Homeಕರ್ನಾಟಕ'ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ': ಕನ್ಹಯ್ಯ ಕುಮಾರ್

‘ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ, ಹಿಂದೂಸ್ಥಾನ್ ಅಪಾಯದಲ್ಲಿದೆ’: ಕನ್ಹಯ್ಯ ಕುಮಾರ್

- Advertisement -
- Advertisement -

ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಯುವ ನಾಯಕ ಕನ್ಹಯ್ಯಕುಮಾರ್ ಉಪನ್ಯಾಸ ಕಾರ್ಯಕ್ರಮ ರದ್ದಾದ ಬಳಿಕ ಅಂಬೇಡ್ಕರ್ ಮೈದಾನದಲ್ಲಿ ನಡೆದ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾದ ಕನ್ಹಯ್ಯ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಬ್ಬರಿಸಿದ್ದಾರೆ.

ಕೆಲ ವಿಷಯಗಳನ್ನು ತಡೆದಷ್ಟು ಬೆಳಕಿಗೆ ಬರುತ್ತಲೇ ಇರುತ್ತವೆ. ಈಗ ಮೋದಿ ಆಳ್ವಿಕೆಯಲ್ಲಿ ಹಿಂದೂ-ಮುಸ್ಲಿಮರು ಅಪಾಯದಲ್ಲಿಲ್ಲ. ಇಡೀ ಹಿಂದೂಸ್ಥಾನವೇ ಅಪಾಯದಲ್ಲಿದೆ. ನಮಗೆ ಯಾವುದೇ ಧರ್ಮ, ಜಾತಿಯ ಬಗ್ಗೆ ಆಕ್ಷೇಪವಿಲ್ಲ. ನಾವು ಸಂವಿಧಾನಾಧಾರಿತ ಜಾತ್ಯಾತೀತ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದೇವೆ. ನಮ್ಮದು ಡಾ.ಬಿ.ಆರ್.ಅಂಬೇಡ್ಕರ್, ಭಗತ್ ಸಿಂಗ್ ರಂತಹ ಕ್ರಾಂತಿಕಾರಿಗಳನ್ನು ಕಂಡಿರುವ ರಾಷ್ಟ್ರ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ.

ಮೂರು ವರ್ಷಗಳಿಂದ ನಾಪತ್ತೆಯಾಗಿರುವ ಜೆ.ಎನ್.ಯು ವಿದ್ಯಾರ್ಥಿ ನಜೀಬ್, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸೇರಿದಂತೆ ಅನೇಕ ವಿಚಾರಗಳ ಕುರಿತು ನ್ಯಾಯಕ್ಕಾಗಿ ಜನತೆ ಕೇಂದ್ರಕ್ಕೆ ಮೊರೆಯಿಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಉತ್ತರ ಸಿಗುತ್ತಿಲ್ಲ. ಜೆ.ಎನ್.ಯು ವಿಶ್ವವಿದ್ಯಾಲಯವನ್ನು ದೇಶ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಸರ್ಕಾರಿ ಕಾಲೇಜುಗಳನ್ನು ಬಂದ್ ಮಾಡಬೇಕು. ಸಾರ್ವಜನಿಕರ ಹಣದಿಂದ ನಡೆಯುವ ವಿಶ್ವವಿದ್ಯಾಲಯವನ್ನು ಬಂದ್ ಮಾಡಬೇಕೆಂಬ ಕೂಗು, ಸಂದೇಶ ಹರಿದಾಡುತ್ತಿದೆ. ಅಲ್ಲಿ ಕಲಿತವರು ನಕ್ಸಲಿಯರಾಗುತ್ತಾರೆ ಎಂದು ಹೇಳುತ್ತಾರೆ. ಆದರೆ ಇಲ್ಲಿ ಕಲಿತ ವ್ಯಕ್ತಿಗೆ ನೊಬೆಲ್ ಪುರಸ್ಕಾರ ಸಿಕ್ಕಿದೆಯಲ್ಲವೇ ಎಂದು ವ್ಯಂಗ್ಯವಾಡಿದರು.

ಸಾರ್ವರ್ಕರ್‌ನಂತಹ ದೇಶವಿರೋಧಿ ಚಟುವಟಿಕೆ ಮಾಡಿದವರಿಗೆ ಭಾರತರತ್ನ ಕೊಡಲು ಬಿಜೆಪಿ ಮುಂದಾಗಿದೆ. ಇಂದು ನಿಮ್ಮ ಸರ್ಕಾರವಿದೆ, ಇಂದು ನಿಮ್ಮದೇ ನಾಯಕರಿದ್ದಾರೆ. ನಿಮಗಲ್ಲದೇ ಇನ್ಯಾರಿಗೆ ಭಾರತರತ್ನ ಕೊಡಲು ಸಾಧ್ಯ..? ಕೆಲ ದಿನಗಳ ಹಿಂದೆ ಮೋಹನ್ ಭಾಗವತ್, ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿ ಗುಂಪು ಹತ್ಯೆ ಭಾರತೀಯ ಶಬ್ದವಲ್ಲ ಎಂದಿದ್ದರು. ಆದರೆ ಬೆಳಗ್ಗೆ ಎದ್ದು ಕೈಯಲ್ಲಿ ಲಾಠಿ ಹಿಡಿದು ನಿಲ್ಲುತ್ತಾರೆ ಇದು ಯಾವ ದೇಶದ ಪರಂಪರೆ ಎಂದು ವ್ಯಂಗ್ಯವಾಡಿದರು.

ಇತ್ತೀಚೆಗೆ ಮೀಡಿಯಾಗಳಲ್ಲಿ, ಟಿವಿಗಳಲ್ಲಿ ದಿನನಿತ್ಯ ಒಂದೇ ಹೆಸರು ಕೇಳಿ ಬರುತ್ತದೆ. ಅದು ಮೋದಿ, ಮೋದಿ, ಮೋದಿ. ದಿನವೂ ಇದೇ ಹೆಸರನ್ನು ಕೇಳುತ್ತಿದ್ದರೆ, ಎಲ್ಲರಿಗೂ ಮೋದಿ ಬಿಟ್ಟರೆ ಹಿಂದೂಸ್ತಾನದಲ್ಲಿ ಬೇರೆ ನಾಯಕ ಇಲ್ಲವೇ ಇಲ್ಲ ಎಂದು ಮನದಲ್ಲಿ ಉಳಿಯುತ್ತೆ. ದೇಶದ ಪ್ರಧಾನಮಂತ್ರಿ ಯಾರಾಗಬೇಕು ಎಂದು ಪ್ರಶ್ನೆ ಇಟ್ಟು, ನಾಲ್ಕು ಆಪ್ಶನ್ಸ್ ಕೊಟ್ಟು ಅದರಲ್ಲಿ ಕೇವಲ ಬಿಜೆಪಿ, ಆರ್.ಎಸ್.ಎಸ್ ಆಪ್ಶನ್ಸ್ ತುಂಬಿದ್ರೆ ಜನರು ಏನು ಆಯ್ಕೆ ಮಾಡಬೇಕು..? ಅಬ್ ಕೀ ಬಾರ್ ಬಿಜೆಪಿ ಸರ್ಕಾರ್ ಅಲ್ಲ, ಅಬ್ ಕೀ ಬಾರ್ ಜಾಹಿರಾತು ಸರ್ಕಾರ್ ಆಗಿದೆ ಎಂದು ಕನ್ಹಯ್ಯ ಕುಟುಕಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ಹಯ್ಯ ಕುಮಾರ್ ಮೋದಿ ಬಡವರ ಮಗ ಎಂದು ಪ್ರಚಾರ ಮಾಡಿಕೊಳ್ಳಲ್ಲೆಂದೇ ಹತ್ತಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಜನರಿಗಾಗಿ ತನ್ನ ಮನೆ ಕಟ್ಟಿಕೊಳ್ಳದೇ ಇದ್ದ ಸರ್ದಾರ್‌ ಪಟೇಲ್ ಪ್ರತಿಮೆಗಾಗಿ 3000 ಕೋಟಿ ಖರ್ಚು ಮಾಡುವುದು ಏನನ್ನು ಸೂಚಿಸುತ್ತದೆ ಎಂದರು.

ಇಷ್ಟು ದಿನ ಸುಮ್ಮನಿದ್ದ ರಿಲೆಯೆನ್ಸ್‌ ಪೆಟ್ರೋಲಿಯಂ ಕಂಪನಿ ಸರ್ಕಾರಿ ಸ್ವಾಮ್ಯದ ಓಎನ್‌ಜಿಸಿಯನ್ನು ಖಾಸಗೀಕರಣ ಮಾಡುತ್ತೇನೆ ಎಂದು ಮೋದಿ ಘೋಷಿಸಿದ ಕೂಡಲೇ ಕೂಡಲೇ ರಿಲೆಯೆನ್ಸ್ ವ್ಯಾಪರಕ್ಕೆ ಮುಂದೆಬಂದಿದೆ ಎಂದರೆ ಮೋದಿ ಯಾರಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಯುವುದಲ್ಲವೇ? ಎಂದು ಪ್ರಶ್ನಿಸಿದರು.

ಮೋದಿ ವಿದೇಶಕ್ಕೆ ಹೋದಾಗಲೆಲ್ಲಾ ಬುದ್ದನ ಕುರಿತು ಮಾತನಾಡಿದರೆ ಭಾರತಕ್ಕೆ ಬಂದ ಕೂಡಲೇ ಯುದ್ಧದ ಕುರಿತು ಮಾತನಾಡುತ್ತಾರೆ. ಈ ದ್ವಿಮುಖ ನೀತಿಗೆ ಏನನ್ನಬೇಕು ಎಂದು ಕನ್ಹಯ್ಯ ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...