Homeಮುಖಪುಟದೇಶದಲ್ಲಿ ಪ್ರವಾಹಕ್ಕೆ 22 ರಾಜ್ಯಗಳು ತತ್ತರ: ಎಲ್ಲೆಲ್ಲಿ ಎಷ್ಟೆಷ್ಟು ಹಾನಿ? ಇಲ್ಲಿದೆ ಫುಲ್ ಡಿಟೈಲ್ಸ್‌

ದೇಶದಲ್ಲಿ ಪ್ರವಾಹಕ್ಕೆ 22 ರಾಜ್ಯಗಳು ತತ್ತರ: ಎಲ್ಲೆಲ್ಲಿ ಎಷ್ಟೆಷ್ಟು ಹಾನಿ? ಇಲ್ಲಿದೆ ಫುಲ್ ಡಿಟೈಲ್ಸ್‌

- Advertisement -
- Advertisement -

ದೇಶದ ಮುಕ್ಕಾಲು ಭಾಗದ ಜನತೆ ಮಳೆ ಮತ್ತು ಪ್ರವಾಹದಿಂದ ನಲುಗಿದ್ದಾರೆ. ವಿವಿಧ ರಾಜ್ಯಗಳಲ್ಲಿ ಉಂಟಾದ ಅತಿವೃಷ್ಟಿ ಮತ್ತು ಪ್ರಾಕೃತಿಕ ವಿಕೋಪ ಜನತೆಯನ್ನು ಹೈರಾಣಾಗಿಸಿದೆ. ಈ ಬಗ್ಗೆ ಈಗ ಕೇಂದ್ರದ ಗೃಹ ಸಚಿವಾಲಯದ ಅಧಿಕಾರಿಗಳು ವರದಿಯೊಂದನ್ನು ಬಿಡುಗಡೆ ಮಾಡಿದ್ದಾರೆ.

ವರದಿ ಪ್ರಕಾರ, ದೇಶದಲ್ಲಿ ಈ ಬಾರಿಯ ಅತಿವೃಷ್ಟಿಯಿಂದಾಗಿ 22 ರಾಜ್ಯಗಳ 25 ಲಕ್ಷಕ್ಕೂ ಹೆಚ್ಚು ಜನತೆ ಸಂತ್ರಸ್ತರಾಗಿದ್ದಾರೆ. ಒಟ್ಟು 21,00 ಜನ ಬಲಿಯಾಗಿದ್ದು, 46 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಿದೆ. ಮಳೆ, ಪ್ರವಾಹ, ಭೂಕುಸಿತದ ಪರಿಣಾಮ ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಅಂದರೆ 399 ಮಂದಿ ಅಸುನೀಗಿದ್ದಾರೆ. ಎರಡನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ, ಇಲ್ಲಿ 227ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರವಾಹದಿಂದ ದೇಶದ 357 ಜಿಲ್ಲೆಗಳು ತತ್ತರ

ಮಳೆ, ನೆರೆ, ಭೂಕುಸಿತದ ಪರಿಣಾಮ ದೇಶದ 357 ಜಿಲ್ಲೆಗಳು ತತ್ತರಿಸಿವೆ. 738 ಜನರು ಗಾಯಗೊಂಡಿದ್ದಾರೆ. 20,000ಕ್ಕೂ ಹೆಚ್ಚು ಪಶು-ಪಕ್ಷಿಗಳು ಬಲಿಯಾಗಿವೆ. ಮಳೆ ಮತ್ತು ನೆರೆಯಿಂದ 1.09 ಲಕ್ಷ ಮನೆಗಳು ಸಂಪೂರ್ಣವಾಗಿ ಕುಸಿಯುವ ಹಂತ ತಲುಪಿವೆ. 2.05 ಲಕ್ಷ ಮನೆಗಳಿಗೆ ಹಾನಿಯಾಗಿದೆ. 14.14 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶವಾಗಿದೆ. ಮಾನ್ಸೂನ್ ನಿಂದಾಗಿ 2,120 ಮಂದಿ ಜೀವ ಕಳೆದುಕೊಂಡಿದ್ದಾರೆ. ಅಲ್ಲದೇ 1994ರ ನಂತರ ಅತಿಹೆಚ್ಚು ಮಳೆಯಾಗಿದ್ದು ಈ ಬಾರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯವಾರು ಹಾನಿ :

ಮಹಾರಾಷ್ಟ್ರ: ಇಲ್ಲಿನ 22 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. ಒಟ್ಟು 399 ಮಂದಿ ಬಲಿಯಾಗಿದ್ದಾರೆ. 7.19 ಲಕ್ಷ ಜನತೆ 305 ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಪಶ್ಚಿಮ ಬಂಗಾಳ: ಇಲ್ಲಿನ 22 ಜಿಲ್ಲೆಗಳು ಮಳೆ ಮತ್ತು ಪ್ರವಾಹಕ್ಕೀಡಾಗಿವೆ. ಒಟ್ಟು 227 ಮಂದಿ ಮೃತಪಟ್ಟಿದ್ದು, 37 ಮಂದಿ ಗಾಯಗೊಂಡಿದ್ದು, 4 ಮಂದಿ ನಾಪತ್ತೆಯಾಗಿದ್ದಾರೆ. 43,433 ಸಂತ್ರಸ್ತರು 280 ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಬಿಹಾರ: ಇಲ್ಲಿನ 28 ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿವೆ. 166 ಮಂದಿ ಜೀವ ಕಳೆದುಕೊಂಡಿದ್ದಾರೆ. 1.96 ಲಕ್ಷ ಸಂತ್ರಸ್ತರು 235 ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ.

ಮಧ್ಯಪ್ರದೇಶ: ಇಲ್ಲಿನ 38 ಜಿಲ್ಲೆಗಳು ಪ್ರವಾಹದಿಂದ ನಲುಗಿವೆ. 182 ಮಂದಿ ಬಲಿಯಾಗಿದ್ದಾರೆ. 38 ಮಂದಿ ಗಾಯಗೊಂಡಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ. 32, 996 ಸಂತ್ರಸ್ತರು 98 ಪುನರ್ವಸತಿ ಕೇಂದ್ರಗಳಲ್ಲಿದ್ದಾರೆ.

ಕೇರಳ: ಇಲ್ಲಿನ 13 ಜಿಲ್ಲೆಗಳು ಮಳೆ, ಪ್ರವಾಹಕ್ಕೆ ತುತ್ತಾಗಿವೆ. 181 ಮಂದಿ ಬಲಿಯಾಗಿದ್ದು, 72 ಮಂದಿ ಗಾಯಗೊಂಡಿದ್ದಾರೆ. 15 ಮಂದಿ ಕಣ್ಮರೆಯಾಗಿದ್ದಾರೆ. 4.46 ಲಕ್ಷ ಸಂತ್ರಸ್ತರು 2,227 ಪುನರ್ವಸತಿ ಕೇಂದ್ರಗಳಲ್ಲಿ ಜೀವನ ನಡೆಸುತ್ತಿದ್ದಾರೆ.

ಕರ್ನಾಟಕ: ಇಲ್ಲಿನ 13 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ. 106 ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದಾರೆ. 2.48 ಲಕ್ಷ ಸಂತ್ರಸ್ತರು 3,233 ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ.

ಗುಜರಾತ್: ಇಲ್ಲಿನ 22 ಜಿಲ್ಲೆಗಳು ಅತಿವೃಷ್ಟಿ ಸಂಕಷ್ಟಕ್ಕೀಡಾಗಿವೆ. 169 ಮಂದಿ ಬಲಿಯಾಗಿದ್ದು, 17 ಮಂದಿ ಗಾಯಗೊಂಡಿದ್ದಾರೆ. 17,783 ಸಂತ್ರಸ್ತರು 102 ಮಂದಿ ಪುನರ್ವಸತಿ ಕೇಂದ್ರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ.

ಅಸ್ಸಾಂ: ಇಲ್ಲಿನ 32 ಜಿಲ್ಲೆಗಳು ನೆರೆಗೆ ತುತ್ತಾಗಿವೆ. 97 ಮಂದಿ ಬಲಿಯಾಗಿದ್ದಾರೆ. 5.35 ಲಕ್ಷ ಸಂತ್ರಸ್ತರು 1,357 ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...