Homeಮುಖಪುಟಹರಿಯಾಣ ಸೀಟು ಹಂಚಿಕೆಯಲ್ಲಿ ಬಿಜೆಪಿ ಒಳಜಗಳ: ಬೀದಿಗೆ ಬಿದ್ದ ನಾಯಕರ ಅಸಮಾಧಾನ

ಹರಿಯಾಣ ಸೀಟು ಹಂಚಿಕೆಯಲ್ಲಿ ಬಿಜೆಪಿ ಒಳಜಗಳ: ಬೀದಿಗೆ ಬಿದ್ದ ನಾಯಕರ ಅಸಮಾಧಾನ

- Advertisement -
- Advertisement -

ಹರಿಯಾಣ ರಾಜ್ಯದಲ್ಲಿ ಈಗ ವಿಧಾನಸಭೆ ಚುನಾವಣೆ ಕಾವು ಹೆಚ್ಚಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ. ಅಕ್ಟೋಬರ್ 21ಕ್ಕೆ ಚುನಾವಣೆ ಘೋಷಣೆಯಾಗಿದ್ದು, 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ, ಟಿಕೆಟ್ ಹಂಚಿಕೆ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

ಹರಿಯಾಣದ ಒಟ್ಟು ವಿಧಾನಸಭೆ ಕ್ಷೇತ್ರಗಳು 90. ಇವುಗಳಲ್ಲಿ 78 ಕ್ಷೇತ್ರಗಳಿಗೆ ಮಾತ್ರ ಬಿಜೆಪಿ ಟಿಕೆಟ್ ಘೋಷಿಸಿದೆ. ಇಷ್ಟು ದಿನ ಪಕ್ಷದಲ್ಲಿ ಆಂತರಿಕವಾಗಿ ಕಚ್ಚಾಡುತ್ತಿದ್ದ ರಾಜಕೀಯ ನಾಯಕರು ಚುನಾವಣೆ ಹೊಸ್ತಿಲಲ್ಲಿ ಸಾರ್ವಜನಿಕವಾಗಿ ಕಚ್ಚಾಟಕ್ಕಿಳಿದಿದ್ದಾರೆ. ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಗುರುಗ್ರಾಮ್ ಬಿಜೆಪಿ ಶಾಸಕ ಹಾಗೂ ಪಕ್ಷದ ಉಸ್ತುವಾರಿ ಉಮೇಶ್ ಅಗರವಾಲ್ ಟ್ವಿಟ್ಟರ್ ನಲ್ಲಿ ಪರಸ್ಪರ ವಾಗ್ವಾದಕ್ಕಿಳಿಯುವ ಮೂಲಕ ಪಕ್ಷದಲ್ಲಿ ಆಂತರಿಕವಾಗಿ ಭುಗಿಲೆದ್ದಿದ್ದ ಭಿನ್ನಾಭಿಪ್ರಾಯ, ಅಸಂತೋಷ ಬೀದಿ ಜಗಳವಾಗಿದೆ.

ಬಿಜೆಪಿಯಲ್ಲಿ ಸಂಸದ ಇಂದ್ರಜಿತ್ ಸಿಂಗ್ ತಮ್ಮ ಮಗಳಿಗೆ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಗುರುಗ್ರಾಮ್ ಶಾಸಕ ಉಮೇಶ್ ಅಗರವಾಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಟ್ವೀಟ್ ಮೂಲಕ ಸಬಕಾ ಸಾಥ್, ಸಬಕಾ ವಿಕಾಸ್, ಸಬಕಾ ವಿಶ್ವಾಸ ಈ ಘೋಷಣೆಯನ್ನು ಮೂಲವಾಗಿಟ್ಟುಕೊಂಡೇ ಟಿಕೆಟ್ ಹಂಚಿಕೆಯಾಗಬೇಕು. ಯೋಗ್ಯತೆ, ಸಾಮರ್ಥ್ಯ ಹಾಗೂ ಜನಾನುಭಾವ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪಕ್ಷ ಟಿಕೆಟ್ ಹಂಚಿಕೆ ಮಾಡಬೇಕು ಎಂದಿದ್ದಾರೆ.

ಇನ್ನು 90 ಸ್ಥಾನಗಳಲ್ಲಿ ಕೇವಲ 78 ಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಹಂಚಿಕೆ ಮಾಡಲಾಗಿದೆ. ಟಿಕೆಟ್ ಹಂಚಿಕೆ ವಿಚಾರ ನಾಯಕರ ಪ್ರತಿಷ್ಠೆಯ ವಿಷಯವಾಗಿ ಹೊರಹೊಮ್ಮಿದೆ. ಗುಡಗಾಂವ್, ರೆವಾಡಿ, ಕೋಸಲಿ, ಪಾಣಿಪತ್ ಶಹರ್, ಪಲವಲ್, ಫತೇಹಾಬಾದ್, ಆದಂಪುರ, ನಾರಾಯಣಗಢ, ಗನ್ನೌರ್ ಸೇರಿದಂತೆ ಇನ್ನು ಕೆಲವು ಸ್ಥಾನಗಳ ಟಿಕೆಟ್ ಹಂಚಿಕೆ ಆಗಿಲ್ಲ. ಪ್ರತಿಷ್ಠೆ, ಜಿದ್ದಾಜಿದ್ದಿನ ಕಣವಾಗಿರುವ ಹರಿಯಾಣದಲ್ಲಿ ಅಸಮಾಧಾನಿತರ ಮನವೊಲಿಸಲು ಬಿಜೆಪಿ ಹರಸಾಹಸ ಮಾಡುತ್ತಿದೆ.

ಇನ್ನು ಕಾಂಗ್ರೆಸ್ ನಲ್ಲಿಯೂ ಸಹ ಭಿನ್ನಮತ ಭುಗಿಲೆದ್ದಿದ್ದು ಭೂಪೇಂದ್ರ ಸಿಂಗ್ ಹೂಡಾ, ಅಶೋಕ್ ತನ್ವರ್‌ ಹಾಗೂ ಪಕ್ಷದ ಇತರೆ ನಾಯಕರ ಮಧ್ಯೆ ಪರಸ್ಪರ ಅಸಮಾಧಾನ ಮನೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...