Homeಮುಖಪುಟಜಮ್ಮು ಕಾಶ್ಮೀರದಲ್ಲಿ ಈ ವರ್ಷ 40 ನಾಗರಿಕರು ಕೊಲ್ಲಲ್ಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ: ಒಪ್ಪಿಕೊಂಡ ಒಕ್ಕೂಟ...

ಜಮ್ಮು ಕಾಶ್ಮೀರದಲ್ಲಿ ಈ ವರ್ಷ 40 ನಾಗರಿಕರು ಕೊಲ್ಲಲ್ಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ: ಒಪ್ಪಿಕೊಂಡ ಒಕ್ಕೂಟ ಸರ್ಕಾರ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಈ ವರ್ಷದಲ್ಲಿ ಭಯೋತ್ಪಾದಕ-ಸಂಬಂಧಿತ ಹಿಂಸಾಚಾರ ಎಂದು ಆರೋಪಿಸಲಾಗಿರುವ ಘಟನೆಗಳಲ್ಲಿ, 40 ನಾಗರಿಕರು ಮತ್ತು ಕನಿಷ್ಠ 35 ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಒಕ್ಕೂಟ ಸರ್ಕಾರ ಲೋಕಸಭೆಯಲ್ಲಿ ಹೇಳಿದೆ. ಮಂಗಳವಾರ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಈ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ.

ಅದೇ ಹಿಂಸಾಚಾರದಲ್ಲಿ ಕನಿಷ್ಠ 72 ನಾಗರಿಕರು ಗಾಯಗೊಂಡಿದ್ದು, ಸೇನೆ ಮತ್ತು ಭದ್ರತಾ ಸಿಬ್ಬಂದಿಗಳ ಗಾಯಗೊಂಡವರ ಸಂಖ್ಯೆ 86 ಕ್ಕೆ ಏರಿದೆ ಎಂದು ಸರ್ಕಾರ ಹೇಳಿದೆ. ಈ ಎಲ್ಲಾ ಅಂಕಿ ಅಂಶಗಳು ಈ ವರ್ಷ ನವೆಂಬರ್ 15 ರವರೆಗೆ ವರದಿಯಾದ ಸಾವುಗಳು ಮತ್ತು ಗಾಯಗೊಂಡವರದ್ದಾಗಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ: ಹೈದರ್‌ಪೋರಾ ಎನ್‌ಕೌಂಟರ್‌ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಕಳೆದ ಮೂರು ವರ್ಷಗಳಲ್ಲಿ ಜಮ್ಮು ಕಾಶ್ಮೀರದಲ್ಲಿ 1,033 ಭಯೋತ್ಪಾದಕರ ದಾಳಿಯ ಘಟನೆಗಳು ನಡೆದಿವೆ ಎಂದು ಸರ್ಕಾರ ಸೋಮವಾರ ರಾಜ್ಯಸಭೆಗೆ ತಿಳಿಸಿದೆ. ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಒದಗಿಸಿದ ವಿವರಗಳ ಪ್ರಕಾರ 2019 ರಲ್ಲಿ 594 ಘಟನೆಗಳು ವರದಿಯಾಗಿದ್ದು, ಇದು ಮೂರು ವರ್ಷಗಳಲ್ಲೆ ಅತಿ ಹೆಚ್ಚು ಘಟನೆಗಳು ನಡೆದ ವರ್ಷವಾಗಿದೆ.

ಈ ವರ್ಷ ನವೆಂಬರ್ 15 ರವರೆಗೆ 196 ಘಟನೆಗಳು ನಡೆದಿವೆ ಎಂದು ಅವರು ದೇಶಕ್ಕೆ ವಿವರಿಸಿದ್ದಾರೆ.

ಭಯೋತ್ಪಾದಕರಿಗೆ ನೆರವು ನೀಡುವವರನ್ನು ಹತ್ತಿಕ್ಕುವುದು, ರಾತ್ರಿ ಗಸ್ತು ತಿರುಗುವುದು, ಭದ್ರತಾ ಏಜೆನ್ಸಿಗಳ ನಡುವೆ ಉತ್ತಮ ಸಮನ್ವಯತೆ ಮತ್ತು ಭಯೋತ್ಪಾದಕರಿಗೆ ಧನಸಹಾಯ ಒದಗಿಸುವವರ ವಿರುದ್ಧ ಕಾನೂನುಬದ್ಧವಾಗಿ ನಡೆಯುವುದು ಸೇರಿದಂತೆ ಭಯೋತ್ಪಾದಕರನ್ನು ಎದುರಿಸುವಾಗ ಜಮ್ಮು ಕಾಶ್ಮೀರದಲ್ಲಿನ ಪ್ರಾಣಹಾನಿಯನ್ನು ಕಡಿಮೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವ ನಿತ್ಯಾನಂತ ರೈ ಸಂಸತ್ತಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

ಇತ್ತೀಚಿನ ವರ್ಷಗಳಲ್ಲಿ ಭಯೋತ್ಪಾದಕ ದಾಳಿಗಳು ಕಡಿಮೆಯಾಗಿವೆ ಎಂದು ಸಚಿವ ಅಜಯ್ ಭಟ್ ರಾಜ್ಯಸಭೆಯಲ್ಲಿ ಹೇಳಿದ್ದು, ಮಿಲಿಟರಿ ಸಿಬ್ಬಂದಿಗಳ ಜೀವಹಾನಿ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

“ಅಕ್ಟೋಬರ್‌ ತಿಂಗಳ ಬಹುಪಾಲು ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಶಂಕಿತ ಎಲ್‌ಇಟಿ ಉಗ್ರರೊಂದಿಗೆ ಚಕಮಕಿಯಲ್ಲಿ ತೊಡಗಿದೆ. ನವೆಂಬರ್ 13 ರಂದು ಚುರಾಚಂದ್‌ಪುರ ಜಿಲ್ಲೆಯ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲೆ ಶಂಕಿತ ಬಂಡುಕೋರರು ದಾಳಿ ಹಾಕಿದ್ದರು. ಈ ಘಟನೆಯಲ್ಲಿ ಅಸ್ಸಾಂ ರೈಫಲ್ಸ್‌ನ 5 ಸಿಬ್ಬಂದಿ ಮತ್ತು 2 ನಾಗರಿಕರು ಸೇರಿದಂತೆ ಏಳು ಜನರು ಪ್ರಾಣ ಕಳೆದುಕೊಂಡಿದ್ದಾರೆ, 6 ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಾಯಗೊಂಡಿದ್ದಾರೆ” ಎಂದು ಸಚಿವ ನಿತ್ಯಾನಂದ ರೈ ವರದಿ ಮಾಡಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕಸಿದುಕೊಂಡು ಎರಡು ವರ್ಷಗಳು ಕಳೆದಿವೆ. ಅಲ್ಲಿನ ಜನರ ಸಂಕಷ್ಟಕಗಳನ್ನು ಕಳೆದು ಒಳ್ಳೆಯ ದಿನಗಳು ಬರಲಿವೆ ಎಂದು ದೇಶದ ಜನರಿಗೆ ತಿಳಿಸಲಾಗಿತ್ತು. ಆದರೆ ಅಲ್ಲಿನ ಜನರಿಗೆ ಸುಮಾರು ಒಂದು ವರ್ಷಗಳ ಕಾಲ ಲಾಕ್‌ಡೌನ್‌ ಶಿಕ್ಷೆ ನೀಡಲಾಗಿತ್ತು. ಜೊತೆಗೆ ರಾಜಕೀಯ ನಾಯಕರನ್ನು ಗೃಹಬಂಧನ ಹಾಗೂ ಜೈಲಿಗೆ ಅಟ್ಟಲಾಗಿತ್ತು.

ಇದನ್ನೂ ಓದಿ:ಜಮ್ಮು ಕಾಶ್ಮೀರ: 2019 ರಿಂದ 2,300 ಕ್ಕೂ ಹೆಚ್ಚು ಜನರ ಮೇಲೆ UAPA ಅಡಿ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...