Homeಮುಖಪುಟಹರಿಯಾಣ ಸೀಟು ಹಂಚಿಕೆಯಲ್ಲಿ ಬಿಜೆಪಿ ಒಳಜಗಳ: ಬೀದಿಗೆ ಬಿದ್ದ ನಾಯಕರ ಅಸಮಾಧಾನ

ಹರಿಯಾಣ ಸೀಟು ಹಂಚಿಕೆಯಲ್ಲಿ ಬಿಜೆಪಿ ಒಳಜಗಳ: ಬೀದಿಗೆ ಬಿದ್ದ ನಾಯಕರ ಅಸಮಾಧಾನ

- Advertisement -
- Advertisement -

ಹರಿಯಾಣ ರಾಜ್ಯದಲ್ಲಿ ಈಗ ವಿಧಾನಸಭೆ ಚುನಾವಣೆ ಕಾವು ಹೆಚ್ಚಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ. ಅಕ್ಟೋಬರ್ 21ಕ್ಕೆ ಚುನಾವಣೆ ಘೋಷಣೆಯಾಗಿದ್ದು, 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ, ಟಿಕೆಟ್ ಹಂಚಿಕೆ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

ಹರಿಯಾಣದ ಒಟ್ಟು ವಿಧಾನಸಭೆ ಕ್ಷೇತ್ರಗಳು 90. ಇವುಗಳಲ್ಲಿ 78 ಕ್ಷೇತ್ರಗಳಿಗೆ ಮಾತ್ರ ಬಿಜೆಪಿ ಟಿಕೆಟ್ ಘೋಷಿಸಿದೆ. ಇಷ್ಟು ದಿನ ಪಕ್ಷದಲ್ಲಿ ಆಂತರಿಕವಾಗಿ ಕಚ್ಚಾಡುತ್ತಿದ್ದ ರಾಜಕೀಯ ನಾಯಕರು ಚುನಾವಣೆ ಹೊಸ್ತಿಲಲ್ಲಿ ಸಾರ್ವಜನಿಕವಾಗಿ ಕಚ್ಚಾಟಕ್ಕಿಳಿದಿದ್ದಾರೆ. ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಗುರುಗ್ರಾಮ್ ಬಿಜೆಪಿ ಶಾಸಕ ಹಾಗೂ ಪಕ್ಷದ ಉಸ್ತುವಾರಿ ಉಮೇಶ್ ಅಗರವಾಲ್ ಟ್ವಿಟ್ಟರ್ ನಲ್ಲಿ ಪರಸ್ಪರ ವಾಗ್ವಾದಕ್ಕಿಳಿಯುವ ಮೂಲಕ ಪಕ್ಷದಲ್ಲಿ ಆಂತರಿಕವಾಗಿ ಭುಗಿಲೆದ್ದಿದ್ದ ಭಿನ್ನಾಭಿಪ್ರಾಯ, ಅಸಂತೋಷ ಬೀದಿ ಜಗಳವಾಗಿದೆ.

ಬಿಜೆಪಿಯಲ್ಲಿ ಸಂಸದ ಇಂದ್ರಜಿತ್ ಸಿಂಗ್ ತಮ್ಮ ಮಗಳಿಗೆ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಗುರುಗ್ರಾಮ್ ಶಾಸಕ ಉಮೇಶ್ ಅಗರವಾಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಟ್ವೀಟ್ ಮೂಲಕ ಸಬಕಾ ಸಾಥ್, ಸಬಕಾ ವಿಕಾಸ್, ಸಬಕಾ ವಿಶ್ವಾಸ ಈ ಘೋಷಣೆಯನ್ನು ಮೂಲವಾಗಿಟ್ಟುಕೊಂಡೇ ಟಿಕೆಟ್ ಹಂಚಿಕೆಯಾಗಬೇಕು. ಯೋಗ್ಯತೆ, ಸಾಮರ್ಥ್ಯ ಹಾಗೂ ಜನಾನುಭಾವ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪಕ್ಷ ಟಿಕೆಟ್ ಹಂಚಿಕೆ ಮಾಡಬೇಕು ಎಂದಿದ್ದಾರೆ.

ಇನ್ನು 90 ಸ್ಥಾನಗಳಲ್ಲಿ ಕೇವಲ 78 ಕ್ಷೇತ್ರಗಳಿಗೆ ಮಾತ್ರ ಟಿಕೆಟ್ ಹಂಚಿಕೆ ಮಾಡಲಾಗಿದೆ. ಟಿಕೆಟ್ ಹಂಚಿಕೆ ವಿಚಾರ ನಾಯಕರ ಪ್ರತಿಷ್ಠೆಯ ವಿಷಯವಾಗಿ ಹೊರಹೊಮ್ಮಿದೆ. ಗುಡಗಾಂವ್, ರೆವಾಡಿ, ಕೋಸಲಿ, ಪಾಣಿಪತ್ ಶಹರ್, ಪಲವಲ್, ಫತೇಹಾಬಾದ್, ಆದಂಪುರ, ನಾರಾಯಣಗಢ, ಗನ್ನೌರ್ ಸೇರಿದಂತೆ ಇನ್ನು ಕೆಲವು ಸ್ಥಾನಗಳ ಟಿಕೆಟ್ ಹಂಚಿಕೆ ಆಗಿಲ್ಲ. ಪ್ರತಿಷ್ಠೆ, ಜಿದ್ದಾಜಿದ್ದಿನ ಕಣವಾಗಿರುವ ಹರಿಯಾಣದಲ್ಲಿ ಅಸಮಾಧಾನಿತರ ಮನವೊಲಿಸಲು ಬಿಜೆಪಿ ಹರಸಾಹಸ ಮಾಡುತ್ತಿದೆ.

ಇನ್ನು ಕಾಂಗ್ರೆಸ್ ನಲ್ಲಿಯೂ ಸಹ ಭಿನ್ನಮತ ಭುಗಿಲೆದ್ದಿದ್ದು ಭೂಪೇಂದ್ರ ಸಿಂಗ್ ಹೂಡಾ, ಅಶೋಕ್ ತನ್ವರ್‌ ಹಾಗೂ ಪಕ್ಷದ ಇತರೆ ನಾಯಕರ ಮಧ್ಯೆ ಪರಸ್ಪರ ಅಸಮಾಧಾನ ಮನೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...