Homeಕರ್ನಾಟಕ'ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ': ಕನ್ಹಯ್ಯ ಕುಮಾರ್

‘ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ’: ಕನ್ಹಯ್ಯ ಕುಮಾರ್

- Advertisement -
- Advertisement -

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಯುವ ನಾಯಕ ಕನ್ಹಯ್ಯಕುಮಾರ್ ಉಪನ್ಯಾಸ ಕಾರ್ಯಕ್ರಮ ರದ್ದಾದ ಬಳಿಕ ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾದ ಕನ್ಹಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರಿಸಿದ್ದಾರೆ.

ಕೆಲ ವಿಷಯಗಳನ್ನು ತಡೆದಷ್ಟು ಬೆಳಕಿಗೆ ಬರುತ್ತಲೇ ಇರುತ್ತವೆ. ಈಗ ಮೋದಿ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ. ಇಡೀ ಹಿಂದೂಸ್ಥಾನವೇ ಅಪಾಯದಲ್ಲಿದೆ. ನಮಗೆ ಯಾವುದೇ ಧರ್ಮ, ಜಾತಿಯ ಬಗ್ಗೆ ಆಕ್ಷೇಪವಿಲ್ಲ. ನಾವು ಸಂವಿಧಾನಾಧಾರಿತ ಜಾತ್ಯಾತೀತ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದೇವೆ. ನಮ್ಮದು ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್ ರಂತಹ ಕ್ರಾಂತಿಕಾರಿಗಳನ್ನು ಕಂಡಿರುವ ರಾಷ್ಟ್ರ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಿಂದ ನಾಪತ್ತೆಯಾಗಿರುವ ಜೆ.ಎನ್.ಯು ವಿದ್ಯಾರ್ಥಿ ನಜೀಬ್, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ವಿಚಾರಗಳ ಕುರಿತು ನ್ಯಾಯಕ್ಕಾಗಿ ಜನತೆ ಕೇಂದ್ರಕ್ಕೆ ಮೊರೆಯಿಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಉತ್ತರ ಸಿಗುತ್ತಿಲ್ಲ. ಜೆ.ಎನ್.ಯು ವಿಶ್ವವಿದ್ಯಾಲಯವನ್ನು ದೇಶ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಸರ್ಕಾರಿ ಕಾಲೇಜುಗಳನ್ನು ಬಂದ್ ಮಾಡಬೇಕು. ಸಾರ್ವಜನಿಕರ ಹಣದಿಂದ ನಡೆಯುವ ವಿಶ್ವವಿದ್ಯಾಲಯವನ್ನು ಬಂದ್ ಮಾಡಬೇಕೆಂಬ ಕೂಗು, ಸಂದೇಶ ಹರಿದಾಡುತ್ತಿದೆ. ಅಲ್ಲಿ ಕಲಿತವರು ನಕ್ಸಲಿಯರಾಗುತ್ತಾರೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಕಲಿತ ವ್ಯಕ್ತಿಗೆ ನೊಬೆಲ್ ಪುರಸ್ಕಾರ ಸಿಕ್ಕಿದೆಯಲ್ಲವೇ ಎಂದು ವ್ಯಂಗ್ಯವಾಡಿದರು.

ಸಾರ್ವರ್ಕರ್‌ನಂತಹ ದೇಶವಿರೋಧಿ ಚಟುವಟಿಕೆ ಮಾಡಿದವರಿಗೆ ಭಾರತರತ್ನ ಕೊಡಲು ಬಿಜೆಪಿ ಮುಂದಾಗಿದೆ. ಇಂದು ನಿಮ್ಮ ಸರ್ಕಾರವಿದೆ, ಇಂದು ನಿಮ್ಮದೇ ನಾಯಕರಿದ್ದಾರೆ. ನಿಮಗಲ್ಲದೇ ಇನ್ಯಾರಿಗೆ ಭಾರತರತ್ನ ಕೊಡಲು ಸಾಧ್ಯ..? ಕೆಲ ದಿನಗಳ ಹಿಂದೆ ಮೋಹನ್ ಭಾಗವತ್, ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿ ಗುಂಪು ಹತ್ಯೆ ಭಾರತೀಯ ಶಬ್ದವಲ್ಲ ಎಂದಿದ್ದರು. ಆದರೆ ಬೆಳಗ್ಗೆ ಎದ್ದು ಕೈಯಲ್ಲಿ ಲಾಠಿ ಹಿಡಿದು ನಿಲ್ಲುತ್ತಾರೆ ಇದು ಯಾವ ದೇಶದ ಪರಂಪರೆ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಮೀಡಿಯಾಗಳಲ್ಲಿ, ಟಿವಿಗಳಲ್ಲಿ ದಿನನಿತ್ಯ ಒಂದೇ ಹೆಸರು ಕೇಳಿ ಬರುತ್ತದೆ. ಅದು ಮೋದಿ, ಮೋದಿ, ಮೋದಿ. ದಿನವೂ ಇದೇ ಹೆಸರನ್ನು ಕೇಳುತ್ತಿದ್ದರೆ, ಎಲ್ಲರಿಗೂ ಮೋದಿ ಬಿಟ್ಟರೆ ಹಿಂದೂಸ್ತಾನದಲ್ಲಿ ಬೇರೆ ನಾಯಕ ಇಲ್ಲವೇ ಇಲ್ಲ ಎಂದು ಮನದಲ್ಲಿ ಉಳಿಯುತ್ತೆ. ದೇಶದ ಪ್ರಧಾನಮಂತ್ರಿ ಯಾರಾಗಬೇಕು ಎಂದು ಪ್ರಶ್ನೆ ಇಟ್ಟು, ನಾಲ್ಕು ಆಪ್ಶನ್ಸ್ ಕೊಟ್ಟು ಅದರಲ್ಲಿ ಕೇವಲ ಬಿಜೆಪಿ, ಆರ್.ಎಸ್.ಎಸ್ ಆಪ್ಶನ್ಸ್ ತುಂಬಿದ್ರೆ ಜನರು ಏನು ಆಯ್ಕೆ ಮಾಡಬೇಕು..? ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಅಲ್ಲ, ಅಬ್ ಕೀ ಬಾರ್ ಜಾಹಿರಾತು ಸರ್ಕಾರ್ ಆಗಿದೆ ಎಂದು ಕನ್ಹಯ್ಯ ಕುಟುಕಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ಹಯ್ಯ ಕುಮಾರ್ ಮೋದಿ ಬಡವರ ಮಗ ಎಂದು ಪ್ರಚಾರ ಮಾಡಿಕೊಳ್ಳಲ್ಲೆಂದೇ ಹತ್ತಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಜನರಿಗಾಗಿ ತನ್ನ ಮನೆ ಕಟ್ಟಿಕೊಳ್ಳದೇ ಇದ್ದ ಸರ್ದಾರ್‌ ಪಟೇಲ್ ಪ್ರತಿಮೆಗಾಗಿ 3000 ಕೋಟಿ ಖರ್ಚು ಮಾಡುವುದು ಏನನ್ನು ಸೂಚಿಸುತ್ತದೆ ಎಂದರು.

ಇಷ್ಟು ದಿನ ಸುಮ್ಮನಿದ್ದ ರಿಲೆಯೆನ್ಸ್‌ ಪೆಟ್ರೋಲಿಯಂ ಕಂಪನಿ ಸರ್ಕಾರಿ ಸ್ವಾಮ್ಯದ ಓಎನ್‌ಜಿಸಿಯನ್ನು ಖಾಸಗೀಕರಣ ಮಾಡುತ್ತೇನೆ ಎಂದು ಮೋದಿ ಘೋಷಿಸಿದ ಕೂಡಲೇ ಕೂಡಲೇ ರಿಲೆಯೆನ್ಸ್ ವ್ಯಾಪರಕ್ಕೆ ಮುಂದೆಬಂದಿದೆ ಎಂದರೆ ಮೋದಿ ಯಾರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಯುವುದಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ವಿದೇಶಕ್ಕೆ ಹೋದಾಗಲೆಲ್ಲಾ ಬುದ್ದನ ಕುರಿತು ಮಾತನಾಡಿದರೆ ಭಾರತಕ್ಕೆ ಬಂದ ಕೂಡಲೇ ಯುದ್ಧದ ಕುರಿತು ಮಾತನಾಡುತ್ತಾರೆ. ಈ ದ್ವಿಮುಖ ನೀತಿಗೆ ಏನನ್ನಬೇಕು ಎಂದು ಕನ್ಹಯ್ಯ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...