Homeಕರ್ನಾಟಕ'ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ': ಕನ್ಹಯ್ಯ ಕುಮಾರ್

‘ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ’: ಕನ್ಹಯ್ಯ ಕುಮಾರ್

- Advertisement -
- Advertisement -

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಯುವ ನಾಯಕ ಕನ್ಹಯ್ಯಕುಮಾರ್ ಉಪನ್ಯಾಸ ಕಾರ್ಯಕ್ರಮ ರದ್ದಾದ ಬಳಿಕ ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾದ ಕನ್ಹಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರಿಸಿದ್ದಾರೆ.

ಕೆಲ ವಿಷಯಗಳನ್ನು ತಡೆದಷ್ಟು ಬೆಳಕಿಗೆ ಬರುತ್ತಲೇ ಇರುತ್ತವೆ. ಈಗ ಮೋದಿ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ. ಇಡೀ ಹಿಂದೂಸ್ಥಾನವೇ ಅಪಾಯದಲ್ಲಿದೆ. ನಮಗೆ ಯಾವುದೇ ಧರ್ಮ, ಜಾತಿಯ ಬಗ್ಗೆ ಆಕ್ಷೇಪವಿಲ್ಲ. ನಾವು ಸಂವಿಧಾನಾಧಾರಿತ ಜಾತ್ಯಾತೀತ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದೇವೆ. ನಮ್ಮದು ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್ ರಂತಹ ಕ್ರಾಂತಿಕಾರಿಗಳನ್ನು ಕಂಡಿರುವ ರಾಷ್ಟ್ರ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಿಂದ ನಾಪತ್ತೆಯಾಗಿರುವ ಜೆ.ಎನ್.ಯು ವಿದ್ಯಾರ್ಥಿ ನಜೀಬ್, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ವಿಚಾರಗಳ ಕುರಿತು ನ್ಯಾಯಕ್ಕಾಗಿ ಜನತೆ ಕೇಂದ್ರಕ್ಕೆ ಮೊರೆಯಿಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಉತ್ತರ ಸಿಗುತ್ತಿಲ್ಲ. ಜೆ.ಎನ್.ಯು ವಿಶ್ವವಿದ್ಯಾಲಯವನ್ನು ದೇಶ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಸರ್ಕಾರಿ ಕಾಲೇಜುಗಳನ್ನು ಬಂದ್ ಮಾಡಬೇಕು. ಸಾರ್ವಜನಿಕರ ಹಣದಿಂದ ನಡೆಯುವ ವಿಶ್ವವಿದ್ಯಾಲಯವನ್ನು ಬಂದ್ ಮಾಡಬೇಕೆಂಬ ಕೂಗು, ಸಂದೇಶ ಹರಿದಾಡುತ್ತಿದೆ. ಅಲ್ಲಿ ಕಲಿತವರು ನಕ್ಸಲಿಯರಾಗುತ್ತಾರೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಕಲಿತ ವ್ಯಕ್ತಿಗೆ ನೊಬೆಲ್ ಪುರಸ್ಕಾರ ಸಿಕ್ಕಿದೆಯಲ್ಲವೇ ಎಂದು ವ್ಯಂಗ್ಯವಾಡಿದರು.

ಸಾರ್ವರ್ಕರ್‌ನಂತಹ ದೇಶವಿರೋಧಿ ಚಟುವಟಿಕೆ ಮಾಡಿದವರಿಗೆ ಭಾರತರತ್ನ ಕೊಡಲು ಬಿಜೆಪಿ ಮುಂದಾಗಿದೆ. ಇಂದು ನಿಮ್ಮ ಸರ್ಕಾರವಿದೆ, ಇಂದು ನಿಮ್ಮದೇ ನಾಯಕರಿದ್ದಾರೆ. ನಿಮಗಲ್ಲದೇ ಇನ್ಯಾರಿಗೆ ಭಾರತರತ್ನ ಕೊಡಲು ಸಾಧ್ಯ..? ಕೆಲ ದಿನಗಳ ಹಿಂದೆ ಮೋಹನ್ ಭಾಗವತ್, ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿ ಗುಂಪು ಹತ್ಯೆ ಭಾರತೀಯ ಶಬ್ದವಲ್ಲ ಎಂದಿದ್ದರು. ಆದರೆ ಬೆಳಗ್ಗೆ ಎದ್ದು ಕೈಯಲ್ಲಿ ಲಾಠಿ ಹಿಡಿದು ನಿಲ್ಲುತ್ತಾರೆ ಇದು ಯಾವ ದೇಶದ ಪರಂಪರೆ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಮೀಡಿಯಾಗಳಲ್ಲಿ, ಟಿವಿಗಳಲ್ಲಿ ದಿನನಿತ್ಯ ಒಂದೇ ಹೆಸರು ಕೇಳಿ ಬರುತ್ತದೆ. ಅದು ಮೋದಿ, ಮೋದಿ, ಮೋದಿ. ದಿನವೂ ಇದೇ ಹೆಸರನ್ನು ಕೇಳುತ್ತಿದ್ದರೆ, ಎಲ್ಲರಿಗೂ ಮೋದಿ ಬಿಟ್ಟರೆ ಹಿಂದೂಸ್ತಾನದಲ್ಲಿ ಬೇರೆ ನಾಯಕ ಇಲ್ಲವೇ ಇಲ್ಲ ಎಂದು ಮನದಲ್ಲಿ ಉಳಿಯುತ್ತೆ. ದೇಶದ ಪ್ರಧಾನಮಂತ್ರಿ ಯಾರಾಗಬೇಕು ಎಂದು ಪ್ರಶ್ನೆ ಇಟ್ಟು, ನಾಲ್ಕು ಆಪ್ಶನ್ಸ್ ಕೊಟ್ಟು ಅದರಲ್ಲಿ ಕೇವಲ ಬಿಜೆಪಿ, ಆರ್.ಎಸ್.ಎಸ್ ಆಪ್ಶನ್ಸ್ ತುಂಬಿದ್ರೆ ಜನರು ಏನು ಆಯ್ಕೆ ಮಾಡಬೇಕು..? ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಅಲ್ಲ, ಅಬ್ ಕೀ ಬಾರ್ ಜಾಹಿರಾತು ಸರ್ಕಾರ್ ಆಗಿದೆ ಎಂದು ಕನ್ಹಯ್ಯ ಕುಟುಕಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ಹಯ್ಯ ಕುಮಾರ್ ಮೋದಿ ಬಡವರ ಮಗ ಎಂದು ಪ್ರಚಾರ ಮಾಡಿಕೊಳ್ಳಲ್ಲೆಂದೇ ಹತ್ತಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಜನರಿಗಾಗಿ ತನ್ನ ಮನೆ ಕಟ್ಟಿಕೊಳ್ಳದೇ ಇದ್ದ ಸರ್ದಾರ್‌ ಪಟೇಲ್ ಪ್ರತಿಮೆಗಾಗಿ 3000 ಕೋಟಿ ಖರ್ಚು ಮಾಡುವುದು ಏನನ್ನು ಸೂಚಿಸುತ್ತದೆ ಎಂದರು.

ಇಷ್ಟು ದಿನ ಸುಮ್ಮನಿದ್ದ ರಿಲೆಯೆನ್ಸ್‌ ಪೆಟ್ರೋಲಿಯಂ ಕಂಪನಿ ಸರ್ಕಾರಿ ಸ್ವಾಮ್ಯದ ಓಎನ್‌ಜಿಸಿಯನ್ನು ಖಾಸಗೀಕರಣ ಮಾಡುತ್ತೇನೆ ಎಂದು ಮೋದಿ ಘೋಷಿಸಿದ ಕೂಡಲೇ ಕೂಡಲೇ ರಿಲೆಯೆನ್ಸ್ ವ್ಯಾಪರಕ್ಕೆ ಮುಂದೆಬಂದಿದೆ ಎಂದರೆ ಮೋದಿ ಯಾರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಯುವುದಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ವಿದೇಶಕ್ಕೆ ಹೋದಾಗಲೆಲ್ಲಾ ಬುದ್ದನ ಕುರಿತು ಮಾತನಾಡಿದರೆ ಭಾರತಕ್ಕೆ ಬಂದ ಕೂಡಲೇ ಯುದ್ಧದ ಕುರಿತು ಮಾತನಾಡುತ್ತಾರೆ. ಈ ದ್ವಿಮುಖ ನೀತಿಗೆ ಏನನ್ನಬೇಕು ಎಂದು ಕನ್ಹಯ್ಯ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...