Homeಅಂತರಾಷ್ಟ್ರೀಯಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

ಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

- Advertisement -
- Advertisement -

ಮೃತ ದೇಹಗಳನ್ನು ಸಾಗಿಸುತ್ತಿರುವ ಟ್ರಕ್‌ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ನಿಮ್ಮ ಸ್ವಂತ ಮನೆಗಳಲ್ಲಿ ಇರಿ, ಇದು ಪ್ರಧಾನ ಮಂತ್ರಿಗಳ ನಿರ್ಧಾರವಲ್ಲ. ಈ ನಿರ್ಧಾರ ಸ್ವಭಾವತಃ. ಈ ನಿರ್ಧಾರವನ್ನು ಒಪ್ಪಿಕೊಳ್ಳದ ದೇಶಗಳಲ್ಲಿ ಏನಾಗಿದೆ ಎಂದು ನೋಡಿ. ಇರಾನ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಶವಗಳನ್ನು ಆಸ್ಪತ್ರೆ ಇಂದ ಸಾಗಿರುತ್ತಿರುವ ವಿಡಿಯೋ ಇದು. ಇದನ್ನು ಮನೆಯಲ್ಲಿ ಉಳಿಯಲು ಇಷ್ಟಪಡದವರೊಂದಿಗೆ ಹಂಚಿಕೊಳ್ಳಿ.” ಎಂದು ವಿಡಿಯೋ ಜೊತೆಗೆ ಮಾಹಿತಿ ಓಡಾಡುತ್ತಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ.

 

2019 ರಲ್ಲಿ ಮೆಕ್ಕಾದಲ್ಲಿ ಹಜ್‌ ಸಂದರ್ಭದಲ್ಲಿನ ವಿಡಿಯೋ 

ಈ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತನ್ನು ತಿಳಿಯಲು ಆಲ್ಟ್‌ ನ್ಯೂಸ್‌ ವಿಡಿಯೋದ ಮೂಲವನ್ನು ಹುಡುಕಿ ಹೊರಟಿದೆ. ಹಲವಾರು ಜನರು ವಿವಿಧ ಸಂದರ್ಭಗಳಲ್ಲಿ ಈ ವಿಡಿಯೋವನ್ನು ಬಳಸಿದ್ದಾರೆ. ಆದರೆ, ಆ ವಿಡಿಯೋ 2019ರ ಆಗಸ್ಟ್‌ 16ರಂದು ಯೂಟ್ಯೂಬ್‌ ಬಳಕೆದಾರ ಗುಲಾಮ್ ಅಬ್ಬಾಸ್‌ ಎಂಬುವವರು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ವಿಡಿಯೋ ಅದು ಎಂಬುದನ್ನು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್‌ ಮೂಲಕ ಕಂಡುಹಿಡಿದಿದೆ. ಆ ವಿಡಿಯೋದ ಹೆಡ್‌ಲೈನ್‌ “ಸೌದಿ ಅರೇಬಿಯಾದ ಮೆಕ್ಕಾದಲ್ಲಿ 2019ರನಡೆದ ಹಜ್‌ ಸಂದರ್ಭದಲ್ಲಿ 58 ಸಾವು” ಎಂದು ಬರೆದು ಅಪ್‌ಲೋಡ್‌  ಮಾಡಲಾಗಿದೆ.

2019 ರಲ್ಲಿ, ಹಜ್ ತೀರ್ಥಯಾತ್ರೆ ಆಗಸ್ಟ್ 9 ರ ಶುಕ್ರವಾರ ಸಂಜೆ ಪ್ರಾರಂಭವಾಯಿತು ಮತ್ತು ಆಗಸ್ಟ್ 14 ರ ಬುಧವಾರ ಸಂಜೆ ಕೊನೆಗೊಂಡಿತು. ಆಗಸ್ಟ್ 14 ರಂದು ಸಾವಿನ ಸಂಖ್ಯೆ 39 ಎಂದು ವರದಿಯಾಗಿದೆ. ಪ್ರತಿ ವರ್ಷ ಮೆಕ್ಕಾಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮೆಕ್ಕಾದ ಬಿಸಿಯ ತಾಪವನ್ನು ವಯಸ್ಸಾದವರು ಹಜ್ ಸಮಯದಲ್ಲಿ ತಡೆದುಕೊಳ್ಳಲಾದರೆ ಸುಸ್ತಾಗುತ್ತಾರೆ. ಅವರಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹೆಚ್ಚಿನ ಜನಸಂದಣಿಯಿಂದಾಗಿ ಸ್ಟ್ಯಾಂಪ್‌ಡೆಡ್‌ಗಳು ಸಹ ಸಾಮಾನ್ಯವಾಗಿದೆ.

ಆ ಸಂದರ್ಭದಲ್ಲಿ ಸಾವಿಗೀಡಾದವರನ್ನು ಸಾಗಿಸುತ್ತಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೇ ವಿಡಿಯೋವನ್ನು ಕೆಲವರು ಜನರಲ್ಲಿ ಭಯ ಹುಟ್ಟಿಸಲು ಬಳಸಿಕೊಂಡಿದ್ದಾರೆ.

ಅಂದಹಾಗೆ, ಈ ವಿಡಿಯೋ 2019ರ ಆಗಸ್ಟ್‌ ತಿಂಗಳಿನಲ್ಲಿಯೇ ಅಪ್‌ಲೋಡ್‌ ಆಗಿದ್ದು, ಕೊರೊನಾ ವೈರಸ್‌ನ ಮೊದಲ ಪ್ರಕರಣವು 2019ರ ನವೆಂಬರ್‌ನಲ್ಲಿ ಚೀನಾದಲ್ಲಿ ವರದಿಯಾಗಿದೆ. ಹಾಗಾಗ ಇದು ಕೊರೊನಾಗೆ ತುತ್ತಾದವರ ಶವಗಳನ್ನು ಸಾಗಿಸುತ್ತಿರುವ ವಿಡಿಯೋ ಅಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...