Homeಕರ್ನಾಟಕಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

- Advertisement -
- Advertisement -

”ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ” ಎಂದು 2014ರಲ್ಲಿ ದೇಶದ ಚುಕ್ಕಾಣೆ ಹಿಡಿದ ಭಾರತೀಯ ಜನತಾ ಪಕ್ಷ, ಆರಂಭದಲ್ಲಿ ದೇಶದ ಹಲವು ರಾಜ್ಯಗಳಲ್ಲಿ ದಿಗ್ವಿಜಯ ಸಾಧಿಸಿತು. ಆದರೆ, ಅತಿ ಕಡೆಮೆ ಅವಧಿಯಲ್ಲಿಯೇ ದೇಶಾದ್ಯಂತ ಬಿಜೆಪಿ ಆಡಳಿತದ ವಿರೋಧಿ ಅಲೆ ಶುರುವಾಗಿದೆ. ಹಾಗಾಗಿಯೇ ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತಿದೆ. ಇದೀಗ ಕರ್ನಾಟಕದಲ್ಲೂ ಅತ್ಯಂತ ಹೀನಾಯವಾಗಿ ಸೋಲುವ ಮೂಲಕ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

2014ರಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ, ಈಶಾನ್ಯ ರಾಜ್ಯಗಳಿಂದ ಮೊದಲುಗೊಂಡು ಎಲ್ಲೆಡೆ ಬಿಜೆಪಿ ಅಲೆ ಎದ್ದಿತ್ತು. ಮೋದಿ ಎಂಬ ಬಿರುಗಾಳಿಗೆ ಸಿಕ್ಕಿ ಹಲವು ರಾಜಕೀಯ ಪಕ್ಷಗಳು ನೆಲಕಚ್ಚಿದವು. ಕಾಂಗ್ರೆಸ್, ಎಸ್ಪಿ, ಬಿಎಸ್ಪಿ, ಎನ್‌ಸಿಪಿ, ಆರ್‌ಜೆಡಿ, ಎಡಪಕ್ಷಗಳು ಸೇರಿದಂತೆ ಘಟಾನುಘಟಿಗಳೇ ಮೋದಿ ಸುನಾಮಿಗೆ ಸುಸ್ತಾದವು. ಆದರೆ ಟಿಎಂಸಿ, ಎಲ್‌ಡಿಎಫ್, ಟಿಡಿಪಿ, ಟಿಆರ್‌ಎಸ್‌, ಎಐಎಡಿಎಂಕೆ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳನ್ನು ಅಲುಗಾಡಿಸಲು ಮೋದಿ ನೇತೃತ್ವದ ಬಿಜೆಪಿಗೆ ಸಾಧ್ಯವಾಗಿರಲಿಲ್ಲ.

2019ರಲ್ಲಿ ಮೋದಿ ಸರ್ಕಾರ 2ನೇ ಅವಧಿಗೆ ಅಧಿಕಾರದ ಗದ್ದುಗೆ ಹಿಡಿಯುವ ಉತ್ಸಾಹದಲ್ಲಿತ್ತು. ಆದರೆ ಅಷ್ಟೊತ್ತಿಗಾಗಲೇ ದೇಶದ ಜನರು ಬೆಲೆ ಏರಿಕೆಗೆ ಹಾಗೂ ಅಭಿವೃದ್ಧಿಯಲ್ಲೂ ಕಳಪೆ ಸಾಧನೆಯಿಂದಾಗಿ ಜನರು ಬೇಸತ್ತು ಹೋಗಿದ್ದರು. ಹಾಗಾಗಿ ಹಲವು ರಾಜ್ಯಗಳಲ್ಲಿ ಬಿಜೆಪಿ ಸೋಲಿನತ್ತ ಮುಖ ಮಾಡಿತ್ತು. ಮೋದಿ ತವರು ಕ್ಷೇತ್ರ ಗುಜರಾತ್‌ನಲ್ಲಿ ಕಾಂಗ್ರೆಸ್‌ ಎದುರು ಗೆಲುವು ಸಾಧಿಸಲು ಹರಸಾಹಸಪಡಬೇಕಾಯಿತು. ಅಷ್ಟರಮಟ್ಟಿಗೆ ಕಾಂಗ್ರೆಸ್‌ ಪಕ್ಷ ಬಿಜೆಪಿಗೆ ಪ್ರತಿರೋಧ ಕೊಟ್ಟಿತ್ತು! ಇದಾದ ನಂತರ ನಡೆದ ಚುನಾವಣೆಗಳಲ್ಲಿ ರಾಜಸ್ತಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಂಥಾ ದೊಡ್ಡ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಮೂರೂ ರಾಜ್ಯಗಳ ಘಟಾನುಘಟಿ ನಾಯಕರೇ ತಲೆತಗ್ಗಿಸಿ ನಿಲ್ಲಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪುಲ್ವಾಮಾ ದಾಳಿ, ಸರ್ಜಿಕಲ್ ಸ್ಟ್ರೈಕ್‌ ವಿಚಾರವನ್ನು ರಾಷ್ಟ್ರ ರಕ್ಷಣೆ, ರಾಷ್ಟ್ರಭಕ್ತಿಯ ಭಾವನಾತ್ಮಕವಾಗಿ ಜನರಿಗೆ ಮತ್ತೆ ಮಂಕುಬೂದಿ ಎರಚುವ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದಿತು. ಮೋದಿ ಮೊದಲಿಗಿಂತಾ ಹೆಚ್ಚು ಶಕ್ತಿಯುತರಾಗಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರು!

ಬಿಜೆಪಿಗೆ ಇದೀಗ ಮತ್ತೆ ರಾಜ್ಯಗಳನ್ನು ಕಳೆದುಕೊಳ್ಳುವ ಭೀತಿ ಹೆಚ್ಚಾಗಿದೆ. ನಿನ್ನೆಯಷ್ಟೇ ಕರ್ನಾಟಕದಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲುಕಂಡಿದೆ. ದಕ್ಷಿಣಭಾರತದಲ್ಲಿ ಅಧಿಕಾರದಲ್ಲಿದ್ದ ಏಕೈಕ ರಾಜ್ಯ ಕರ್ನಾಟಕ ಆಗಿತ್ತು. ಆದರೆ ಇದೀಗ ಈ ಸೋಲು ಬಿಜೆಪಿಗೆ ದೊಡ್ಡಮಟ್ಟಿನ ನಷ್ಟಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿನ ಬಿಜೆಪಿಯ ಸೋಲು ಕೇಂದ್ರದ ಆಡಳಿತಾರೂಢ ಎನ್‌ಡಿಎ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ, ರಾಜ್ಯಗಳಲ್ಲಿ ಮಾತ್ರ ಸೋಲಿನ ಹಾದಿ ಹಿಡಿಯುತ್ತಿದೆ. ದೇಶಾದ್ಯಂತ ವ್ಯಾಪಿಸಿದ್ದ ‘ಕೇಸರಿ’ ಸಾಮ್ರಾಜ್ಯ, ನಿಧಾನವಾಗಿ ಕರಗಲು ಆರಂಭಿಸಿದೆ! ಕಳೆದ 12 ತಿಂಗಳುಗಳ ಅವಧಿಯಲ್ಲಿ 5ನೇ ರಾಜ್ಯ ಬಿಜೆಪಿಯ ತೆಕ್ಕೆಯಿಂದ ‘ಕೈ’ ಜಾರಿದೆ! ಬಿಜೆಪಿ ಆಡಳಿತದ ಜಾರ್ಖಂಡ್ ರಾಜ್ಯ, ಕಾಂಗ್ರೆಸ್ ಹಾಗೂ ಜೆಎಂಎಂ ಪಾಲಾಗಿದೆ.

ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೆಚ್ಚು ಸ್ಥಾನ ಹೊಂದಿರುವ ಪಕ್ಷವಾಯಿತು. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿದವು. ಈ ವೇಳೆ ಆಪರೇಷನ್ ಕಮಲ ಮಾಡಿದ ಬಿಜೆಪಿ ಅಧಿಕಾರಕ್ಕೆ ಬಂದಿತು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದ್ದಿದ್ದರಿಂದ, ಕೇಂದ್ರ ನಾಯಕರೆಲ್ಲ ಎರಡು ತಿಂಗಳುಗಳ ಕಾಲ ರಾಜ್ಯ ಪ್ರವಾಸ ಮಾಡಿ, ರ್ಯಾಲಿಗಳನ್ನು ಮಾಡಿದರು. ಆದರೆ ಕರ್ನಾಟಕದ ಜನರು ಈ ಬಾರಿ ಬಿಜೆಪಿಯನ್ನು ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ಕೇವಲ 66 ಸ್ಥಾನಗಳನ್ನು ನೀಡಿದ್ದಾರೆ. ಇನ್ನೂ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳನ್ನು ನೀಡುವ ಮೂಲಕ ಅಧಿಕಾರ ನೀಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು (10)

ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ್, ಹರಿಯಾಣ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರಪ್ರದೇಶ, ಉತ್ತರಾಖಂಡ, ಗೋವಾ

ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ (4)

ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ಮಹಾರಾಷ್ರ್ಟ

ಕಾಂಗ್ರೆಸ್ ಅಥವಾ ಅದರ ಮೈತ್ರಿಕೂಟ ಅಧಿಕಾರದಲ್ಲಿರುವ ರಾಜ್ಯಗಳು (7)

ಬಿಹಾರ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ರಾಜಸ್ಥಾನ, ತಮಿಳುನಾಡು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...