Homeಅಂತರಾಷ್ಟ್ರೀಯಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

ಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

- Advertisement -
- Advertisement -

ಮೃತ ದೇಹಗಳನ್ನು ಸಾಗಿಸುತ್ತಿರುವ ಟ್ರಕ್‌ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ನಿಮ್ಮ ಸ್ವಂತ ಮನೆಗಳಲ್ಲಿ ಇರಿ, ಇದು ಪ್ರಧಾನ ಮಂತ್ರಿಗಳ ನಿರ್ಧಾರವಲ್ಲ. ಈ ನಿರ್ಧಾರ ಸ್ವಭಾವತಃ. ಈ ನಿರ್ಧಾರವನ್ನು ಒಪ್ಪಿಕೊಳ್ಳದ ದೇಶಗಳಲ್ಲಿ ಏನಾಗಿದೆ ಎಂದು ನೋಡಿ. ಇರಾನ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಶವಗಳನ್ನು ಆಸ್ಪತ್ರೆ ಇಂದ ಸಾಗಿರುತ್ತಿರುವ ವಿಡಿಯೋ ಇದು. ಇದನ್ನು ಮನೆಯಲ್ಲಿ ಉಳಿಯಲು ಇಷ್ಟಪಡದವರೊಂದಿಗೆ ಹಂಚಿಕೊಳ್ಳಿ.” ಎಂದು ವಿಡಿಯೋ ಜೊತೆಗೆ ಮಾಹಿತಿ ಓಡಾಡುತ್ತಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ.

 

2019 ರಲ್ಲಿ ಮೆಕ್ಕಾದಲ್ಲಿ ಹಜ್‌ ಸಂದರ್ಭದಲ್ಲಿನ ವಿಡಿಯೋ 

ಈ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತನ್ನು ತಿಳಿಯಲು ಆಲ್ಟ್‌ ನ್ಯೂಸ್‌ ವಿಡಿಯೋದ ಮೂಲವನ್ನು ಹುಡುಕಿ ಹೊರಟಿದೆ. ಹಲವಾರು ಜನರು ವಿವಿಧ ಸಂದರ್ಭಗಳಲ್ಲಿ ಈ ವಿಡಿಯೋವನ್ನು ಬಳಸಿದ್ದಾರೆ. ಆದರೆ, ಆ ವಿಡಿಯೋ 2019ರ ಆಗಸ್ಟ್‌ 16ರಂದು ಯೂಟ್ಯೂಬ್‌ ಬಳಕೆದಾರ ಗುಲಾಮ್ ಅಬ್ಬಾಸ್‌ ಎಂಬುವವರು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ವಿಡಿಯೋ ಅದು ಎಂಬುದನ್ನು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್‌ ಮೂಲಕ ಕಂಡುಹಿಡಿದಿದೆ. ಆ ವಿಡಿಯೋದ ಹೆಡ್‌ಲೈನ್‌ “ಸೌದಿ ಅರೇಬಿಯಾದ ಮೆಕ್ಕಾದಲ್ಲಿ 2019ರನಡೆದ ಹಜ್‌ ಸಂದರ್ಭದಲ್ಲಿ 58 ಸಾವು” ಎಂದು ಬರೆದು ಅಪ್‌ಲೋಡ್‌  ಮಾಡಲಾಗಿದೆ.

2019 ರಲ್ಲಿ, ಹಜ್ ತೀರ್ಥಯಾತ್ರೆ ಆಗಸ್ಟ್ 9 ರ ಶುಕ್ರವಾರ ಸಂಜೆ ಪ್ರಾರಂಭವಾಯಿತು ಮತ್ತು ಆಗಸ್ಟ್ 14 ರ ಬುಧವಾರ ಸಂಜೆ ಕೊನೆಗೊಂಡಿತು. ಆಗಸ್ಟ್ 14 ರಂದು ಸಾವಿನ ಸಂಖ್ಯೆ 39 ಎಂದು ವರದಿಯಾಗಿದೆ. ಪ್ರತಿ ವರ್ಷ ಮೆಕ್ಕಾಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮೆಕ್ಕಾದ ಬಿಸಿಯ ತಾಪವನ್ನು ವಯಸ್ಸಾದವರು ಹಜ್ ಸಮಯದಲ್ಲಿ ತಡೆದುಕೊಳ್ಳಲಾದರೆ ಸುಸ್ತಾಗುತ್ತಾರೆ. ಅವರಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹೆಚ್ಚಿನ ಜನಸಂದಣಿಯಿಂದಾಗಿ ಸ್ಟ್ಯಾಂಪ್‌ಡೆಡ್‌ಗಳು ಸಹ ಸಾಮಾನ್ಯವಾಗಿದೆ.

ಆ ಸಂದರ್ಭದಲ್ಲಿ ಸಾವಿಗೀಡಾದವರನ್ನು ಸಾಗಿಸುತ್ತಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೇ ವಿಡಿಯೋವನ್ನು ಕೆಲವರು ಜನರಲ್ಲಿ ಭಯ ಹುಟ್ಟಿಸಲು ಬಳಸಿಕೊಂಡಿದ್ದಾರೆ.

ಅಂದಹಾಗೆ, ಈ ವಿಡಿಯೋ 2019ರ ಆಗಸ್ಟ್‌ ತಿಂಗಳಿನಲ್ಲಿಯೇ ಅಪ್‌ಲೋಡ್‌ ಆಗಿದ್ದು, ಕೊರೊನಾ ವೈರಸ್‌ನ ಮೊದಲ ಪ್ರಕರಣವು 2019ರ ನವೆಂಬರ್‌ನಲ್ಲಿ ಚೀನಾದಲ್ಲಿ ವರದಿಯಾಗಿದೆ. ಹಾಗಾಗ ಇದು ಕೊರೊನಾಗೆ ತುತ್ತಾದವರ ಶವಗಳನ್ನು ಸಾಗಿಸುತ್ತಿರುವ ವಿಡಿಯೋ ಅಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...