Homeಡೇಟಾ ಖೋಲಿಭಾರತದಾಗ ಬರೇ 40,000 ವೆಂಟಿಲೇಟರ ಅವ. ಅಂದ್ರ ಕೊರೊನಾ ಬಂದ್ರ ಅಷ್ಟು ಜನ ಮಾತ್ರ ಉಳಿತಾರ?

ಭಾರತದಾಗ ಬರೇ 40,000 ವೆಂಟಿಲೇಟರ ಅವ. ಅಂದ್ರ ಕೊರೊನಾ ಬಂದ್ರ ಅಷ್ಟು ಜನ ಮಾತ್ರ ಉಳಿತಾರ?

ಮತ್ತ ಈಗ ನಮ್ಮ ಎದುರಿಗೆ ಇರೋ ಬಕಾಸುರನ್ನ ನಾವು ಸೋಲಿಸಲಿಕ್ಕೆ ಸಾಧ್ಯ ಇಲ್ಲ. ಅವನಿಗೆ ದಿನಾ ಒಂದು ಬಲಿ ಕೊಟ್ಟು ನಾವು ಸಾದು ಮಾಡಿ ಇಟಗೋಬೇಕು ಅಂತ ಅಂದು ಕೊಂಡಿದ್ದರು. ಅವರು ಕಷ್ಟ ಇರೋ ಪರಿಹಾರಗಳನ್ನು ಗಣನೆಗೆ ತೊಗೋಳಿಲ್ಲ. ಸರಳ ಹಾದಿ ಹಿಡದರು.

- Advertisement -
- Advertisement -

ಕೈಲೆ ಆಗಲಾರದಾಗ ಕಥಿ ಹೇಳಿದರೂ ಅನ್ನೋ ಹಂಗ ನಮ್ಮ ಜಾವಡೇಕರ ಅಣ್ಣಾರು ಠೀವಿ ಮ್ಯಾಲೆ ರಾಮಾಯಣ- ಮಹಾಭಾರತ, ಶಕ್ತಿಮಾನು- ವ್ಯೋಮಕೇಶ ಬಕ್ಷಿ ತೋರಸಾಕ ಹತ್ಯಾರು. ಯಾರೂ ಎಲ್ಯೂ ಹೊರಗ ಹೋಗಬ್ಯಾಡ್ರಿ, ಸುಮ್ಮನೆ ಒಂದ ಕಡೆ ಕುತಗೊಂಡು ನೋಡರಿ ಅಂತ ಹೇಳ್ಯಾರು. ಆ ರಾಮಾಯಣದಾಗ ಒಂದು ಕಥಿ ಬರತದ. ಲಕ್ಷ್ಮಣನ ಮ್ಯಾಲೆ ರಾವಣನ ಮಗಾ ಮೇಘನಾಥ ಶಿವನ ಪ್ರಸಾದವಾದ ಪಾಶುಪತ ಅಸ್ತ್ರವನ್ನು ಬಿಡತಾನ. ಅಲ್ಲಿ ತನಕಾ ಎಲ್ಲಾ ಅಸ್ತ್ರಗಳನ್ನ ಎದುರಿಸಿದ ಲಕ್ಷ್ಮಣ ಪಾಶುಪತಕ್ಕ ಮಾತ್ರ ವಿರೋಧ ಮಾಡೋದಿಲ್ಲ. ಅದಕ್ಕ ಶಿರಸಾವಹಿಸಿ ನಮಸ್ಕಾರ ಮಾಡತಾನ. ಅದು ಅವನ ಸುತ್ತ ಹಾಸಿ ಹೋಗಿ ಬಿಡತದ.

ಅವನಿಗೆ ಏನೂ ತೊಂದರೆ ಆಗಂಗಿಲ್ಲ.

ಈ ದುರಿತ ಕಾಲದಾಗ ತ್ರೇತಾಯುಗದ ನೆನಪು ಯಾಕ ಆತಪಾ ಅಂದರ ಈ ಕೊರೊನಾಸುರನ ವಿರುದ್ಧ ನಾವು ಇಟ್ಟಿರೋ ಎಲ್ಲಾ ಹೆಜ್ಜೆಗಳಿಗಿಂತ ಮೀರಿದ್ದು ಒಂದು ಹೆಜ್ಜೆ ಐತಿ. ಅದು ʻಹಿಂಡು ನಿರೋಧʼ. ಈಗಿನ ಕೆಲವು ವಿಜ್ಞಾನಿಗಳು ʻಹೆರ್ಡ ಇಮ್ಯುನಿಟಿʼ ಅಥವಾ ʻಹಿಂಡು ನಿರೋಧʼವೇ ಕೊರೋನಾ ಹೋರಾಟದ ಸುಲಭ ಉಪಾಯ ಅಂತ ಹೇಳಿಕೊಂಡು ಓಡಾಡಲಿಕ್ಕೆ ಹತ್ಯಾರ. ಏನು ಇದು ಹಿಂಡು ನಿರೋಧ?

ಈ ಥಿಯರಿ ಪ್ರಕಾರ ಒಂದು ದೇಶದ 10 ರಿಂದ 40 ಶೇಕಡಾ ಜನರಿಗೆ ಒಂದು ರೋಗದ ಸೋಂಕು ತಗಲಿದರ, ಅವರೂ ಸೇರಿದಂಗ ಇಡೀ ದೇಶ ಗುಣ ಆಗತದ. ಈ ಪ್ರಕ್ರಿಯಾದಾಗ ಕೆಲವರು ಸಾಯಬಹುದು. ಅವರನ್ನ ಕೆರೆಗೆ ಹಾರಕ್ಕ ನಾವು ಬಲಿ ಕೊಟ್ಟ ಸಣ್ಣ ಸೊಸೆ ಅಂತ ತಿಳಕೊಂಡು ಸುಮ್ಮನೇ ಇರಬೇಕು. ಅದನ್ನ ಬಿಟ್ಟು ಈ ಪೀಡೆಗೆ ಬ್ಯಾರೆ ಔಷಧ ಇಲ್ಲ, ಅಂತ ಅವರ ವಾದ.

ಹಂಗ ನೋಡಿದರ ಯಾವುದೇ ವೈರಸ್ಸಿಗೆ ಔಷಧ ಅನ್ನೋದು ಇಲ್ಲ. ವರ್ಷದಾಗ ಮೂರು ಸಲಾ ಬರೋ ನೆಗಡಿಗೂ ಇಲ್ಲ, ಹಣೆಬರಾ ಕೆಟ್ಟಾಗ ಬರೋ ಕರೋನಾಕ್ಕೂ ಇಲ್ಲ.

ಅದರ ವಿರುದ್ಧ ಔಷಧ ಮಾಡಲಿಕ್ಕೆ ಯಾಕ ಬರಂಗಿಲ್ಲ ಅಂದರ ಅದು ತನ್ನ ರೂಪ ತಾನು ಹಗಲೆಲ್ಲಾ ಬದಲಿ ಮಾಡಿಕೋತದ. ಟ್ರಾನ್ಸ್ ಫಾರ್ಮರ್ ಪಿಕ್ಚರನ್ಯಾಗ ಕಾರು ಹೋಗಿ ರೋಬೋಟ್ ಆದಂಗ. ಒಂದು ರೂಪಕ್ಕ ಔಷಧ ಕಂಡು ಹಿಡದರ ಅದು ಬ್ಯಾರೆ ರೂಪ ಧರಿಸಿ ಔಷಧವನ್ನ ನಿರುಪಯೋಗಿ ಮಾಡಿ ಬಿಡತದ.

ಆದರ ವೈರಸ್ಸಿಗೆ ಒಂದು ವರ್ಷದ ನಿರೋಧಕ ಶಕ್ತಿ ಕೊಡೋ ಹಂತಾ ಲಸಿಕೆ ತಯಾರಿಸಬಹುದು. ಲಸಿಕೆ ಅಂದರ ಅದೇ ವೈರಸ್ಸಿನ ನಿರುಪದ್ರವಿ ರೂಪ. ಎಲ್ಲಾರಿಗೂ ಸಣ್ಣ ಪ್ರಮಾಣದಾಗ ಅದೇ ವೈರಸ್ಸಿನ ನಿರುಪದ್ರವಿ ರೂಪವನ್ನು ಕೊಟ್ಟರ ಅವರ ದೇಹ ಅದರ ವಿರುದ್ಧ ನಿರೋಧಕ ಶಕ್ತಿ ಬೆಳಿಸಿಗೋತದ. ಢಿಪ್ತೀರಿಯಾದಂತ ಲಸಿಕೆಯಿಂದ ರೋಗಕ್ಕ ಜೀವನ ಪೂರ್ತಿ ನಿರೋಧಕ ಶಕ್ತಿ ಬರತದ. ವೈರಸ್ಸಿನ ಲಸಿಕೆಗಳಿಂದ ಒಂದು ವರ್ಷ- ಎರಡು ವರ್ಷದ ವರೆಗೆ ನಿರೋಧಕ ಶಕ್ತಿ ಬರತದ.

ಹಿಂಡು ನಿರೋಧದಾಗ ಏನು ಆಗತದ ಅಂದರ ಒಬ್ಬ ಮನುಷ್ಯನ ದೇಹದಿಂದ ಹೊರಗ ಬಂದ ವೈರಸ್ಸು ಇನ್ನೊಬ್ಬನ ದೇಹದಾಗ ಹೋಗತದ. ಹಂಗ ಆಗೋವಾಗ ಮೊದಲಿನವನ ದೇಹದ ಜೊತೆ ಜಗಳ ಆಡಿ, ತನ್ನ ಶಕ್ತಿ ಕಳಕೊಂಡು ದುರ್ಬಲ ಆಗಿರತದ. ಹಂಗ ಒಬ್ಬರಿಂದ ಒಬ್ಬರಿಗೆ ಹೋಗಿ ಹೋಗಿ ಕಡೀಕೆ ಅದು ನಮ್ಮ ದೇಹದಾಗ ಇದ್ದರೂ ಸಹ ನಮಗ ಏನೂ ಮಾಡಲಾರದ ಹಂಗ ಆಗಿ ಬಿಡತದ. ಆಗ ಅದಕ್ಕ ಯಾವ ಲಸಿಕೆನೂ ಬ್ಯಾಡ. ಇಡೀ ಸಮಾಜ ಅದರ ವಿರುದ್ಧ ಸ್ವಾಭಾವಿಕ ನಿರೋಧಕ ಶಕ್ತಿ ಬೆಳಿಸಕೊತದ.

ಇಂಥಾ ಪ್ರಯೋಗ ಈಗಾಗಲೇ ನಡದು ಬಿಟ್ಟಾವು . ಇಂಗ್ಲಂಡದಾಗ ರೋಗ ಹರಡಿದರ ಚಿಂತಿಲ್ಲ. ಹಬ್ಬಿದವರಿಗೆಲ್ಲ ಔಷಧಿ ಸಿಗಬೇಕು, ಸಿಗೋಹಂಗ ನಾವು ಮಾಡತೇವಿ ಅಂತ ಅವರು ಅಂತಾರು. ಕೇವಲ ಮುಂಜಾಗೃತೆ ಕ್ರಮ ಕೈಕೊಳ್ಳಲಿಕ್ಕೆ ಹತ್ಯಾರು.

ನೆದರಲ್ಯಾಂಡ್ಸದವರು ʻಬಾರದು ಬಪ್ಪುದು, ಬಪ್ಪುದು ತಪ್ಪುದುʼ ಅಂತ ಸುಮ್ಮನಿದ್ದು ಬಿಟ್ಟಾರ. ಎಷ್ಟು ಜನಾ ರೋಗಿಗಳಾದರೂ ಸರಿ ನಮ್ಮಲ್ಲೆ ಆಸ್ಪತ್ರೆ ಅದಾವು. ವೆಂಟಿಲೇಟರ ಅದಾವು. ನಾವು ಯಾರನ್ನೂ ಸಾಯಲಿಕ್ಕೆ ಬಿಡಂಗಿಲ್ಲ ಅಂತ ಹೇಳಿ ಸುಮ್ಮನೇ ಇದ್ದು ಬಿಟ್ಟಾರ.

ಆದರ ಭಾರತ ಹಿಂಗ ಮಾಡಲಿಕ್ಕೆ ಸಾಧ್ಯ ಅದ ಏನು? ನಮ್ಮ ಆರೋಗ್ಯ ವ್ಯವಸ್ಥೆ ಎಲ್ಲಾರನ್ನೂ ಕಾಳಜಿ ಮಾಡುವಂಥಾದ್ದು ಅದ ಏನು? ಒಂದು ನೂರಾ ಮೂವತ್ತು ಕೋಟಿ ಜನಸಂಖ್ಯೆಯ ಈ ದೇಶದಾಗ ಬರೇ 40,000 ವೆಂಟಿಲೇಟರ ಅವ ಅಂತ. ಮಹಾಮಹಿಮರ ಮೇಕಿನ್ ಇಂಡಿಯಾ ಆಗಲಿ, ಆಮದು – ರಫ್ತು ನೀತಿ ಆಗಲಿ ಅದನ್ನು ಹೆಚ್ಚು ಮಾಡಲಿಕ್ಕೆ ಆಗಿಲ್ಲ. ದೇಶದ ನಲವತ್ತು ಶೇಕಡಾ ಜನ ಅಂದರ ಸುಮಾರು 50 ಕೋಟಿ ಜನರಿಗೆ ಈ ರೋಗ ಬಂತಂತಂದರ ಏನು ಆಗಬಹುದು. ಈಗಿನ ಲೆಕ್ಕದಾಗ 100 ಜನರಿಗೆ ರೋಗ ಬಂದರ ಐದು ಜನ ಸಾಯತಾರ. ಆ ಲೆಕ್ಕದಾಗ ಸುಮಾರು 2.5 ಕೋಟಿ ಜನ ಸಾಯಬೇಕು. ಅದರಾಗ ಬರೇ 40,000 ಮಂದಿನ್ನ ನಾವು ಉಳಿಸಿಕೊಳ್ಳಬಹುದು. ಅದರಾಗ 25,000 ಶಾಸಕರು, ಅವರ ಕುಟುಂಬದವರು, 800 ಸಂಸತ್ತು ಸದಸ್ಯರು ಹಾಗೂ ಕುಟುಂಬದವರು, 6,000 ಐಎಎಸ್ಸು ಅಧಿಕಾರಿಗಳು ಹಾಗೂ ಅವರ ಸ್ಟೆನೋ- ಡ್ರೈವರುಗಳು ಇತ್ಯಾದಿಗಳನ್ನು ಬಿಟ್ಟರ ಉಳಿದವರಿಗೆ ಚಾನ್ಸು ಸಿಗಲಿಕ್ಕೆ ಇಲ್ಲ.

ಹಿಂಡು ನಿರೋಧದ ಹೆಸರಿನ್ಯಾಗ ನಾವು 2 ಕೋಟಿ, 40 ಲಕ್ಷ, 96 ಸಾವಿರ ಜನರನ್ನು ಕಳದು ಕೊಳ್ಳಲಿಕ್ಕೆ ತಯಾರಿದ್ದೇವೇನು? ಈ ಪ್ರಶ್ನೆ ಸರಳ, ಉತ್ತರ ಕಠಿಣ.

ರಾಮಾಯಣದಿಂದ ಶುರು ಮಾಡಿದ ಕಥಿ ಮಹಾಭಾರತದಿಂದ ಮುಗಸೋಣು. ಭಾರತದ ಅತಿ ಜನಪ್ರಿಯ ಅಡ್ಡಕತಿಯೊಳಗ ಒಂದು ಬಕಾಸುರನ ಕಥಿ. ಇದರಿಂದ ಕನ್ನಡ ಹಾಗೂ ಇತರ ಭಾಷಾದಾಗ ಗಾದಿ ಮಾತು ಶುರು ಆದವು. ಬಕಾಸುರನ ಗತೆ ತಿನ್ನೊದು, ಬಕಾಸುರನ ಹೊಟ್ಟಿಗೆ ಅರ್ಧಾ ರುಪಾಯಿ ಮಜ್ಜಿಗಿ, ಬಕಾಸುರನ ಹಸಿವು, ಇತ್ಯಾದಿ.

ಇದರಾಗ ಊರ ಹೊರಗಿನ ರಾಕ್ಷಸ ಬಂದು ಎಲ್ಲಾರನೂ ಒಂದ ಕಾಲಕ್ಕೆ ನಾಶ ಮಾಡಬಾರದು ಅಂತ ಹೇಳಿ ಅಲ್ಲಿನ ಜನ ಅವನ ಸಂಗ್ತೆ ಒಂದು ಒಪ್ಪಂದ ಮಾಡಿಕೊಂಡಿದ್ದರು. ಅದೇನಪಾ ಅಂದರ ದಿನಾ ಒಬ್ಬ ಮನುಷಾನ್ನ, ಒಂದು ಬಂಡಿ ಅನ್ನದ ಜೊತೆ ಆ ರಾಕ್ಷಸನಿಗೆ ತಿನ್ನಲಿಕ್ಕೆ ಕಳಸೋದು. ಅವಾ ಒಂದು ವರ್ಷದಾಗ 365 ಜನರನ್ನ ತಿನಕೊಂಡು ಸುಮ್ಮನೇ ಇದ್ದ. ಆ ಊರಿನ ಕಡೆ ವಾಕಿಂಗ್ ಬರಲಿಲ್ಲ. ಕಡೀಕೆ ಒಂದು ದಿವಸ ಕುಂತಿ ಹಾಗೂ ಅಕಿ ಮಕ್ಕಳು ಆ ಊರಿಗೆ ಅಜ್ಞಾತವಾಸಕ್ಕ ಬಂದರು. ಆ ಕಥೀ ಕೇಳಿದರು. ತಾಯಿಗೆ ತಕ್ಕ ಮಗ ಭೀಮ ಗಿನೀ ಪಿಗ್ ಆಗಲಿಕ್ಕೆ ಒಪ್ಪಿದ. ಬಕಾಸುರನ ಕಥಿ ಮುಗಸಿದ.

ಮೂಲ ಭಾರತದಾಗ ಇದು ಬರೇ ಒಂದು ಪುಟದಷ್ಟು ಸಣ್ಣ ಕಥಿ. ಆದರ ಅದರಾಗ ಭಾಳ ದೊಡ್ಡ ದೊಡ್ಡ ಪಾಠ ಅದಾವು. ಬಕಾಸುರನಿಗೆ ಎಲ್ಲಾರನ್ನೂ ಒಂದೇ ಕಾಲಕ್ಕ ನಾಶ ಮಾಡಲಿಕ್ಕೆ ಬರತಿತ್ತೋ ಇಲ್ಲೋ, ಆದರ ಜನಾ ಹಂಗ ತಿಳಕೊಂಡಿದ್ದರು. ಇನ್ನು ತಮ್ಮ ಊರಾಗ ಇರೋ ಕೆಲವರನ್ನು ಕೊಂದು ಉಳಿದವರು ಬದಕೋದು ಎನು ತಪ್ಪಲ್ಲ ಅಂತ ಅವರು ನಂಬಿದ್ದರು. ಅದರ ಬಗ್ಗೆ ಅವರಿಗೆ ನೈತಿಕ ಹಿಂಜರಿಕೆ ಇರಲಿಲ್ಲ. ಮೊನ್ನೆ ನಮ್ಮ ಬಿಳೇಮನಿ ಟ್ರಂಪಣ್ಣನವರ್ ಅವರು ಇಂಥಾದ ಮಾತು ಆಡ್ಯಾರ. ಕೆಲವು ಜನ ಸಾಯಬಹುದು, ಆದರ ವಿಶ್ವದ ಆರ್ಥಿಕ ಸ್ಥಿತಿ ಅಮೇರಿಕದ ಮ್ಯಾಲೆ ನಿಂತದ. ನಮ್ಮ ವ್ಯವಸ್ಥೆ ಕುಸಿದು ಬಿದ್ದರ ಇಡೀ ಜಗತ್ತು ಕುಸಿತದ, ಇತ್ಯಾದಿ, ಇತ್ಯಾದಿ.

ಮತ್ತ ಈಗ ನಮ್ಮ ಎದುರಿಗೆ ಇರೋ ಬಕಾಸುರನ್ನ ನಾವು ಸೋಲಿಸಲಿಕ್ಕೆ ಸಾಧ್ಯ ಇಲ್ಲ. ಅವನಿಗೆ ದಿನಾ ಒಂದು ಬಲಿ ಕೊಟ್ಟು ನಾವು ಸಾದು ಮಾಡಿ ಇಟಗೋಬೇಕು ಅಂತ ಅಂದು ಕೊಂಡಿದ್ದರು. ಅವರು ಕಷ್ಟ ಇರೋ ಪರಿಹಾರಗಳನ್ನು ಗಣನೆಗೆ ತೊಗೋಳಿಲ್ಲ. ಸರಳ ಹಾದಿ ಹಿಡದರು. ಇವತ್ತಿನ ನಮ್ಮ ದೇಶದ ಹಾಗೂ ಇತರ ದೇಶದ ನಾಯಕರು ಭಾಳ ಜನ ಹಿಂದ ಇದ್ದಾರ. ಅವರಿಗೆ ಸುಲಭವಾದ ಪರಿಹಾರ ಕಾಣತಾವ ಹೊರತು ಕಷ್ಟದ್ದವು ಕಾಣಂಗಿಲ್ಲ.

ಇವುಕುರ ಜೊತೆಗೆ ಚಾಣಕ್ಯ ಅಂತ ಇನ್ನೊಂದು ಸೀರಯಲ್ಲು ಬರತಿತ್ತು. ಅದರಾಗ ಒಂದು ಮಂತ್ರ ಇತ್ತು. ಸರ್ವೇ ಭವಂತು ಸುಖಿನಹ – ಸರ್ವೇ ಸಂತು ನಿರಾಮಯ ಅಂತ. ಅಂದರ ಸರ್ವೇ ಇಲಾಖೆ ಅವರು ಸುಖವಾಗಿರಲಿ, ನಿರೋಗಿಯಾಗಿರಲಿ ಅಂತ ಅಲ್ಲ. ಎಲ್ಲರೂ ಸುಖವಾಗಿರಲಿ, ಎಲ್ಲರೂ ನಿರೋಗಿಯಾಗಿರಲಿ ಅಂತ.

ನಮ್ಮ ಅಜ್ಜಾ- ಅಜ್ಜಿ ಕಡೆ ಕೇಳಿದ ಕಥಿ ನಾವು ಮರತಿರಬಹುದು. ಕನಿಷ್ಟ ಈಗ ಡೀಡೀ ಡಿಕ್ಕಿನ ಮಹಾಭಾರತ-ರಾಮಾಯಣ ನೋಡಿ ಚಾಣಕ್ಯನೂ ನೆನಪಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಮರಕಜ ಬಗ್ಗೆ ಬರಿರಿ. ಆವಾಗ ನಿಮ್ಮ ಪತ್ರಿಕೆ ನಿಸ್ಸಂದೇಹವಾಗಿ ಜಾತಾತಿತ ಪತ್ರಿಕೆ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...