Homeಕರ್ನಾಟಕಅನರ್ಹ ಶಾಸಕರ ಟಿಕೆಟ್‌ ಹಂಚಿಕೆಗೆ ಬಿಜೆಪಿಯಲ್ಲಿ ವಿರೋಧ: ಒಡಕಿನ ಮಾತಿಲ್ಲ ಎಂದರು ಯಡಿಯೂರಪ್ಪ..!

ಅನರ್ಹ ಶಾಸಕರ ಟಿಕೆಟ್‌ ಹಂಚಿಕೆಗೆ ಬಿಜೆಪಿಯಲ್ಲಿ ವಿರೋಧ: ಒಡಕಿನ ಮಾತಿಲ್ಲ ಎಂದರು ಯಡಿಯೂರಪ್ಪ..!

- Advertisement -
- Advertisement -

ರಾಜ್ಯದ ೧೫ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸರ್ಕ್‌‌ಸ್ ನಡೆಸಿವೆ. ಅದರಲ್ಲೂ ಬಿಜೆಪಿಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್‌ ಹಂಚಿಕೆ ವಿಚಾರ ಕಾರ್ಯಕರ್ತರು ಮತ್ತು ಹಿಂದಿನ ಚುನಾವಣೆಯಲ್ಲಿ ಸೋತವರ ವಿರೋಧಕ್ಕೆ ಕಾರಣವಾಗಿದೆ. ಅನರ್ಹ ಶಾಸಕರಿಗೆ ಟಿಕೆಟ್ ಕೊಡುವ ನಿರ್ಧಾರಕ್ಕೆ ಖಂಡನೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಉಪಚುನಾವಣೆ ಘೋಷಣೆಯಾಗಿರುವ ಕ್ಷೇತ್ರಗಳಲ್ಲಿ ದಕ್ಷಿಣ ಕರ್ನಾಟಕದ ಎಂಟು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್ ನೇತೃತ್ವದಲ್ಲಿ ನಿನ್ನೆ ( ಬುಧವಾರ) ಸಭೆ ನಡೆಯಿತು. ಅನರ್ಹರಿಗೆ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೂಲ ಕಾಂಗ್ರೆಸ್ಸಿಗರು ಅನರ್ಹರ ಹೆಸರು ಸೂಚಿಸುತ್ತಿರುವ ಕ್ರಮವನ್ನು ವಿರೋಧಿಸುತ್ತಿದ್ದಾರೆ.

ಅಲ್ಲದೇ ’ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳಿಗೆ ಅನರ್ಹರಿಗೆ ಟಿಕೆಟ್ ಕೊಟ್ಟು ಗೆದ್ದರೆ, ಮುಂದೆ ನಡೆಯುವ ಬಿಬಿಎಂಪಿ ಚುನಾವಣೆಯಲ್ಲಿ ಅವರು ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸುತ್ತಾರೆ. ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರು ಹಾಗೂ ಹಾಲಿ ಸದಸ್ಯರ ಕಥೆ ಏನು..?’ ಎಂದು ಪ್ರಶ್ನಿಸುತ್ತಿದ್ದಾರೆ. ಅಲ್ಲದೇ ಎಸ್‌.ಟಿ.ಸೋಮಶೇಖರ್‌ ಯಶವಂತಪುರ ಕ್ಷೇತ್ರದಲ್ಲಿ ಕಾರ್ಯಕರ್ತರೊಬ್ಬರ ಮೇಲೆ ೧೩ ಕೇಸ್‌ ಹಾಕಿಸಿದ್ದಾರೆ. ಅವರಿಗೆ ಟಿಕೆಟ್ ಕೊಟ್ಟರೆ ಕಾರ್ಯರ್ತರ ಗತಿ ಏನು ಎಂದು ಪ್ರಶ್ನಿಸಿ, ಕ್ಷೇತ್ರದ ಮುಖಂಡರು ತಕರಾರು ತೆಗೆದಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇತ್ತ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಗೋಪಾಲಯ್ಯಗೆ ಟಿಕೆಟ್ ನಿಡಲು ನೆ.ಲ.ನರೇಂದ್ರ ಬಾಬು, ಎಸ್.ಹರೀಶ್, ಎಂ.ನಾಗರಾಜ್ ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡಬೇಕು ಎಂದರು. ಇದಕ್ಕೆ ನಾಗರಾಜ್‌ ಸಮ್ಮತಿ ಸೂಚಿಸಿದರು. ಸುಪ್ರೀಂಕೋರ್ಟ್‌‌ನಲ್ಲಿ ಅನರ್ಹರ ಪ್ರಕರಣದ ತೀರ್ಪು ಬಾಕಿ ಇದೆ. ತೀರ್ಪು ಪ್ರಕಟವಾದ ನಂತರ ತೀರ್ಮಾನ ಎಂದು ನರೇಂದ್ರ ಬಾಬು ಅಭಿಪ್ರಾಯಪಟ್ಟರು. ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡರಿಗೆ ಟಿಕೆಟ್ ಹಂಚಿಕೆ ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಸಭೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ನಡೆದ ಚರ್ಚೆಯಲ್ಲಿ ಯಾರೊಬ್ಬರೂ ಒಡಕಿನ ಮಾತನಾಡಿಲ್ಲ. ಅಭ್ಯರ್ಥಿ ಯಾರೇ ನಿಂತರೂ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಉತ್ತರ ಕರ್ನಾಟಕ ಭಾಗದ ಕ್ಷೇತ್ರಗಳ ಸಭೆ ಅಕ್ಟೋಬರ್‌ ೨೬ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...