಬ್ಬನೇ ಎಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

ಆದಾಗ್ಯೂ ಅವರು ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. “ಜನರು ನನ್ನನ್ನು ಆಯ್ಕೆ ಮಾಡಿದ್ದಾರೆ, ಅವರ ಬಗ್ಗೆ ನನಗೆ ಜವಾಬ್ದಾರಿ ಇದೆ. ನಾನು ನನ್ನ ಪಕ್ಷಕ್ಕೆ ರಾಜೀನಾಮೆ ನೀಡಿದರೆ ಜನರಿಗೆ ಒಳ್ಳೆಯದು ಮಾಡಲಾಗುವುದಿಲ್ಲ. ಅಲ್ಲದೆ, ನನ್ನ ಬೆವರು ಮತ್ತು ರಕ್ತದಿಂದ ಪಕ್ಷವನ್ನು ಪೋಷಿಸಿದ್ದೇನೆ” ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...