Homeಕರ್ನಾಟಕಅನರ್ಹ ಶಾಸಕರ ಟಿಕೆಟ್‌ ಹಂಚಿಕೆಗೆ ಬಿಜೆಪಿಯಲ್ಲಿ ವಿರೋಧ: ಒಡಕಿನ ಮಾತಿಲ್ಲ ಎಂದರು ಯಡಿಯೂರಪ್ಪ..!

ಅನರ್ಹ ಶಾಸಕರ ಟಿಕೆಟ್‌ ಹಂಚಿಕೆಗೆ ಬಿಜೆಪಿಯಲ್ಲಿ ವಿರೋಧ: ಒಡಕಿನ ಮಾತಿಲ್ಲ ಎಂದರು ಯಡಿಯೂರಪ್ಪ..!

- Advertisement -
- Advertisement -

ರಾಜ್ಯದ ೧೫ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸರ್ಕ್‌‌ಸ್ ನಡೆಸಿವೆ. ಅದರಲ್ಲೂ ಬಿಜೆಪಿಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್‌ ಹಂಚಿಕೆ ವಿಚಾರ ಕಾರ್ಯಕರ್ತರು ಮತ್ತು ಹಿಂದಿನ ಚುನಾವಣೆಯಲ್ಲಿ ಸೋತವರ ವಿರೋಧಕ್ಕೆ ಕಾರಣವಾಗಿದೆ. ಅನರ್ಹ ಶಾಸಕರಿಗೆ ಟಿಕೆಟ್ ಕೊಡುವ ನಿರ್ಧಾರಕ್ಕೆ ಖಂಡನೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಉಪಚುನಾವಣೆ ಘೋಷಣೆಯಾಗಿರುವ ಕ್ಷೇತ್ರಗಳಲ್ಲಿ ದಕ್ಷಿಣ ಕರ್ನಾಟಕದ ಎಂಟು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ನೇತೃತ್ವದಲ್ಲಿ ನಿನ್ನೆ ( ಬುಧವಾರ) ಸಭೆ ನಡೆಯಿತು. ಅನರ್ಹರಿಗೆ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೂಲ ಕಾಂಗ್ರೆಸ್ಸಿಗರು ಅನರ್ಹರ ಹೆಸರು ಸೂಚಿಸುತ್ತಿರುವ ಕ್ರಮವನ್ನು ವಿರೋಧಿಸುತ್ತಿದ್ದಾರೆ.

ಅಲ್ಲದೇ ’ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳಿಗೆ ಅನರ್ಹರಿಗೆ ಟಿಕೆಟ್ ಕೊಟ್ಟು ಗೆದ್ದರೆ, ಮುಂದೆ ನಡೆಯುವ ಬಿಬಿಎಂಪಿ ಚುನಾವಣೆಯಲ್ಲಿ ಅವರು ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುತ್ತಾರೆ. ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರು ಹಾಗೂ ಹಾಲಿ ಸದಸ್ಯರ ಕಥೆ ಏನು..?’ ಎಂದು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಎಸ್‌.ಟಿ.ಸೋಮಶೇಖರ್‌ ಯಶವಂತಪುರ ಕ್ಷೇತ್ರದಲ್ಲಿ ಕಾರ್ಯಕರ್ತರೊಬ್ಬರ ಮೇಲೆ ೧೩ ಕೇಸ್‌ ಹಾಕಿಸಿದ್ದಾರೆ. ಅವರಿಗೆ ಟಿಕೆಟ್ ಕೊಟ್ಟರೆ ಕಾರ್ಯರ್ತರ ಗತಿ ಏನು ಎಂದು ಪ್ರಶ್ನಿಸಿ, ಕ್ಷೇತ್ರದ ಮುಖಂಡರು ತಕರಾರು ತೆಗೆದಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇತ್ತ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಗೋಪಾಲಯ್ಯಗೆ ಟಿಕೆಟ್ ನಿಡಲು ನೆ.ಲ.ನರೇಂದ್ರ ಬಾಬು, ಎಸ್.ಹರೀಶ್, ಎಂ.ನಾಗರಾಜ್ ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡಬೇಕು ಎಂದರು. ಇದಕ್ಕೆ ನಾಗರಾಜ್‌ ಸಮ್ಮತಿ ಸೂಚಿಸಿದರು. ಸುಪ್ರೀಂಕೋರ್ಟ್‌‌ನಲ್ಲಿ ಅನರ್ಹರ ಪ್ರಕರಣದ ತೀರ್ಪು ಬಾಕಿ ಇದೆ. ತೀರ್ಪು ಪ್ರಕಟವಾದ ನಂತರ ತೀರ್ಮಾನ ಎಂದು ನರೇಂದ್ರ ಬಾಬು ಅಭಿಪ್ರಾಯಪಟ್ಟರು. ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡರಿಗೆ ಟಿಕೆಟ್ ಹಂಚಿಕೆ ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಸಭೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ನಡೆದ ಚರ್ಚೆಯಲ್ಲಿ ಯಾರೊಬ್ಬರೂ ಒಡಕಿನ ಮಾತನಾಡಿಲ್ಲ. ಅಭ್ಯರ್ಥಿ ಯಾರೇ ನಿಂತರೂ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳ ಸಭೆ ಅಕ್ಟೋಬರ್‌ ೨೬ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...