Homeಅಂತರಾಷ್ಟ್ರೀಯಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

ಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

- Advertisement -
- Advertisement -

ಮೃತ ದೇಹಗಳನ್ನು ಸಾಗಿಸುತ್ತಿರುವ ಟ್ರಕ್‌ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ನಿಮ್ಮ ಸ್ವಂತ ಮನೆಗಳಲ್ಲಿ ಇರಿ, ಇದು ಪ್ರಧಾನ ಮಂತ್ರಿಗಳ ನಿರ್ಧಾರವಲ್ಲ. ಈ ನಿರ್ಧಾರ ಸ್ವಭಾವತಃ. ಈ ನಿರ್ಧಾರವನ್ನು ಒಪ್ಪಿಕೊಳ್ಳದ ದೇಶಗಳಲ್ಲಿ ಏನಾಗಿದೆ ಎಂದು ನೋಡಿ. ಇರಾನ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಶವಗಳನ್ನು ಆಸ್ಪತ್ರೆ ಇಂದ ಸಾಗಿರುತ್ತಿರುವ ವಿಡಿಯೋ ಇದು. ಇದನ್ನು ಮನೆಯಲ್ಲಿ ಉಳಿಯಲು ಇಷ್ಟಪಡದವರೊಂದಿಗೆ ಹಂಚಿಕೊಳ್ಳಿ.” ಎಂದು ವಿಡಿಯೋ ಜೊತೆಗೆ ಮಾಹಿತಿ ಓಡಾಡುತ್ತಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ.

 

2019 ರಲ್ಲಿ ಮೆಕ್ಕಾದಲ್ಲಿ ಹಜ್‌ ಸಂದರ್ಭದಲ್ಲಿನ ವಿಡಿಯೋ 

ಈ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತನ್ನು ತಿಳಿಯಲು ಆಲ್ಟ್‌ ನ್ಯೂಸ್‌ ವಿಡಿಯೋದ ಮೂಲವನ್ನು ಹುಡುಕಿ ಹೊರಟಿದೆ. ಹಲವಾರು ಜನರು ವಿವಿಧ ಸಂದರ್ಭಗಳಲ್ಲಿ ಈ ವಿಡಿಯೋವನ್ನು ಬಳಸಿದ್ದಾರೆ. ಆದರೆ, ಆ ವಿಡಿಯೋ 2019ರ ಆಗಸ್ಟ್‌ 16ರಂದು ಯೂಟ್ಯೂಬ್‌ ಬಳಕೆದಾರ ಗುಲಾಮ್ ಅಬ್ಬಾಸ್‌ ಎಂಬುವವರು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ವಿಡಿಯೋ ಅದು ಎಂಬುದನ್ನು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್‌ ಮೂಲಕ ಕಂಡುಹಿಡಿದಿದೆ. ಆ ವಿಡಿಯೋದ ಹೆಡ್‌ಲೈನ್‌ “ಸೌದಿ ಅರೇಬಿಯಾದ ಮೆಕ್ಕಾದಲ್ಲಿ 2019ರನಡೆದ ಹಜ್‌ ಸಂದರ್ಭದಲ್ಲಿ 58 ಸಾವು” ಎಂದು ಬರೆದು ಅಪ್‌ಲೋಡ್‌  ಮಾಡಲಾಗಿದೆ.

2019 ರಲ್ಲಿ, ಹಜ್ ತೀರ್ಥಯಾತ್ರೆ ಆಗಸ್ಟ್ 9 ರ ಶುಕ್ರವಾರ ಸಂಜೆ ಪ್ರಾರಂಭವಾಯಿತು ಮತ್ತು ಆಗಸ್ಟ್ 14 ರ ಬುಧವಾರ ಸಂಜೆ ಕೊನೆಗೊಂಡಿತು. ಆಗಸ್ಟ್ 14 ರಂದು ಸಾವಿನ ಸಂಖ್ಯೆ 39 ಎಂದು ವರದಿಯಾಗಿದೆ. ಪ್ರತಿ ವರ್ಷ ಮೆಕ್ಕಾಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮೆಕ್ಕಾದ ಬಿಸಿಯ ತಾಪವನ್ನು ವಯಸ್ಸಾದವರು ಹಜ್ ಸಮಯದಲ್ಲಿ ತಡೆದುಕೊಳ್ಳಲಾದರೆ ಸುಸ್ತಾಗುತ್ತಾರೆ. ಅವರಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹೆಚ್ಚಿನ ಜನಸಂದಣಿಯಿಂದಾಗಿ ಸ್ಟ್ಯಾಂಪ್‌ಡೆಡ್‌ಗಳು ಸಹ ಸಾಮಾನ್ಯವಾಗಿದೆ.

ಆ ಸಂದರ್ಭದಲ್ಲಿ ಸಾವಿಗೀಡಾದವರನ್ನು ಸಾಗಿಸುತ್ತಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೇ ವಿಡಿಯೋವನ್ನು ಕೆಲವರು ಜನರಲ್ಲಿ ಭಯ ಹುಟ್ಟಿಸಲು ಬಳಸಿಕೊಂಡಿದ್ದಾರೆ.

ಅಂದಹಾಗೆ, ಈ ವಿಡಿಯೋ 2019ರ ಆಗಸ್ಟ್‌ ತಿಂಗಳಿನಲ್ಲಿಯೇ ಅಪ್‌ಲೋಡ್‌ ಆಗಿದ್ದು, ಕೊರೊನಾ ವೈರಸ್‌ನ ಮೊದಲ ಪ್ರಕರಣವು 2019ರ ನವೆಂಬರ್‌ನಲ್ಲಿ ಚೀನಾದಲ್ಲಿ ವರದಿಯಾಗಿದೆ. ಹಾಗಾಗ ಇದು ಕೊರೊನಾಗೆ ತುತ್ತಾದವರ ಶವಗಳನ್ನು ಸಾಗಿಸುತ್ತಿರುವ ವಿಡಿಯೋ ಅಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...