Homeಮುಖಪುಟಹರಿಯಾಣ ಸೀಟು ಹಂಚಿಕೆಯಲ್ಲಿ ಬಿಜೆಪಿ ಒಳಜಗಳ: ಬೀದಿಗೆ ಬಿದ್ದ ನಾಯಕರ ಅಸಮಾಧಾನ

ಹರಿಯಾಣ ಸೀಟು ಹಂಚಿಕೆಯಲ್ಲಿ ಬಿಜೆಪಿ ಒಳಜಗಳ: ಬೀದಿಗೆ ಬಿದ್ದ ನಾಯಕರ ಅಸಮಾಧಾನ

- Advertisement -
- Advertisement -

ಹರಿಯಾಣ ರಾಜ್ಯದಲ್ಲಿ ಈಗ ವಿಧಾನಸಭೆ ಚುನಾವಣೆ ಕಾವು ಹೆಚ್ಚಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ. ಅಕ್ಟೋಬರ್ 21ಕ್ಕೆ ಚುನಾವಣೆ ಘೋಷಣೆಯಾಗಿದ್ದು, 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ, ಟಿಕೆಟ್ ಹಂಚಿಕೆ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

ಹರಿಯಾಣದ ಒಟ್ಟು ವಿಧಾನಸಭೆ ಕ್ಷೇತ್ರಗಳು 90. ಇವುಗಳಲ್ಲಿ 78 ಕ್ಷೇತ್ರಗಳಿಗೆ ಮಾತ್ರ ಬಿಜೆಪಿ ಟಿಕೆಟ್ ಘೋಷಿಸಿದೆ. ಇಷ್ಟು ದಿನ ಪಕ್ಷದಲ್ಲಿ ಆಂತರಿಕವಾಗಿ ಕಚ್ಚಾಡುತ್ತಿದ್ದ ರಾಜಕೀಯ ನಾಯಕರು ಚುನಾವಣೆ ಹೊಸ್ತಿಲಲ್ಲಿ ಸಾರ್ವಜನಿಕವಾಗಿ ಕಚ್ಚಾಟಕ್ಕಿಳಿದಿದ್ದಾರೆ. ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಗುರುಗ್ರಾಮ್ ಬಿಜೆಪಿ ಶಾಸಕ ಹಾಗೂ ಪಕ್ಷದ ಉಸ್ತುವಾರಿ ಉಮೇಶ್ ಅಗರವಾಲ್ ಟ್ವಿಟ್ಟರ್ ನಲ್ಲಿ ಪರಸ್ಪರ ವಾಗ್ವಾದಕ್ಕಿಳಿಯುವ ಮೂಲಕ ಪಕ್ಷದಲ್ಲಿ ಆಂತರಿಕವಾಗಿ ಭುಗಿಲೆದ್ದಿದ್ದ ಭಿನ್ನಾಭಿಪ್ರಾಯ, ಅಸಂತೋಷ ಬೀದಿ ಜಗಳವಾಗಿದೆ.

ಬಿಜೆಪಿಯಲ್ಲಿ ಸಂಸದ ಇಂದ್ರಜಿತ್ ಸಿಂಗ್ ತಮ್ಮ ಮಗಳಿಗೆ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಗುರುಗ್ರಾಮ್ ಶಾಸಕ ಉಮೇಶ್ ಅಗರವಾಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಟ್ವೀಟ್ ಮೂಲಕ ಸಬಕಾ ಸಾಥ್, ಸಬಕಾ ವಿಕಾಸ್, ಸಬಕಾ ವಿಶ್ವಾಸ ಈ ಘೋಷಣೆಯನ್ನು ಮೂಲವಾಗಿಟ್ಟುಕೊಂಡೇ ಟಿಕೆಟ್ ಹಂಚಿಕೆಯಾಗಬೇಕು. ಯೋಗ್ಯತೆ, ಸಾಮರ್ಥ್ಯ ಹಾಗೂ ಜನಾನುಭಾವ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪಕ್ಷ ಟಿಕೆಟ್ ಹಂಚಿಕೆ ಮಾಡಬೇಕು ಎಂದಿದ್ದಾರೆ.

ಇನ್ನು 90 ಸ್ಥಾನಗಳಲ್ಲಿ ಕೇವಲ 78 ಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಹಂಚಿಕೆ ಮಾಡಲಾಗಿದೆ. ಟಿಕೆಟ್ ಹಂಚಿಕೆ ವಿಚಾರ ನಾಯಕರ ಪ್ರತಿಷ್ಠೆಯ ವಿಷಯವಾಗಿ ಹೊರಹೊಮ್ಮಿದೆ. ಗುಡಗಾಂವ್, ರೆವಾಡಿ, ಕೋಸಲಿ, ಪಾಣಿಪತ್ ಶಹರ್, ಪಲವಲ್, ಫತೇಹಾಬಾದ್, ಆದಂಪುರ, ನಾರಾಯಣಗಢ, ಗನ್ನೌರ್ ಸೇರಿದಂತೆ ಇನ್ನು ಕೆಲವು ಸ್ಥಾನಗಳ ಟಿಕೆಟ್ ಹಂಚಿಕೆ ಆಗಿಲ್ಲ. ಪ್ರತಿಷ್ಠೆ, ಜಿದ್ದಾಜಿದ್ದಿನ ಕಣವಾಗಿರುವ ಹರಿಯಾಣದಲ್ಲಿ ಅಸಮಾಧಾನಿತರ ಮನವೊಲಿಸಲು ಬಿಜೆಪಿ ಹರಸಾಹಸ ಮಾಡುತ್ತಿದೆ.

ಇನ್ನು ಕಾಂಗ್ರೆಸ್ ನಲ್ಲಿಯೂ ಸಹ ಭಿನ್ನಮತ ಭುಗಿಲೆದ್ದಿದ್ದು ಭೂಪೇಂದ್ರ ಸಿಂಗ್ ಹೂಡಾ, ಅಶೋಕ್ ತನ್ವರ್‌ ಹಾಗೂ ಪಕ್ಷದ ಇತರೆ ನಾಯಕರ ಮಧ್ಯೆ ಪರಸ್ಪರ ಅಸಮಾಧಾನ ಮನೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...