Homeಕರ್ನಾಟಕಕಾಸರಗೋಡಿನಲ್ಲಿ ಕನ್ನಡಿಗರ ಹಿತಾಸಕ್ತಿ ಕಾಪಾಡುತ್ತಿದ್ದೇವೆ; ಕರ್ನಾಟಕಕ್ಕೆ ಪತ್ರ ಬರೆದ ಕೇರಳ ಸರ್ಕಾರ

ಕಾಸರಗೋಡಿನಲ್ಲಿ ಕನ್ನಡಿಗರ ಹಿತಾಸಕ್ತಿ ಕಾಪಾಡುತ್ತಿದ್ದೇವೆ; ಕರ್ನಾಟಕಕ್ಕೆ ಪತ್ರ ಬರೆದ ಕೇರಳ ಸರ್ಕಾರ

- Advertisement -
- Advertisement -

ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡಲು ಕೈಗೊಂಡಿರುವ ಕ್ರಮಗಳ ಕುರಿತು ಕೇರಳ ಸರ್ಕಾರ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದಿದೆ.

ಕೇರಳದಲ್ಲಿರುವ ಕನ್ನಡಿಗರ ಹಿತಾಸಕ್ತಿ ಮತ್ತು ರಕ್ಷಣೆಗೆ ಕುರಿತಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ ಅವರು ಕೆಲವು ದಿನಗಳ ಹಿಂದೆ ಕೇರಳ ಸರ್ಕಾರಕ್ಕೆ ಬರೆದ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿ ಕೇರಳ ಸರ್ಕಾರವು ಮರುಪತ್ರ ಬರೆದಿದೆ.

“ಕೇರಳ ಸರ್ಕಾರವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಕೇರಳ ಸರ್ಕಾರಕ್ಕೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಉತ್ತರಿಸಿರುವ ಪ್ರತಿಯನ್ನೂ ನಮಗೆ ಕಳುಹಿಸಿದೆ. ಇದು ನಮ್ಮ ಪ್ರಯತ್ನಕ್ಕೆ ಸಂದ ಜಯ’ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯನ್ನು ನಿಭಾಯಿಸಲು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಕಚೇರಿಯಲ್ಲಿ ಕನ್ನಡ ಮತ್ತು ಮಲಯಾಳಂ ಬಲ್ಲ ಗುಮಾಸ್ತರನ್ನು ನೇಮಿಸಲಾಗಿದೆ. ಕಾಸರಗೋಡು ಜಿಲ್ಲೆಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಹೆಚ್ಚುವರಿ ಎಸ್ಪಿ ಹರಿಶ್ಚಂದ್ರ ನಾಯ್ಕ್ ಮೂಲಕ ಪರಿಹರಿಸಲಾಗುವುದು ಎಂದು ಕೇರಳ ಸರ್ಕಾರ ಪತ್ರದಲ್ಲಿ ತಿಳಿಸಿದೆ.

ಕನ್ನಡ ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ಕನ್ನಡ ಮಾತನಾಡುವ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿದೆ ಮತ್ತು ಕನ್ನಡ ಭಾಷೆಯಲ್ಲಿ ಬರುವ ದೂರುಗಳನ್ನು ಪರಿಹರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಠಾಣೆಗಳ ಸೂಚನಾ ಫಲಕಗಳು, ಠಾಣೆಗಳ ಹೆಸರುಗಳನ್ನು ಕನ್ನಡದಲ್ಲಿ ಬರೆಯಲಾಗಿದೆ ಮತ್ತು ಕಾಸರಗೋಡು ಮತ್ತು ಮಂಜೇಶ್ವರಂ ತಾಲೂಕು ವ್ಯಾಪ್ತಿಯ ಎಲ್ಲಾ ಅಕ್ಷಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ದರ ಪಟ್ಟಿಯನ್ನು ಕನ್ನಡದಲ್ಲಿ ಪ್ರದರ್ಶಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಇ-ಡಿಸ್ಟ್ರಿಕ್ಟ್ ಪೋರ್ಟಲ್‌ನಲ್ಲಿ ಕನ್ನಡ ಭಾಷೆಯನ್ನು ಸೇರಿಸುವ ಬಗ್ಗೆ ರಾಜ್ಯ ಐಟಿ ಮಿಷನ್ ನಿರ್ದೇಶಕರಿಗೂ ತಿಳಿಸಲಾಗುವುದು ಎಂದು ಕೇರಳ ಸರ್ಕಾರ ಭರವಸೆ ನೀಡಿದೆ.

ಕರ್ನಾಟಕದ ಗಡಿ ಭಾಗದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷಾ ಪ್ರವೀಣ ಶಿಕ್ಷಕರ ಕೊರತೆ ಇದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಅಂತಹ ಕಡೆಗಳಲ್ಲಿ ಕನ್ನಡ ಬಾರದ ಶಿಕ್ಷಕರ ನೇಮಕವನ್ನು ಕಟ್ಟುನಿಟ್ಟಾಗಿ ತಪ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...