Homeಅಂತರಾಷ್ಟ್ರೀಯಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

ಇರಾನ್‌ನಲ್ಲಿ ಕೊರೊನಾಗೆ ಬಲಿಯಾದವರನ್ನು ಟ್ರಕ್‌ಗಳಲ್ಲಿ ಸಾಗಿಸಲಾಗಿತ್ತೆ? Fact Check

- Advertisement -
- Advertisement -

ಮೃತ ದೇಹಗಳನ್ನು ಸಾಗಿಸುತ್ತಿರುವ ಟ್ರಕ್‌ಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ನಿಮ್ಮ ಸ್ವಂತ ಮನೆಗಳಲ್ಲಿ ಇರಿ, ಇದು ಪ್ರಧಾನ ಮಂತ್ರಿಗಳ ನಿರ್ಧಾರವಲ್ಲ. ಈ ನಿರ್ಧಾರ ಸ್ವಭಾವತಃ. ಈ ನಿರ್ಧಾರವನ್ನು ಒಪ್ಪಿಕೊಳ್ಳದ ದೇಶಗಳಲ್ಲಿ ಏನಾಗಿದೆ ಎಂದು ನೋಡಿ. ಇರಾನ್‌ನಲ್ಲಿ ಕೊರೊನಾ ವೈರಸ್‌ಗೆ ತುತ್ತಾದವರ ಶವಗಳನ್ನು ಆಸ್ಪತ್ರೆ ಇಂದ ಸಾಗಿರುತ್ತಿರುವ ವಿಡಿಯೋ ಇದು. ಇದನ್ನು ಮನೆಯಲ್ಲಿ ಉಳಿಯಲು ಇಷ್ಟಪಡದವರೊಂದಿಗೆ ಹಂಚಿಕೊಳ್ಳಿ.” ಎಂದು ವಿಡಿಯೋ ಜೊತೆಗೆ ಮಾಹಿತಿ ಓಡಾಡುತ್ತಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ.

 

2019 ರಲ್ಲಿ ಮೆಕ್ಕಾದಲ್ಲಿ ಹಜ್‌ ಸಂದರ್ಭದಲ್ಲಿನ ವಿಡಿಯೋ 

ಈ ಹರಿದಾಡುತ್ತಿರುವ ವಿಡಿಯೋದ ಅಸಲಿಯತ್ತನ್ನು ತಿಳಿಯಲು ಆಲ್ಟ್‌ ನ್ಯೂಸ್‌ ವಿಡಿಯೋದ ಮೂಲವನ್ನು ಹುಡುಕಿ ಹೊರಟಿದೆ. ಹಲವಾರು ಜನರು ವಿವಿಧ ಸಂದರ್ಭಗಳಲ್ಲಿ ಈ ವಿಡಿಯೋವನ್ನು ಬಳಸಿದ್ದಾರೆ. ಆದರೆ, ಆ ವಿಡಿಯೋ 2019ರ ಆಗಸ್ಟ್‌ 16ರಂದು ಯೂಟ್ಯೂಬ್‌ ಬಳಕೆದಾರ ಗುಲಾಮ್ ಅಬ್ಬಾಸ್‌ ಎಂಬುವವರು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದ ವಿಡಿಯೋ ಅದು ಎಂಬುದನ್ನು ಆಲ್ಟ್‌ ನ್ಯೂಸ್‌ ಫ್ಯಾಕ್ಟ್‌ ಚೆಕ್‌ ಮೂಲಕ ಕಂಡುಹಿಡಿದಿದೆ. ಆ ವಿಡಿಯೋದ ಹೆಡ್‌ಲೈನ್‌ “ಸೌದಿ ಅರೇಬಿಯಾದ ಮೆಕ್ಕಾದಲ್ಲಿ 2019ರನಡೆದ ಹಜ್‌ ಸಂದರ್ಭದಲ್ಲಿ 58 ಸಾವು” ಎಂದು ಬರೆದು ಅಪ್‌ಲೋಡ್‌  ಮಾಡಲಾಗಿದೆ.

2019 ರಲ್ಲಿ, ಹಜ್ ತೀರ್ಥಯಾತ್ರೆ ಆಗಸ್ಟ್ 9 ರ ಶುಕ್ರವಾರ ಸಂಜೆ ಪ್ರಾರಂಭವಾಯಿತು ಮತ್ತು ಆಗಸ್ಟ್ 14 ರ ಬುಧವಾರ ಸಂಜೆ ಕೊನೆಗೊಂಡಿತು. ಆಗಸ್ಟ್ 14 ರಂದು ಸಾವಿನ ಸಂಖ್ಯೆ 39 ಎಂದು ವರದಿಯಾಗಿದೆ. ಪ್ರತಿ ವರ್ಷ ಮೆಕ್ಕಾಗೆ ಲಕ್ಷಾಂತರ ಭಕ್ತರು ಬರುತ್ತಾರೆ. ಮೆಕ್ಕಾದ ಬಿಸಿಯ ತಾಪವನ್ನು ವಯಸ್ಸಾದವರು ಹಜ್ ಸಮಯದಲ್ಲಿ ತಡೆದುಕೊಳ್ಳಲಾದರೆ ಸುಸ್ತಾಗುತ್ತಾರೆ. ಅವರಲ್ಲಿ ಅನೇಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಾರೆ. ಹೆಚ್ಚಿನ ಜನಸಂದಣಿಯಿಂದಾಗಿ ಸ್ಟ್ಯಾಂಪ್‌ಡೆಡ್‌ಗಳು ಸಹ ಸಾಮಾನ್ಯವಾಗಿದೆ.

ಆ ಸಂದರ್ಭದಲ್ಲಿ ಸಾವಿಗೀಡಾದವರನ್ನು ಸಾಗಿಸುತ್ತಿದ್ದ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೇ ವಿಡಿಯೋವನ್ನು ಕೆಲವರು ಜನರಲ್ಲಿ ಭಯ ಹುಟ್ಟಿಸಲು ಬಳಸಿಕೊಂಡಿದ್ದಾರೆ.

ಅಂದಹಾಗೆ, ಈ ವಿಡಿಯೋ 2019ರ ಆಗಸ್ಟ್‌ ತಿಂಗಳಿನಲ್ಲಿಯೇ ಅಪ್‌ಲೋಡ್‌ ಆಗಿದ್ದು, ಕೊರೊನಾ ವೈರಸ್‌ನ ಮೊದಲ ಪ್ರಕರಣವು 2019ರ ನವೆಂಬರ್‌ನಲ್ಲಿ ಚೀನಾದಲ್ಲಿ ವರದಿಯಾಗಿದೆ. ಹಾಗಾಗ ಇದು ಕೊರೊನಾಗೆ ತುತ್ತಾದವರ ಶವಗಳನ್ನು ಸಾಗಿಸುತ್ತಿರುವ ವಿಡಿಯೋ ಅಲ್ಲ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...