Homeಮುಖಪುಟನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಉಪರಾಷ್ಟ್ರಪತಿ ಧನ್ಕರ್

ನ್ಯಾ. ವರ್ಮಾ ಪ್ರಕರಣದ ತನಿಖೆ ನಡೆಸಿದ ಆಂತರಿಕ ಸಮಿತಿಗೆ ಕಾನೂನು ಮಾನ್ಯತೆ ಇಲ್ಲ: ಉಪರಾಷ್ಟ್ರಪತಿ ಧನ್ಕರ್

- Advertisement -
- Advertisement -

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ಮೂವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿ ನಡೆಸಿದ ತನಿಖೆಯನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಸೋಮವಾರ ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರು ಸಂಪಾದಿಸಿರುವ ‘ದ ಕಾನ್‌ಸ್ಟಿಟ್ಯೂಷನ್‌ ವಿ ಅಡಾಪ್ಟೆಡ್‌’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ಆಂತರಿಕ ಸಮಿತಿಗೆ ಯಾವುದೇ ಸಾಂವಿಧಾನಿಕ ವ್ಯಾಪ್ತಿಯಾಗಲಿ ಅಥವಾ ಕಾನೂನಿನ ಮಾನ್ಯತೆಯಾಗಲಿ ಇಲ್ಲ” ಎಂದಿದ್ದಾರೆ.

ಪ್ರಕರಣ ಸಂಬಂಧ ಇನ್ನೂ ಯಾವುದೇ ಎಫ್‌ಐಆರ್ ದಾಖಲಿಸದಿರುವುದು ಏಕೆ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಎಫ್‌ಐಆರ್‌ ದಾಖಲಿಸುವ ಅಗತ್ಯವನ್ನು ಒತ್ತಿ ಹೇಳಿದ ಧನ್ಕರ್, ನ್ಯಾಯಮೂರ್ತಿ ಮನೆಯಲ್ಲಿ ಪತ್ತೆಯಾದ ಹಣದ ಮೂಲ, ಉದ್ದೇಶ, ಅದು ನ್ಯಾಯಾಂಗ ವ್ಯವಸ್ಥೆಯನ್ನು ಕಲುಷಿತಗೊಳಿಸಿದೆಯೇ? ಅದರ ಹಿಂದಿರುವ ದೊಡ್ಡ ತಿಮಿಂಗಿಲಗಳು ಯಾರು? ಎಂಬುವುದನ್ನು ತಿಳಿದುಕೊಳ್ಳಲು ಜನರು ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ ಎಂದಿದ್ದಾರೆ.

ಪ್ರಕರಣ ನಡೆದು ಈಗಾಗಲೇ ಎರಡು ತಿಂಗಳುಗಳು ಕಳೆದಿವೆ. ತ್ವರಿತ ತನಿಖೆಯ ಅಗತ್ಯವಿದೆ. ಆಂತರಿಕ ಸಮಿತಿ ವರದಿ ಸಲ್ಲಿಸಿ ಈಗಾಗಲೇ ಒಂದು ವಾರ ಕಳೆದಿರೂ 140 ಕೋಟಿ ಜನರಿರುವ ದೇಶಕ್ಕೆ ಆ ಬಗ್ಗೆ ಹೆಚ್ಚಿನ ವಿಷಯ ಗೊತ್ತಾಗಿಲ್ಲ. ತನಿಖಾ ಸಮಿತಿ ಎಲೆಕ್ಟ್ರಾನಿಕ್ ಪುರಾವೆಗಳನ್ನು ವಶಪಡಿಸಿಕೊಂಡಿದೆಯೇ ಎಂಬುದು ಜನರಿಗೆ ತಿಳಿದಿಲ್ಲ. ಇಂತಹ ಎಷ್ಟು ಘಟನೆಗಳು ನಡೆದಿರಬಹುದು ಎಂದು ಊಹಿಸಿ. ಪ್ರತಿಯೊಂದು ಘಟನೆಯೂ ಸಾಮಾನ್ಯ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ನ್ಯಾಯಾಧೀಶರ ವಿರುದ್ಧ ವಿಚಾರಣೆ ನಡೆಸಲು ಪೂರ್ವಾನುಮತಿ ಅಗತ್ಯವಿದೆ ಎಂದು ಹೇಳಿದ್ದ 1991ರ ಕೆ ವೀರಸ್ವಾಮಿ ತೀರ್ಪನ್ನು ಮರುಪರಿಶೀಲಿಸುವಂತೆ ಧನ್ಕರ್ ಕರೆ ನೀಡಿದ್ದು, ಇದು ನ್ಯಾಯಾಂಗದ ಸುತ್ತಲೂ “ಶಿಕ್ಷೆಯಿಂದ ಮುಕ್ತಿ”ಯ ಚೌಕಟ್ಟನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ.

ಮಾರ್ಚ್ 22ರಂದು ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನ್ಯಾಯಮೂರ್ತಿ ವರ್ಮಾ ಅವರ ಮೇಲಿನ ಆರೋಪಗಳ ತನಿಖೆಗಾಗಿ ಮೂವರು ಸದಸ್ಯರ ಆಂತರಿಕ ಸಮಿತಿಯನ್ನು ರಚಿಸಿದ್ದರು. ಸಮಿತಿಯು ತನ್ನ ವರದಿಯಲ್ಲಿ ವರ್ಮಾ ಮೇಲಿನ ಆರೋಪಗಳು ವಿಶ್ವಾಸಾರ್ಹವೆಂದು ಕಂಡುಕೊಂಡಿದೆ ಎಂದು ತಿಳಿದುಬಂದಿದೆ.

ಆರೋಪಗಳು ಕೇಳಿ ಬಂದ ಕೆಲ ದಿನಗಳ ನಂತರ ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆಯಾದ ನ್ಯಾಯಮೂರ್ತಿ ವರ್ಮಾ ಅವರು, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ಸಂಭಾಲ್‌: ಜಾಮಾ ಮಸೀದಿ ಸರ್ವೆ ಆದೇಶ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...