Homeಮುಖಪುಟದೇಶದಲ್ಲಿ ಪ್ರವಾಹಕ್ಕೆ 22 ರಾಜ್ಯಗಳು ತತ್ತರ: ಎಲ್ಲೆಲ್ಲಿ ಎಷ್ಟೆಷ್ಟು ಹಾನಿ? ಇಲ್ಲಿದೆ ಫುಲ್ ಡಿಟೈಲ್ಸ್‌

ದೇಶದಲ್ಲಿ ಪ್ರವಾಹಕ್ಕೆ 22 ರಾಜ್ಯಗಳು ತತ್ತರ: ಎಲ್ಲೆಲ್ಲಿ ಎಷ್ಟೆಷ್ಟು ಹಾನಿ? ಇಲ್ಲಿದೆ ಫುಲ್ ಡಿಟೈಲ್ಸ್‌

- Advertisement -
- Advertisement -

ದೇಶದ ಮುಕ್ಕಾಲು ಭಾಗದ ಜನತೆ ಮಳೆ ಮತ್ತು ಪ್ರವಾಹದಿಂದ ನಲುಗಿದ್ದಾರೆ. ವಿವಿಧ ರಾಜ್ಯಗಳಲ್ಲಿ ಉಂಟಾದ ಅತಿವೃಷ್ಟಿ ಮತ್ತು ಪ್ರಾಕೃತಿಕ ವಿಕೋಪ ಜನತೆಯನ್ನು ಹೈರಾಣಾಗಿಸಿದೆ. ಈ ಬಗ್ಗೆ ಈಗ ಕೇಂದ್ರದ ಗೃಹ ಸಚಿವಾಲಯದ ಅಧಿಕಾರಿಗಳು ವರದಿಯೊಂದನ್ನು ಬಿಡುಗಡೆ ಮಾಡಿದ್ದಾರೆ.

ವರದಿ ಪ್ರಕಾರ, ದೇಶದಲ್ಲಿ ಈ ಬಾರಿಯ ಅತಿವೃಷ್ಟಿಯಿಂದಾಗಿ 22 ರಾಜ್ಯಗಳ 25 ಲಕ್ಷಕ್ಕೂ ಹೆಚ್ಚು ಜನತೆ ಸಂತ್ರಸ್ತರಾಗಿದ್ದಾರೆ. ಒಟ್ಟು 21,00 ಜನ ಬಲಿಯಾಗಿದ್ದು, 46 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಿದೆ. ಮಳೆ, ಪ್ರವಾಹ, ಭೂಕುಸಿತದ ಪರಿಣಾಮ ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಅಂದರೆ 399 ಮಂದಿ ಅಸುನೀಗಿದ್ದಾರೆ. ಎರಡನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ, ಇಲ್ಲಿ 227ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರವಾಹದಿಂದ ದೇಶದ 357 ಜಿಲ್ಲೆಗಳು ತತ್ತರ

ಮಳೆ, ನೆರೆ, ಭೂಕುಸಿತದ ಪರಿಣಾಮ ದೇಶದ 357 ಜಿಲ್ಲೆಗಳು ತತ್ತರಿಸಿವೆ. 738 ಜನರು ಗಾಯಗೊಂಡಿದ್ದಾರೆ. 20,000ಕ್ಕೂ ಹೆಚ್ಚು ಪಶು-ಪಕ್ಷಿಗಳು ಬಲಿಯಾಗಿವೆ. ಮಳೆ ಮತ್ತು ನೆರೆಯಿಂದ 1.09 ಲಕ್ಷ ಮನೆಗಳು ಸಂಪೂರ್ಣವಾಗಿ ಕುಸಿಯುವ ಹಂತ ತಲುಪಿವೆ. 2.05 ಲಕ್ಷ ಮನೆಗಳಿಗೆ ಹಾನಿಯಾಗಿದೆ. 14.14 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶವಾಗಿದೆ. ಮಾನ್ಸೂನ್ ನಿಂದಾಗಿ 2,120 ಮಂದಿ ಜೀವ ಕಳೆದುಕೊಂಡಿದ್ದಾರೆ. ಅಲ್ಲದೇ 1994ರ ನಂತರ ಅತಿಹೆಚ್ಚು ಮಳೆಯಾಗಿದ್ದು ಈ ಬಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯವಾರು ಹಾನಿ :

ಮಹಾರಾಷ್ಟ್ರ: ಇಲ್ಲಿನ 22 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಒಟ್ಟು 399 ಮಂದಿ ಬಲಿಯಾಗಿದ್ದಾರೆ. 7.19 ಲಕ್ಷ ಜನತೆ 305 ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ: ಇಲ್ಲಿನ 22 ಜಿಲ್ಲೆಗಳು ಮಳೆ ಮತ್ತು ಪ್ರವಾಹಕ್ಕೀಡಾಗಿವೆ. ಒಟ್ಟು 227 ಮಂದಿ ಮೃತಪಟ್ಟಿದ್ದು, 37 ಮಂದಿ ಗಾಯಗೊಂಡಿದ್ದು, 4 ಮಂದಿ ನಾಪತ್ತೆಯಾಗಿದ್ದಾರೆ. 43,433 ಸಂತ್ರಸ್ತರು 280 ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಬಿಹಾರ: ಇಲ್ಲಿನ 28 ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿವೆ. 166 ಮಂದಿ ಜೀವ ಕಳೆದುಕೊಂಡಿದ್ದಾರೆ. 1.96 ಲಕ್ಷ ಸಂತ್ರಸ್ತರು 235 ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ.

ಮಧ್ಯಪ್ರದೇಶ: ಇಲ್ಲಿನ 38 ಜಿಲ್ಲೆಗಳು ಪ್ರವಾಹದಿಂದ ನಲುಗಿವೆ. 182 ಮಂದಿ ಬಲಿಯಾಗಿದ್ದಾರೆ. 38 ಮಂದಿ ಗಾಯಗೊಂಡಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ. 32, 996 ಸಂತ್ರಸ್ತರು 98 ಪುನರ್ವಸತಿ ಕೇಂದ್ರಗಳಲ್ಲಿದ್ದಾರೆ.

ಕೇರಳ: ಇಲ್ಲಿನ 13 ಜಿಲ್ಲೆಗಳು ಮಳೆ, ಪ್ರವಾಹಕ್ಕೆ ತುತ್ತಾಗಿವೆ. 181 ಮಂದಿ ಬಲಿಯಾಗಿದ್ದು, 72 ಮಂದಿ ಗಾಯಗೊಂಡಿದ್ದಾರೆ. 15 ಮಂದಿ ಕಣ್ಮರೆಯಾಗಿದ್ದಾರೆ. 4.46 ಲಕ್ಷ ಸಂತ್ರಸ್ತರು 2,227 ಪುನರ್ವಸತಿ ಕೇಂದ್ರಗಳಲ್ಲಿ ಜೀವನ ನಡೆಸುತ್ತಿದ್ದಾರೆ.

ಕರ್ನಾಟಕ: ಇಲ್ಲಿನ 13 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. 106 ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದಾರೆ. 2.48 ಲಕ್ಷ ಸಂತ್ರಸ್ತರು 3,233 ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ.

ಗುಜರಾತ್: ಇಲ್ಲಿನ 22 ಜಿಲ್ಲೆಗಳು ಅತಿವೃಷ್ಟಿ ಸಂಕಷ್ಟಕ್ಕೀಡಾಗಿವೆ. 169 ಮಂದಿ ಬಲಿಯಾಗಿದ್ದು, 17 ಮಂದಿ ಗಾಯಗೊಂಡಿದ್ದಾರೆ. 17,783 ಸಂತ್ರಸ್ತರು 102 ಮಂದಿ ಪುನರ್ವಸತಿ ಕೇಂದ್ರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ.

ಅಸ್ಸಾಂ: ಇಲ್ಲಿನ 32 ಜಿಲ್ಲೆಗಳು ನೆರೆಗೆ ತುತ್ತಾಗಿವೆ. 97 ಮಂದಿ ಬಲಿಯಾಗಿದ್ದಾರೆ. 5.35 ಲಕ್ಷ ಸಂತ್ರಸ್ತರು 1,357 ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...