Homeಕರ್ನಾಟಕಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

- Advertisement -
- Advertisement -

”ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ” ಎಂದು 2014ರಲ್ಲಿ ದೇಶದ ಚುಕ್ಕಾಣೆ ಹಿಡಿದ ಭಾರತೀಯ ಜನತಾ ಪಕ್ಷ, ಆರಂಭದಲ್ಲಿ ದೇಶದ ಹಲವು ರಾಜ್ಯಗಳಲ್ಲಿ ದಿಗ್ವಿಜಯ ಸಾಧಿಸಿತು. ಆದರೆ, ಅತಿ ಕಡೆಮೆ ಅವಧಿಯಲ್ಲಿಯೇ ದೇಶಾದ್ಯಂತ ಬಿಜೆಪಿ ಆಡಳಿತದ ವಿರೋಧಿ ಅಲೆ ಶುರುವಾಗಿದೆ. ಹಾಗಾಗಿಯೇ ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತಿದೆ. ಇದೀಗ ಕರ್ನಾಟಕದಲ್ಲೂ ಅತ್ಯಂತ ಹೀನಾಯವಾಗಿ ಸೋಲುವ ಮೂಲಕ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

2014ರಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ, ಈಶಾನ್ಯ ರಾಜ್ಯಗಳಿಂದ ಮೊದಲುಗೊಂಡು ಎಲ್ಲೆಡೆ ಬಿಜೆಪಿ ಅಲೆ ಎದ್ದಿತ್ತು. ಮೋದಿ ಎಂಬ ಬಿರುಗಾಳಿಗೆ ಸಿಕ್ಕಿ ಹಲವು ರಾಜಕೀಯ ಪಕ್ಷಗಳು ನೆಲಕಚ್ಚಿದವು. ಕಾಂಗ್ರೆಸ್, ಎಸ್ಪಿ, ಬಿಎಸ್ಪಿ, ಎನ್‌ಸಿಪಿ, ಆರ್‌ಜೆಡಿ, ಎಡಪಕ್ಷಗಳು ಸೇರಿದಂತೆ ಘಟಾನುಘಟಿಗಳೇ ಮೋದಿ ಸುನಾಮಿಗೆ ಸುಸ್ತಾದವು. ಆದರೆ ಟಿಎಂಸಿ, ಎಲ್‌ಡಿಎಫ್, ಟಿಡಿಪಿ, ಟಿಆರ್‌ಎಸ್‌, ಎಐಎಡಿಎಂಕೆ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳನ್ನು ಅಲುಗಾಡಿಸಲು ಮೋದಿ ನೇತೃತ್ವದ ಬಿಜೆಪಿಗೆ ಸಾಧ್ಯವಾಗಿರಲಿಲ್ಲ.

2019ರಲ್ಲಿ ಮೋದಿ ಸರ್ಕಾರ 2ನೇ ಅವಧಿಗೆ ಅಧಿಕಾರದ ಗದ್ದುಗೆ ಹಿಡಿಯುವ ಉತ್ಸಾಹದಲ್ಲಿತ್ತು. ಆದರೆ ಅಷ್ಟೊತ್ತಿಗಾಗಲೇ ದೇಶದ ಜನರು ಬೆಲೆ ಏರಿಕೆಗೆ ಹಾಗೂ ಅಭಿವೃದ್ಧಿಯಲ್ಲೂ ಕಳಪೆ ಸಾಧನೆಯಿಂದಾಗಿ ಜನರು ಬೇಸತ್ತು ಹೋಗಿದ್ದರು. ಹಾಗಾಗಿ ಹಲವು ರಾಜ್ಯಗಳಲ್ಲಿ ಬಿಜೆಪಿ ಸೋಲಿನತ್ತ ಮುಖ ಮಾಡಿತ್ತು. ಮೋದಿ ತವರು ಕ್ಷೇತ್ರ ಗುಜರಾತ್‌ನಲ್ಲಿ ಕಾಂಗ್ರೆಸ್‌ ಎದುರು ಗೆಲುವು ಸಾಧಿಸಲು ಹರಸಾಹಸಪಡಬೇಕಾಯಿತು. ಅಷ್ಟರಮಟ್ಟಿಗೆ ಕಾಂಗ್ರೆಸ್‌ ಪಕ್ಷ ಬಿಜೆಪಿಗೆ ಪ್ರತಿರೋಧ ಕೊಟ್ಟಿತ್ತು! ಇದಾದ ನಂತರ ನಡೆದ ಚುನಾವಣೆಗಳಲ್ಲಿ ರಾಜಸ್ತಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಂಥಾ ದೊಡ್ಡ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಮೂರೂ ರಾಜ್ಯಗಳ ಘಟಾನುಘಟಿ ನಾಯಕರೇ ತಲೆತಗ್ಗಿಸಿ ನಿಲ್ಲಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪುಲ್ವಾಮಾ ದಾಳಿ, ಸರ್ಜಿಕಲ್ ಸ್ಟ್ರೈಕ್‌ ವಿಚಾರವನ್ನು ರಾಷ್ಟ್ರ ರಕ್ಷಣೆ, ರಾಷ್ಟ್ರಭಕ್ತಿಯ ಭಾವನಾತ್ಮಕವಾಗಿ ಜನರಿಗೆ ಮತ್ತೆ ಮಂಕುಬೂದಿ ಎರಚುವ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದಿತು. ಮೋದಿ ಮೊದಲಿಗಿಂತಾ ಹೆಚ್ಚು ಶಕ್ತಿಯುತರಾಗಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರು!

ಬಿಜೆಪಿಗೆ ಇದೀಗ ಮತ್ತೆ ರಾಜ್ಯಗಳನ್ನು ಕಳೆದುಕೊಳ್ಳುವ ಭೀತಿ ಹೆಚ್ಚಾಗಿದೆ. ನಿನ್ನೆಯಷ್ಟೇ ಕರ್ನಾಟಕದಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲುಕಂಡಿದೆ. ದಕ್ಷಿಣಭಾರತದಲ್ಲಿ ಅಧಿಕಾರದಲ್ಲಿದ್ದ ಏಕೈಕ ರಾಜ್ಯ ಕರ್ನಾಟಕ ಆಗಿತ್ತು. ಆದರೆ ಇದೀಗ ಈ ಸೋಲು ಬಿಜೆಪಿಗೆ ದೊಡ್ಡಮಟ್ಟಿನ ನಷ್ಟಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿನ ಬಿಜೆಪಿಯ ಸೋಲು ಕೇಂದ್ರದ ಆಡಳಿತಾರೂಢ ಎನ್‌ಡಿಎ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ, ರಾಜ್ಯಗಳಲ್ಲಿ ಮಾತ್ರ ಸೋಲಿನ ಹಾದಿ ಹಿಡಿಯುತ್ತಿದೆ. ದೇಶಾದ್ಯಂತ ವ್ಯಾಪಿಸಿದ್ದ ‘ಕೇಸರಿ’ ಸಾಮ್ರಾಜ್ಯ, ನಿಧಾನವಾಗಿ ಕರಗಲು ಆರಂಭಿಸಿದೆ! ಕಳೆದ 12 ತಿಂಗಳುಗಳ ಅವಧಿಯಲ್ಲಿ 5ನೇ ರಾಜ್ಯ ಬಿಜೆಪಿಯ ತೆಕ್ಕೆಯಿಂದ ‘ಕೈ’ ಜಾರಿದೆ! ಬಿಜೆಪಿ ಆಡಳಿತದ ಜಾರ್ಖಂಡ್ ರಾಜ್ಯ, ಕಾಂಗ್ರೆಸ್ ಹಾಗೂ ಜೆಎಂಎಂ ಪಾಲಾಗಿದೆ.

ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೆಚ್ಚು ಸ್ಥಾನ ಹೊಂದಿರುವ ಪಕ್ಷವಾಯಿತು. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿದವು. ಈ ವೇಳೆ ಆಪರೇಷನ್ ಕಮಲ ಮಾಡಿದ ಬಿಜೆಪಿ ಅಧಿಕಾರಕ್ಕೆ ಬಂದಿತು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದ್ದಿದ್ದರಿಂದ, ಕೇಂದ್ರ ನಾಯಕರೆಲ್ಲ ಎರಡು ತಿಂಗಳುಗಳ ಕಾಲ ರಾಜ್ಯ ಪ್ರವಾಸ ಮಾಡಿ, ರ್ಯಾಲಿಗಳನ್ನು ಮಾಡಿದರು. ಆದರೆ ಕರ್ನಾಟಕದ ಜನರು ಈ ಬಾರಿ ಬಿಜೆಪಿಯನ್ನು ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ಕೇವಲ 66 ಸ್ಥಾನಗಳನ್ನು ನೀಡಿದ್ದಾರೆ. ಇನ್ನೂ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳನ್ನು ನೀಡುವ ಮೂಲಕ ಅಧಿಕಾರ ನೀಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು (10)

ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ್, ಹರಿಯಾಣ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರಪ್ರದೇಶ, ಉತ್ತರಾಖಂಡ, ಗೋವಾ

ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ (4)

ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ಮಹಾರಾಷ್ರ್ಟ

ಕಾಂಗ್ರೆಸ್ ಅಥವಾ ಅದರ ಮೈತ್ರಿಕೂಟ ಅಧಿಕಾರದಲ್ಲಿರುವ ರಾಜ್ಯಗಳು (7)

ಬಿಹಾರ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ರಾಜಸ್ಥಾನ, ತಮಿಳುನಾಡು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....