Homeಕರ್ನಾಟಕ'ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ': ಕನ್ಹಯ್ಯ ಕುಮಾರ್

‘ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ’: ಕನ್ಹಯ್ಯ ಕುಮಾರ್

- Advertisement -
- Advertisement -

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಯುವ ನಾಯಕ ಕನ್ಹಯ್ಯಕುಮಾರ್ ಉಪನ್ಯಾಸ ಕಾರ್ಯಕ್ರಮ ರದ್ದಾದ ಬಳಿಕ ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾದ ಕನ್ಹಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರಿಸಿದ್ದಾರೆ.

ಕೆಲ ವಿಷಯಗಳನ್ನು ತಡೆದಷ್ಟು ಬೆಳಕಿಗೆ ಬರುತ್ತಲೇ ಇರುತ್ತವೆ. ಈಗ ಮೋದಿ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ. ಇಡೀ ಹಿಂದೂಸ್ಥಾನವೇ ಅಪಾಯದಲ್ಲಿದೆ. ನಮಗೆ ಯಾವುದೇ ಧರ್ಮ, ಜಾತಿಯ ಬಗ್ಗೆ ಆಕ್ಷೇಪವಿಲ್ಲ. ನಾವು ಸಂವಿಧಾನಾಧಾರಿತ ಜಾತ್ಯಾತೀತ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದೇವೆ. ನಮ್ಮದು ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್ ರಂತಹ ಕ್ರಾಂತಿಕಾರಿಗಳನ್ನು ಕಂಡಿರುವ ರಾಷ್ಟ್ರ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಿಂದ ನಾಪತ್ತೆಯಾಗಿರುವ ಜೆ.ಎನ್.ಯು ವಿದ್ಯಾರ್ಥಿ ನಜೀಬ್, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ವಿಚಾರಗಳ ಕುರಿತು ನ್ಯಾಯಕ್ಕಾಗಿ ಜನತೆ ಕೇಂದ್ರಕ್ಕೆ ಮೊರೆಯಿಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಉತ್ತರ ಸಿಗುತ್ತಿಲ್ಲ. ಜೆ.ಎನ್.ಯು ವಿಶ್ವವಿದ್ಯಾಲಯವನ್ನು ದೇಶ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಸರ್ಕಾರಿ ಕಾಲೇಜುಗಳನ್ನು ಬಂದ್ ಮಾಡಬೇಕು. ಸಾರ್ವಜನಿಕರ ಹಣದಿಂದ ನಡೆಯುವ ವಿಶ್ವವಿದ್ಯಾಲಯವನ್ನು ಬಂದ್ ಮಾಡಬೇಕೆಂಬ ಕೂಗು, ಸಂದೇಶ ಹರಿದಾಡುತ್ತಿದೆ. ಅಲ್ಲಿ ಕಲಿತವರು ನಕ್ಸಲಿಯರಾಗುತ್ತಾರೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಕಲಿತ ವ್ಯಕ್ತಿಗೆ ನೊಬೆಲ್ ಪುರಸ್ಕಾರ ಸಿಕ್ಕಿದೆಯಲ್ಲವೇ ಎಂದು ವ್ಯಂಗ್ಯವಾಡಿದರು.

ಸಾರ್ವರ್ಕರ್‌ನಂತಹ ದೇಶವಿರೋಧಿ ಚಟುವಟಿಕೆ ಮಾಡಿದವರಿಗೆ ಭಾರತರತ್ನ ಕೊಡಲು ಬಿಜೆಪಿ ಮುಂದಾಗಿದೆ. ಇಂದು ನಿಮ್ಮ ಸರ್ಕಾರವಿದೆ, ಇಂದು ನಿಮ್ಮದೇ ನಾಯಕರಿದ್ದಾರೆ. ನಿಮಗಲ್ಲದೇ ಇನ್ಯಾರಿಗೆ ಭಾರತರತ್ನ ಕೊಡಲು ಸಾಧ್ಯ..? ಕೆಲ ದಿನಗಳ ಹಿಂದೆ ಮೋಹನ್ ಭಾಗವತ್, ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿ ಗುಂಪು ಹತ್ಯೆ ಭಾರತೀಯ ಶಬ್ದವಲ್ಲ ಎಂದಿದ್ದರು. ಆದರೆ ಬೆಳಗ್ಗೆ ಎದ್ದು ಕೈಯಲ್ಲಿ ಲಾಠಿ ಹಿಡಿದು ನಿಲ್ಲುತ್ತಾರೆ ಇದು ಯಾವ ದೇಶದ ಪರಂಪರೆ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಮೀಡಿಯಾಗಳಲ್ಲಿ, ಟಿವಿಗಳಲ್ಲಿ ದಿನನಿತ್ಯ ಒಂದೇ ಹೆಸರು ಕೇಳಿ ಬರುತ್ತದೆ. ಅದು ಮೋದಿ, ಮೋದಿ, ಮೋದಿ. ದಿನವೂ ಇದೇ ಹೆಸರನ್ನು ಕೇಳುತ್ತಿದ್ದರೆ, ಎಲ್ಲರಿಗೂ ಮೋದಿ ಬಿಟ್ಟರೆ ಹಿಂದೂಸ್ತಾನದಲ್ಲಿ ಬೇರೆ ನಾಯಕ ಇಲ್ಲವೇ ಇಲ್ಲ ಎಂದು ಮನದಲ್ಲಿ ಉಳಿಯುತ್ತೆ. ದೇಶದ ಪ್ರಧಾನಮಂತ್ರಿ ಯಾರಾಗಬೇಕು ಎಂದು ಪ್ರಶ್ನೆ ಇಟ್ಟು, ನಾಲ್ಕು ಆಪ್ಶನ್ಸ್ ಕೊಟ್ಟು ಅದರಲ್ಲಿ ಕೇವಲ ಬಿಜೆಪಿ, ಆರ್.ಎಸ್.ಎಸ್ ಆಪ್ಶನ್ಸ್ ತುಂಬಿದ್ರೆ ಜನರು ಏನು ಆಯ್ಕೆ ಮಾಡಬೇಕು..? ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಅಲ್ಲ, ಅಬ್ ಕೀ ಬಾರ್ ಜಾಹಿರಾತು ಸರ್ಕಾರ್ ಆಗಿದೆ ಎಂದು ಕನ್ಹಯ್ಯ ಕುಟುಕಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ಹಯ್ಯ ಕುಮಾರ್ ಮೋದಿ ಬಡವರ ಮಗ ಎಂದು ಪ್ರಚಾರ ಮಾಡಿಕೊಳ್ಳಲ್ಲೆಂದೇ ಹತ್ತಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಜನರಿಗಾಗಿ ತನ್ನ ಮನೆ ಕಟ್ಟಿಕೊಳ್ಳದೇ ಇದ್ದ ಸರ್ದಾರ್‌ ಪಟೇಲ್ ಪ್ರತಿಮೆಗಾಗಿ 3000 ಕೋಟಿ ಖರ್ಚು ಮಾಡುವುದು ಏನನ್ನು ಸೂಚಿಸುತ್ತದೆ ಎಂದರು.

ಇಷ್ಟು ದಿನ ಸುಮ್ಮನಿದ್ದ ರಿಲೆಯೆನ್ಸ್‌ ಪೆಟ್ರೋಲಿಯಂ ಕಂಪನಿ ಸರ್ಕಾರಿ ಸ್ವಾಮ್ಯದ ಓಎನ್‌ಜಿಸಿಯನ್ನು ಖಾಸಗೀಕರಣ ಮಾಡುತ್ತೇನೆ ಎಂದು ಮೋದಿ ಘೋಷಿಸಿದ ಕೂಡಲೇ ಕೂಡಲೇ ರಿಲೆಯೆನ್ಸ್ ವ್ಯಾಪರಕ್ಕೆ ಮುಂದೆಬಂದಿದೆ ಎಂದರೆ ಮೋದಿ ಯಾರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಯುವುದಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ವಿದೇಶಕ್ಕೆ ಹೋದಾಗಲೆಲ್ಲಾ ಬುದ್ದನ ಕುರಿತು ಮಾತನಾಡಿದರೆ ಭಾರತಕ್ಕೆ ಬಂದ ಕೂಡಲೇ ಯುದ್ಧದ ಕುರಿತು ಮಾತನಾಡುತ್ತಾರೆ. ಈ ದ್ವಿಮುಖ ನೀತಿಗೆ ಏನನ್ನಬೇಕು ಎಂದು ಕನ್ಹಯ್ಯ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...