Homeಕರ್ನಾಟಕಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

- Advertisement -
- Advertisement -

”ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ” ಎಂದು 2014ರಲ್ಲಿ ದೇಶದ ಚುಕ್ಕಾಣೆ ಹಿಡಿದ ಭಾರತೀಯ ಜನತಾ ಪಕ್ಷ, ಆರಂಭದಲ್ಲಿ ದೇಶದ ಹಲವು ರಾಜ್ಯಗಳಲ್ಲಿ ದಿಗ್ವಿಜಯ ಸಾಧಿಸಿತು. ಆದರೆ, ಅತಿ ಕಡೆಮೆ ಅವಧಿಯಲ್ಲಿಯೇ ದೇಶಾದ್ಯಂತ ಬಿಜೆಪಿ ಆಡಳಿತದ ವಿರೋಧಿ ಅಲೆ ಶುರುವಾಗಿದೆ. ಹಾಗಾಗಿಯೇ ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತಿದೆ. ಇದೀಗ ಕರ್ನಾಟಕದಲ್ಲೂ ಅತ್ಯಂತ ಹೀನಾಯವಾಗಿ ಸೋಲುವ ಮೂಲಕ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

2014ರಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ, ಈಶಾನ್ಯ ರಾಜ್ಯಗಳಿಂದ ಮೊದಲುಗೊಂಡು ಎಲ್ಲೆಡೆ ಬಿಜೆಪಿ ಅಲೆ ಎದ್ದಿತ್ತು. ಮೋದಿ ಎಂಬ ಬಿರುಗಾಳಿಗೆ ಸಿಕ್ಕಿ ಹಲವು ರಾಜಕೀಯ ಪಕ್ಷಗಳು ನೆಲಕಚ್ಚಿದವು. ಕಾಂಗ್ರೆಸ್, ಎಸ್ಪಿ, ಬಿಎಸ್ಪಿ, ಎನ್‌ಸಿಪಿ, ಆರ್‌ಜೆಡಿ, ಎಡಪಕ್ಷಗಳು ಸೇರಿದಂತೆ ಘಟಾನುಘಟಿಗಳೇ ಮೋದಿ ಸುನಾಮಿಗೆ ಸುಸ್ತಾದವು. ಆದರೆ ಟಿಎಂಸಿ, ಎಲ್‌ಡಿಎಫ್, ಟಿಡಿಪಿ, ಟಿಆರ್‌ಎಸ್‌, ಎಐಎಡಿಎಂಕೆ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳನ್ನು ಅಲುಗಾಡಿಸಲು ಮೋದಿ ನೇತೃತ್ವದ ಬಿಜೆಪಿಗೆ ಸಾಧ್ಯವಾಗಿರಲಿಲ್ಲ.

2019ರಲ್ಲಿ ಮೋದಿ ಸರ್ಕಾರ 2ನೇ ಅವಧಿಗೆ ಅಧಿಕಾರದ ಗದ್ದುಗೆ ಹಿಡಿಯುವ ಉತ್ಸಾಹದಲ್ಲಿತ್ತು. ಆದರೆ ಅಷ್ಟೊತ್ತಿಗಾಗಲೇ ದೇಶದ ಜನರು ಬೆಲೆ ಏರಿಕೆಗೆ ಹಾಗೂ ಅಭಿವೃದ್ಧಿಯಲ್ಲೂ ಕಳಪೆ ಸಾಧನೆಯಿಂದಾಗಿ ಜನರು ಬೇಸತ್ತು ಹೋಗಿದ್ದರು. ಹಾಗಾಗಿ ಹಲವು ರಾಜ್ಯಗಳಲ್ಲಿ ಬಿಜೆಪಿ ಸೋಲಿನತ್ತ ಮುಖ ಮಾಡಿತ್ತು. ಮೋದಿ ತವರು ಕ್ಷೇತ್ರ ಗುಜರಾತ್‌ನಲ್ಲಿ ಕಾಂಗ್ರೆಸ್‌ ಎದುರು ಗೆಲುವು ಸಾಧಿಸಲು ಹರಸಾಹಸಪಡಬೇಕಾಯಿತು. ಅಷ್ಟರಮಟ್ಟಿಗೆ ಕಾಂಗ್ರೆಸ್‌ ಪಕ್ಷ ಬಿಜೆಪಿಗೆ ಪ್ರತಿರೋಧ ಕೊಟ್ಟಿತ್ತು! ಇದಾದ ನಂತರ ನಡೆದ ಚುನಾವಣೆಗಳಲ್ಲಿ ರಾಜಸ್ತಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಂಥಾ ದೊಡ್ಡ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಮೂರೂ ರಾಜ್ಯಗಳ ಘಟಾನುಘಟಿ ನಾಯಕರೇ ತಲೆತಗ್ಗಿಸಿ ನಿಲ್ಲಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪುಲ್ವಾಮಾ ದಾಳಿ, ಸರ್ಜಿಕಲ್ ಸ್ಟ್ರೈಕ್‌ ವಿಚಾರವನ್ನು ರಾಷ್ಟ್ರ ರಕ್ಷಣೆ, ರಾಷ್ಟ್ರಭಕ್ತಿಯ ಭಾವನಾತ್ಮಕವಾಗಿ ಜನರಿಗೆ ಮತ್ತೆ ಮಂಕುಬೂದಿ ಎರಚುವ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದಿತು. ಮೋದಿ ಮೊದಲಿಗಿಂತಾ ಹೆಚ್ಚು ಶಕ್ತಿಯುತರಾಗಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರು!

ಬಿಜೆಪಿಗೆ ಇದೀಗ ಮತ್ತೆ ರಾಜ್ಯಗಳನ್ನು ಕಳೆದುಕೊಳ್ಳುವ ಭೀತಿ ಹೆಚ್ಚಾಗಿದೆ. ನಿನ್ನೆಯಷ್ಟೇ ಕರ್ನಾಟಕದಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲುಕಂಡಿದೆ. ದಕ್ಷಿಣಭಾರತದಲ್ಲಿ ಅಧಿಕಾರದಲ್ಲಿದ್ದ ಏಕೈಕ ರಾಜ್ಯ ಕರ್ನಾಟಕ ಆಗಿತ್ತು. ಆದರೆ ಇದೀಗ ಈ ಸೋಲು ಬಿಜೆಪಿಗೆ ದೊಡ್ಡಮಟ್ಟಿನ ನಷ್ಟಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿನ ಬಿಜೆಪಿಯ ಸೋಲು ಕೇಂದ್ರದ ಆಡಳಿತಾರೂಢ ಎನ್‌ಡಿಎ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ, ರಾಜ್ಯಗಳಲ್ಲಿ ಮಾತ್ರ ಸೋಲಿನ ಹಾದಿ ಹಿಡಿಯುತ್ತಿದೆ. ದೇಶಾದ್ಯಂತ ವ್ಯಾಪಿಸಿದ್ದ ‘ಕೇಸರಿ’ ಸಾಮ್ರಾಜ್ಯ, ನಿಧಾನವಾಗಿ ಕರಗಲು ಆರಂಭಿಸಿದೆ! ಕಳೆದ 12 ತಿಂಗಳುಗಳ ಅವಧಿಯಲ್ಲಿ 5ನೇ ರಾಜ್ಯ ಬಿಜೆಪಿಯ ತೆಕ್ಕೆಯಿಂದ ‘ಕೈ’ ಜಾರಿದೆ! ಬಿಜೆಪಿ ಆಡಳಿತದ ಜಾರ್ಖಂಡ್ ರಾಜ್ಯ, ಕಾಂಗ್ರೆಸ್ ಹಾಗೂ ಜೆಎಂಎಂ ಪಾಲಾಗಿದೆ.

ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೆಚ್ಚು ಸ್ಥಾನ ಹೊಂದಿರುವ ಪಕ್ಷವಾಯಿತು. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿದವು. ಈ ವೇಳೆ ಆಪರೇಷನ್ ಕಮಲ ಮಾಡಿದ ಬಿಜೆಪಿ ಅಧಿಕಾರಕ್ಕೆ ಬಂದಿತು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದ್ದಿದ್ದರಿಂದ, ಕೇಂದ್ರ ನಾಯಕರೆಲ್ಲ ಎರಡು ತಿಂಗಳುಗಳ ಕಾಲ ರಾಜ್ಯ ಪ್ರವಾಸ ಮಾಡಿ, ರ್ಯಾಲಿಗಳನ್ನು ಮಾಡಿದರು. ಆದರೆ ಕರ್ನಾಟಕದ ಜನರು ಈ ಬಾರಿ ಬಿಜೆಪಿಯನ್ನು ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ಕೇವಲ 66 ಸ್ಥಾನಗಳನ್ನು ನೀಡಿದ್ದಾರೆ. ಇನ್ನೂ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳನ್ನು ನೀಡುವ ಮೂಲಕ ಅಧಿಕಾರ ನೀಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು (10)

ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ್, ಹರಿಯಾಣ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರಪ್ರದೇಶ, ಉತ್ತರಾಖಂಡ, ಗೋವಾ

ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ (4)

ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ಮಹಾರಾಷ್ರ್ಟ

ಕಾಂಗ್ರೆಸ್ ಅಥವಾ ಅದರ ಮೈತ್ರಿಕೂಟ ಅಧಿಕಾರದಲ್ಲಿರುವ ರಾಜ್ಯಗಳು (7)

ಬಿಹಾರ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ರಾಜಸ್ಥಾನ, ತಮಿಳುನಾಡು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...