Homeಕರ್ನಾಟಕ'ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ': ಕನ್ಹಯ್ಯ ಕುಮಾರ್

‘ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ’: ಕನ್ಹಯ್ಯ ಕುಮಾರ್

- Advertisement -
- Advertisement -

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಯುವ ನಾಯಕ ಕನ್ಹಯ್ಯಕುಮಾರ್ ಉಪನ್ಯಾಸ ಕಾರ್ಯಕ್ರಮ ರದ್ದಾದ ಬಳಿಕ ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾದ ಕನ್ಹಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರಿಸಿದ್ದಾರೆ.

ಕೆಲ ವಿಷಯಗಳನ್ನು ತಡೆದಷ್ಟು ಬೆಳಕಿಗೆ ಬರುತ್ತಲೇ ಇರುತ್ತವೆ. ಈಗ ಮೋದಿ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ. ಇಡೀ ಹಿಂದೂಸ್ಥಾನವೇ ಅಪಾಯದಲ್ಲಿದೆ. ನಮಗೆ ಯಾವುದೇ ಧರ್ಮ, ಜಾತಿಯ ಬಗ್ಗೆ ಆಕ್ಷೇಪವಿಲ್ಲ. ನಾವು ಸಂವಿಧಾನಾಧಾರಿತ ಜಾತ್ಯಾತೀತ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದೇವೆ. ನಮ್ಮದು ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್ ರಂತಹ ಕ್ರಾಂತಿಕಾರಿಗಳನ್ನು ಕಂಡಿರುವ ರಾಷ್ಟ್ರ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಿಂದ ನಾಪತ್ತೆಯಾಗಿರುವ ಜೆ.ಎನ್.ಯು ವಿದ್ಯಾರ್ಥಿ ನಜೀಬ್, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ವಿಚಾರಗಳ ಕುರಿತು ನ್ಯಾಯಕ್ಕಾಗಿ ಜನತೆ ಕೇಂದ್ರಕ್ಕೆ ಮೊರೆಯಿಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಉತ್ತರ ಸಿಗುತ್ತಿಲ್ಲ. ಜೆ.ಎನ್.ಯು ವಿಶ್ವವಿದ್ಯಾಲಯವನ್ನು ದೇಶ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಸರ್ಕಾರಿ ಕಾಲೇಜುಗಳನ್ನು ಬಂದ್ ಮಾಡಬೇಕು. ಸಾರ್ವಜನಿಕರ ಹಣದಿಂದ ನಡೆಯುವ ವಿಶ್ವವಿದ್ಯಾಲಯವನ್ನು ಬಂದ್ ಮಾಡಬೇಕೆಂಬ ಕೂಗು, ಸಂದೇಶ ಹರಿದಾಡುತ್ತಿದೆ. ಅಲ್ಲಿ ಕಲಿತವರು ನಕ್ಸಲಿಯರಾಗುತ್ತಾರೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಕಲಿತ ವ್ಯಕ್ತಿಗೆ ನೊಬೆಲ್ ಪುರಸ್ಕಾರ ಸಿಕ್ಕಿದೆಯಲ್ಲವೇ ಎಂದು ವ್ಯಂಗ್ಯವಾಡಿದರು.

ಸಾರ್ವರ್ಕರ್‌ನಂತಹ ದೇಶವಿರೋಧಿ ಚಟುವಟಿಕೆ ಮಾಡಿದವರಿಗೆ ಭಾರತರತ್ನ ಕೊಡಲು ಬಿಜೆಪಿ ಮುಂದಾಗಿದೆ. ಇಂದು ನಿಮ್ಮ ಸರ್ಕಾರವಿದೆ, ಇಂದು ನಿಮ್ಮದೇ ನಾಯಕರಿದ್ದಾರೆ. ನಿಮಗಲ್ಲದೇ ಇನ್ಯಾರಿಗೆ ಭಾರತರತ್ನ ಕೊಡಲು ಸಾಧ್ಯ..? ಕೆಲ ದಿನಗಳ ಹಿಂದೆ ಮೋಹನ್ ಭಾಗವತ್, ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿ ಗುಂಪು ಹತ್ಯೆ ಭಾರತೀಯ ಶಬ್ದವಲ್ಲ ಎಂದಿದ್ದರು. ಆದರೆ ಬೆಳಗ್ಗೆ ಎದ್ದು ಕೈಯಲ್ಲಿ ಲಾಠಿ ಹಿಡಿದು ನಿಲ್ಲುತ್ತಾರೆ ಇದು ಯಾವ ದೇಶದ ಪರಂಪರೆ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಮೀಡಿಯಾಗಳಲ್ಲಿ, ಟಿವಿಗಳಲ್ಲಿ ದಿನನಿತ್ಯ ಒಂದೇ ಹೆಸರು ಕೇಳಿ ಬರುತ್ತದೆ. ಅದು ಮೋದಿ, ಮೋದಿ, ಮೋದಿ. ದಿನವೂ ಇದೇ ಹೆಸರನ್ನು ಕೇಳುತ್ತಿದ್ದರೆ, ಎಲ್ಲರಿಗೂ ಮೋದಿ ಬಿಟ್ಟರೆ ಹಿಂದೂಸ್ತಾನದಲ್ಲಿ ಬೇರೆ ನಾಯಕ ಇಲ್ಲವೇ ಇಲ್ಲ ಎಂದು ಮನದಲ್ಲಿ ಉಳಿಯುತ್ತೆ. ದೇಶದ ಪ್ರಧಾನಮಂತ್ರಿ ಯಾರಾಗಬೇಕು ಎಂದು ಪ್ರಶ್ನೆ ಇಟ್ಟು, ನಾಲ್ಕು ಆಪ್ಶನ್ಸ್ ಕೊಟ್ಟು ಅದರಲ್ಲಿ ಕೇವಲ ಬಿಜೆಪಿ, ಆರ್.ಎಸ್.ಎಸ್ ಆಪ್ಶನ್ಸ್ ತುಂಬಿದ್ರೆ ಜನರು ಏನು ಆಯ್ಕೆ ಮಾಡಬೇಕು..? ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಅಲ್ಲ, ಅಬ್ ಕೀ ಬಾರ್ ಜಾಹಿರಾತು ಸರ್ಕಾರ್ ಆಗಿದೆ ಎಂದು ಕನ್ಹಯ್ಯ ಕುಟುಕಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ಹಯ್ಯ ಕುಮಾರ್ ಮೋದಿ ಬಡವರ ಮಗ ಎಂದು ಪ್ರಚಾರ ಮಾಡಿಕೊಳ್ಳಲ್ಲೆಂದೇ ಹತ್ತಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಜನರಿಗಾಗಿ ತನ್ನ ಮನೆ ಕಟ್ಟಿಕೊಳ್ಳದೇ ಇದ್ದ ಸರ್ದಾರ್‌ ಪಟೇಲ್ ಪ್ರತಿಮೆಗಾಗಿ 3000 ಕೋಟಿ ಖರ್ಚು ಮಾಡುವುದು ಏನನ್ನು ಸೂಚಿಸುತ್ತದೆ ಎಂದರು.

ಇಷ್ಟು ದಿನ ಸುಮ್ಮನಿದ್ದ ರಿಲೆಯೆನ್ಸ್‌ ಪೆಟ್ರೋಲಿಯಂ ಕಂಪನಿ ಸರ್ಕಾರಿ ಸ್ವಾಮ್ಯದ ಓಎನ್‌ಜಿಸಿಯನ್ನು ಖಾಸಗೀಕರಣ ಮಾಡುತ್ತೇನೆ ಎಂದು ಮೋದಿ ಘೋಷಿಸಿದ ಕೂಡಲೇ ಕೂಡಲೇ ರಿಲೆಯೆನ್ಸ್ ವ್ಯಾಪರಕ್ಕೆ ಮುಂದೆಬಂದಿದೆ ಎಂದರೆ ಮೋದಿ ಯಾರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಯುವುದಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ವಿದೇಶಕ್ಕೆ ಹೋದಾಗಲೆಲ್ಲಾ ಬುದ್ದನ ಕುರಿತು ಮಾತನಾಡಿದರೆ ಭಾರತಕ್ಕೆ ಬಂದ ಕೂಡಲೇ ಯುದ್ಧದ ಕುರಿತು ಮಾತನಾಡುತ್ತಾರೆ. ಈ ದ್ವಿಮುಖ ನೀತಿಗೆ ಏನನ್ನಬೇಕು ಎಂದು ಕನ್ಹಯ್ಯ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...