Homeಕರ್ನಾಟಕ'ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ': ಕನ್ಹಯ್ಯ ಕುಮಾರ್

‘ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ’: ಕನ್ಹಯ್ಯ ಕುಮಾರ್

- Advertisement -
- Advertisement -

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಯುವ ನಾಯಕ ಕನ್ಹಯ್ಯಕುಮಾರ್ ಉಪನ್ಯಾಸ ಕಾರ್ಯಕ್ರಮ ರದ್ದಾದ ಬಳಿಕ ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾದ ಕನ್ಹಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರಿಸಿದ್ದಾರೆ.

ಕೆಲ ವಿಷಯಗಳನ್ನು ತಡೆದಷ್ಟು ಬೆಳಕಿಗೆ ಬರುತ್ತಲೇ ಇರುತ್ತವೆ. ಈಗ ಮೋದಿ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ. ಇಡೀ ಹಿಂದೂಸ್ಥಾನವೇ ಅಪಾಯದಲ್ಲಿದೆ. ನಮಗೆ ಯಾವುದೇ ಧರ್ಮ, ಜಾತಿಯ ಬಗ್ಗೆ ಆಕ್ಷೇಪವಿಲ್ಲ. ನಾವು ಸಂವಿಧಾನಾಧಾರಿತ ಜಾತ್ಯಾತೀತ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದೇವೆ. ನಮ್ಮದು ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್ ರಂತಹ ಕ್ರಾಂತಿಕಾರಿಗಳನ್ನು ಕಂಡಿರುವ ರಾಷ್ಟ್ರ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಿಂದ ನಾಪತ್ತೆಯಾಗಿರುವ ಜೆ.ಎನ್.ಯು ವಿದ್ಯಾರ್ಥಿ ನಜೀಬ್, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ವಿಚಾರಗಳ ಕುರಿತು ನ್ಯಾಯಕ್ಕಾಗಿ ಜನತೆ ಕೇಂದ್ರಕ್ಕೆ ಮೊರೆಯಿಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಉತ್ತರ ಸಿಗುತ್ತಿಲ್ಲ. ಜೆ.ಎನ್.ಯು ವಿಶ್ವವಿದ್ಯಾಲಯವನ್ನು ದೇಶ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಸರ್ಕಾರಿ ಕಾಲೇಜುಗಳನ್ನು ಬಂದ್ ಮಾಡಬೇಕು. ಸಾರ್ವಜನಿಕರ ಹಣದಿಂದ ನಡೆಯುವ ವಿಶ್ವವಿದ್ಯಾಲಯವನ್ನು ಬಂದ್ ಮಾಡಬೇಕೆಂಬ ಕೂಗು, ಸಂದೇಶ ಹರಿದಾಡುತ್ತಿದೆ. ಅಲ್ಲಿ ಕಲಿತವರು ನಕ್ಸಲಿಯರಾಗುತ್ತಾರೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಕಲಿತ ವ್ಯಕ್ತಿಗೆ ನೊಬೆಲ್ ಪುರಸ್ಕಾರ ಸಿಕ್ಕಿದೆಯಲ್ಲವೇ ಎಂದು ವ್ಯಂಗ್ಯವಾಡಿದರು.

ಸಾರ್ವರ್ಕರ್‌ನಂತಹ ದೇಶವಿರೋಧಿ ಚಟುವಟಿಕೆ ಮಾಡಿದವರಿಗೆ ಭಾರತರತ್ನ ಕೊಡಲು ಬಿಜೆಪಿ ಮುಂದಾಗಿದೆ. ಇಂದು ನಿಮ್ಮ ಸರ್ಕಾರವಿದೆ, ಇಂದು ನಿಮ್ಮದೇ ನಾಯಕರಿದ್ದಾರೆ. ನಿಮಗಲ್ಲದೇ ಇನ್ಯಾರಿಗೆ ಭಾರತರತ್ನ ಕೊಡಲು ಸಾಧ್ಯ..? ಕೆಲ ದಿನಗಳ ಹಿಂದೆ ಮೋಹನ್ ಭಾಗವತ್, ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿ ಗುಂಪು ಹತ್ಯೆ ಭಾರತೀಯ ಶಬ್ದವಲ್ಲ ಎಂದಿದ್ದರು. ಆದರೆ ಬೆಳಗ್ಗೆ ಎದ್ದು ಕೈಯಲ್ಲಿ ಲಾಠಿ ಹಿಡಿದು ನಿಲ್ಲುತ್ತಾರೆ ಇದು ಯಾವ ದೇಶದ ಪರಂಪರೆ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಮೀಡಿಯಾಗಳಲ್ಲಿ, ಟಿವಿಗಳಲ್ಲಿ ದಿನನಿತ್ಯ ಒಂದೇ ಹೆಸರು ಕೇಳಿ ಬರುತ್ತದೆ. ಅದು ಮೋದಿ, ಮೋದಿ, ಮೋದಿ. ದಿನವೂ ಇದೇ ಹೆಸರನ್ನು ಕೇಳುತ್ತಿದ್ದರೆ, ಎಲ್ಲರಿಗೂ ಮೋದಿ ಬಿಟ್ಟರೆ ಹಿಂದೂಸ್ತಾನದಲ್ಲಿ ಬೇರೆ ನಾಯಕ ಇಲ್ಲವೇ ಇಲ್ಲ ಎಂದು ಮನದಲ್ಲಿ ಉಳಿಯುತ್ತೆ. ದೇಶದ ಪ್ರಧಾನಮಂತ್ರಿ ಯಾರಾಗಬೇಕು ಎಂದು ಪ್ರಶ್ನೆ ಇಟ್ಟು, ನಾಲ್ಕು ಆಪ್ಶನ್ಸ್ ಕೊಟ್ಟು ಅದರಲ್ಲಿ ಕೇವಲ ಬಿಜೆಪಿ, ಆರ್.ಎಸ್.ಎಸ್ ಆಪ್ಶನ್ಸ್ ತುಂಬಿದ್ರೆ ಜನರು ಏನು ಆಯ್ಕೆ ಮಾಡಬೇಕು..? ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಅಲ್ಲ, ಅಬ್ ಕೀ ಬಾರ್ ಜಾಹಿರಾತು ಸರ್ಕಾರ್ ಆಗಿದೆ ಎಂದು ಕನ್ಹಯ್ಯ ಕುಟುಕಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ಹಯ್ಯ ಕುಮಾರ್ ಮೋದಿ ಬಡವರ ಮಗ ಎಂದು ಪ್ರಚಾರ ಮಾಡಿಕೊಳ್ಳಲ್ಲೆಂದೇ ಹತ್ತಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಜನರಿಗಾಗಿ ತನ್ನ ಮನೆ ಕಟ್ಟಿಕೊಳ್ಳದೇ ಇದ್ದ ಸರ್ದಾರ್‌ ಪಟೇಲ್ ಪ್ರತಿಮೆಗಾಗಿ 3000 ಕೋಟಿ ಖರ್ಚು ಮಾಡುವುದು ಏನನ್ನು ಸೂಚಿಸುತ್ತದೆ ಎಂದರು.

ಇಷ್ಟು ದಿನ ಸುಮ್ಮನಿದ್ದ ರಿಲೆಯೆನ್ಸ್‌ ಪೆಟ್ರೋಲಿಯಂ ಕಂಪನಿ ಸರ್ಕಾರಿ ಸ್ವಾಮ್ಯದ ಓಎನ್‌ಜಿಸಿಯನ್ನು ಖಾಸಗೀಕರಣ ಮಾಡುತ್ತೇನೆ ಎಂದು ಮೋದಿ ಘೋಷಿಸಿದ ಕೂಡಲೇ ಕೂಡಲೇ ರಿಲೆಯೆನ್ಸ್ ವ್ಯಾಪರಕ್ಕೆ ಮುಂದೆಬಂದಿದೆ ಎಂದರೆ ಮೋದಿ ಯಾರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಯುವುದಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ವಿದೇಶಕ್ಕೆ ಹೋದಾಗಲೆಲ್ಲಾ ಬುದ್ದನ ಕುರಿತು ಮಾತನಾಡಿದರೆ ಭಾರತಕ್ಕೆ ಬಂದ ಕೂಡಲೇ ಯುದ್ಧದ ಕುರಿತು ಮಾತನಾಡುತ್ತಾರೆ. ಈ ದ್ವಿಮುಖ ನೀತಿಗೆ ಏನನ್ನಬೇಕು ಎಂದು ಕನ್ಹಯ್ಯ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...