Homeಅಂತರಾಷ್ಟ್ರೀಯಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

ಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

- Advertisement -
- Advertisement -

ಮೃತ ದೇಹಗಳನ್ನು ಸಾಗಿಸುತ್ತಿರುವ ಟ್ರಕ್‌ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ನಿಮ್ಮ ಸ್ವಂತ ಮನೆಗಳಲ್ಲಿ ಇರಿ, ಇದು ಪ್ರಧಾನ ಮಂತ್ರಿಗಳ ನಿರ್ಧಾರವಲ್ಲ. ಈ ನಿರ್ಧಾರ ಸ್ವಭಾವತಃ. ಈ ನಿರ್ಧಾರವನ್ನು ಒಪ್ಪಿಕೊಳ್ಳದ ದೇಶಗಳಲ್ಲಿ ಏನಾಗಿದೆ ಎಂದು ನೋಡಿ. ಇರಾನ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಶವಗಳನ್ನು ಆಸ್ಪತ್ರೆ ಇಂದ ಸಾಗಿರುತ್ತಿರುವ ವಿಡಿಯೋ ಇದು. ಇದನ್ನು ಮನೆಯಲ್ಲಿ ಉಳಿಯಲು ಇಷ್ಟಪಡದವರೊಂದಿಗೆ ಹಂಚಿಕೊಳ್ಳಿ.” ಎಂದು ವಿಡಿಯೋ ಜೊತೆಗೆ ಮಾಹಿತಿ ಓಡಾಡುತ್ತಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ.

 

2019 ರಲ್ಲಿ ಮೆಕ್ಕಾದಲ್ಲಿ ಹಜ್‌ ಸಂದರ್ಭದಲ್ಲಿನ ವಿಡಿಯೋ 

ಈ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತನ್ನು ತಿಳಿಯಲು ಆಲ್ಟ್‌ ನ್ಯೂಸ್‌ ವಿಡಿಯೋದ ಮೂಲವನ್ನು ಹುಡುಕಿ ಹೊರಟಿದೆ. ಹಲವಾರು ಜನರು ವಿವಿಧ ಸಂದರ್ಭಗಳಲ್ಲಿ ಈ ವಿಡಿಯೋವನ್ನು ಬಳಸಿದ್ದಾರೆ. ಆದರೆ, ಆ ವಿಡಿಯೋ 2019ರ ಆಗಸ್ಟ್‌ 16ರಂದು ಯೂಟ್ಯೂಬ್‌ ಬಳಕೆದಾರ ಗುಲಾಮ್ ಅಬ್ಬಾಸ್‌ ಎಂಬುವವರು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ವಿಡಿಯೋ ಅದು ಎಂಬುದನ್ನು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್‌ ಮೂಲಕ ಕಂಡುಹಿಡಿದಿದೆ. ಆ ವಿಡಿಯೋದ ಹೆಡ್‌ಲೈನ್‌ “ಸೌದಿ ಅರೇಬಿಯಾದ ಮೆಕ್ಕಾದಲ್ಲಿ 2019ರನಡೆದ ಹಜ್‌ ಸಂದರ್ಭದಲ್ಲಿ 58 ಸಾವು” ಎಂದು ಬರೆದು ಅಪ್‌ಲೋಡ್‌  ಮಾಡಲಾಗಿದೆ.

2019 ರಲ್ಲಿ, ಹಜ್ ತೀರ್ಥಯಾತ್ರೆ ಆಗಸ್ಟ್ 9 ರ ಶುಕ್ರವಾರ ಸಂಜೆ ಪ್ರಾರಂಭವಾಯಿತು ಮತ್ತು ಆಗಸ್ಟ್ 14 ರ ಬುಧವಾರ ಸಂಜೆ ಕೊನೆಗೊಂಡಿತು. ಆಗಸ್ಟ್ 14 ರಂದು ಸಾವಿನ ಸಂಖ್ಯೆ 39 ಎಂದು ವರದಿಯಾಗಿದೆ. ಪ್ರತಿ ವರ್ಷ ಮೆಕ್ಕಾಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮೆಕ್ಕಾದ ಬಿಸಿಯ ತಾಪವನ್ನು ವಯಸ್ಸಾದವರು ಹಜ್ ಸಮಯದಲ್ಲಿ ತಡೆದುಕೊಳ್ಳಲಾದರೆ ಸುಸ್ತಾಗುತ್ತಾರೆ. ಅವರಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹೆಚ್ಚಿನ ಜನಸಂದಣಿಯಿಂದಾಗಿ ಸ್ಟ್ಯಾಂಪ್‌ಡೆಡ್‌ಗಳು ಸಹ ಸಾಮಾನ್ಯವಾಗಿದೆ.

ಆ ಸಂದರ್ಭದಲ್ಲಿ ಸಾವಿಗೀಡಾದವರನ್ನು ಸಾಗಿಸುತ್ತಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೇ ವಿಡಿಯೋವನ್ನು ಕೆಲವರು ಜನರಲ್ಲಿ ಭಯ ಹುಟ್ಟಿಸಲು ಬಳಸಿಕೊಂಡಿದ್ದಾರೆ.

ಅಂದಹಾಗೆ, ಈ ವಿಡಿಯೋ 2019ರ ಆಗಸ್ಟ್‌ ತಿಂಗಳಿನಲ್ಲಿಯೇ ಅಪ್‌ಲೋಡ್‌ ಆಗಿದ್ದು, ಕೊರೊನಾ ವೈರಸ್‌ನ ಮೊದಲ ಪ್ರಕರಣವು 2019ರ ನವೆಂಬರ್‌ನಲ್ಲಿ ಚೀನಾದಲ್ಲಿ ವರದಿಯಾಗಿದೆ. ಹಾಗಾಗ ಇದು ಕೊರೊನಾಗೆ ತುತ್ತಾದವರ ಶವಗಳನ್ನು ಸಾಗಿಸುತ್ತಿರುವ ವಿಡಿಯೋ ಅಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...